Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ಸೈನಿಕನಾಗಿ ತಮ್ಮ ಇಡೀ ಜೀವನವನ್ನು ದೇಶಸೇವೆಗೆ ಅರ್ಪಿಸಿದ ಅವರ ಅರ್ಜಿಯಲ್ಲಿ ಯಾವುದೇ ದುರುದ್ದೇಶವಿರಲು ಸಾಧ್ಯವಿಲ್ಲ ಎಂದು ಸಿಜೆಐ ಎನ್.ವಿ ರಮಣ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

“ಸೈನಿಕನಾಗಿ ತಮ್ಮ ಇಡೀ ಜೀವನವನ್ನು ದೇಶಸೇವೆಗೆ ಅರ್ಪಿಸಿದವರು. ರಾಷ್ಟ್ರದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಅನೇಕ ಯುದ್ಧಗಳಲ್ಲಿ ಭಾಗವಹಿಸಿದ ಅವರ ಅರ್ಜಿಯಲ್ಲಿ ಯಾವುದೇ ದುರುದ್ದೇಶವಿರಲು ಸಾಧ್ಯವಿಲ್ಲ”. ಇವು ಮೈಸೂರಿನಲ್ಲಿ ನೆಲೆಸಿರುವ ನಿವೃತ್ತ ಮೇಜರ್ ಜನರಲ್ ಎಸ್.ಜಿ ಒಂಬತ್ಕೆರೆಯವರ ಕುರಿತು ಭಾರತದ ಮುಖ್ಯ ನ್ಯಾಯಾಧೀಶರಾದ ಎನ್‌.ವಿ ರಮಣರವರು ಆಡಿದ ಮಾತುಗಳು..

ದೇಶದ್ರೋಹ ಕಾನೂನಿನ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಭಾರತದ ಸುಪ್ರೀಂ ಕೋರ್ಟ್ ಸಹ “ದೇಶದ್ರೋಹದ ಕಾನೂನು ಬ್ರಿಟೀಷ್ ಕಾಲದ ಈ ವಶಾಹತುಶಾಹಿ ಪಳಯುಳಿಕೆ ಆಗಿದ್ದು, ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರವೂ ಅದರ ಅಗತ್ಯವಿದೆಯೇ? ನಾವು ಇದರ ಸಿಂಧುತ್ವವನ್ನು ಪರಿಶೀಲಿಸುತ್ತೇವೆ” ಎಂದು ನುಡಿದಿದೆ. ಇಂತಹ ಮಹತ್ವದ ಚರ್ಚೆಗೆ ಕಾರಣರಾದವರು ಛಲಬಿಡದ ಹೋರಾಟಗಾರರಾದ ಎಸ್.ಜಿ ಒಂಬತ್ಕೆರೆ… ಏಕೆಂದರೆ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಅವರು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಜೊತೆಗೂಡಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಸುಪ್ರೀಂ ಪುರಸ್ಕರಿಸಿದ್ದು ಅದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಎಸ್. ಸುಧೀರ್ ಜಿ ಒಂಬತ್ಕೆರೆಯವರು (79) ಬಹಳ ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿದವರು. ಮದ್ರಾಸ್‌ ಐಐಟಿಯಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿರುವ ಅವರು ಭಾರತದ ಅತ್ಯಂತ ಎತ್ತರದ ಪ್ರದೇಶದಲ್ಲಿ ಸೇತುವೆ ನಿರ್ಮಿಸುವ ಮೂಲಕ ಪ್ರಶಸ್ತಿ ಸಹ ಪಡೆದಿದ್ದಾರೆ. ದೆಹಲಿಯ ಸೈನ್ಯದ ಶಿಸ್ತು ಮತ್ತು ಜಾಗರೂಕತೆ ವಿಭಾಗದ ಹೆಚ್ಚುವರಿ ಡಿಜಿಯಾಗಿ ನಿವೃತ್ತನಾದ ನಂತರ 30 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿರುವ ಅವರು ಪ್ರಖರ ಚಿಂತಕರು ಮತ್ತು ದಿಟ್ಟ ಹೋರಾಟಗಾರರು ಎನ್ನುತ್ತಾರೆ ಅವರ ಸ್ನೇಹಿತರು ಮತ್ತು ಒಡನಾಡಿಯಾದ ಡಾ.ವಿ ಲಕ್ಷ್ಮೀನಾರಾಯಣ್.

