Homeಚಳವಳಿಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

ಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

- Advertisement -
- Advertisement -

ಹಾಸನ ಹಾಗೂ ಮಂಡ್ಯ ಜಿಲ್ಲೆಯ ಬಹುಭಾಗಕ್ಕೆ ನೀರುಣಿಸುವ ಹೇಮಾವತಿ ಎಡದಂಡೆ ನಾಲೆಯ ಸರಪಳಿಯಲ್ಲಿರುವ, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ  ಕಾಲುವೆಯ (72.860 ರಿಂದ 214.300 ಕಿ.ಮೀ ವರೆಗಿನ) ಆಧುನೀಕರಣ ಕಾಮಗಾರಿಯಲ್ಲಿ 500 ಕೋಟಿಗೂ ಅಧಿಕ ಮೌಲ್ಯದ ಹಗರಣ ನಡೆಸಿದೆ ಎಂದು ರೈತರು ಆರೋಪಿಸಿದ್ದು, ಈ ಕುರಿತು ಲೋಕಾಯುಕ್ತ ವತಿಯಿಂದ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಕಾಲುವೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಯುತ್ತಿದೆ.

ನಾಲೆ ಆಧುನೀಕರಣಕ್ಕಾಗಿ ನೀಡಲಾಗಿದ್ದ 883 ಕೋಟಿ ರೂ ಮೌಲ್ಯದ ಟೆಂಡರ್‌ನಲ್ಲಿ ಸುಮಾರು 500 ಕೋಟಿ ರೂಗಳಷ್ಟು ಧೋಖಾ ನಡೆದಿದೆ ಎಂದು ಆರೋಪಿಸಿ ಕೆ.ಆರ್‌ ಪೇಟೆಯ ರೈತ ಮುಖಂಡ ನಾಗೇಗೌಡ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಕಾಲುವೆಯ ಉದ್ದಕ್ಕೂ ಲೋಕಯುಕ್ತದ ತಾಂತ್ರಿಕ ವಿಭಾಗದ ಚೀಫ್‌ ಎಂಜಿನಿಯರ್ ಪ್ರಸಾದ್ ಮತ್ತು ನಿರಂಜನ್‌ ನೇತೃತ್ವದ ತಂಡವು ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಅರಂಭವಾಗುವ ನಾಲೆಯ 72.860 ಕಿ.ಮೀನಿಂದ ಪರಿಶೀಲನೆ ಅರಂಭಿಸಿ, ಕೆ.ಆರ್‌.ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹಾದುಹೋಗಿರುವ ನಾಲೆಯ ಮೇಲೆ ಸಂಚರಿಸಿ 214.300 ಕಿ.ಮೀ ಪರಿಶೀಲನೆಯನ್ನು ನಡೆಸಲಾಗುತ್ತಿದೆ.

ಕಾಲುವೆ ಪುನಶ್ಚೇತನಕ್ಕಾಗಿ ನಡೆದ ಕಾಮಗಾರಿಯಲ್ಲಿ ಗ್ರಾವೆಲ್‌ ಮಣ್ಣು ಬಳಕೆ, ಮರಳು, ಕಾಲುವೆಯಲ್ಲಿ ಕೆಲವು ಬಂಡೆಗಳ ಸಿಡಿತ, ಕಾಲುವೆ ಬದಿಯಲ್ಲಿ ಹುಲ್ಲು ಹಾಸು, ಹೆಕ್ಟೋ ಮೀಟರ್ ಕಲ್ಲುಗಳು, ಗಡಿ ಕಲ್ಲುಗಳೂ ಸೇರಿದಂತೆ ಕಳಪೆ ಕಾಮಗಾರಿ ಮಾಡಿ 500 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಲೂಟಿ ನಡೆದಿರುವುದಕ್ಕೆ ಸಾಕ್ಷಾ-ಪುರಾವೆಗಳನ್ನು ಲೋಕಾಯುಕ್ತಕ್ಕೆ ನೀಡಿರುವುದಾಗಿ ರೈತ ಮುಖಂಡ ನಾಗೇಗೌಡ ತಿಳಿಸಿದ್ದಾರೆ.

ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆಗಳನ್ನು ಕಳಪೆ ಕಾಮಗಾರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಇವುಗಳ ನಿರ್ಮಾಣಕ್ಕಾಗಿ ದುಪ್ಪಟ್ಟು ಬಿಲ್‌ ಕ್ಲೈಮ್‌ ಮಾಡಿಕೊಳ್ಳಲಾಗಿದೆ. ನಾಲೆಯಿಂದ 100 ಕಿ.ಮೀಗೂ ದೂರದಿಂದ ಗ್ರಾವೆಲ್‌ ಮಣ್ಣನ್ನು ತರಲಾಗಿದೆ, ಟಿ. ನರಸೀಪುರದಿಂದ ಮರಳನ್ನು ತರಲಾಗಿದೆ ಎಂದು ಬಿಲ್‌ ಕ್ಲೈಮ್‌ ಮಾಡಲಾಗಿದೆ. ಅದರೆ, ಕಾಲುವೆಯ ಉದ್ದಕ್ಕೂ ಎಲ್ಲಿಯೂ ಗ್ರಾವೆಲ್‌ ಮಣ್ಣನ್ನು ಬಳಸಿಲ್ಲ, ಅಲ್ಲದೆ, ಕಾಮಗಾರಿಗೆ ಮರಳಿನ ಬದಲಾಗಿ ಎಂ-ಸ್ಯಾಂಡ್‌ ಮಣ್ಣನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಟರ್ಫಿಂಗ್‌ ಹೆಸರಿನಲ್ಲಿ 4.34 ಕೋಟಿ ರೂ, ಚರಂಡಿ (ಡ್ರೈನ್‌) ಹೆಸರಿನಲ್ಲಿ 1.39 ಕೋಟಿ ರೂ, ಗಡಿ ಕಲ್ಲುಗಳು – 9.71 ಲಕ್ಷ ರೂ, ಬೆಂಚ್‌ ಮಾರ್ಕ್‌ ಕಲ್ಲು – 48.91 ಲಕ್ಷ ರೂ., ಕಿ.ಮೀ ತೋರಿಸುವ ಕಲ್ಲುಗಳು – 2.53 ಲಕ್ಷ ರೂ., ಹೆಕ್ಟೋಮೀಟರ್‌ ಕಲ್ಲುಗಳು – 15.29 ಲಕ್ಷ ರೂ., 10.50 ಕಿ.ಮೀ ವ್ಯಾಟ್‌ ಸಾಮರ್ಥ್ಯದ 3 ಜನರೇಟರ್‌ಗಳು – 20.40 ಲಕ್ಷ ರೂ., ಗಾರ್ಡ್‌ ಸ್ಟೋನ್‌ಗಳು (ರಕ್ಷಣಾ ಕಲ್ಲುಗಳು) ಹೆಸರಿನಲ್ಲಿ 4.79 ಕೋಟಿ ರೂ ಸೇರಿದಂತೆ ಒಟ್ಟು 11.65 ಕೋಟಿ ರೂ. ಸುಳ್ಳು ಲೆಕ್ಕ ತೋರಿಸಿ ಹಗಲು ದರೋಡೆ ಮಾಡಲಾಗಿದೆ ಎಂದು ನಾಗೇಗೌಡ ಆರೋಪಿಸಿದ್ದಾರೆ.

ಅಂದಾಜು 883 ಕೋಟಿ ರೂ ಮೊತ್ತದ ಟೆಂಡರ್‌ನಲ್ಲಿ ಈಗಾಗಲೇ 1200 ಕೋಟಿಗಳಿಗೂ ಅಧಿಕ ಹಣವನ್ನು ಬಿಲ್‌ ಮಾಡಿಕೊಳ್ಳಲಾಗಿದೆ ಎಂದು ರೈತರ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಲಾಖೆಯ ತಂಡ ಜುಲೈ 13ರಿಂದ ನಾಲ್ಕು ದಿನಗಳ ಕಾಲ ನಾಲೆಯ ಉದ್ದಕ್ಕೂ ಸಂಚರಿಸಿ ಪರಿಶೀಲನೆ ನಡೆಸುತ್ತಿದೆ. ಕಾಲುವೆಗಳ ಲೈನಿಂಗ್‌ಗಳು, ರ್ಯಾಂಪ್‌ಗಳು, ಸೋಪನಂ ಕಟ್ಟೆ, ಸೇತುವೆಗಳಲ್ಲಿ ಲೋಪಗಳು ಕಂಡುಬಂದಿದ್ದು, ಪರಿಶೀಲನಾ ತಂಡವು ಅವುಗಳ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದ್ದು, ಲ್ಯಾಬ್‌ ಟೆಸ್ಟ್‌ಗೆ ಕಳಿಸಲಿದೆ.

“ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಲೋಕಯುಕ್ತದ ನಮ್ಮ ತಂಡ ಪರಿಶೀಲನೆಗೆ ಬಂದಿದ್ದೇವೆ. ನಾನು ನಾಲೆಯ ಉದ್ದಕ್ಕೂ ಕಾಮಗಾರಿಯ ಎಲ್ಲವನ್ನೂ ಗಮನಿಸುತ್ತಿದ್ದೇನೆ. ಈ ವೇಳೆ ಕಂಡುಬಂದಿರುವ ಎಲ್ಲಾ ರೀತಿಯ ಲೋಪಗಳನ್ನು ದಾಖಲಿಸಿಕೊಂಡಿದ್ದೇವೆ. ಎಲ್ಲವನ್ನೂ ಪರಿಶೀಲನಾ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತೇವೆ” ಎಂದು ಲೋಕಯುಕ್ತದ ಚೀಫ್‌ ಎಂಜಿನಿಯರ್‌ ಪ್ರಸಾದ್‌ ತಿಳಿಸಿದ್ದಾರೆ.

ಪರಿಶೀಲನೆಯ ವೇಳೆ, ತಂಡದ ಮುಖ್ಯಸ್ಥ, ಚೀಫ್‌ ಎಂಜಿನಿಯರ್‌ ಪ್ರಸಾದ್‌, ನಿರಂಜನ್‌, ಚನ್ನರಾಯಪಟ್ಟಣ ಹೇಮಾವತಿ ನಾಲಾ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಂಜುನಾಥ್‌, ಕೆಆರ್‌ಪೇಟೆ ಎಚ್‌ಎಲ್‌ಬಿಸಿ ವಿಭಾಗದ ಶ್ರೀನಿವಾಸ್‌, ಗುರುಪ್ರಸಾದ್, ದೂರುದಾರರಾದ ರೈತ ಹೋರಾಟಗಾರ ನಾಗೇಗೌಡ, ಕ.ರಾ.ರೈ.ಸಂಘದ ಮಂಡ್ಯ ಜಿಲ್ಲಾಧ್ಯಕ್ಷರಾದ ರಾಜೇಗೌಡ, ಕರೋಟಿ ತಮ್ಮಣ್ಣ, ಮಾಕವಳ್ಳಿ ರವಿ ಸೇರಿದಂತೆ ಹಲವರು ಸ್ಥಳದಲ್ಲಿದ್ದರು.


ಇದನ್ನೂ ಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...