Homeಮುಖಪುಟಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

- Advertisement -
- Advertisement -

ಸೆಪ್ಟೆಂಬರ್‌ 15 ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಕಳೆದ ಭಾನುವಾರ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದ್ದವು. ಆದರೆ ಇದೀಗ ಕನ್ನಡ ಮತ್ತೊಬ್ಬ ಪ್ರತಿಭಾನ್ವಿತ ನಟ, ಕನ್ನಡ ಸಿನಿಮಾಗಳಲ್ಲಿ ಬಡವರ ಪ್ರತಿನಿಧಿ ವೈಜನಾಥ ಬಿರಾದಾರ ಅವರಿಗೆ ಪದ್ಮಶ್ರೀ ಸಿಗಬೇಕು ಎಂದು ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿ ರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ 68 ವರ್ಷದ ನಟ ವೈಜನಾಥ ಬಿರಾದಾರ ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದರಾಗಿದ್ದಾರೆ. ಸುಮಾರು 500ರಷ್ಟು ಸಿನಿಮಾದಲ್ಲಿ ನಟಿಸಿರುವ ಬಿರಾದರ ಅವರು ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾಗಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬಕ್ಕೆ ಒಂದು ಬರಹ!

ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವದಲ್ಲಿ ಅವರಿಗೆ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿತ್ತು. ಇದೀಗ ಇಂತಹ ಪ್ರತಿಭಾನ್ವಿತ ನಟನಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಫೇಸ್‌ಬುಕ್, ವಾಟ್ಸಪ್‌ನಲ್ಲಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭವಾಗಿದೆ.

ಚಿಂತಕ ಕೆಎಲ್‌ ಚಂದ್ರಶೇಖರ್‌ ಐಜೂರು ಅವರು, “ಇವರು ನಟ ಬಿರಾದಾರ್….ಇವರು ನಿಮ್ಮ ಅನಂತನಾಗ್’ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಪ್ರತಿನಿಧಿಸುವ ರಾಜಕಾರಣದ ನಿಲುವಿಗೆ ಸೇರಿದವರಲ್ಲ. ಇವರದು ಅನಂತನಾಗ್ ಜಾತಿಯಂತೂ ಅಲ್ಲವೇ ಅಲ್ಲ. ಅನಂತನಾಗ್ ಅವರಿಗಿಂತಲೂ ನಟ ಬಿರಾದಾರ್ ಒಕ್ಕೂಟ ಸರ್ಕಾರ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಲ್ಲೂ ಅರ್ಹ. ಪದ್ಮಶ್ರೀ ಈ ಸಲ ಬಿರಾದಾರರಿಗೆ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ರಾಜಾರಾಂ ಚಿಟ್ಟಾ ಅವರು, “ಬಿರಾದಾರ ಅವರು ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಿಂದಲೂ ಅರ್ಹರಿದ್ದಾರೆ ಎಂಬುದು ಒಬ್ಬ ಕನ್ನಡಿಗನಾಗಿ ನನ್ನ ಅನಿಸಿಕೆ. ನಟ ಎಂದರೇ ಕೇವಲ ಹೀರೋಗಳು ಮಾತ್ರವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಪತ್ರಕರ್ತ ರವಿಕುಮಾರ್‌ ಟೆಲೆಕ್ಸ್‌ ಅವರು, “ಬಿರಾದಾರ್ ಕನ್ನಡದ ಮತ್ತೋರ್ವ ಖ್ಯಾತ ನಟ ಅನಂತನಾಗ್‌ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಅವರಿಗಿರಬಹುದಾದ ಸಾಮಾಜಿಕ‌ ಹಿನ್ನಲೆಯಾಗಲಿ, ಸಾಂಸ್ಕೃತಿಕ ಪ್ರಭಾವಳಿಯಾಗಲಿ, ರಾಜಕೀಯ ಸಿದ್ಧಾಂತದ ಬಲವಾಗಲಿ ಬಿರಾದರ್‌ಗೆ ಇಲ್ಲ. ಆದರೆ ಬಿರಾದಾರ್ ತನಗೊಹಿಸುವ ಪಾತ್ರದಲ್ಲಿ ಯಾರಿಗೂ ಕಮ್ಮಿಯಿಲ್ಲದಂತೆ ಪ್ರತಿಭೆಯನ್ನು ಮೆರೆಯುತ್ತಾರೆ. ಪಾತ್ರಕ್ಕೆ ನ್ಯಾಯ ಒದಗಿಸಬಲ್ಲರು. ಅನಂತ್ ನಾಗ್ ಮತ್ತು ಬಿರಾದಾರ್ ಅವರನ್ನು ಪರಸ್ಪರ ಹೋಲಿಕೆ ಮಾಡಲಾಗದು ನಿಜ, ಆದರೆ ನೈಜ ಪ್ರತಿಭೆ ಬಿರಾದಾರ್ ಒಕ್ಕೂಟ ಸರ್ಕಾರದ ‘ಪದ್ಮಶ್ರೀ’ ಪ್ರಶಸ್ತಿಗೆ ಎಲ್ಲಾ ಬಗೆಯಲ್ಲೂ ಅರ್ಹರಿದ್ದಾರೆ ಎಂಬುದನ್ನು ಅಲ್ಲೆಗೆಳೆಯುವಂತಿಲ್ಲ. ಬಿರಾದಾರ್ ಅವರಿಗೆ ಪದ್ಮಶ್ರೀ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ಮರಿಬಸಪ್ಪ ತುಮಕೂರು ಅವರು, “ವೈಜನಾಥ್ ಬಿರಾದರ್‌‌ 600 ಚಲನಚಿತ್ರಗಳಲ್ಲಿ ರಂಗಭೂಮಿಯಲ್ಲಿ ತಮ್ಮ ಬದುಕನ್ನು ಸವೆಸಿದ ಕಲಾವಿದ. ಇಂದು ಬರಿ ದೈನಂದಿನ ಬದುಕು ನೆಡೆಸಲಾಗದ, ಕುಟುಂಬ ಪೋಷಣೆ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದರು ಕಲಾಸೇವೆ ಮಾಡುತ್ತಿರುವ ಅಪ್ಪಟ ಕಲಾವಿದ. ಒಕ್ಕೂಟ ಸರ್ಕಾರ ಈ ಕಲಾವಿದ ಕಲಾಸೇವೆ ಗುರುತಿಸಲಿ” ಎಂದು ಆಗ್ರಹಿಸಿದ್ದಾರೆ.

ಬಸವರಾಜ ಅವರು, ನೈಜ ಕಲಾವಿದ, ಸರಳ ಜೀವಿ, ವೈಜನಾಥ ಬಿರಾದಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜುಲೈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿರಾದಾರರಿಗೆ ಪದ್ಮಶ್ರೀ ಪಡೆಯುವ ಎಲ್ಲಾ ಅರ್ಹತೆಗಳೂ ಇವೆ. ಈ ಬಾರಿ ಪದ್ಮಶ್ರೀ ಅವರಿಗೆ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...