Homeಮುಖಪುಟಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

- Advertisement -
- Advertisement -

ಒಟಿಟಿ ವೇದಿಕೆ ಜನಪ್ರಿಯಗೊಳ್ಳುತ್ತಿದ್ದು, ಪ್ರತಿನಿತ್ಯ ಹೊಸತನಕ್ಕೆ ಕಾರಣವಾಗುತ್ತಿದೆ. ಅಂಗೈನಲ್ಲಿಯೇ ಸಿಗುವ ಸಿನಿಮಾ, ವೆಬ್ ಸರಣಿಗಳಲ್ಲಿ ವೀಕ್ಷಕರು ಮುಳುಗಿದ್ದಾರೆ. ಇದಕ್ಕೆ ತಕ್ಕಂತೆ ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್, ಹಾಟ್‌ಸ್ಟಾರ್, Zee 5, ಆಹಾ, MX ಪ್ಲೇಯರ್‌, Nee-stream, soni LIV ವೇದಿಕೆಗಳು ವಿಭಿನ್ನವಾದ ವಿಷಯಗಳನ್ನು ನೀಡಲು ಪ್ರಯತ್ನಿಸುತ್ತಿವೆ.

ಜುಲೈ 2021 ರಲ್ಲಿ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿರುವ ಮತ್ತು ಮುಂಬರುವ ವೆಬ್ ಸರಣಿಗಳು, ಸಿನಿಮಾಗಳ ಪಟ್ಟಿ ಹೀಗಿದೆ.

೧. ಮಾಲಿಕ್ – ಮಲಯಾಲಂ ಚಿತ್ರ

ಫಹಾದ್ ಫಾಸಿಲ್, ನಿಮಿಷಾ ಸಜಯನ್ ತಾರಾಂಗಣದಲ್ಲಿದ್ದು, ಕೇರಳದಲ್ಲಿ ನಡೆದ ಗಲಭೆಯೊಂದರ ಸುತ್ತ ನಡೆಯುವ ರಾಜಕೀಯದ ಕಥಾ ಹಂದರವನ್ನು ಹೊಂದಿದೆ. ಜುಲೈ 15 ಕ್ಕೆ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ.

 

೨. ನಾರಪ್ಪ (ತೆಲುಗು ಸಿನಿಮಾ) 

ತಮಿಳಿನ ಅಸುರನ್ ಸಿನಿಮಾದ ರಿಮೇಕ್ ನಾರಪ್ಪನಾಗಿ ತೆಲುಗಿನಲ್ಲಿ ಬರುತ್ತಿದೆ. ವಿಕ್ಟರಿ ವೆಂಕಟೇಶ್, ಧನುಷ್ ನಿರ್ವಹಿಸಿದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪ್ರಿಯಾಮಣಿ ಇದ್ದಾರೆ. ಜುಲೈ 24 ರಂದು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ನಾರಪ್ಪ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

೩. ಕುಡಿ ಎಡಮೈತೆ (ತೆಲುಗು ವೆಬ್ ಸರಣಿ)

ಕನ್ನಡದ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶಿಸಿರುವ ‘ಕುಡಿ ಎಡಮೈತೆ’ ತೆಲುಗು ವೆಬ್‌ ಸರಣಿಯು ಆಹಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಜುಲೈ 16 ರಿಂದ (ಶುಕ್ರವಾರ) ಪ್ರಸಾರವಾಗಲಿದೆ. ಈ ಕ್ರೈಂ ಥ್ರಿಲ್ಲರ್‌ ಸರಣಿಯಲ್ಲಿ  ಅಮಲಾ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

೪. ಖುದ್ಸಪಾ (Chutzpah) (ಹಿಂದಿ ವೆಬ್ ಸರಣಿ)

ಸೋನಿಲೈವ್ ಒಟಿಟಿಯಲ್ಲಿ ಜುಲೈ 23 ಕ್ಕೆ ಬಿಡುಗಡೆಯಾಗಲಿದೆ. ವರುಣ್ ಶರ್ಮಾ, ಮಂಜೋತ್ ಸಿಂಗ್, ಎಲಾನಝ್ ನೋರೌಜಿ, ಗೌತಮ್ ಮೆಹ್ರಾ ಸರಣಿಯಲ್ಲಿದ್ದು, ಸಿಮಾರ್‌ಪ್ರೀತ್ ಸಿಂಗ್ ನಿರ್ದೇಶನವಿದೆ. ಇಂದಿನ ಯುಗದಲ್ಲಿ ಮಾನವನ ಡಿಜಿಟಲ್ ರೂಪಾಂತರದ ಬಗ್ಗೆ ಸೂಕ್ಷ್ಮ ನೋಟವನ್ನು ನೀಡುತ್ತದೆ. 5 ವಿಭಿನ್ನ  ಕಥೆಗಳನ್ನು ಹೊಂದಿದೆ.

