Homeಮುಖಪುಟನಂದಿಗ್ರಾಮ ಫಲಿತಾಂಶ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸುವೇಂದು ಅಧಿಕಾರಿ

ನಂದಿಗ್ರಾಮ ಫಲಿತಾಂಶ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸುವೇಂದು ಅಧಿಕಾರಿ

- Advertisement -
- Advertisement -

ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿ ವಿಚಾರಣೆ ಒಂದು ಕಡೆ ನಡೆಯುತ್ತಿದ್ದರೇ, ಮತ್ತೊಂದೆಡೆ ಸುವೇಂದು ಅಧಿಕಾರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ಹೊಸ ಬೆಳವಣಿಗೆಗೆ ಕಾರಣವಾಗಿದ್ದಾರೆ.

ಬುಧವಾರ ಮಮತಾ ಬ್ಯಾನರ್ಜಿಯವರ ಅರ್ಜಿ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶರಾದ ಶಂಪಾ ಸರ್ಕಾರ್, ಚುನಾವಣಾ ಆಯೋಗಕ್ಕೆ ಮತ್ತು ಚುನಾವಣಾ ರಿಟರ್ನಿಂಗ್ ಅಧಿಕಾರಿಗೆ ನೋಟಿಸ್ ನೀಡಬೇಕು ಎಂದು ಹೇಳಿದ್ದಾರೆ. ಜೊತೆಗೆ  ಮತದಾನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು (EVMs) ಸಂರಕ್ಷಿಸಬೇಕು ಎಂದು ಆದೇಶಿಸಿದ್ದರು.

ಹೊಸ ಬೆಳವಣಿಗೆಯಲ್ಲಿ ನಂದಿಗ್ರಾಮದ ಶಾಸಕ ಬಿಜೆಪಿಯ ಸುವೇಂದು ಅಧಿಕಾರಿ, ಮಮತಾ ಬ್ಯಾನರ್ಜಿಯವರ ಅರ್ಜಿ ವಿಚಾರಣೆಯನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಆದರೆ ಅವರ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಬೇರೆಡೆ ದೊಡ್ಡ ಜಯ ಸಾಧಿಸಿದೆ. ಅನೇಕ ತಿರುವುಗಳನ್ನು ಕಂಡು, ನಿಧಾನಗತಿಯ ಮತಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ 2,000 ಕ್ಕಿಂತ ಕಡಿಮೆ ಮತಗಳಿಂದ ಸೋತಿದ್ದಾರೆ ಎಂದು ಘೋಷಿಸಲಾಗಿತ್ತು.

ಇದನ್ನೂ ಓದಿ: ನಂದಿಗ್ರಾಮ ಚುನಾವಣೆಯ ಇವಿಎಂ ಸಂರಕ್ಷಿಸಿ ಎಂದು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

ಈ ತೀರ್ಪಿನ ವಿರುದ್ಧ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಮತಗಳ ಮರು ಎಣಿಕೆಗೆ ಮನವಿ ಮಾಡಿದ್ದರು. ಆದರೆ, ಚುನಾವಣಾ ಆಯೋಗ ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಮಮತಾ, ಕೋಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬುಧವಾರ ಆನ್‌ಲೈನ್ ವಿಚಾರಣೆಗೆ ಹಾಜರಾಗಿದ್ದ ಮಮತಾ ಬ್ಯಾನರ್ಜಿ, ಸುವೇಂದು ಅಧಿಕಾರಿ ವಿರುದ್ಧ ಲಂಚ, ದ್ವೇಷ ಮತ್ತು ದ್ವೇಷದ ಪ್ರಚಾರ, ಬೂತ್ ಆಕ್ರಮಣ ಮತ್ತು ಧರ್ಮದ ಆಧಾರದ ಮೇಲೆ ಮತಗಳನ್ನು ಬೇಡುವುದು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 12 ರಂದು ನಡೆಯಲಿದೆ.

ಈ ಮೊದಲು ನಂದಿಗ್ರಾಮ ಚುನಾವಣೆಯ ವಿಚಾರಣೆ ನಡೆಸುತ್ತಿದ್ದ ಕೊಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಕೌಶಿಕ್ ಚಂದಾ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಇದು ಪಕ್ಷಪಾತಕ್ಕೆ ಕಾರಣವಾಗಬಹುದು ಎಂದು ಉಲ್ಲೇಖಿಸಿ ಬದಲಾಯಿಸುವಂತೆ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದರು. ಬ್ಯಾನರ್ಜಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿ, ಪ್ರಕರಣದಿಂದ ಹೊರ ಬಂದಿದ್ದ ನ್ಯಾಯಮೂರ್ತಿ ಕೌಶಿಕ್ ಚಂದಾ,  ಇದು ಮಮತಾ ಬ್ಯಾನರ್ಜಿ ಅವರ ನ್ಯಾಯಾಧೀಶರನ್ನು ಕೆಣಕುವ ಪೂರ್ವಯೋಜಿತ ಕ್ರಮ ಮತ್ತು ಅವರ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ: ಬಹುಜನ ಭಾರತ: ನಂದಿಗ್ರಾಮ ಬರೆಯಲಿದೆಯೇ ಜನತಂತ್ರದ ಭವಿಷ್ಯವನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....