Homeಚಳವಳಿಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ...: ದೇವನೂರು ಮಹಾದೇವ ವಿಷಾಧ

ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ?

- Advertisement -
- Advertisement -

ಮೈಸೂರು ಜಾಗೃತ ಪ್ರಜ್ಞೆ ನಿದ್ದೆ ಮಾಡುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿ ಎನ್‌ಟಿಎಂ ಶಾಲೆ ಉಳಿವಿಗಾಗಿ ಸತತವಾಗಿ, ವೈವಿಧ್ಯಮಯವಾದ ಜನ ಸಮೂಹದಿಂದ ನಡೆಯುತ್ತಿರುವ ಈ ಆಂದೋಲನವೇ ಸಾಕ್ಷಿ. ಈ ಶಾಲೆಯ ನೆಲವನ್ನು ಮೈಸೂರು ಮಾತ್ರವಲ್ಲದೇ ಇಡೀ ಸಂವೇದನಾಶೀಲ ಭಾರತವೇ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಎನ್‌ಟಿಎಂ ಶಾಲೆ ಉಳಿವಿಗಾಗಿ ಒಡನಾಡಿ ಸೇವಾ ಸಂಸ್ಥೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎನ್‌ಟಿಎಂ ಶಾಲೆಯ ಈ ನೆಲಕ್ಕೆ ಒಂದು ನೆನಪಿದೆ. ಒಂದು ಆಶಯವಿದೆ. ಒಂದು ಜೀವಚೈತನ್ಯವಿದೆ. ಇದಕ್ಕೆ ಬೆಲೆ ಕಟ್ಟಲಾಗದು. ಯಾಕೆಂದರೆ 140 ವರ್ಷಗಳ ಹಿಂದೆಯೇ ಭಾರತದ ಸಮಾಜದಲ್ಲಿ ಅಆಇಈ ಸೋಕದ ಹೆಣ್ಣು ಮಕ್ಕಳಿಗಾಗಿಯೇ ಒಂದು ಶಾಲೆ ಆರಂಭಿಸುವುದೆಂದರೆ, ಇದು ಸಾಮಾನ್ಯ ಸಂಗತಿಯಲ್ಲ, ನೆನಪಿಟ್ಟುಕೊಳ್ಳೋಣ- ಇದು ಭಾರತದಲ್ಲಿ ಪ್ರಪ್ರಥಮ. ಹಾಗಾಗಿಯೇ ಇದು ಮೈಸೂರಿನ ಹೆಮ್ಮೆ. ಈಗ ನಮ್ಮ ಮುಂದಿರುವ ಸವಾಲು – ಎನ್‌ಟಿಎಂ ಶಾಲೆಯ ನೆಲವನ್ನು, ಅದರ ಆಶಯವನ್ನು ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕ ಅಷ್ಟೇ ಏಕೆ ಸಮೃದ್ಧಶೀಲ ಭಾರತವೇ ಕಾಪಾಡಿಕೊಳ್ಳಬೇಕಿದೆ” ಎಂದರು.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

“ನನಗೆ ಇನ್ನೂ ಅರ್ಥವಾಗದೇ ಉಳಿದಿರುವುದು ಏನೆಂದರೆ ಅದೇ ರಾಮಕೃಷ್ಣ ಆಶ್ರಮದ ನಡವಳಿಕೆ. ಹೇಳಿಕೇಳಿ ಇವರು ವೈರಾಗ್ಯ ಮೂರ್ತಿಗಳು. ಇಂಥವರು ಇಂದು ಯಾವ ಒಂದು ರೂಢಿಯನ್ನು ಹುಟ್ಟು ಹಾಕುತ್ತಿದ್ದಾರೆ? ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ? ಯಾವ ಸ್ವಾಮಿಯನ್ನು, ಯಾವ ಯತಿಯನ್ನು, ಯಾವ ವಿರಕ್ತರನ್ನೂ, ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ. ನಾಳೆ ಆ ಸ್ಥಳಕ್ಕೆ ಬೆಲೆ ಬಂದಾಗ ಆ ಮಹಾತ್ಮರ ಅನುಯಾಯಿಗಳು ನಮ್ಮ ಸ್ವಾಮೀಜಿ ಈ ಸ್ಥಳಕ್ಕೆ ಬಂದಿದ್ರು, ಈ ಜಾಗ ಆಶ್ರಮಕ್ಕೆ ಬೇಕು ಎಂದು ಪಟ್ಟು ಹಿಡಿದರೆ? ನಾನು ಹೇಳುತ್ತಿರುವುದು ಅತಿ ಅನ್ನಿಸುತ್ತಿರಬಹುದು. ಆದರೆ ಈ ಭಾವನೆ ಜನಮಾನಸದಲ್ಲಿ ಒಂದು ಗಳಿಗೆಯಾದರೂ ಬಂದು ಹೋಗಬಾರದಲ್ಲವೆ? ವಿವೇಕಾನಂದರ ಬಗ್ಗೆಯಂತೂ ಬರದೇ ಕಾಡದು, ಆದರೆ ಇಂಥಹದೊಂದು ಶಂಕೆಯನ್ನು ರಾಮಕೃಷ್ಣಾಶ್ರಮದ ಹಾಲಿ ವೈರಾಗ್ಯ ಮೂರ್ತಿಗಳು ಹುಟ್ಟುಹಾಕಿಬಿಟ್ಟರು. ಇದಾಗಬಾರದಿತ್ತು. ತುಂಬಾ ನೊಂದು ಹೇಳುತ್ತಿರುವೆ” ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆ ಉಳಿಯಬೇಕೆಂಬ ಆಶಯದೊಂದಿಗೆ ಒಡನಾಡಿ ಮಕ್ಕಳು ಅಭಿನಯಿಸಿದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಪ.ಮಲ್ಲೇಶ್, ಪ್ರೊ.ಬಿ.ಕೆ ಸುಮಿತ್ರಾ ಬಾಯಿ, ಸ.ರ ಸುದರ್ಶನ್, ಅಭಿರುಚಿ ಗಣೇಶ್, ಡಿ.ಹೊಸಹಳ್ಳಿ ಶಿವು, ಸ್ಟ್ಯಾನ್ಲಿ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...