Homeಮುಖಪುಟಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

- Advertisement -
- Advertisement -

ಒಟಿಟಿ ವೇದಿಕೆ ಜನಪ್ರಿಯಗೊಳ್ಳುತ್ತಿದ್ದು, ಪ್ರತಿನಿತ್ಯ ಹೊಸತನಕ್ಕೆ ಕಾರಣವಾಗುತ್ತಿದೆ. ಅಂಗೈನಲ್ಲಿಯೇ ಸಿಗುವ ಸಿನಿಮಾ, ವೆಬ್ ಸರಣಿಗಳಲ್ಲಿ ವೀಕ್ಷಕರು ಮುಳುಗಿದ್ದಾರೆ. ಇದಕ್ಕೆ ತಕ್ಕಂತೆ ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್, ಹಾಟ್‌ಸ್ಟಾರ್, Zee 5, ಆಹಾ, MX ಪ್ಲೇಯರ್‌, Nee-stream, soni LIV ವೇದಿಕೆಗಳು ವಿಭಿನ್ನವಾದ ವಿಷಯಗಳನ್ನು ನೀಡಲು ಪ್ರಯತ್ನಿಸುತ್ತಿವೆ.

ಜುಲೈ 2021 ರಲ್ಲಿ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿರುವ ಮತ್ತು ಮುಂಬರುವ ವೆಬ್ ಸರಣಿಗಳು, ಸಿನಿಮಾಗಳ ಪಟ್ಟಿ ಹೀಗಿದೆ.

೧. ಮಾಲಿಕ್ – ಮಲಯಾಲಂ ಚಿತ್ರ

ಫಹಾದ್ ಫಾಸಿಲ್, ನಿಮಿಷಾ ಸಜಯನ್ ತಾರಾಂಗಣದಲ್ಲಿದ್ದು, ಕೇರಳದಲ್ಲಿ ನಡೆದ ಗಲಭೆಯೊಂದರ ಸುತ್ತ ನಡೆಯುವ ರಾಜಕೀಯದ ಕಥಾ ಹಂದರವನ್ನು ಹೊಂದಿದೆ. ಜುಲೈ 15 ಕ್ಕೆ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ.

 

೨. ನಾರಪ್ಪ (ತೆಲುಗು ಸಿನಿಮಾ) 

ತಮಿಳಿನ ಅಸುರನ್ ಸಿನಿಮಾದ ರಿಮೇಕ್ ನಾರಪ್ಪನಾಗಿ ತೆಲುಗಿನಲ್ಲಿ ಬರುತ್ತಿದೆ. ವಿಕ್ಟರಿ ವೆಂಕಟೇಶ್, ಧನುಷ್ ನಿರ್ವಹಿಸಿದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪ್ರಿಯಾಮಣಿ ಇದ್ದಾರೆ. ಜುಲೈ 24 ರಂದು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ನಾರಪ್ಪ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

೩. ಕುಡಿ ಎಡಮೈತೆ (ತೆಲುಗು ವೆಬ್ ಸರಣಿ)

ಕನ್ನಡದ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶಿಸಿರುವ ‘ಕುಡಿ ಎಡಮೈತೆ’ ತೆಲುಗು ವೆಬ್‌ ಸರಣಿಯು ಆಹಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಜುಲೈ 16 ರಿಂದ (ಶುಕ್ರವಾರ) ಪ್ರಸಾರವಾಗಲಿದೆ. ಈ ಕ್ರೈಂ ಥ್ರಿಲ್ಲರ್‌ ಸರಣಿಯಲ್ಲಿ  ಅಮಲಾ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

೪. ಖುದ್ಸಪಾ (Chutzpah) (ಹಿಂದಿ ವೆಬ್ ಸರಣಿ)

ಸೋನಿಲೈವ್ ಒಟಿಟಿಯಲ್ಲಿ ಜುಲೈ 23 ಕ್ಕೆ ಬಿಡುಗಡೆಯಾಗಲಿದೆ. ವರುಣ್ ಶರ್ಮಾ, ಮಂಜೋತ್ ಸಿಂಗ್, ಎಲಾನಝ್ ನೋರೌಜಿ, ಗೌತಮ್ ಮೆಹ್ರಾ ಸರಣಿಯಲ್ಲಿದ್ದು, ಸಿಮಾರ್‌ಪ್ರೀತ್ ಸಿಂಗ್ ನಿರ್ದೇಶನವಿದೆ. ಇಂದಿನ ಯುಗದಲ್ಲಿ ಮಾನವನ ಡಿಜಿಟಲ್ ರೂಪಾಂತರದ ಬಗ್ಗೆ ಸೂಕ್ಷ್ಮ ನೋಟವನ್ನು ನೀಡುತ್ತದೆ. 5 ವಿಭಿನ್ನ  ಕಥೆಗಳನ್ನು ಹೊಂದಿದೆ.

