Homeಮುಖಪುಟಕೊರೊನಾ ಸಮಯದಲ್ಲಿ ಪ್ರೈಡ್ ತಿಂಗಳು; ಸಮಸ್ಯೆಗಳ ಸಾಗರಕ್ಕೆ ಆತ್ಮಗೌರವವೇ ಸಮಾಧಾನ

ಕೊರೊನಾ ಸಮಯದಲ್ಲಿ ಪ್ರೈಡ್ ತಿಂಗಳು; ಸಮಸ್ಯೆಗಳ ಸಾಗರಕ್ಕೆ ಆತ್ಮಗೌರವವೇ ಸಮಾಧಾನ

- Advertisement -
- Advertisement -

ಜೂನ್ ತಿಂಗಳನ್ನು ಪ್ರೈಡ್ (ಲೈಂಗಿಕ ಅಲ್ಪಸಂಖ್ಯಾತರ ಸಂಭ್ರಮ) ತಿಂಗಳಾಗಿ ಆಚರಿಸಲಾಗುತ್ತದೆ. ಹಾಗಾಗಿ, ಹಲವಾರು ಮಾಧ್ಯಮದ ಜನರು ಎಲ್‌ಜಿಬಿಟಿಕ್ಯುಕ್ಯುಐಎ (lesbian, gay, bisexual, transgender, queer, questioning, intersex and allies) ಸಮುದಾಯದ ವ್ಯಕ್ತಿಗಳನ್ನು ಸಂಪರ್ಕಿಸಿ, ಲೈಂಗಿಕ ಅಲ್ಪಸಂಖ್ಯಾತರ ಮತ್ತು ಅಂತರಲಿಂಗಿ (ಟ್ರಾನ್ಸ್) ವ್ಯಕ್ತಿಗಳ ಸ್ಥಿತಿಗತಿಗಳನ್ನು ಅರಿಯಲು ನಮ್ಮನ್ನು ಸಂಪರ್ಕಿಸಿದರು. ಗೌರಿ ಲಂಕೇಶ್ ಮಾಧ್ಯಮವು ಒಂದು ಟಿಪಿಕಲ್ ಹಣದಾಸೆಯಲ್ಲಿರುವ, ಕೃತಕ ಪ್ರಕಟಣಾ ಸಂಸ್ಥೆಯಾಗಿರದೇ, ಪ್ರಾಮಾಣಿಕ ಓದುಗರಿಗೆ ತಳಮಟ್ಟದಲ್ಲಿಯ ಸ್ಥಿತಿಗತಿಯ ವಾಸ್ತವವನ್ನು ತಲುಪಿಸಲು ಪ್ರಯತ್ನಿಸುತ್ತಿರುವ ಸಂಸ್ಥೆಯಾಗಿರುವುದರಿಂದ ಈಗ ನಾನು ಈ ಸಮುದಾಯದ ಸ್ಥಿತಿಯ ವಾಸ್ತವ ಚಿತ್ರಣವನ್ನು ಬರೆಯಲು ಪ್ರಯತ್ನಿಸುವೆ. ಸಾಮಾನ್ಯವಾಗಿ ಎಲ್‌ಜಿಬಿಟಿಕ್ಯುಕ್ಯುಐಎ ಸಮುದಾಯದ ಬಗ್ಗೆ ಎಲ್ಲವನ್ನೂ ರೋಚಕಗೊಳಿಸಲಾಗುತ್ತದೆ, ಆದರೆ, ವಾಸ್ತವದಲ್ಲಿ ಈ ಸಮುದಾಯದ ಸ್ಥಿತಿಯು ಕಿಂಚಿತ್ತೂ ಬದಲಾಗಿಲ್ಲ.

ಕೊರೊನಾ ಕಾರಣದಿಂದ ವಿಧಿಸಲಾದ ಲಾಕ್‌ಡೌನ್‌ದಿಂದ ಇನ್ನಷ್ಟು ಸಂಕಷ್ಟಕ್ಕೊಳಗಾದ ಸಮುದಾಯದ ಚಿತ್ರಣ ಹೊರಬಂದಿದೆ. ಅಂತರಲಿಂಗಿ ಸಮುದಾಯದ ಜನರು ಜೀವನೋಪಾಯ ಕಳೆದುಕೊಂಡಿರುವುದು ವ್ಯಾಪಕವಾಗಿದೆ. ಸಾಂಪ್ರದಾಯಿಕ ಅಂತರಲಿಂಗಿಗಳಾದ ಹಿಜಡಾ ಮತ್ತು ಕಿನ್ನರ ಸಮುದಾಯದವರಿಗೆ ನಮ್ಮ ಬ್ರಾಹ್ಮಣ್ಯದ ಪಿತೃಪ್ರಧಾನ ವ್ಯವಸ್ಥೆಯಲ್ಲಿ ವಹಿಸಲಾದ ಕೆಲಸಗಳು ಈಗಾಗಲೇ ಮುಖ್ಯವಾಹಿನಿಯ ಸಮಾಜದಲ್ಲಿ ಅತ್ಯಂತ ಕಳಂಕಿತವಾದ ಕೆಲಸಗಳಾಗಿವೆ ಹಾಗೂ ಲಾಕ್‌ಡೌನ್ ಅವಧಿಯಲ್ಲಿ ಬಧಾಯಿ ಟೋಲಿ/ಮಾಂಗ್ತಿ ಮತ್ತು ಲೈಂಗಿಕ ವೃತ್ತಿಗಾಗಿ ನೃತ್ಯ ಮುಂತಾದ ಕೆಲಸಗಳು ಸಂಪೂರ್ಣವಾಗಿ ನಿಂತುಹೋಗಿವೆ.

