Homeಮುಖಪುಟಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

- Advertisement -
- Advertisement -

ಒಟಿಟಿ ವೇದಿಕೆ ಜನಪ್ರಿಯಗೊಳ್ಳುತ್ತಿದ್ದು, ಪ್ರತಿನಿತ್ಯ ಹೊಸತನಕ್ಕೆ ಕಾರಣವಾಗುತ್ತಿದೆ. ಅಂಗೈನಲ್ಲಿಯೇ ಸಿಗುವ ಸಿನಿಮಾ, ವೆಬ್ ಸರಣಿಗಳಲ್ಲಿ ವೀಕ್ಷಕರು ಮುಳುಗಿದ್ದಾರೆ. ಇದಕ್ಕೆ ತಕ್ಕಂತೆ ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್, ಹಾಟ್‌ಸ್ಟಾರ್, Zee 5, ಆಹಾ, MX ಪ್ಲೇಯರ್‌, Nee-stream, soni LIV ವೇದಿಕೆಗಳು ವಿಭಿನ್ನವಾದ ವಿಷಯಗಳನ್ನು ನೀಡಲು ಪ್ರಯತ್ನಿಸುತ್ತಿವೆ.

ಜುಲೈ 2021 ರಲ್ಲಿ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿರುವ ಮತ್ತು ಮುಂಬರುವ ವೆಬ್ ಸರಣಿಗಳು, ಸಿನಿಮಾಗಳ ಪಟ್ಟಿ ಹೀಗಿದೆ.

೧. ಮಾಲಿಕ್ – ಮಲಯಾಲಂ ಚಿತ್ರ

ಫಹಾದ್ ಫಾಸಿಲ್, ನಿಮಿಷಾ ಸಜಯನ್ ತಾರಾಂಗಣದಲ್ಲಿದ್ದು, ಕೇರಳದಲ್ಲಿ ನಡೆದ ಗಲಭೆಯೊಂದರ ಸುತ್ತ ನಡೆಯುವ ರಾಜಕೀಯದ ಕಥಾ ಹಂದರವನ್ನು ಹೊಂದಿದೆ. ಜುಲೈ 15 ಕ್ಕೆ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ.

 

೨. ನಾರಪ್ಪ (ತೆಲುಗು ಸಿನಿಮಾ) 

ತಮಿಳಿನ ಅಸುರನ್ ಸಿನಿಮಾದ ರಿಮೇಕ್ ನಾರಪ್ಪನಾಗಿ ತೆಲುಗಿನಲ್ಲಿ ಬರುತ್ತಿದೆ. ವಿಕ್ಟರಿ ವೆಂಕಟೇಶ್, ಧನುಷ್ ನಿರ್ವಹಿಸಿದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪ್ರಿಯಾಮಣಿ ಇದ್ದಾರೆ. ಜುಲೈ 24 ರಂದು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ನಾರಪ್ಪ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

೩. ಕುಡಿ ಎಡಮೈತೆ (ತೆಲುಗು ವೆಬ್ ಸರಣಿ)

ಕನ್ನಡದ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶಿಸಿರುವ ‘ಕುಡಿ ಎಡಮೈತೆ’ ತೆಲುಗು ವೆಬ್‌ ಸರಣಿಯು ಆಹಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಜುಲೈ 16 ರಿಂದ (ಶುಕ್ರವಾರ) ಪ್ರಸಾರವಾಗಲಿದೆ. ಈ ಕ್ರೈಂ ಥ್ರಿಲ್ಲರ್‌ ಸರಣಿಯಲ್ಲಿ  ಅಮಲಾ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

೪. ಖುದ್ಸಪಾ (Chutzpah) (ಹಿಂದಿ ವೆಬ್ ಸರಣಿ)

ಸೋನಿಲೈವ್ ಒಟಿಟಿಯಲ್ಲಿ ಜುಲೈ 23 ಕ್ಕೆ ಬಿಡುಗಡೆಯಾಗಲಿದೆ. ವರುಣ್ ಶರ್ಮಾ, ಮಂಜೋತ್ ಸಿಂಗ್, ಎಲಾನಝ್ ನೋರೌಜಿ, ಗೌತಮ್ ಮೆಹ್ರಾ ಸರಣಿಯಲ್ಲಿದ್ದು, ಸಿಮಾರ್‌ಪ್ರೀತ್ ಸಿಂಗ್ ನಿರ್ದೇಶನವಿದೆ. ಇಂದಿನ ಯುಗದಲ್ಲಿ ಮಾನವನ ಡಿಜಿಟಲ್ ರೂಪಾಂತರದ ಬಗ್ಗೆ ಸೂಕ್ಷ್ಮ ನೋಟವನ್ನು ನೀಡುತ್ತದೆ. 5 ವಿಭಿನ್ನ  ಕಥೆಗಳನ್ನು ಹೊಂದಿದೆ.

