Homeಕರ್ನಾಟಕ ‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

 ‘ಮೇಘ ಸಂದೇಶವೇ ನಮ್ಮ ಇಮೇಲ್’. ಎನ್.ಐ.ಎ ಪ್ರಗ್ಯಾ ಮೇಲಿನ ಕೇಸ್ ಕೈಬಿಟ್ಟಿದ್ದು ಹೀಗೆ

ಠಕ್ಕರ್: ಭೋಪಾಲದಲ್ಲಿ ವಿಷಾನಿಲದೊಂದಿಗೆ ಮುಖಾಮುಖಿ

- Advertisement -
- Advertisement -

| ಮಲ್ಲಿ |

‘ಉಜ್ಜೋಣ ಉಜ್ಜೋಣ ಅಂಬಾ ಬೆನ್ನು ಉಜ್ಜೋಣ’

ಪ್ರಗ್ಯಾ ಮನೆ ಸಮೀಪ ಹೋದಂತೆ ಒಂಥರಾ ವಿಷಾನಿಲದ ವಾಸನೆ…. ತೀರಾ ಸಮೀಪವೇ ಹೋದಾಗ ಸೆಗಣಿ ವಾಸನೆ.. ಹಾಂ, ಇದು ಪ್ರಗ್ಯಾ ಮನೆಯೇ ಎಂದು ಪಕ್ಕಾ ಆಗುತ್ತಿದ್ದಂತೆ, ಅಂಗಳದಲ್ಲಿ ಅಂಬಾ ಬೆನ್ನು ಉಜ್ಜುತ್ತ ನಿಂತಿದ್ದ ಪ್ರಗ್ಯಾ ಕಂಡೇಬಿಟ್ಟರು.

ಅಕ್ಕೋ, ಕರ್ನಾಟಕದಿಂದ ಬಂದೀನಿ… ಲೂಜಾವರ ಸ್ವಾಮೀಜಿ ತಮ್ಮ ಇಂಟರ್‍ವ್ಯೂ ಮಾಡಾಕೆ ಕಳಿಸಿದ್ದಾರೆ.
‘ಓಹ್, ಮೊನ್ನೆನೇ ಅವರ ವ್ಯಾಟ್ಸಪ್ ಬಂದಿತ್ತು, ನಿನ್ನೆ ಇಮೇಲ್ ಕೂಡ ಕಳಿಸಿದ್ದರು… ಬಾರಪ್ಪ ಬಾ’ ಎಂದು ಗೋವಿನ ಹಿಂಭಾಗದ ತುದಿಯಿಂದ ಮುಂದಕ್ಕೆ ಉಜ್ಜತೊಡಗಿದರು.
‘ಅಲ್ಲ ಅಕ್ಕವ್ವ, ನೀವೇನೋ ವ್ಯಾಟ್ಸಪ್, ‘ಮೇಲ್’ ಬಳಸಬಹುದು. ಆದರೆ, ಲೂಜಾವರರು ಬಳಸ್ತಾರಾ?’
‘ಅವ್ರು, ನಾನು ಎಲ್ಲ 1988ರಿಂದಾನೇ ಬಳಸ್ತಾ ಇದೀವಿ…’
‘ಮೋದಿ ಹಂಗೆ ಹೇಳಿದ್ದಕ್ಕೆ ಜನ ನಗ್ತಾ ಅವ್ರೆ ಅಕ್ಕಾ’
‘ದಡ್ಡರು ನೀವೆಲ್ಲ…. ನಮ್ಮ ‘ಮೇಲು’ ಅಂದ್ರೆ ಅದು ಮೇಘ ಸಂದೇಶ… ಮೋಡದ ಮೂಲಕವೇ ಸಂದೇಶ ರವಾನಿಸಿಕೊಳ್ತೀವಿ…ಅದನ್ನು ಬೇರೆಯವರು ನೋಡಾಕಾಗಲ್ಲ…ಮೋಡಗಳ ರಕ್ಷಣೆಯಲ್ಲಿ ಅದು ಹರಿದು ನಮ್ಮವರನ್ನ ತಲುಪುತ್ತೆ’
‘ಅದಿರ್ಲಿ ಅಕ್ಕಾ, ‘ಮೇಲು’ ಬಂದು ಇನ್‍ಬಾಕ್ಸ್‍ಗೆ ಬೀಳ್ತಾವೆ. ಆದ್ರೆ ನಿಮ್ಮ ಮೇಘ ಸಂದೇಶ ಎಲ್ಲಿ ಬೀಳತ್ತೆ? ನಿಮ್ಗೆ, ಲೂಜಾವರರಿಗೆ ಬಕ್ಕಣ (ಕಿಸೆ, ಪಾಕೆಟ್) ಬೇರೆ ಇಲ್ವಲ್ಲ?’
‘ಮೂರ್ಖ. ಆ ಸಂದೇಶಗಳು ಸೀದಾ ಆತ್ಮವನ್ನ ತಲುಪ್ತಾವೆ’
‘ಹಂಗಾದ್ರೆ ನಿಂಗೆ ಶಿಕ್ಷೆ ಆಗಲ್ಲಕ್ಕ… ತನಿಖೆ ಮಾಡೋರಿಗೆ ನಿಮ್ಮ ಮೇಘ ಸಂದೇಶ ಸಿಗೋದೇ ಇಲ್ವಲ್ಲ?’
‘ಇದು ಆಫ್ ದಿ ರೆಕಾರ್ಡ್ ಇರಲಿ..’

