Homeಮುಖಪುಟವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

- Advertisement -
- Advertisement -

ದೇಶದ್ರೋಹದ ಕಾನೂನು ಬ್ರಿಟೀಷ್ ಕಾಲದ ಈ ವಶಾಹತುಶಾಹಿ ಕಾನೂನು ಆಗಿದ್ದು, ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರವೂ ಅದರ ಅಗತ್ಯವಿದೆಯೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪರಿಶೀಲಿಸುವುದಾಗಿ ಹೇಳಿದ ನ್ಯಾಯಾಲಯ, ಈ ಕುರಿತು ಕೇಂದ್ರದ ಪ್ರತಿಕ್ರಿಯೆ ಕೋರಿದೆ.

ದೇಶದ್ರೋಹದ ಕಾನೂನಿಗೆ ಸಂಬಂಧಿಸಿದಂತೆ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣರವರು “ಗಾಂಧೀಜಿಯ ಹೋರಾಟವನ್ನು ಹತ್ತಿಕ್ಕಲು ಬ್ರೀಟಿಷರು ಇದೇ ಕಾನೂನನ್ನು ಬಳಸುತ್ತಿದ್ದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬ್ರಿಟಿಷ್ ವಶಾಹತುಶಾಹಿ ದೇಶದ್ರೋಹದ ಕಾನೂನು ಅಗತ್ಯವಿದೆಯೇ? ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಈ ಕಾನೂನು ಬೇಕೆ? ಎಂದು ಸಿಜೆಐ ರಮಣರವರು ಅಟಾರ್ನಿಯವರನ್ನು ಪ್ರಶ್ನಿಸಿದ್ದಾರೆ.

ಈ ದೇಶದ್ರೋಹದ ಕಾನೂನನ್ನು ರದ್ದುಗೊಳಿಸಬೇಕೆಂದು ಹಲವಾರು ಅರ್ಜಿಗಳು ದಾಖಲಾಗಿದ್ದು ಎಲ್ಲವನ್ನು ಒಟ್ಟಿಗೆ ಆಲಿಸುವುದಾಗಿ ಸಿಜೆಐ ತಿಳಿಸಿದ್ದಾರೆ.

ಈ ಕಾನೂನು ದುರ್ಬಳಕೆಯಾಗುತ್ತಿದೆ ಎಂಬುದು ನಮ್ಮ ಕಾಳಜಿಯಾಗಿದೆ. ಅಲ್ಲದೆ ಇದನ್ನು ಜಾರಿಗೊರಿಸುವವರು ಯಾವುದೇ ಹೊಣೆಗಾರಿಕೆಯನ್ನು ಹೊಂದಿಲ್ಲ. ‘ಇದುವರೆಗೂ ದಾಖಲಾದ ಪ್ರಕರಣಗಳಲ್ಲಿ ಕೆಲವೇ ಪ್ರಕರಣಗಳು ಮಾತ್ರ ಸಾಬೀತಾಗಿದ್ದು, ಅಪರಾಧ ದರ ತೀರಾ ಕಡಿಮೆಯಿರುವುದನ್ನು ಇತಿಹಾಸ ತೋರಿಸಿದೆ’ ಎಂದು ಎನ್‌ವಿ ರಮಣ ತಿಳಿಸಿದ್ದಾರೆ.

ಯಾವುದೇ ಗ್ರಾಮದಲ್ಲಿ ಯಾರಾದರೂ ಪ್ರಶ್ನಿಸಿದರೆ ಅವರನ್ನು ಬಂಧಿಸಿ ಪೊಲೀಸರು ಆತನ ಮೇಲೆ 124ಎ ಪ್ರಕರಣ ದಾಖಲಿಸಬಹುದಾಗಿದೆ. ಇದರಿಂದ ಜನ ಭಯಭೀತರಾಗಿದ್ದಾರೆ ಎಂದು ರಮಣ ಅಭಿಪ್ರಾಯಪಟ್ಟಿದ್ದಾರೆ.