ನಮ್ಮ ದೇಶದ ಪೊಲೀಸರು ಅಂತರಲಿಂಗಿ ಸಮುದಾಯದ ಶತ್ರುಗಳಂತೆ ವರ್ತಿಸಿದ್ದು, ಲಾಕ್‌ಡೌನ್‌ಅನ್ನು ಒಂದು ಸಾರ್ವಜನಿಕ ಆರೋಗ್ಯದ ವಿಷಯವಾಗಿ ಜಾರಿಗೊಳಿಸದೇ ಅದನ್ನು ದುಡಿಯುವ ವರ್ಗಕ್ಕೆ ಮತ್ತು ಅಂಚಿನಲ್ಲಿರುವ ಸಮುದಾಯಗಳನ್ನು ಹಿಂಸಿಸಲು ಒಂದು ನೆಪ ಮಾಡಿಕೊಂಡ ಹಾಗೆ ಕಾಣಿಸುತ್ತಿದೆ; ಈ ಸಮುದಾಯದವರು ತಮ್ಮ ಹೊಟ್ಟೆಪಾಡಿಗಾಗಿ ಹೊರಗೆ, ರಸ್ತೆಗೆ ಬರಲೇಬೇಕು. ಲೈಂಗಿಕ ವೃತ್ತಿ ಮತ್ತು ಭಿಕ್ಷಾಟನೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಈ ಲಾಕ್‌ಡೌನ್‌ಅನ್ನು ಒಂದು ಅಸ್ತ್ರವನ್ನಾಗಿ ಬಳಸಿದ್ದಾರೆ; ಹಾಗಾಗಿ ಈ ಸಮುದಾಯದವರನ್ನು ತಮ್ಮ ಜೀವನೋಪಾಯದಿಂದ ವಂಚಿತಗೊಳಿಸಿದ್ದಾರೆ ಹಾಗೂ ಅಂತರಲಿಂಗಿಗಳನ್ನು ಗುರಿಯಾಗಿಸಿ ಮಾಡಿದ ಹಿಂಸೆಯ ಪ್ರಮಾಣವು ಹೆಚ್ಚಾಗಿರುವುದು ಕಂಡುಬಂದಿದೆ.

ಮದುವೆ ಸಮಾರಂಭಗಳನ್ನು ಮತ್ತು ಬಾರ್‌ಗಳನ್ನು ನಿರ್ಬಂಧಿಸಿರುವುದರಿಂದ, ಅಲ್ಲಿಯ ಕೆಲಸವೂ ಇಲ್ಲವಾಗಿದೆ. ಆಹಾರ ಸಾಗಿಸುವ ಲಾರಿಗಳಲ್ಲಿ ಕೆಲಸ ಮಾಡುವ ಅಥವಾ ಟ್ಯಾಕ್ಸಿ ಚಾಲನೆ ಮಾಡುವ ಟ್ರಾನ್ಸ್‌ಪುರುಷರೂ ಅತ್ಯಂತ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದರಿಸಬೇಕಾಗಿದೆ. ಹಾಗಾಗಿ ಸಂಕಷ್ಟದ ಸಮಯದಲ್ಲಿ ಮಾಡುವ ಸ್ವ ಉದ್ಯೋಗಕ್ಕೂ ಕುತ್ತು ಬಂದಿದೆ. ಔಪಚಾರಿಕ ಮತ್ತು ಅನೌಪಚಾರಿಕ ಈ ಎರಡೂ ವಲಯಗಳಲ್ಲಿ ವ್ಯಾಪಕ ತಾರತಮ್ಯ ಎದುರಿಸುವ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಸಂಕಷ್ಟದ ಸ್ವಉದ್ಯೋಗವೊಂದೇ ಹೊಟ್ಟೆ ತುಂಬಿಸುವ
ದಾರಿಯಾಗಿತ್ತು, ಅದರಿಂದಲೇ ಈ ಸಮುದಾಯ ಜೀವನ ಸಾಗಿಸುತ್ತಿದ್ದವು. ಈಗ ಅದಕ್ಕೂ ಕುತ್ತು ಬಂದಿದೆ.

