Homeಮುಖಪುಟವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

- Advertisement -
- Advertisement -

ದೇಶದ್ರೋಹದ ಕಾನೂನು ಬ್ರಿಟೀಷ್ ಕಾಲದ ಈ ವಶಾಹತುಶಾಹಿ ಕಾನೂನು ಆಗಿದ್ದು, ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರವೂ ಅದರ ಅಗತ್ಯವಿದೆಯೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪರಿಶೀಲಿಸುವುದಾಗಿ ಹೇಳಿದ ನ್ಯಾಯಾಲಯ, ಈ ಕುರಿತು ಕೇಂದ್ರದ ಪ್ರತಿಕ್ರಿಯೆ ಕೋರಿದೆ.

ದೇಶದ್ರೋಹದ ಕಾನೂನಿಗೆ ಸಂಬಂಧಿಸಿದಂತೆ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣರವರು “ಗಾಂಧೀಜಿಯ ಹೋರಾಟವನ್ನು ಹತ್ತಿಕ್ಕಲು ಬ್ರೀಟಿಷರು ಇದೇ ಕಾನೂನನ್ನು ಬಳಸುತ್ತಿದ್ದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬ್ರಿಟಿಷ್ ವಶಾಹತುಶಾಹಿ ದೇಶದ್ರೋಹದ ಕಾನೂನು ಅಗತ್ಯವಿದೆಯೇ? ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಈ ಕಾನೂನು ಬೇಕೆ? ಎಂದು ಸಿಜೆಐ ರಮಣರವರು ಅಟಾರ್ನಿಯವರನ್ನು ಪ್ರಶ್ನಿಸಿದ್ದಾರೆ.

ಈ ದೇಶದ್ರೋಹದ ಕಾನೂನನ್ನು ರದ್ದುಗೊಳಿಸಬೇಕೆಂದು ಹಲವಾರು ಅರ್ಜಿಗಳು ದಾಖಲಾಗಿದ್ದು ಎಲ್ಲವನ್ನು ಒಟ್ಟಿಗೆ ಆಲಿಸುವುದಾಗಿ ಸಿಜೆಐ ತಿಳಿಸಿದ್ದಾರೆ.

ಈ ಕಾನೂನು ದುರ್ಬಳಕೆಯಾಗುತ್ತಿದೆ ಎಂಬುದು ನಮ್ಮ ಕಾಳಜಿಯಾಗಿದೆ. ಅಲ್ಲದೆ ಇದನ್ನು ಜಾರಿಗೊರಿಸುವವರು ಯಾವುದೇ ಹೊಣೆಗಾರಿಕೆಯನ್ನು ಹೊಂದಿಲ್ಲ. ‘ಇದುವರೆಗೂ ದಾಖಲಾದ ಪ್ರಕರಣಗಳಲ್ಲಿ ಕೆಲವೇ ಪ್ರಕರಣಗಳು ಮಾತ್ರ ಸಾಬೀತಾಗಿದ್ದು, ಅಪರಾಧ ದರ ತೀರಾ ಕಡಿಮೆಯಿರುವುದನ್ನು ಇತಿಹಾಸ ತೋರಿಸಿದೆ’ ಎಂದು ಎನ್‌ವಿ ರಮಣ ತಿಳಿಸಿದ್ದಾರೆ.

ಯಾವುದೇ ಗ್ರಾಮದಲ್ಲಿ ಯಾರಾದರೂ ಪ್ರಶ್ನಿಸಿದರೆ ಅವರನ್ನು ಬಂಧಿಸಿ ಪೊಲೀಸರು ಆತನ ಮೇಲೆ 124ಎ ಪ್ರಕರಣ ದಾಖಲಿಸಬಹುದಾಗಿದೆ. ಇದರಿಂದ ಜನ ಭಯಭೀತರಾಗಿದ್ದಾರೆ ಎಂದು ರಮಣ ಅಭಿಪ್ರಾಯಪಟ್ಟಿದ್ದಾರೆ.