ಸರ್ಕಾರಿ ಸೌಲಭ್ಯ ಪಡೆಯಲು, ಇತರ ಸೇವೆಗಳಿಗೆ ಆಧಾರ್ ಕಡ್ಡಾಯಗೊಳಿಸಲು ಸರ್ಕಾರ ಹೊರಟಾಗ ಅದನ್ನು ಒಂಬತ್ಕೆರೆಯವರು ತೀವ್ರವಾಗಿ ವಿರೋಧಿಸಿದ್ದರು. ಇದು ದೇಶದ ಪ್ರಜೆಗಳ ಖಾಸಗಿತನದ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಮತ್ತು ಎನ್‌ಪಿಆರ್‌ಗೆ ಕಾರಣವಾಗುತ್ತದೆ ಎಂದು ಪ್ರತಿಪಾದಿಸಿದ್ದರು. ಆಗ ಸುಪ್ರೀಂ ಕೋರ್ಟ್ ಆಧಾರ್ ಕಡ್ಡಾಯ ತೆಗೆಯಬೇಕೆಂದು ಸೂಚಿಸಿತ್ತು. ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ದಾಳಿ ವೇಳೆ ಸೈನ್ಯವನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳುವುದನ್ನು ವಿರೋಧಿಸಿ, ಸೈನ್ಯದ ಹೆಸರಲ್ಲಿ ಮತ ಕೇಳುವುದನ್ನು ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ 150ಕ್ಕೂ ಹೆಚ್ಚು ಗಣ್ಯರಲ್ಲಿ ಎಸ್.ಜಿ ಒಂಬತ್ಕೆರೆಯವರು ಒಬ್ಬರಾಗಿದ್ದರು.

ರಟ್ಟಹಳ್ಳಿಯಲ್ಲಿ ಗಿಡಮರ ಬೆಳೆಸುವ ಪ್ರಚಾರಾಂದೋನ ಆರಂಭಿಸಿದ ಇವರು, ಚಾಮುಂಡಿ ಬೆಟ್ಟದಲ್ಲಿ ಮರಗಳನ್ನು ಉಳಿಸಲು ಹೋರಾಡಿದ್ದಾರೆ. ಚಾಮಲಪುರ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಯ ವಿರುದ್ಧ ನಿರಂತರ ಪ್ರತಿಭಟನೆಗಳನ್ನು ನಡೆಸಿದರು. ಪರಿಸರ ಸಂಬಂಧದ ಹಲವು ವೇದಿಕೆಗಳಲ್ಲಿ ಸಕ್ರಿಯರಾಗಿರುವ ಅವರು ಮೈಸೂರು ಹೆರಿಟೇಜ್ ಕಮಿಟಿ ಮತ್ತು ಮೈಸೂರಿನ ಗ್ರಾಹಕ ವೇದಿಕೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದಾರೆ. ಮಾನವ ಹಕ್ಕುಗಳ ಪರವಾಗಿ ಹೋರಾಡುತ್ತಿರುವ ಅವರು ದೇಶದ್ರೋಹದ ಕಾನೂನಿನ ದುರ್ಬಳಕೆ ವಿರೋಧಿಸಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಾಮಾನ್ಯವಾಗಿ ಸೈನ್ಯದ ಹಿನ್ನೆಲೆಯಿರುವವರು ಆರಾಮಾಗಿರಲು ಬಯಸುತ್ತಾರೆಯೇ ಹೊರತು ಸಾಮಾಜಿಕ ಕಳಕಳಿ ಹೊಂದಿರುವುದಿಲ್ಲ. ಆದರೆ ಇವರು ಮಾತ್ರ ಭಿನ್ನವಾಗಿ ನಿಲ್ಲುತ್ತಾರೆ ಮತ್ತು ಸದಾ ಸಮಾಜದ ಪರ ಚಿಂತಿಸುತ್ತಾರೆ ಎಂದು ಪಿಯುಸಿಲ್‌ನ ಹಿರಿಯ ಹೋರಾಟಗಾರರಾದ ಡಾ.ವಿ ಲಕ್ಷ್ಮೀನಾರಾಯಣ್ ಹೇಳುತ್ತಾರೆ.

ಅವರು ಪಿಯುಸಿಎಲ್‌ನ ಅಜೀವ ಸದಸ್ಯರಾಗಿದ್ದಾರೆ. ಎಲ್ಲಾ ಜೀವಪರ-ಜನಪರ ಮತ್ತು ಪರಿಸರ ಉಳಿವಿನ ಹೋರಾಟದಲ್ಲಿ ಅವರು ಮುಂದಿರುತ್ತಾರೆ. ದೇಶಾದ್ಯಂತ ಎಡಪಕ್ಷಗಳು ಒಗ್ಗಟ್ಟಾಗಬೇಕು ಎಂಬ ಪ್ರಯತ್ನ ನಡೆಸಿದ್ದ ಅವರು ದೆಹಲಿಯಲ್ಲಿ ಸಮಾವೇಶವನ್ನು ನಡೆಸಿದ್ದರು. ಆಧಾರ್ ಕಾರ್ಡ್ ಕಡ್ಡಾಯ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮೇಧಾ ಪಾಟ್ಕರ್‌ರವರ ಜೊತೆಗೂಡಿ ನರ್ಮದಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿದ್ದ ಅವರು ಮೇಧಾ ಪಾಟ್ಕರ್‌ರವರನ್ನು ಮೈಸೂರಿಗೂ ಕರೆಸಿ ಜಾಗೃತಿ ಕಾರ್ಯಕ್ರಮ ನಡೆಸಿದ್ದರು.