ನಾವು ಯಾವುದೇ ಸರ್ಕಾರವನ್ನು ದೂಷಿಸುತ್ತಿಲ್ಲ. ಆದರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಎಕ್ಷನ್ 66ಎ ಅನ್ನು ರದ್ದುಪಡಿಸಿ ಬಹಳ ದಿನಗಳಾದರೂ ಇನ್ನು ಬಳಕೆಯಲ್ಲಿದೆ. ಅದೇ ರೀತಿ ಈ ದೇಶದ್ರೋಹ ಕಾನೂನು ಸಹ ದುರ್ಬಳಕೆಯಾಗುತ್ತಿದೆ. ಇದರ ಸಿಂಧುತ್ವವನ್ನು ಪರಿಶೀಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆ ಅತಿಯಾಗಿ ದುರ್ಬಳಕೆಯಾಗಿದೆ. ಬಡಗಿಯೊಬ್ಬನಿಗೆ ಕಾಡೋಂದನ್ನು ತೋರಿಸಿ ಯಾವುದಾದರೊಂದು ಮರವನ್ನು ಬಳಸಿಕೊ ಎಂದರೆ ಆತನ ಇಡೀ ಕಾಡನ್ನು ಕಡಿದ ರೀತಿ ಈ ಕಾನೂನು ಎಲ್ಲರ ವಿರುದ್ಧ ಪ್ರಯೋಗಿಸಲ್ಪಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಎರಡು ದಿನಗಳ ಹಿಂದೆ UAPA ಕಾಯ್ದೆಯ ಬಗ್ಗೆ ಸಹ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಭಯೋತ್ಪಾದನಾ ವಿರೋಧಿ ಕಾನೂನುಗಳ ದುರ್ಬಳಕೆ ಸರಿಯಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಮೂರ್ತಿ ಜಸ್ಟಿಸ್‌ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ಪಟ್ಟಿದ್ದರು. ಜುಲೈ 12ರಂದು ಇಂಡೋ-ಅಮೇರಿಕನ್‌ ನ್ಯಾಯಾಧೀಶರ ವರ್ಚುವಲ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, UAPA ಸೇರಿದಂತೆ ಭಯೋತ್ಪಾದನಾ ತಡೆ ಕಾನೂನುಗಳನ್ನು ಭಿನ್ನಮತಗಳ ದಮನಕ್ಕೆ ಮತ್ತು ಪ್ರಜೆಗಳ ಮೇಲಿನ ದೌರ್ಜನ್ಯಕ್ಕೆ ಪ್ರಯೋಗಿಸುವ ಟ್ರೆಂಡ್‌ ಇತ್ತೀಚೆಗೆ ಬೆಳೆಯುತ್ತಿರುವುದರ ಕುರಿತು ವಿಷಾದ ವ್ಯಕ್ತಪಡಿಸಿದರು.

ಮಾನವ ಹಕ್ಕುಗಳ ಹೋರಾಟಗಾರ 84 ವರ್ಷ ವಯಸ್ಸಿನ ಫಾದರ್ ಸ್ಟ್ಯಾನ್‌ ಸ್ವಾಮಿ ನಿಧನದ ನಂತರ ದೇಶದಲ್ಲಿ ಯುಎಪಿಎ ಕಾಯ್ದೆ ಕುರಿತು ತೀವ್ರ ಟೀಕೆಗಳು ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಜಸ್ಟಿಸ್‌ ಚಂದ್ರಚೂಡ್‌ ಅವರ ಹೇಳಿಕೆ ಮಹತ್ವದ ಸ್ಥಾನ ಪಡೆದುಕೊಂಡಿದೆ.

ಇತ್ತೀಚೆಗೆ ಖ್ಯಾತ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ಹಾಗೂ ಹಿಂಸಾಚಾರದ ಪ್ರಚೋದನೆ ಇಲ್ಲದಿರುವವರೆಗೂ ಪ್ರಭುತ್ವವನ್ನು ಮುಕ್ತವಾಗಿ ಟೀಕಿಸುವ ಪತ್ರಕರ್ತರ ಸ್ವಾತಂತ್ರ್ಯವನ್ನು ದೃಢವಾಗಿ ಅನುಮೋದಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.


ಇದನ್ನೂ ಓದಿ: ವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದು; ದೇಶದ್ರೋಹ ಕಾನೂನಿನ ಮೂಲಭೂತ ನಿಯಮಗಳನ್ನು ನೆನಪಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...