Homeಚಳವಳಿಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ...: ದೇವನೂರು ಮಹಾದೇವ ವಿಷಾಧ

ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ?

- Advertisement -
- Advertisement -

ಮೈಸೂರು ಜಾಗೃತ ಪ್ರಜ್ಞೆ ನಿದ್ದೆ ಮಾಡುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿ ಎನ್‌ಟಿಎಂ ಶಾಲೆ ಉಳಿವಿಗಾಗಿ ಸತತವಾಗಿ, ವೈವಿಧ್ಯಮಯವಾದ ಜನ ಸಮೂಹದಿಂದ ನಡೆಯುತ್ತಿರುವ ಈ ಆಂದೋಲನವೇ ಸಾಕ್ಷಿ. ಈ ಶಾಲೆಯ ನೆಲವನ್ನು ಮೈಸೂರು ಮಾತ್ರವಲ್ಲದೇ ಇಡೀ ಸಂವೇದನಾಶೀಲ ಭಾರತವೇ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಎನ್‌ಟಿಎಂ ಶಾಲೆ ಉಳಿವಿಗಾಗಿ ಒಡನಾಡಿ ಸೇವಾ ಸಂಸ್ಥೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎನ್‌ಟಿಎಂ ಶಾಲೆಯ ಈ ನೆಲಕ್ಕೆ ಒಂದು ನೆನಪಿದೆ. ಒಂದು ಆಶಯವಿದೆ. ಒಂದು ಜೀವಚೈತನ್ಯವಿದೆ. ಇದಕ್ಕೆ ಬೆಲೆ ಕಟ್ಟಲಾಗದು. ಯಾಕೆಂದರೆ 140 ವರ್ಷಗಳ ಹಿಂದೆಯೇ ಭಾರತದ ಸಮಾಜದಲ್ಲಿ ಅಆಇಈ ಸೋಕದ ಹೆಣ್ಣು ಮಕ್ಕಳಿಗಾಗಿಯೇ ಒಂದು ಶಾಲೆ ಆರಂಭಿಸುವುದೆಂದರೆ, ಇದು ಸಾಮಾನ್ಯ ಸಂಗತಿಯಲ್ಲ, ನೆನಪಿಟ್ಟುಕೊಳ್ಳೋಣ- ಇದು ಭಾರತದಲ್ಲಿ ಪ್ರಪ್ರಥಮ. ಹಾಗಾಗಿಯೇ ಇದು ಮೈಸೂರಿನ ಹೆಮ್ಮೆ. ಈಗ ನಮ್ಮ ಮುಂದಿರುವ ಸವಾಲು – ಎನ್‌ಟಿಎಂ ಶಾಲೆಯ ನೆಲವನ್ನು, ಅದರ ಆಶಯವನ್ನು ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕ ಅಷ್ಟೇ ಏಕೆ ಸಮೃದ್ಧಶೀಲ ಭಾರತವೇ ಕಾಪಾಡಿಕೊಳ್ಳಬೇಕಿದೆ” ಎಂದರು.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

“ನನಗೆ ಇನ್ನೂ ಅರ್ಥವಾಗದೇ ಉಳಿದಿರುವುದು ಏನೆಂದರೆ ಅದೇ ರಾಮಕೃಷ್ಣ ಆಶ್ರಮದ ನಡವಳಿಕೆ. ಹೇಳಿಕೇಳಿ ಇವರು ವೈರಾಗ್ಯ ಮೂರ್ತಿಗಳು. ಇಂಥವರು ಇಂದು ಯಾವ ಒಂದು ರೂಢಿಯನ್ನು ಹುಟ್ಟು ಹಾಕುತ್ತಿದ್ದಾರೆ? ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ? ಯಾವ ಸ್ವಾಮಿಯನ್ನು, ಯಾವ ಯತಿಯನ್ನು, ಯಾವ ವಿರಕ್ತರನ್ನೂ, ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ. ನಾಳೆ ಆ ಸ್ಥಳಕ್ಕೆ ಬೆಲೆ ಬಂದಾಗ ಆ ಮಹಾತ್ಮರ ಅನುಯಾಯಿಗಳು ನಮ್ಮ ಸ್ವಾಮೀಜಿ ಈ ಸ್ಥಳಕ್ಕೆ ಬಂದಿದ್ರು, ಈ ಜಾಗ ಆಶ್ರಮಕ್ಕೆ ಬೇಕು ಎಂದು ಪಟ್ಟು ಹಿಡಿದರೆ? ನಾನು ಹೇಳುತ್ತಿರುವುದು ಅತಿ ಅನ್ನಿಸುತ್ತಿರಬಹುದು. ಆದರೆ ಈ ಭಾವನೆ ಜನಮಾನಸದಲ್ಲಿ ಒಂದು ಗಳಿಗೆಯಾದರೂ ಬಂದು ಹೋಗಬಾರದಲ್ಲವೆ? ವಿವೇಕಾನಂದರ ಬಗ್ಗೆಯಂತೂ ಬರದೇ ಕಾಡದು, ಆದರೆ ಇಂಥಹದೊಂದು ಶಂಕೆಯನ್ನು ರಾಮಕೃಷ್ಣಾಶ್ರಮದ ಹಾಲಿ ವೈರಾಗ್ಯ ಮೂರ್ತಿಗಳು ಹುಟ್ಟುಹಾಕಿಬಿಟ್ಟರು. ಇದಾಗಬಾರದಿತ್ತು. ತುಂಬಾ ನೊಂದು ಹೇಳುತ್ತಿರುವೆ” ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆ ಉಳಿಯಬೇಕೆಂಬ ಆಶಯದೊಂದಿಗೆ ಒಡನಾಡಿ ಮಕ್ಕಳು ಅಭಿನಯಿಸಿದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಪ.ಮಲ್ಲೇಶ್, ಪ್ರೊ.ಬಿ.ಕೆ ಸುಮಿತ್ರಾ ಬಾಯಿ, ಸ.ರ ಸುದರ್ಶನ್, ಅಭಿರುಚಿ ಗಣೇಶ್, ಡಿ.ಹೊಸಹಳ್ಳಿ ಶಿವು, ಸ್ಟ್ಯಾನ್ಲಿ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...