Homeಮುಖಪುಟನಂದಿಗ್ರಾಮ ಚುನಾವಣೆಯ ಇವಿಎಂ ಸಂರಕ್ಷಿಸಿ ಎಂದು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

ನಂದಿಗ್ರಾಮ ಚುನಾವಣೆಯ ಇವಿಎಂ ಸಂರಕ್ಷಿಸಿ ಎಂದು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

- Advertisement -
- Advertisement -

ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಘಟನೆಗಳಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ವಿಚಾರಣೆ ನಡೆಯುತ್ತಿರುವ ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶರು  ಚುನಾವಣಾ ಆಯೋಗಕ್ಕೆ ನೋಟಿಸ್ ಕಳುಹಿಸಲಿದ್ದಾರೆ.

ಈ ಪ್ರಕರಣವನ್ನು ಆನ್‌ಲೈನ್‌ನಲ್ಲಿ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಶಂಪಾ ಸರ್ಕಾರ್ ಅವರು ಆಯೋಗಕ್ಕೆ ಮತ್ತು ಚುನಾವಣಾ ರಿಟರ್ನಿಂಗ್ ಅಧಿಕಾರಿಗೆ ನೋಟಿಸ್ ನೀಡಬೇಕು ಎಂದು ಹೇಳಿದ್ದಾರೆ. ಜೊತೆಗೆ  ಮತದಾನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು (EVMs) ಸಂರಕ್ಷಿಸಬೇಕು ಎಂದು ಆದೇಶಿಸಿದ್ದಾರೆ.

ಇತ್ತಿಚೆಗೆ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಆದರೆ ಅವರ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಬೇರೆಡೆ ದೊಡ್ಡ ಜಯ ಸಾಧಿಸಿದೆ. ಅನೇಕ ತಿರುವುಗಳನ್ನು ಕಂಡು, ನಿಧಾನಗತಿಯ ಮತಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ 2,000 ಕ್ಕಿಂತ ಕಡಿಮೆ ಮತಗಳಿಂದ ಸೋತಿದ್ದಾರೆ ಎಂದು ಘೋಷಿಸಲಾಗಿತ್ತು.

ಇದನ್ನೂ ಓದಿ: ನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ ಅಸಮಾಧಾನ

ಈ ತೀರ್ಪಿನ ವಿರುದ್ಧ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಮತಗಳ ಮರು ಎಣಿಕೆಗೆ ಮನವಿ ಮಾಡಿದ್ದರು. ಆದರೆ, ಚುನಾವಣಾ ಆಯೋಗ ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಮಮತಾ, ಕೋಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬುಧವಾರ ಆನ್‌ಲೈನ್ ವಿಚಾರಣೆಗೆ ಹಾಜರಾಗಿದ್ದ ಮಮತಾ ಬ್ಯಾನರ್ಜಿ, ಸುವೇಂದು ಅಧಿಕಾರಿ ವಿರುದ್ಧ ಲಂಚ, ದ್ವೇಷ ಮತ್ತು ದ್ವೇಷದ ಪ್ರಚಾರ, ಬೂತ್ ಆಕ್ರಮಣ ಮತ್ತು ಧರ್ಮದ ಆಧಾರದ ಮೇಲೆ ಮತಗಳನ್ನು ಬೇಡುವುದು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 12 ರಂದು ನಡೆಯಲಿದೆ.

ಇನ್ನು ಈ ಮೊದಲು ನಂದಿಗ್ರಾಮ ಚುನಾವಣೆಯ ವಿಚಾರಣೆ ನಡೆಸುತ್ತಿದ್ದ ಕೊಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಕೌಶಿಕ್ ಚಂದಾ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಇದು ಪಕ್ಷಪಾತಕ್ಕೆ ಕಾರಣವಾಗಬಹುದು ಎಂದು ಉಲ್ಲೇಖಿಸಿ ಬದಲಾಯಿಸುವಂತೆ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದರು.

ಮಮತಾ ಬ್ಯಾನರ್ಜಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿ, ಪ್ರಕರಣದಿಂದ ಹೊರ ಬಂದಿದ್ದ ನ್ಯಾಯಮೂರ್ತಿ ಕೌಶಿಕ್ ಚಂದಾ,  ಇದು ಮಮತಾ ಬ್ಯಾನರ್ಜಿ ಅವರ ನ್ಯಾಯಾಧೀಶರನ್ನು ಕೆಣಕುವ ಪೂರ್ವಯೋಜಿತ ಕ್ರಮ ಮತ್ತು ಅವರ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿ, ನಂದಿಗ್ರಾಮ ಪ್ರಕರಣದಿಂದ ಹಿಂದೆ ಸರಿದ ಜಸ್ಟಿಸ್ ಕೌಶಿಕ್ ಚಂದಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...