೫. ಒಕ ಚಿನ್ನ ವಿರಾಮಂ – ತೆಲುಗು ಚಿತ್ರ

ಒಕ ಚಿನ್ನ ವಿರಾಮಂ ಆಹಾ ಒಟಿಟಿಯಲ್ಲಿ ಜುಲೈ 9ಕ್ಕೆ ಬಿಡುಗಡೆಯಾಗಿದೆ. ಒಬ್ಬ ಉದ್ಯಮಿ ಮತ್ತು ಆತನ ಗರ್ಭಿಣಿ ಪತ್ನಿಯ ಜೀವನದಲ್ಲಾಗುವ ಕಥಾಹಂದರವನ್ನು ಹೊಂದಿದೆ.

Watch Oka Chinna Viramam | Prime Video

೬. ತೂಫಾನ್- ಹಿಂದಿ ಚಿತ್ರ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ  ಜುಲೈ 16 ಬಿಡುಗಡೆಯಾಗಿರುವ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ಚಿತ್ರ ತೂಫಾನ್. ಮೃನಾಲ್ ಠಾಕೂರ್ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿದ್ದಾರೆ. ಬೀದಿ ಬಾಕ್ಸರ್ ಚಾಂಪಿಯನ್ ಆಗುವುದನ್ನು ಆಧರಿಸಿದ ಕಥೆ ಇದಾಗಿದ್ದು, ಪರೇಶ್ ರಾವಲ್ ಅವರು ಫರ್ಹಾನ್ ಪಾತ್ರದ ತರಬೇತುದಾರರಾಗಿ ಕಾಣಿಸಿಕೊಂಡಿದ್ದಾರೆ.

೭. ಸರ್ಪಟ್ಟ ಪರಂಬರೈ – ತಮಿಳು ಸಿನಿಮಾ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಜುಲೈ 22 ಬಿಡುಗೆಯಾಗಲಿರುವ ಸರ್ಪಟ್ಟ ಪರಂಬರೈ ಪ್ರೇಕ್ಷಕರು ಅತಿ ಹೆಚ್ಚು ಕಾತುರದಿಂದ ಕಾಯುತ್ತಿರುವ ಚಿತ್ರವಾಗಿದೆ. ಪಾ.ರಂಜಿತ್ ನಿರ್ದೇಶನದಲ್ಲಿ ಆರ್ಯ ನಟಿಸಿರುವ ಈ ಚಿತ್ರ 1970 ರ ದಶಕದ ಸರ್ಪಟ್ಟ ಪರಂಬರೈನ ಕಥಾ ಹಂದರವನ್ನು ಹೊಂದಿದೆ.

8. ಫೀಲ್ಸ್ ಲೈಕ್ ಇಶ್ಕ್- ಹಿಂದಿ ವೆಬ್ ಸರಣಿ

ಜುಲೈ 23 ಕ್ಕೆ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ, ಅನೇಕ ವಿಭಿನ್ನ ಕಥೆಗಳ ಗುಚ್ಚ ಫೀಲ್ಸ್ ಲೈಕ್ ಇಶ್ಕ್.  ಈ ಕಥೆಗಳಲ್ಲಿ ಒಂದು ಕಥೆ ಆಯುಷ್ಮಾನ್ ಖುರಾನಾ ಅವರ ಪತ್ನಿ ತಾಹಿರಾ ಕಶ್ಯಪ್ ನಿರ್ದೇಶಿಸಿದ್ದಾರೆ. ಇದು ತಾಹಿರಾ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

Feels Like Ishq (Netflix) Web Series Cast, Story, Real Name, Wiki & More

೯. ಡಾಕ್ಟರ್ – ತಮಿಳು ಚಲನಚಿತ್ರ

ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿರುವ ಈ ತಿಂಗಳ ಮತ್ತೊಂದು ಕುತೂಹಲಕಾರಿ ಚಿತ್ರ  ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರ ಡಾಕ್ಟರ್. ಚಲನಚಿತ್ರವು ಆಕ್ಷನ್, ಅಪರಾಧ ಮತ್ತು ಹಾಸ್ಯದ ಮಿಶ್ರಣವಾಗಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಪ್ರಿಯಾಂಕಾ ಅರುಲ್ ಮುಖ್ಯ ಪಾತ್ರದಲ್ಲಿದ್ದಾರೆ.

Doctor - Tamil movie

 

೧೦. ನರಗಸೂರನ್ – ತಮಿಳು ಚಿತ್ರ

Soni LIV ನಲ್ಲಿ ಬಿಡುಗಡೆಯಾಗಲಿರುವ ಜುಲೈ ತಿಂಗಳ ಚಿತ್ರಗಳಲ್ಲಿ ಥ್ರಿಲ್ಲರ್ ಕಥೆಯ ನರಗಸೂರನ್ ಕೂಡ ಒಂದು. ಕಳೆದ ವರ್ಷ ಇದೇ ಸಮಯದಲ್ಲಿ ಬಿಡುಗಡೆಯಾಗಬೇಕಿತ್ತು. ಕಾರ್ತಿಕ್ ನರೇನ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಅರವಿಂದ್ ಸ್ವಾಮಿ, ಶ್ರಿಯಾ ಶರನ್, ಸುಂದೀಪ್ ಕಿಶನ್, ಇಂದ್ರಜಿತ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಒಟ್ಟಿಗೆ ನೃತ್ಯ ಮಾಡಿದ ಅಮೀರ್‌ ಖಾನ್ ಮತ್ತು ಕಿರಣ್ ರಾವ್: ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...