ನಾವು ಯಾವುದೇ ಸರ್ಕಾರವನ್ನು ದೂಷಿಸುತ್ತಿಲ್ಲ. ಆದರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಎಕ್ಷನ್ 66ಎ ಅನ್ನು ರದ್ದುಪಡಿಸಿ ಬಹಳ ದಿನಗಳಾದರೂ ಇನ್ನು ಬಳಕೆಯಲ್ಲಿದೆ. ಅದೇ ರೀತಿ ಈ ದೇಶದ್ರೋಹ ಕಾನೂನು ಸಹ ದುರ್ಬಳಕೆಯಾಗುತ್ತಿದೆ. ಇದರ ಸಿಂಧುತ್ವವನ್ನು ಪರಿಶೀಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆ ಅತಿಯಾಗಿ ದುರ್ಬಳಕೆಯಾಗಿದೆ. ಬಡಗಿಯೊಬ್ಬನಿಗೆ ಕಾಡೋಂದನ್ನು ತೋರಿಸಿ ಯಾವುದಾದರೊಂದು ಮರವನ್ನು ಬಳಸಿಕೊ ಎಂದರೆ ಆತನ ಇಡೀ ಕಾಡನ್ನು ಕಡಿದ ರೀತಿ ಈ ಕಾನೂನು ಎಲ್ಲರ ವಿರುದ್ಧ ಪ್ರಯೋಗಿಸಲ್ಪಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಎರಡು ದಿನಗಳ ಹಿಂದೆ UAPA ಕಾಯ್ದೆಯ ಬಗ್ಗೆ ಸಹ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಭಯೋತ್ಪಾದನಾ ವಿರೋಧಿ ಕಾನೂನುಗಳ ದುರ್ಬಳಕೆ ಸರಿಯಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಮೂರ್ತಿ ಜಸ್ಟಿಸ್‌ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ಪಟ್ಟಿದ್ದರು. ಜುಲೈ 12ರಂದು ಇಂಡೋ-ಅಮೇರಿಕನ್‌ ನ್ಯಾಯಾಧೀಶರ ವರ್ಚುವಲ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, UAPA ಸೇರಿದಂತೆ ಭಯೋತ್ಪಾದನಾ ತಡೆ ಕಾನೂನುಗಳನ್ನು ಭಿನ್ನಮತಗಳ ದಮನಕ್ಕೆ ಮತ್ತು ಪ್ರಜೆಗಳ ಮೇಲಿನ ದೌರ್ಜನ್ಯಕ್ಕೆ ಪ್ರಯೋಗಿಸುವ ಟ್ರೆಂಡ್‌ ಇತ್ತೀಚೆಗೆ ಬೆಳೆಯುತ್ತಿರುವುದರ ಕುರಿತು ವಿಷಾದ ವ್ಯಕ್ತಪಡಿಸಿದರು.

ಮಾನವ ಹಕ್ಕುಗಳ ಹೋರಾಟಗಾರ 84 ವರ್ಷ ವಯಸ್ಸಿನ ಫಾದರ್ ಸ್ಟ್ಯಾನ್‌ ಸ್ವಾಮಿ ನಿಧನದ ನಂತರ ದೇಶದಲ್ಲಿ ಯುಎಪಿಎ ಕಾಯ್ದೆ ಕುರಿತು ತೀವ್ರ ಟೀಕೆಗಳು ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಜಸ್ಟಿಸ್‌ ಚಂದ್ರಚೂಡ್‌ ಅವರ ಹೇಳಿಕೆ ಮಹತ್ವದ ಸ್ಥಾನ ಪಡೆದುಕೊಂಡಿದೆ.

ಇತ್ತೀಚೆಗೆ ಖ್ಯಾತ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ಹಾಗೂ ಹಿಂಸಾಚಾರದ ಪ್ರಚೋದನೆ ಇಲ್ಲದಿರುವವರೆಗೂ ಪ್ರಭುತ್ವವನ್ನು ಮುಕ್ತವಾಗಿ ಟೀಕಿಸುವ ಪತ್ರಕರ್ತರ ಸ್ವಾತಂತ್ರ್ಯವನ್ನು ದೃಢವಾಗಿ ಅನುಮೋದಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.


ಇದನ್ನೂ ಓದಿ: ವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದು; ದೇಶದ್ರೋಹ ಕಾನೂನಿನ ಮೂಲಭೂತ ನಿಯಮಗಳನ್ನು ನೆನಪಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...