Homeಮುಖಪುಟಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

- Advertisement -
- Advertisement -

ಒಟಿಟಿ ವೇದಿಕೆ ಜನಪ್ರಿಯಗೊಳ್ಳುತ್ತಿದ್ದು, ಪ್ರತಿನಿತ್ಯ ಹೊಸತನಕ್ಕೆ ಕಾರಣವಾಗುತ್ತಿದೆ. ಅಂಗೈನಲ್ಲಿಯೇ ಸಿಗುವ ಸಿನಿಮಾ, ವೆಬ್ ಸರಣಿಗಳಲ್ಲಿ ವೀಕ್ಷಕರು ಮುಳುಗಿದ್ದಾರೆ. ಇದಕ್ಕೆ ತಕ್ಕಂತೆ ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್, ಹಾಟ್‌ಸ್ಟಾರ್, Zee 5, ಆಹಾ, MX ಪ್ಲೇಯರ್‌, Nee-stream, soni LIV ವೇದಿಕೆಗಳು ವಿಭಿನ್ನವಾದ ವಿಷಯಗಳನ್ನು ನೀಡಲು ಪ್ರಯತ್ನಿಸುತ್ತಿವೆ.

ಜುಲೈ 2021 ರಲ್ಲಿ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿರುವ ಮತ್ತು ಮುಂಬರುವ ವೆಬ್ ಸರಣಿಗಳು, ಸಿನಿಮಾಗಳ ಪಟ್ಟಿ ಹೀಗಿದೆ.

೧. ಮಾಲಿಕ್ – ಮಲಯಾಲಂ ಚಿತ್ರ

ಫಹಾದ್ ಫಾಸಿಲ್, ನಿಮಿಷಾ ಸಜಯನ್ ತಾರಾಂಗಣದಲ್ಲಿದ್ದು, ಕೇರಳದಲ್ಲಿ ನಡೆದ ಗಲಭೆಯೊಂದರ ಸುತ್ತ ನಡೆಯುವ ರಾಜಕೀಯದ ಕಥಾ ಹಂದರವನ್ನು ಹೊಂದಿದೆ. ಜುಲೈ 15 ಕ್ಕೆ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ.

 

೨. ನಾರಪ್ಪ (ತೆಲುಗು ಸಿನಿಮಾ) 

ತಮಿಳಿನ ಅಸುರನ್ ಸಿನಿಮಾದ ರಿಮೇಕ್ ನಾರಪ್ಪನಾಗಿ ತೆಲುಗಿನಲ್ಲಿ ಬರುತ್ತಿದೆ. ವಿಕ್ಟರಿ ವೆಂಕಟೇಶ್, ಧನುಷ್ ನಿರ್ವಹಿಸಿದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪ್ರಿಯಾಮಣಿ ಇದ್ದಾರೆ. ಜುಲೈ 24 ರಂದು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ನಾರಪ್ಪ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

೩. ಕುಡಿ ಎಡಮೈತೆ (ತೆಲುಗು ವೆಬ್ ಸರಣಿ)

ಕನ್ನಡದ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶಿಸಿರುವ ‘ಕುಡಿ ಎಡಮೈತೆ’ ತೆಲುಗು ವೆಬ್‌ ಸರಣಿಯು ಆಹಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಜುಲೈ 16 ರಿಂದ (ಶುಕ್ರವಾರ) ಪ್ರಸಾರವಾಗಲಿದೆ. ಈ ಕ್ರೈಂ ಥ್ರಿಲ್ಲರ್‌ ಸರಣಿಯಲ್ಲಿ  ಅಮಲಾ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

೪. ಖುದ್ಸಪಾ (Chutzpah) (ಹಿಂದಿ ವೆಬ್ ಸರಣಿ)

ಸೋನಿಲೈವ್ ಒಟಿಟಿಯಲ್ಲಿ ಜುಲೈ 23 ಕ್ಕೆ ಬಿಡುಗಡೆಯಾಗಲಿದೆ. ವರುಣ್ ಶರ್ಮಾ, ಮಂಜೋತ್ ಸಿಂಗ್, ಎಲಾನಝ್ ನೋರೌಜಿ, ಗೌತಮ್ ಮೆಹ್ರಾ ಸರಣಿಯಲ್ಲಿದ್ದು, ಸಿಮಾರ್‌ಪ್ರೀತ್ ಸಿಂಗ್ ನಿರ್ದೇಶನವಿದೆ. ಇಂದಿನ ಯುಗದಲ್ಲಿ ಮಾನವನ ಡಿಜಿಟಲ್ ರೂಪಾಂತರದ ಬಗ್ಗೆ ಸೂಕ್ಷ್ಮ ನೋಟವನ್ನು ನೀಡುತ್ತದೆ. 5 ವಿಭಿನ್ನ  ಕಥೆಗಳನ್ನು ಹೊಂದಿದೆ.

