Homeಅಂತರಾಷ್ಟ್ರೀಯರಾಯ್ಟರ್ಸ್‌‌ನ ಖ್ಯಾತ ಫೋಟೋಗ್ರಾಫರ್‌ ದಾನಿಶ್ ಸಿದ್ದೀಕಿ ಅಫ್ಘಾನ್‌ ಘರ್ಷಣೆಯಲ್ಲಿ ಮೃತ

ರಾಯ್ಟರ್ಸ್‌‌ನ ಖ್ಯಾತ ಫೋಟೋಗ್ರಾಫರ್‌ ದಾನಿಶ್ ಸಿದ್ದೀಕಿ ಅಫ್ಘಾನ್‌ ಘರ್ಷಣೆಯಲ್ಲಿ ಮೃತ

- Advertisement -
- Advertisement -

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಟೋಲೋ ನ್ಯೂಸ್‌‌ ಶುಕ್ರವಾರ ವರದಿ ಮಾಡಿದೆ. ಅವರು ಅಫ್ಘಾನ್‌‌‌‌ ವಿಶೇಷ ಪಡೆಯೊಂದಿಗೆ ವರದಿಗಾಗಿ ಅಲ್ಲಿ ನಿಯೋಜನೆಗೊಂಡಿದ್ದರು ಎನ್ನಲಾಗಿದೆ.

ಪಾಕಿಸ್ತಾನ ಮತ್ತು ಅಫ್ಘಾನ್‌‌ನ ಪ್ರಮುಖ ಗಡಿಯಾಗಿರುವ ‘ಸ್ಪಿನ್ ಬೋಲ್ಡಾಕ್‌’ನ ಬಾರ್ಡರ್‌ ಕ್ರಾಸಿಂಗ್‌‌ ಅನ್ನು ತಾಲಿಬಾನ್‌‌ ವಶಪಡಿಸಿಕೊಂಡಿತ್ತು. ಈ ಪ್ರಮುಖ ಗಡಿಯನ್ನು ಹಿಂಪಡೆಯಲು ಕಾರ್ಯಾಚರಣೆ ಪ್ರಾರಂಭಿಸಿದ್ದ ಅಫ್ಘಾನ್ ಪಡೆಗಳು ಸ್ಪಿನ್ ಬೋಲ್ಡಾಕ್‌ನಲ್ಲಿ ತಾಲಿಬಾನ್‌ ಬಂಡುಕೋರರೊಂದಿಗೆ ಘರ್ಷಣೆ ನಡೆಸಿದ್ದವು ಎಂದು ಎಎಫ್ಪಿ ವರದಿ ಮಾಡಿದೆ.

ಇದನ್ನೂ ಓದಿ: 2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

ದಾನಿಶ್ ಕಳೆದ ಕೆಲವು ದಿನಗಳಿಂದ ಕಂದಹಾರ್‌ನ ಪರಿಸ್ಥಿತಿಯನ್ನು ವರದಿ ಮಾಡುತ್ತಿದ್ದರು.

ಜುಲೈ 13 ರಂದು, ಅವರು ಮತ್ತು ಇತರ ವಿಶೇಷ ಪಡೆಗಳು ಪ್ರಯಾಣಿಸುತ್ತಿದ್ದ ವಾಹನವನ್ನು ಗುರಿಯಾಗಿಸಿ ಕನಿಷ್ಠ ಮೂರು ಸುತ್ತಿನ ಗುಂಡಿನ ಚಕಮಕಿ ನಡೆದಿದ್ದವು ಎಂದು ಅವರು ವಿಡಿಯೊ ಸಮೇತ ವರದಿ ಮಾಡಿದ್ದರು.

ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ

2018 ರಲ್ಲಿ ತನ್ನ ‘ಫೀಚರ್‌ ಫೋಟೋಗ್ರಾಫಿ’ ಸರಣಿಗಾಗಿ ಪ್ರತಿಷ್ಠಿತ ಪುಲಿಟ್ಜೆರ್‌‌ ಪ್ರಶಸ್ತಿಯನ್ನು ಅವರು ಪಡೆದಿದ್ದರು. ಆ ವರ್ಷ ರಾಯ್ಟರ್ಸ್‌ನ ಒಟ್ಟು ಏಳು ಪತ್ರಕರ್ತರಿಗೆ ಪ್ರಶಸ್ತಿ ಬಂದಿದ್ದು, ಅದರಲ್ಲಿನ ಇಬ್ಬರು ಭಾರತೀಯರಲ್ಲಿ ದಾನಿಶ್ ಸಿದ್ದೀಕಿ ಒಬ್ಬರಾಗಿದ್ದಾರೆ. ಅಂದಿನ ಅವರ ಫೋಟೊ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿತ್ತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಫೋಟೊ ಜರ್ನಲಿಸ್ಟ್ ಆಗಿದ್ದ ಸಮಯದಲ್ಲಿ ದಾನಿಶ್, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಅವರ ಫೋಟೋಗಳು ಹಲವಾರು ನಿಯತಕಾಲಿಕೆಗಳು, ಪತ್ರಿಕೆಗಳು, ಸ್ಲೈಡ್‌ಶೋಗಳು ಮತ್ತು ಗ್ಯಾಲರಿಗಳಲ್ಲಿ ವ್ಯಾಪಕವಾಗಿ ಪ್ರಕಟಗೊಂಡಿವೆ.

ದಾನಿಶ್ ಸಿದ್ದೀಕಿ ಅವರ ನಿಧನವನ್ನು ಖಂಡಿಸಿ, ಅಫ್ಘಾನಿಸ್ತಾನದ ಭಾರತದ ರಾಯಭಾರಿ ಟ್ವೀಟ್ ಮಾಡಿದ್ದು, “ನಿನ್ನೆ ರಾತ್ರಿ ಕಂದಹಾರ್‌ನಲ್ಲಿ ಸ್ನೇಹಿತ ದಾನಿಶ್ ಸಿದ್ದೀಕಿ ಹತ್ಯೆಯ ದುಃಖದ ಸುದ್ದಿ ತಿಳಿದು ತೀವ್ರವಾಗಿ ವಿಚಲಿತರಾಗಿದ್ದೇನೆ. ಭಾರತೀಯ ಪತ್ರಕರ್ತ ಮತ್ತು ಪುಲಿಟ್ಜೆರ್ ಪ್ರಶಸ್ತಿ ವಿಜೇತ ಅಫಘಾನ್ ಭದ್ರತಾ ಪಡೆಗಳೊಂದಿಗೆ ಇದ್ದರು. 2 ವಾರಗಳ ಹಿಂದೆ ಅವರು ಕಾಬೂಲ್‌ಗೆ ತೆರಳುವ ಮೊದಲು ನಾನು ಅವರನ್ನು ಭೇಟಿಯಾಗಿದ್ದೆ. ಅವರ ಕುಟುಂಬ ಮತ್ತು ರಾಯಿಟರ್ಸ್‌ಗೆ ಸಂತಾಪ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ವರ್‌ ಯಾತ್ರೆಗೆ ಒಪ್ಪಿಗೆ ನೀಡಿದ ಯೋಗಿ ಸರ್ಕಾರ: ಜನರ ಜೀವನ, ಆರೋಗ್ಯ ಮುಖ್ಯ ಎಂದ ಸುಪ್ರಿಂ

ಇಷ್ಟೇ ಅಲ್ಲದೆ ದಾನಿಶ್ ಸಿದ್ದೀಕಿ ಅವರ ನಿಧನಕ್ಕೆ ಹಲವಾರು ಪತ್ರಕರ್ತರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...