೫. ಒಕ ಚಿನ್ನ ವಿರಾಮಂ – ತೆಲುಗು ಚಿತ್ರ

ಒಕ ಚಿನ್ನ ವಿರಾಮಂ ಆಹಾ ಒಟಿಟಿಯಲ್ಲಿ ಜುಲೈ 9ಕ್ಕೆ ಬಿಡುಗಡೆಯಾಗಿದೆ. ಒಬ್ಬ ಉದ್ಯಮಿ ಮತ್ತು ಆತನ ಗರ್ಭಿಣಿ ಪತ್ನಿಯ ಜೀವನದಲ್ಲಾಗುವ ಕಥಾಹಂದರವನ್ನು ಹೊಂದಿದೆ.

Watch Oka Chinna Viramam | Prime Video

೬. ತೂಫಾನ್- ಹಿಂದಿ ಚಿತ್ರ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ  ಜುಲೈ 16 ಬಿಡುಗಡೆಯಾಗಿರುವ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ಚಿತ್ರ ತೂಫಾನ್. ಮೃನಾಲ್ ಠಾಕೂರ್ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿದ್ದಾರೆ. ಬೀದಿ ಬಾಕ್ಸರ್ ಚಾಂಪಿಯನ್ ಆಗುವುದನ್ನು ಆಧರಿಸಿದ ಕಥೆ ಇದಾಗಿದ್ದು, ಪರೇಶ್ ರಾವಲ್ ಅವರು ಫರ್ಹಾನ್ ಪಾತ್ರದ ತರಬೇತುದಾರರಾಗಿ ಕಾಣಿಸಿಕೊಂಡಿದ್ದಾರೆ.

೭. ಸರ್ಪಟ್ಟ ಪರಂಬರೈ – ತಮಿಳು ಸಿನಿಮಾ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಜುಲೈ 22 ಬಿಡುಗೆಯಾಗಲಿರುವ ಸರ್ಪಟ್ಟ ಪರಂಬರೈ ಪ್ರೇಕ್ಷಕರು ಅತಿ ಹೆಚ್ಚು ಕಾತುರದಿಂದ ಕಾಯುತ್ತಿರುವ ಚಿತ್ರವಾಗಿದೆ. ಪಾ.ರಂಜಿತ್ ನಿರ್ದೇಶನದಲ್ಲಿ ಆರ್ಯ ನಟಿಸಿರುವ ಈ ಚಿತ್ರ 1970 ರ ದಶಕದ ಸರ್ಪಟ್ಟ ಪರಂಬರೈನ ಕಥಾ ಹಂದರವನ್ನು ಹೊಂದಿದೆ.

8. ಫೀಲ್ಸ್ ಲೈಕ್ ಇಶ್ಕ್- ಹಿಂದಿ ವೆಬ್ ಸರಣಿ

ಜುಲೈ 23 ಕ್ಕೆ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ, ಅನೇಕ ವಿಭಿನ್ನ ಕಥೆಗಳ ಗುಚ್ಚ ಫೀಲ್ಸ್ ಲೈಕ್ ಇಶ್ಕ್.  ಈ ಕಥೆಗಳಲ್ಲಿ ಒಂದು ಕಥೆ ಆಯುಷ್ಮಾನ್ ಖುರಾನಾ ಅವರ ಪತ್ನಿ ತಾಹಿರಾ ಕಶ್ಯಪ್ ನಿರ್ದೇಶಿಸಿದ್ದಾರೆ. ಇದು ತಾಹಿರಾ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

Feels Like Ishq (Netflix) Web Series Cast, Story, Real Name, Wiki & More

೯. ಡಾಕ್ಟರ್ – ತಮಿಳು ಚಲನಚಿತ್ರ

ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿರುವ ಈ ತಿಂಗಳ ಮತ್ತೊಂದು ಕುತೂಹಲಕಾರಿ ಚಿತ್ರ  ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರ ಡಾಕ್ಟರ್. ಚಲನಚಿತ್ರವು ಆಕ್ಷನ್, ಅಪರಾಧ ಮತ್ತು ಹಾಸ್ಯದ ಮಿಶ್ರಣವಾಗಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಪ್ರಿಯಾಂಕಾ ಅರುಲ್ ಮುಖ್ಯ ಪಾತ್ರದಲ್ಲಿದ್ದಾರೆ.

Doctor - Tamil movie

 

೧೦. ನರಗಸೂರನ್ – ತಮಿಳು ಚಿತ್ರ

Soni LIV ನಲ್ಲಿ ಬಿಡುಗಡೆಯಾಗಲಿರುವ ಜುಲೈ ತಿಂಗಳ ಚಿತ್ರಗಳಲ್ಲಿ ಥ್ರಿಲ್ಲರ್ ಕಥೆಯ ನರಗಸೂರನ್ ಕೂಡ ಒಂದು. ಕಳೆದ ವರ್ಷ ಇದೇ ಸಮಯದಲ್ಲಿ ಬಿಡುಗಡೆಯಾಗಬೇಕಿತ್ತು. ಕಾರ್ತಿಕ್ ನರೇನ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಅರವಿಂದ್ ಸ್ವಾಮಿ, ಶ್ರಿಯಾ ಶರನ್, ಸುಂದೀಪ್ ಕಿಶನ್, ಇಂದ್ರಜಿತ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಒಟ್ಟಿಗೆ ನೃತ್ಯ ಮಾಡಿದ ಅಮೀರ್‌ ಖಾನ್ ಮತ್ತು ಕಿರಣ್ ರಾವ್: ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...