Homeಮುಖಪುಟ‘ಇಡಿ’ ತನಿಖೆ ನ್ಯಾಯಸಮ್ಮತಲ್ಲ, ತನಿಖೆಗೆ ಹಾಜರಾಗುವುದಿಲ್ಲ: ಅನಿಲ್ ದೇಶ್ಮುಖ್‌ ವಕೀಲ

‘ಇಡಿ’ ತನಿಖೆ ನ್ಯಾಯಸಮ್ಮತಲ್ಲ, ತನಿಖೆಗೆ ಹಾಜರಾಗುವುದಿಲ್ಲ: ಅನಿಲ್ ದೇಶ್ಮುಖ್‌ ವಕೀಲ

- Advertisement -
- Advertisement -

ಹಣ ವಂಚನೆ ಪ್ರಕರಣದಲ್ಲಿ ತನ್ನ ವಿರುದ್ಧ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ನ್ಯಾಯ ಸಮ್ಮತವಲ್ಲ ಎಂದು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್‌ ಅಭಿಪ್ರಾಯಪಟ್ಟಿದ್ದಾರೆ, ಆದ್ದರಿಂದ ಅವರು ತನಿಖೆಗೆ ಕೈಜೋಡಿಸುವುದಿಲ್ಲ ಎಂದು ಅವರ ವಕೀಲ ಬುಧವಾರ ಹೇಳಿದ್ದಾರೆ.

ಮುಂಬೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇಶ್ಮುಖ್ ಅವರ ವಕೀಲ ಕಮಲೇಶ್ ಘುಮ್ರೆ, ಇಡಿಯ ತನಿಖೆಯು ನಿಜವಾದ ತನಿಖೆಯಂತೆ ಕಾಣುತ್ತಿಲ್ಲ, ಅದು ‘ಕಿರುಕುಳ’ ಎಂದು ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಇಡಿ’ ದೇಶ್ಮುಖ್ ಅವರ ಪತ್ನಿ ಆರತಿಗೆ ಬುಧವಾರ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆಗೆ ತನ್ನ ಮುಂದೆ ಹಾಜರಾಗುವಂತೆ ಹೇಳಿದೆ ಎಂದು ಅವರು ಹೇಳಿದ್ದಾರೆ. ಆದರೆ ತಾನು ವಿಡಿಯೊ ಕಾನ್ಫರೆನ್ಸಿಂಗ್‌‌ ಮೂಲಕ ತನಿಖೆಗೆ ಸಹಕರಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ ಎಂದು ಕಮಲೇಶ್‌‌ ತಿಳಿಸಿದ್ದಾರೆ.

ಈ ಹಿಂದೆ ಇಡಿ ಅನಿಲ್ ದೇಶ್ಮುಖ್ ಅವರಿಗೆ ಅನೇಕ ಸಮನ್ಸ್ ನೀಡಿತ್ತು, ಅವರ ಹೇಳಿಕೆಯನ್ನು ದಾಖಲಿಸುವಂತೆ ಕೇಳಿಕೊಂಡಿತ್ತು. ಆದಾಗ್ಯೂ, ದೇಶ್ಮುಖ್‌ ಅವರು ಕೊರೊನಾವನ್ನು ಉಲ್ಲೇಖಿಸಿ ಸಮನ್ಸ್‌ಗೆ ಉತ್ತರಿಸಿರಲಿಲ್ಲ.

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಅವರು ಕೂಡಾ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ತಮ್ಮ ಹೇಳಿಕೆಯನ್ನು ದಾಖಲಿಸಲು ಇಡಿಗೆ ಪ್ರಸ್ತಾಪಿಸಿದ್ದರು. ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ಕೋರಿ ದೇಶ್ಮುಖ್‌ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಈ ವರ್ಷದ ಆರಂಭದಲ್ಲಿ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಮಾಡಿದ ಕನಿಷ್ಠ 100 ಕೋಟಿ ರೂ.ಗಳ ಲಂಚದ ಆರೋಪಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ದೇಶ್ಮುಖ್‌‌ ವಿರುದ್ಧ ಪ್ರಕರಣ ದಾಖಲಿಸಿತ್ತು. ಇದರ ನಂತರ ದೇಶ್ಮುಖ್ ಮತ್ತು ಇತರರ ವಿರುದ್ಧ ಇಡಿ ಕೂಡಾ ಪ್ರಕರಣವನ್ನು ದಾಖಲಿಸಿತ್ತು.

“ದೇಶ್ಮುಖ್ ಅವರು ಈ ತನಿಖೆ ನ್ಯಾಯಸಮ್ಮತವಲ್ಲ ಎಂದು ಭಾವಿಸುತ್ತಾರೆ. ಆದ್ದರಿಂದ ಅವರು ತನಿಖೆಗೆ ಕೈಜೋಡಿಸುತ್ತಿಲ್ಲ. ತನಿಖಾ ಸಂಸ್ಥೆ ಬಯಸಿದ ಯಾವುದೇ ದಾಖಲೆಗಳ ಬಗ್ಗೆ ಕನಿಷ್ಠ ನಮಗೆ ಹೇಳಬೇಕು. ಇಡಿ ತನಿಖೆ ಕಿರುಕುಳದಂತೆ ಕಾಣುತ್ತಿದೆಯೆ ಹೊರತು, ನಿಜವಾದ ತನಿಖೆಯಲ್ಲ” ಎಂದು ವಕೀಲ ಕಮಲೇಶ್‌ ಹೇಳಿದ್ದಾರೆ.

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಮತ್ತು ಇತರ ಮಾರ್ಗಗಳಿದ್ದರೂ, ದೇಶ್ಮುಖ್ ಅವರನ್ನು ನೇರವಾಗಿ ಪ್ರಶ್ನಿಸುವ ಸಲುವಾಗಿ ಹಾಜರಾಗುವಂತೆ ಕೇಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸ್‌ ಅಧಿಕಾರಿ ಪರಮ್ ಬಿರ್ ಸಿಂಗ್ ಅವರ ಆರೋಪಗಳು ನಿಜವಲ್ಲ ಎಂದಿರುವ ಕಮಲೇಶ್‌‌, “ಈ ಬಗ್ಗೆ ಅವರು ತಿಂಗಳುಗಟ್ಟಲೆ ಯಾಕೆ ಮೌನವಾಗಿದ್ದರು ಎಂದ ಹೈಕೋರ್ಟ್ ಪ್ರಶ್ನಿಸಿದೆ” ಎಂದು ಹೇಳಿದ್ದಾರೆ.

ಭ್ರಷ್ಟಾಚಾರದ ಆರೋಪದ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದ ನಂತರ ದೇಶ್ಮುಖ್‌ ಏಪ್ರಿಲ್‌ನಲ್ಲಿ ತನ್ನ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...