ಸದ್ಯ ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿದೆ. “ದೇಶದ್ರೋಹ ಕಾಯ್ದೆ ತೀವ್ರ ದುರ್ಬಳಕೆಯಾಗುತ್ತಿದೆ. ಬಹಳ ಹಿಂದೆಯೇ ನಾವು ರದ್ದುಪಡಿಸಿದ ಐಟಿ ಕಾಯ್ದೆ ಸೆಕ್ಷನ್ 66ಎ ಅಡಿಯಲ್ಲಿ ಈಗಲೂ ಪೊಲೀಸರು ಕೇಸು ದಾಖಲಿಸುತ್ತಿದ್ದಾರೆ. ಇದು ಒಬ್ಬ ಅತ್ಯುತ್ಸಾಹಿ ಬಡಗಿಗೆ ಮರದ ತುಂಡು ಕಡಿಯಲು ಹೇಳಿದರೆ ಇಡೀ ಕಾಡು ಕಡಿದಂತೆ. ತಮಗಾಗದವರನ್ನು ಹತ್ತಿಕ್ಕಲು, ತಮ್ಮ ವಿರುದ್ಧದ ದನಿಯನ್ನು ಅಡಗಿಸಲು ಇಂತಹ ಕಾಯ್ದೆಗಳನ್ನು ದುರ್ಬಳಕೆ ಮಾಡಿಕೊಳ್ಳಬಹುದು. ಯಾವುದೋ ಹಳ್ಳಿಯ ಮೂಲೆಯಲ್ಲಿ ತನಗಾಗದ ವ್ಯಕ್ತಿಯೊಬ್ಬನನ್ನು ಮಟ್ಟಹಾಕಲು ಪೊಲೀಸ್ ಅಧಿಕಾರಿಯೊಬ್ಬ ಈ ಕೇಸು ಹಾಕಿ ಒಳಗೆ ತಳ್ಳಬಹುದಲ್ಲವೇ? ಎಲ್ಲಕ್ಕಿಂತ ಹೆಚ್ಚಾಗಿ ದೇಶದ್ರೋಹದ ಆರೋಪಗಳು ಸಾಬೀತಾಗುವುದು ಬಹಳ ಕಡಿಮೆ. ಈ ಎಲ್ಲ ಅಂಶಗಳನ್ನು ಸರ್ಕಾರ ಪರಿಗಣಿಸಿ ತನ್ನ ಅಭಿಪ್ರಾಯ ತಿಳಿಸಬೇಕು” ಎಂದು ಕೋರ್ಟ್ ಸೂಚಿಸಿದೆ.

ಹೀಗೆ ಮರ ಉಳಿಸುವುದರಿಂದ ಆರಂಭಿಸಿ, ದೇಶದ್ರೋಹ ಕಾನೂನು ರದ್ದಾಗಬೇಕು ಎನ್ನುವರೆಗೂ ಹತ್ತ ಹಲವು ವಿಷಯಗಳಲ್ಲಿ ವೊಂಬತ್ಕೆರೆಯವರು ಹೋರಾಟನಿರತರಾಗಿದ್ದಾರೆ. ಮೈಸೂರಿನಲ್ಲೇ ನೆಲೆಸಿರುವ ಅವರು ಎಲೆಮರೆಕಾಯಿಯಂತೆ ಬಹಳ ಜನಕ್ಕೆ ಅಪರಿಚಿತರೆಂದೇ ಹೇಳಬಹುದು. ಆದರೆ ಅವರ ವಯಕ್ತಿಯ ಬದುಕಿನ ಬಗ್ಗೆಯಾಗಲಿ, ಹೋರಾಟದ ಬಗ್ಗೆಯಾಗಲಿ ಕೇಳಿದರೆ ನನಗಿಂತ ಜನರ ನೆಮ್ಮದಿಯ ಜೀವನ ಮುಖ್ಯ. ಆ ಕುರಿತು ಹೆಚ್ಚು ಗಮನ ನೀಡೋಣ ಎನ್ನುತ್ತಾರೆ…


ಇದನ್ನೂ ಓದಿ: ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...