Homeಚಳವಳಿಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ...: ದೇವನೂರು ಮಹಾದೇವ ವಿಷಾಧ

ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ?

- Advertisement -
- Advertisement -

ಮೈಸೂರು ಜಾಗೃತ ಪ್ರಜ್ಞೆ ನಿದ್ದೆ ಮಾಡುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿ ಎನ್‌ಟಿಎಂ ಶಾಲೆ ಉಳಿವಿಗಾಗಿ ಸತತವಾಗಿ, ವೈವಿಧ್ಯಮಯವಾದ ಜನ ಸಮೂಹದಿಂದ ನಡೆಯುತ್ತಿರುವ ಈ ಆಂದೋಲನವೇ ಸಾಕ್ಷಿ. ಈ ಶಾಲೆಯ ನೆಲವನ್ನು ಮೈಸೂರು ಮಾತ್ರವಲ್ಲದೇ ಇಡೀ ಸಂವೇದನಾಶೀಲ ಭಾರತವೇ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಎನ್‌ಟಿಎಂ ಶಾಲೆ ಉಳಿವಿಗಾಗಿ ಒಡನಾಡಿ ಸೇವಾ ಸಂಸ್ಥೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎನ್‌ಟಿಎಂ ಶಾಲೆಯ ಈ ನೆಲಕ್ಕೆ ಒಂದು ನೆನಪಿದೆ. ಒಂದು ಆಶಯವಿದೆ. ಒಂದು ಜೀವಚೈತನ್ಯವಿದೆ. ಇದಕ್ಕೆ ಬೆಲೆ ಕಟ್ಟಲಾಗದು. ಯಾಕೆಂದರೆ 140 ವರ್ಷಗಳ ಹಿಂದೆಯೇ ಭಾರತದ ಸಮಾಜದಲ್ಲಿ ಅಆಇಈ ಸೋಕದ ಹೆಣ್ಣು ಮಕ್ಕಳಿಗಾಗಿಯೇ ಒಂದು ಶಾಲೆ ಆರಂಭಿಸುವುದೆಂದರೆ, ಇದು ಸಾಮಾನ್ಯ ಸಂಗತಿಯಲ್ಲ, ನೆನಪಿಟ್ಟುಕೊಳ್ಳೋಣ- ಇದು ಭಾರತದಲ್ಲಿ ಪ್ರಪ್ರಥಮ. ಹಾಗಾಗಿಯೇ ಇದು ಮೈಸೂರಿನ ಹೆಮ್ಮೆ. ಈಗ ನಮ್ಮ ಮುಂದಿರುವ ಸವಾಲು – ಎನ್‌ಟಿಎಂ ಶಾಲೆಯ ನೆಲವನ್ನು, ಅದರ ಆಶಯವನ್ನು ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕ ಅಷ್ಟೇ ಏಕೆ ಸಮೃದ್ಧಶೀಲ ಭಾರತವೇ ಕಾಪಾಡಿಕೊಳ್ಳಬೇಕಿದೆ” ಎಂದರು.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

“ನನಗೆ ಇನ್ನೂ ಅರ್ಥವಾಗದೇ ಉಳಿದಿರುವುದು ಏನೆಂದರೆ ಅದೇ ರಾಮಕೃಷ್ಣ ಆಶ್ರಮದ ನಡವಳಿಕೆ. ಹೇಳಿಕೇಳಿ ಇವರು ವೈರಾಗ್ಯ ಮೂರ್ತಿಗಳು. ಇಂಥವರು ಇಂದು ಯಾವ ಒಂದು ರೂಢಿಯನ್ನು ಹುಟ್ಟು ಹಾಕುತ್ತಿದ್ದಾರೆ? ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ? ಯಾವ ಸ್ವಾಮಿಯನ್ನು, ಯಾವ ಯತಿಯನ್ನು, ಯಾವ ವಿರಕ್ತರನ್ನೂ, ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ. ನಾಳೆ ಆ ಸ್ಥಳಕ್ಕೆ ಬೆಲೆ ಬಂದಾಗ ಆ ಮಹಾತ್ಮರ ಅನುಯಾಯಿಗಳು ನಮ್ಮ ಸ್ವಾಮೀಜಿ ಈ ಸ್ಥಳಕ್ಕೆ ಬಂದಿದ್ರು, ಈ ಜಾಗ ಆಶ್ರಮಕ್ಕೆ ಬೇಕು ಎಂದು ಪಟ್ಟು ಹಿಡಿದರೆ? ನಾನು ಹೇಳುತ್ತಿರುವುದು ಅತಿ ಅನ್ನಿಸುತ್ತಿರಬಹುದು. ಆದರೆ ಈ ಭಾವನೆ ಜನಮಾನಸದಲ್ಲಿ ಒಂದು ಗಳಿಗೆಯಾದರೂ ಬಂದು ಹೋಗಬಾರದಲ್ಲವೆ? ವಿವೇಕಾನಂದರ ಬಗ್ಗೆಯಂತೂ ಬರದೇ ಕಾಡದು, ಆದರೆ ಇಂಥಹದೊಂದು ಶಂಕೆಯನ್ನು ರಾಮಕೃಷ್ಣಾಶ್ರಮದ ಹಾಲಿ ವೈರಾಗ್ಯ ಮೂರ್ತಿಗಳು ಹುಟ್ಟುಹಾಕಿಬಿಟ್ಟರು. ಇದಾಗಬಾರದಿತ್ತು. ತುಂಬಾ ನೊಂದು ಹೇಳುತ್ತಿರುವೆ” ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆ ಉಳಿಯಬೇಕೆಂಬ ಆಶಯದೊಂದಿಗೆ ಒಡನಾಡಿ ಮಕ್ಕಳು ಅಭಿನಯಿಸಿದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಪ.ಮಲ್ಲೇಶ್, ಪ್ರೊ.ಬಿ.ಕೆ ಸುಮಿತ್ರಾ ಬಾಯಿ, ಸ.ರ ಸುದರ್ಶನ್, ಅಭಿರುಚಿ ಗಣೇಶ್, ಡಿ.ಹೊಸಹಳ್ಳಿ ಶಿವು, ಸ್ಟ್ಯಾನ್ಲಿ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...