Homeಮುಖಪುಟಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

- Advertisement -
- Advertisement -

ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ ಎನ್ನುವ ಮೂಲಕ ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿವಾದಿತ ಹೇಳಿಕೆ ನೀಡಿದ್ದಾರೆ. ಕೊಯಮತ್ತೂರಿನಿಂದ ಚೆನ್ನೈವರೆಗೆ ನಡೆದ ರೋಡ್‌ ಶೋನಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ.

ಶುಕ್ರವಾರ (ಜುಲೈ 16) ದಂದು ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.

“ಮಾಧ್ಯಮವು ನಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದೆ ಎಂಬ ಚಿಂತೆಗಳನ್ನು ಮರೆತುಬಿಡಿ. ಮುಂದಿನ ಆರು ತಿಂಗಳಲ್ಲಿ ನಾವು ಮಾಧ್ಯಮದ ಮೇಲೆ ನಿಯಂತ್ರಣ ಮತ್ತು ಅವುಗಳನ್ನು ನಮ್ಮ ಅಡಿಯಲ್ಲಿ ಬರುವಂತೆ ಮಾಡುವುದನ್ನು ನೀವು ನೋಡುತ್ತೀರಿ ”ಎಂದು ಅಣ್ಣಾಮಲೈ ಹೇಳಿದ್ದಾರೆ.

“ಹಿಂದಿನ ಬಿಜೆಪಿ ಮುಖ್ಯಸ್ಥ ಎಲ್.ಮುರುಗನ್ ಈಗ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದಾರೆ. ಎಲ್ಲಾ ಮಾಧ್ಯಮಗಳು ಈಗ ಅವರ ಅಡಿಯಲ್ಲಿ ಬರುತ್ತವೆ. ಆದ್ದರಿಂದ ಇನ್ನು ಮುಂದೆ, ಸುಳ್ಳು ಮಾಹಿತಿಯನ್ನು ರಾಜಕೀಯದ ಸುದ್ದಿಯಾಗಿ ಹರಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ತಮಿಳುನಾಡು ರಾಜ್ಯ ಅಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರಿಗೆ ಕೇಂದ್ರ ಸಚಿವಾಲಯದ ರಾಜ್ಯ ಸಚಿವರನ್ನಾಗಿ ನೇಮಿಸಲಾಗಿದೆ. ಅವರಿಗೆ ಮಾಹಿತಿ ಮತ್ತು ಪ್ರಸಾರ, ಮತ್ತು ಮೀನುಗಾರಿಕೆ, ಪಶುಸಂಗೋಪನಾ ಸಚಿವಾಲಯವನ್ನು ನೀಡಲಾಗಿದೆ.

ಅಣ್ಣಾ ಮಲೈ ಅವರು 2020 ರ ಆಗಸ್ಟ್‌ ತಿಂಗಳಲ್ಲಿ ಬಿಜೆಪಿ ಸೇರಿದ್ದರು. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರು ಕರೂರ್‌ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಸೋಲನುಭವಿಸಿದ್ದರು. ಅವರ ವಿರುದ್ದ ಸ್ಪರ್ಧಿಸಿದ್ದ ಡಿಎಂಕೆಯ ಮೊಂಜನೂರು ಎಲಂಗೋ ಅವರು 24,816 ಮತಗಳ ಅಂತರದಲ್ಲಿ ಜಯಗಳಿಸಿದ್ದರು.

ಆಗಸ್ಟ್ 2020 ರಲ್ಲಿ, ಅಣ್ಣಾಮಲೈ ಬಿಜೆಪಿಗೆ ಸೇರಿದಾಗ, ಕೊಯಮತ್ತೂರು ಪೊಲೀಸರು ಅಣ್ಣಾಮಲೈ ಮತ್ತು ಹಲವಾರು ಬಿಜೆಪಿ ನಾಯಕರ ವಿರುದ್ಧ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದಕ್ಕಾಗಿ, ಕಾನೂನುಬಾಹಿರ ಸಭೆ ನಡೆಸಿದ ಆರೋಪದ ಮೇಲೆ ಸಾಂಕ್ರಾಮಿಕ ರೋಗ ಕಾಯ್ದೆಯಡಿ  ಪ್ರಕರಣ ದಾಖಲಿಸಿದ್ದರು.

ಈ ಹಿಂದೆಯೂ ಕೃಷಿ ಕಾನೂನುಗಳ ಬಗ್ಗೆಯೂ ವಿವಾದಿತ ಹೇಳಿಕೆ ನೀಡಿದ್ದರು. “ಈ ಕೃಷಿ ಕಾಯ್ದೆಗಳಲ್ಲಿ ಗೊಂದಲ ಉಂಟುಮಾಡುವ ಯಾವುದೇ ಅಂಶಗಳಿಲ್ಲ. ಎಲ್ಲವೂ ಸ್ಪಷ್ಟವಾಗಿದೆ. ಆದರೂ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಲು ದೆಹಲಿಯ ಗಡಿ ಭಾಗದಲ್ಲಿ 7 ರಿಂದ 8 ಲಕ್ಷ ರೈತರನ್ನು ಸೇರಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಂಘರ್ಷ ಉಂಟುಮಾಡುವುದು ಇದರ ಉದ್ದೇಶ” ಎಂದು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...