೫. ಒಕ ಚಿನ್ನ ವಿರಾಮಂ – ತೆಲುಗು ಚಿತ್ರ

ಒಕ ಚಿನ್ನ ವಿರಾಮಂ ಆಹಾ ಒಟಿಟಿಯಲ್ಲಿ ಜುಲೈ 9ಕ್ಕೆ ಬಿಡುಗಡೆಯಾಗಿದೆ. ಒಬ್ಬ ಉದ್ಯಮಿ ಮತ್ತು ಆತನ ಗರ್ಭಿಣಿ ಪತ್ನಿಯ ಜೀವನದಲ್ಲಾಗುವ ಕಥಾಹಂದರವನ್ನು ಹೊಂದಿದೆ.

Watch Oka Chinna Viramam | Prime Video

೬. ತೂಫಾನ್- ಹಿಂದಿ ಚಿತ್ರ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ  ಜುಲೈ 16 ಬಿಡುಗಡೆಯಾಗಿರುವ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ಚಿತ್ರ ತೂಫಾನ್. ಮೃನಾಲ್ ಠಾಕೂರ್ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿದ್ದಾರೆ. ಬೀದಿ ಬಾಕ್ಸರ್ ಚಾಂಪಿಯನ್ ಆಗುವುದನ್ನು ಆಧರಿಸಿದ ಕಥೆ ಇದಾಗಿದ್ದು, ಪರೇಶ್ ರಾವಲ್ ಅವರು ಫರ್ಹಾನ್ ಪಾತ್ರದ ತರಬೇತುದಾರರಾಗಿ ಕಾಣಿಸಿಕೊಂಡಿದ್ದಾರೆ.

೭. ಸರ್ಪಟ್ಟ ಪರಂಬರೈ – ತಮಿಳು ಸಿನಿಮಾ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಜುಲೈ 22 ಬಿಡುಗೆಯಾಗಲಿರುವ ಸರ್ಪಟ್ಟ ಪರಂಬರೈ ಪ್ರೇಕ್ಷಕರು ಅತಿ ಹೆಚ್ಚು ಕಾತುರದಿಂದ ಕಾಯುತ್ತಿರುವ ಚಿತ್ರವಾಗಿದೆ. ಪಾ.ರಂಜಿತ್ ನಿರ್ದೇಶನದಲ್ಲಿ ಆರ್ಯ ನಟಿಸಿರುವ ಈ ಚಿತ್ರ 1970 ರ ದಶಕದ ಸರ್ಪಟ್ಟ ಪರಂಬರೈನ ಕಥಾ ಹಂದರವನ್ನು ಹೊಂದಿದೆ.

8. ಫೀಲ್ಸ್ ಲೈಕ್ ಇಶ್ಕ್- ಹಿಂದಿ ವೆಬ್ ಸರಣಿ

ಜುಲೈ 23 ಕ್ಕೆ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ, ಅನೇಕ ವಿಭಿನ್ನ ಕಥೆಗಳ ಗುಚ್ಚ ಫೀಲ್ಸ್ ಲೈಕ್ ಇಶ್ಕ್.  ಈ ಕಥೆಗಳಲ್ಲಿ ಒಂದು ಕಥೆ ಆಯುಷ್ಮಾನ್ ಖುರಾನಾ ಅವರ ಪತ್ನಿ ತಾಹಿರಾ ಕಶ್ಯಪ್ ನಿರ್ದೇಶಿಸಿದ್ದಾರೆ. ಇದು ತಾಹಿರಾ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

Feels Like Ishq (Netflix) Web Series Cast, Story, Real Name, Wiki & More

೯. ಡಾಕ್ಟರ್ – ತಮಿಳು ಚಲನಚಿತ್ರ

ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿರುವ ಈ ತಿಂಗಳ ಮತ್ತೊಂದು ಕುತೂಹಲಕಾರಿ ಚಿತ್ರ  ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರ ಡಾಕ್ಟರ್. ಚಲನಚಿತ್ರವು ಆಕ್ಷನ್, ಅಪರಾಧ ಮತ್ತು ಹಾಸ್ಯದ ಮಿಶ್ರಣವಾಗಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಪ್ರಿಯಾಂಕಾ ಅರುಲ್ ಮುಖ್ಯ ಪಾತ್ರದಲ್ಲಿದ್ದಾರೆ.

Doctor - Tamil movie

 

೧೦. ನರಗಸೂರನ್ – ತಮಿಳು ಚಿತ್ರ

Soni LIV ನಲ್ಲಿ ಬಿಡುಗಡೆಯಾಗಲಿರುವ ಜುಲೈ ತಿಂಗಳ ಚಿತ್ರಗಳಲ್ಲಿ ಥ್ರಿಲ್ಲರ್ ಕಥೆಯ ನರಗಸೂರನ್ ಕೂಡ ಒಂದು. ಕಳೆದ ವರ್ಷ ಇದೇ ಸಮಯದಲ್ಲಿ ಬಿಡುಗಡೆಯಾಗಬೇಕಿತ್ತು. ಕಾರ್ತಿಕ್ ನರೇನ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಅರವಿಂದ್ ಸ್ವಾಮಿ, ಶ್ರಿಯಾ ಶರನ್, ಸುಂದೀಪ್ ಕಿಶನ್, ಇಂದ್ರಜಿತ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಒಟ್ಟಿಗೆ ನೃತ್ಯ ಮಾಡಿದ ಅಮೀರ್‌ ಖಾನ್ ಮತ್ತು ಕಿರಣ್ ರಾವ್: ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...