೫. ಒಕ ಚಿನ್ನ ವಿರಾಮಂ – ತೆಲುಗು ಚಿತ್ರ

ಒಕ ಚಿನ್ನ ವಿರಾಮಂ ಆಹಾ ಒಟಿಟಿಯಲ್ಲಿ ಜುಲೈ 9ಕ್ಕೆ ಬಿಡುಗಡೆಯಾಗಿದೆ. ಒಬ್ಬ ಉದ್ಯಮಿ ಮತ್ತು ಆತನ ಗರ್ಭಿಣಿ ಪತ್ನಿಯ ಜೀವನದಲ್ಲಾಗುವ ಕಥಾಹಂದರವನ್ನು ಹೊಂದಿದೆ.

Watch Oka Chinna Viramam | Prime Video

೬. ತೂಫಾನ್- ಹಿಂದಿ ಚಿತ್ರ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ  ಜುಲೈ 16 ಬಿಡುಗಡೆಯಾಗಿರುವ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ಚಿತ್ರ ತೂಫಾನ್. ಮೃನಾಲ್ ಠಾಕೂರ್ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿದ್ದಾರೆ. ಬೀದಿ ಬಾಕ್ಸರ್ ಚಾಂಪಿಯನ್ ಆಗುವುದನ್ನು ಆಧರಿಸಿದ ಕಥೆ ಇದಾಗಿದ್ದು, ಪರೇಶ್ ರಾವಲ್ ಅವರು ಫರ್ಹಾನ್ ಪಾತ್ರದ ತರಬೇತುದಾರರಾಗಿ ಕಾಣಿಸಿಕೊಂಡಿದ್ದಾರೆ.

೭. ಸರ್ಪಟ್ಟ ಪರಂಬರೈ – ತಮಿಳು ಸಿನಿಮಾ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಜುಲೈ 22 ಬಿಡುಗೆಯಾಗಲಿರುವ ಸರ್ಪಟ್ಟ ಪರಂಬರೈ ಪ್ರೇಕ್ಷಕರು ಅತಿ ಹೆಚ್ಚು ಕಾತುರದಿಂದ ಕಾಯುತ್ತಿರುವ ಚಿತ್ರವಾಗಿದೆ. ಪಾ.ರಂಜಿತ್ ನಿರ್ದೇಶನದಲ್ಲಿ ಆರ್ಯ ನಟಿಸಿರುವ ಈ ಚಿತ್ರ 1970 ರ ದಶಕದ ಸರ್ಪಟ್ಟ ಪರಂಬರೈನ ಕಥಾ ಹಂದರವನ್ನು ಹೊಂದಿದೆ.

8. ಫೀಲ್ಸ್ ಲೈಕ್ ಇಶ್ಕ್- ಹಿಂದಿ ವೆಬ್ ಸರಣಿ

ಜುಲೈ 23 ಕ್ಕೆ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ, ಅನೇಕ ವಿಭಿನ್ನ ಕಥೆಗಳ ಗುಚ್ಚ ಫೀಲ್ಸ್ ಲೈಕ್ ಇಶ್ಕ್.  ಈ ಕಥೆಗಳಲ್ಲಿ ಒಂದು ಕಥೆ ಆಯುಷ್ಮಾನ್ ಖುರಾನಾ ಅವರ ಪತ್ನಿ ತಾಹಿರಾ ಕಶ್ಯಪ್ ನಿರ್ದೇಶಿಸಿದ್ದಾರೆ. ಇದು ತಾಹಿರಾ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

Feels Like Ishq (Netflix) Web Series Cast, Story, Real Name, Wiki & More

೯. ಡಾಕ್ಟರ್ – ತಮಿಳು ಚಲನಚಿತ್ರ

ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿರುವ ಈ ತಿಂಗಳ ಮತ್ತೊಂದು ಕುತೂಹಲಕಾರಿ ಚಿತ್ರ  ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರ ಡಾಕ್ಟರ್. ಚಲನಚಿತ್ರವು ಆಕ್ಷನ್, ಅಪರಾಧ ಮತ್ತು ಹಾಸ್ಯದ ಮಿಶ್ರಣವಾಗಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಪ್ರಿಯಾಂಕಾ ಅರುಲ್ ಮುಖ್ಯ ಪಾತ್ರದಲ್ಲಿದ್ದಾರೆ.

Doctor - Tamil movie

 

೧೦. ನರಗಸೂರನ್ – ತಮಿಳು ಚಿತ್ರ

Soni LIV ನಲ್ಲಿ ಬಿಡುಗಡೆಯಾಗಲಿರುವ ಜುಲೈ ತಿಂಗಳ ಚಿತ್ರಗಳಲ್ಲಿ ಥ್ರಿಲ್ಲರ್ ಕಥೆಯ ನರಗಸೂರನ್ ಕೂಡ ಒಂದು. ಕಳೆದ ವರ್ಷ ಇದೇ ಸಮಯದಲ್ಲಿ ಬಿಡುಗಡೆಯಾಗಬೇಕಿತ್ತು. ಕಾರ್ತಿಕ್ ನರೇನ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಅರವಿಂದ್ ಸ್ವಾಮಿ, ಶ್ರಿಯಾ ಶರನ್, ಸುಂದೀಪ್ ಕಿಶನ್, ಇಂದ್ರಜಿತ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಒಟ್ಟಿಗೆ ನೃತ್ಯ ಮಾಡಿದ ಅಮೀರ್‌ ಖಾನ್ ಮತ್ತು ಕಿರಣ್ ರಾವ್: ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...