‘ಅಕ್ಕಾ ಹಿಂಗ ಉಜುತ್ತೀರಲ್ಲ ಆಕಳ ಬೆನ್ನನ್ನ… ಬಿಪಿ ಕಂಟ್ರೋಲ್‍ಗೆ ಬರೋದು ಆಕಳದ್ದೋ, ನಿಮ್ದೋ ಅಕ್ಕಾ’
‘ಪೆದ್ದ, ಗೋಮಾತೆಗೆ ಬಿಪಿ, ಶುಗರ್ ಬರಲ್ಲ’
‘ನಾ ಬಂದಾಗಿಂದ ನೋಡತಿನಿ, ಉಜ್ತಾನೇ ಇದ್ದೀರಿ… ಸೋಲೋ ಭಯದಲ್ಲಿ ಬಿಪಿ ಏರುಪೇರಾಗಿದೆಯಾ?
‘ಓವರ್ ಆಯ್ತು… ಶಾಪ ಕೊಡ್ಲಾ?’
‘ಬೇಡಕ್ಕೋ, ಸಾರಿ….ಅಕ್ಕಾ ಅಕ್ಕಾ, ಕ್ಯಾನ್ಸರ್ ಔಷಧಿ ಬೀಳ್ತಾ ಇದೆ…. ಒಂದು ಬಾಟಲ್ ಕೊಡಕ್ಕ’
(ಆಕಳು ಒಂದು ಕೊಡದಷ್ಟು ಸೂಸು ಮಾಡಿತು…)
‘ಹೇಯ್, ನಿಂಗೆ ಬೇಕಾದ್ರೆ ಅಲ್ಲಿ ಕರ್ನಾಟಕದಲ್ಲಿ ಸಿಗುತ್ತೆ… ರಾಮ್ದೇವ್ ನನ್ನ ಫಾರ್ಮುಲಾ ಇಟ್ಗೊಂಡು, ಗೋಮೂತ್ರಗಳ ಪಾಕೆಟ್ ಮಾಡಿ ‘ಹೇತಂಜಲಿ’ಯಲ್ಲಿ ಮಾರ್ತಾನೆ…’

‘ಅಕ್ಕಾ ಈ ರೇಡಾರ್ ಬಗ್ಗೆ ನಿಂಗೇನಾದ್ರೂ ಗೊತ್ತಾ ಅಕ್ಕ?’
‘ಚಿಕ್ಕಪ್ಪಯ್ಯ ಹೇಳಿದ್ದನ್ನ ಜೋಕ್ ಮಾಡ್ತೀದಿಯಾ? ಆಫ್ ದಿ ರೆಕಾರ್ಡ್ ಕೇಳು: ನಮ್ಮನ್ನೆಲ್ಲ ಜೈಲಿಗೆ ಹಾಕಿದ್ರಾ… ಅಮಿತಣ್ಣಂಗೂ ಜೈಲು ಕಾದಿತ್ತಾ? ಚಿಕ್ಕಪ್ಪ ಮೋಡ ಸೃಷ್ಟಿಸಿಬಿಟ್ಟ… ಎನ್‍ಐಎ ಕಣ್ಣಿನ ಪೊರೆಗೆ ಈ ಮೋಡ ಅಮರಿಕೊಂಡವು… ಅಸೀಮಾನಂದ ಕಾಕಾ ಅದಕ್ಕೇ ರಿಲೀಸ್ ಆಗಲಿಲ್ವಾ… ನಮ್ಮ ಚಿಕ್ಕಪ್ಪ ಹೇಳಿದ್ದು ನಿಮ್ಗೆ ಅರ್ಥ ಆಗಲ್ಲ…’
(ಪ್ರಗ್ಯಕ್ಕ ಎದೆ ಮೇಲೆ ಕೈ ಇಟ್ಟುಕೊಂಡು ಕಣ್ಣು ಮುಚ್ಚಿಕೊಂಡರು….ಆಕಳು ಅಂಬಾ ಅಂದಿತು…)
‘ಏನಾಯ್ತಕ್ಕಾ, ಎದೆನೋವಾ?’
‘ನೋ ನೋ… ಆತ್ಮಕ್ಕೆ ಮೇಘ ಸಂದೇಶವೊಂದು ಬಂದಿದೆ, ಚಿಕ್ಕಪ್ಪಯ್ಯನ ಕಡೆಯಿಂದ’
‘ಆಯ್ತಕ್ಕ ಇನ್‍ಬಾಕ್ಸ್…. ಸಾರಿ… ಆತ್ಮವ ತೆರೆದು ಮೇಲು ನೋಡು… ಬರ್ಲಾ ಅಕ್ಕಾ…ಒಂದೇ ಒಂದು ಸಲ ಉಜ್ಜಲಾ?’
(ಟೊಣಪನೊಬ್ಬ ಬಂದು ಏ ಎಂದು ಗದರಿಸಿದ)
‘ಉಜ್ಜಲಿ ಬಿಡು…. ಗೋಮಾತೆ ಇರೋದೇ ಉಜ್ಜಲು, ಬಿಪಿ ಕಂಟ್ರೋಲ್ ಮಾಡಿಕೊಳ್ಳಲು…’
ನಮ್ಮ ಠಕ್ಕಣ್ಣ ಆಕಳಿನ ಬೆನ್ನು ಉಜ್ಜುವಾಗ ಮತ್ತೆ ವಿಷಾನಿಲದ ವಾಸನೆ… ಭಯ ಬಿದ್ದವನೇ ಅಲ್ಲಿಂದ ಪರಾರಿಯಾಗಿ ಬಂದಿದ್ದಾನೆ…

ದೇಶದೊಳಗಿನ ‘ಬಾಂಬು’ ಪ್ರಗ್ಯಾ ಎಂಬ ಸಾಧ್ವಿಯೂ… ಸುರಕ್ಷತೆ ಬಗ್ಗೆ ಕುಟ್ಟುತ್ತಲೇ ಇರುವ ಮೋದಿಯೂ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....