Homeಮುಖಪುಟಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

- Advertisement -
- Advertisement -

ನಿವೃತ್ತ ಮದ್ರಾಸ್‌ ಹೈಕೋರ್ಟ್ ನ್ಯಾಯಮೂರ್ತಿ ಎ.ಕೆ.ರಾಜನ್‌‌‌‌ ನೇತೃತ್ವದ ಉನ್ನತ ಮಟ್ಟದ ಸಮಿತಿಯು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ‘ನೀಟ್‌‌’(ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಪರಿಣಾಮದ ಕುರಿತ 165 ಪುಟಗಳ ವರದಿಯನ್ನು ಸಲ್ಲಿಸಿದೆ. ಮುಖ್ಯಮಂತ್ರಿಗೆ ಅದರ ಪ್ರಮುಖ ಅಂಶಗಳ ಬಗ್ಗೆ ತಿಳಿಸಲಾಗಿದೆ ಎಂದು ನ್ಯಾಯಮೂರ್ತಿ ರಾಜನ್ ವರದಿಯನ್ನು ಸಿಎಂಗೆ ಹಸ್ತಾಂತರಿಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ದತ್ತಾಂಶವನ್ನು ಆಧರಿಸಿದ ಮತ್ತು ವೈಯಕ್ತಿಕ ಅಭಿಪ್ರಾಯಗಳಿಲ್ಲದ ವರದಿಯು ಭಾಗೀದಾರರ(ವಿದ್ಯಾಥಿಗಳು, ಶಿಕ್ಷಣ ಸಂಸ್ಥೆಗಳು, ಪೋಷಕರು) 86,000 ಪ್ರಾತಿನಿಧ್ಯಗಳನ್ನು ಒಳಗೊಂಡಿದೆ. ಬಹುಪಾಲು ಜನರು ನೀಟ್ ಬೇಡ ಎಂದು ಹೇಳಿದ್ದಾರೆ ಎಂದು ರಾಜನ್ ತಿಳಿಸಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್‌‌ 12 ರಂದು ‘ನೀಟ್‌ ಯುಜಿ 2021’ ಪರೀಕ್ಷೆ – ಜುಲೈ 13 ರಿಂದ ಅರ್ಜಿ ಪ್ರಾರಂಭ

ರಾಷ್ಟ್ರೀಯ ಪರೀಕ್ಷೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಾತನಾಡಿದ ರಾಜನ್‌, ಗ್ರಾಮೀಣ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವ್ಯತಿರಿಕ್ತ ಪರಿಣಾಮ ಬೀರುವುದರ ಜೊತೆಗೆ, ಮಾನಸಿಕ, ಆರ್ಥಿಕ ಮತ್ತು ಕಾನೂನು ಸೇರಿದಂತೆ ಇನ್ನೂ ಹಲವಾರು ಸಮಸ್ಯೆಗಳಿವೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಪರೀಕ್ಷೆಯು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆಯೇ ಎಂದು ವಿಶ್ಲೇಷಿಸಲು ಕಳೆದ ತಿಂಗಳು ಮುಖ್ಯಮಂತ್ರಿ ಸ್ಟಾಲಿನ್‌ ಅವರು ಈ ಸಮಿತಿಯನ್ನು ರಚಿಸಿದ್ದರು. ಒಂದು ವೇಳೆ ಸಮಸ್ಯೆ ಇದ್ದರೆ, ಪರಿಹಾರ ಕ್ರಮಗಳು ಮತ್ತು ಪರ್ಯಾಯ ಪ್ರವೇಶ ವಿಧಾನವನ್ನು ಸಹ ಈ ಸಮಿತಿ ಸೂಚಿಸಲಿದೆ.

ಇದನ್ನೂ ಓದಿ: ನೀಟ್-ಪಿಜಿ ಪರೀಕ್ಷೆ 4 ತಿಂಗಳು ಮುಂದೂಡಿಕೆ: ಅಂತಿಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳು ಕೊರೊನಾ ಕರ್ತವ್ಯಕ್ಕೆ

“ಶಿಫಾರಸುಗಳನ್ನು ಪರಿಗಣಿಸಿದ ನಂತರ ಸರ್ಕಾರವು ಮುಂದಿನ ಕ್ರಮವನ್ನು ಪ್ರಾರಂಭಿಸುತ್ತದೆ” ಎಂದು ತಮಿಳುನಾಡು ಸರ್ಕಾರ ವರದಿಯ ಕುರಿತು ಹೇಳಿದೆ. ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ತಮಿಳುನಾಡಿಗೆ ಐತಿಹಾಸಿಕ ಕರ್ತವ್ಯವಿದೆ. ನೀಟ್‌ನ ಪರಿಣಾಮಗಳನ್ನು ಪರಿಹರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಈ ಸಮಿತಿಯನ್ನು ರದ್ದುಗೊಳಿಸುವಂತೆ ಕೋರಿ ಇತ್ತೀಚೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನೂ ವಜಾಗೊಳಿಸಲಾಗಿತ್ತು.

ತಮಿಳುನಾಡಿನಲ್ಲಿ, ಆಡಳಿತಾರೂಢ ಡಿಎಂಕೆ ಮತ್ತು ಪ್ರತಿಪಕ್ಷ ಎಐಎಡಿಎಂಕೆ ಎರಡು ಪಕ್ಷಗಳೂ ನೀಟ್‌ ಅನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಿದೆ. ಈ ಪರೀಕ್ಷೆಯು ಗ್ರಾಮೀಣ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯವನ್ನು ನಿರಾಕರಿಸುತ್ತದೆ ಎಂದು ಈ ಪಕ್ಷಗಳು ಆರೋಪಿಸಿತ್ತಿವೆ.

ಇದನ್ನೂ ಓದಿ: ಇದು ನೀಟ್ ಪರೀಕ್ಷೆ ನಡೆಸಲು ಸರಿಯಾದ ಸಮಯವೆ?: ಕೇಂದ್ರಕ್ಕೆ ಎಂ. ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...