PC : Gay Star News

ಈ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ಬಹಳಷ್ಟು ಟ್ರಾನ್ಸ್‌ಜೆಂಡರ್ ಮತ್ತು ಲೈಂಗಿಕ ಅಲ್ಪಸಂಖ್ಯಾತರು ಒಂದೋ ತಮ್ಮ ಜೈವಿಕ ಕುಟುಂಬಗಳೊಂದಿಗೆ ಅಥವಾ ತಮ್ಮ ಹಿಂಸಾತ್ಮಕ ಸಂಗಾತಿಗಳೊಂದಿಗೆ ಜೀವಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಹಾಗೂ ಅದರಿಂದಾಗಿ ಅನೇಕರು ಈ ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚಿನ ನಿಂದನೆ ಮತ್ತು ಹಿಂಸೆಯನ್ನು ಅನುಭವಿಸಿದ್ದಾರೆ. ಅನೇಕ ಲೈಂಗಿಕ ಅಲ್ಪಸಂಖ್ಯಾತ ಕುಟುಂಬಗಳು ಪರಸ್ಪರ ಪ್ರತ್ಯೇಕಗೊಂಡು, ತಮ್ಮ ಲಿಂಗ ಮತ್ತು ಲೈಂಗಿಕತೆಯನ್ನು ಒಪ್ಪಿಕೊಳ್ಳದ ಸ್ಥಳಗಳಲ್ಲಿ ವಾಸಿಸುವ ಪರಿಸ್ಥಿತಿ ಬಂದಿದೆ.

ಇದರೊಂದಿಗೆ ಅನೇಕ ಟ್ರಾನ್ಸ್‌ಜೆಂಡರ್ ಮತ್ತು ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳಿಗೆ ದೈಹಿಕ ಡಿಸ್‌ಫೊರಿಯ ಹೆಚ್ಚಿರುವುದನ್ನು ಅನುಭವಿಸಿದ್ದಾರೆ- ಫಿಸಿಕಲ್ ಡಿಸ್‌ಫೊರಿಯ ಎಂದರೆ ಸ್ವಂತ ತನ್ನದೇ ದೇಹದೊಂದಿಗೆ ಗುರುತಿಸಿಕೊಳ್ಳುವದು ಕಷ್ಟ ಆಗುವುದು ಅಥವಾ ತುಂಬಾ ಅಂತರ ಅನುಭವಿಸುವುದು ಎನ್ನಬಹುದು. ಲಾಕ್‌ಡೌನ್‌ನಿಂದಾದ ಪ್ರತ್ಯೇಕಿಸುವಿಕೆ ಮತ್ತು ಗಮನವನ್ನು ಬೇರೆಡೆ ಹರಿಸಲು ದಾರಿ ಇಲ್ಲದ ಕಾರಣದಿಂದ ಹಲವಾರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ತಮ್ಮ ಲಿಂಗವನ್ನು ದೃಢೀಕರಿಸುವ ಆಪ್ತಸಮಾಲೋಚನೆಯ ಅಗತ್ಯ ಕಂಡುಬಂದಿತು ಹಾಗೂ ಹಾರ್ಮೋನ್ ಥೆರಪಿ ಮತ್ತು ಸರ್ಜರಿಗಳ ಅಗತ್ಯವೂ ಕಂಡುಬಂದಿದೆ. ಆದರೆ, ಕೋವಿಡ್ ಸಂಬಂಧಿತ ಆಸ್ಪತ್ರೆಗಳ ನಿಯಮಾವಳಿಗಳ ಕಾರಣದಿಂದ ಹೆಚ್ಚಿನ ಟ್ರಾನ್ಸ್ ವ್ಯಕ್ತಿಗಳಿಗೆ ಅತ್ಯಂತ ಅಗತ್ಯವಿರುವ ಸಮಯದಲ್ಲಿ, ಅವರ ಮಾನಸಿಕ ಆರೋಗ್ಯ ವ್ಯಾಪಕವಾಗಿ ಕುಸಿಯುತ್ತಿರುವ ಸಂದರ್ಭದಲ್ಲಿ ಲಿಂಗ ಸಂಬಂಧಿತ ಆರೈಕೆ ಸಿಗಲಿಲ್ಲ. ಅದಕ್ಕಿಂತ ದುಃಖದ ಸಂಗತಿಯೆಂದರೆ, ಎಚ್‌ಐವಿ ಸೋಂಕು ಹೊಂದಿರುವ ಲೈಂಗಿಕ ಅಲ್ಪಸಂಖ್ಯಾತರಿಗೆ ಕೋವಿಡ್ ಸೋಂಕು ತಗುಲಿದಾಗ ಅವರು ಪಟ್ಟ ಪಾಡು ಶೋಚನೀಯವಾಗಿತ್ತು. ಯಾವ ಆಸ್ಪತ್ರೆಗೆ ಹೋದರೂ ಅವರನ್ನು ಸೇರಿಸಿಕೊಳ್ಳಲಿಲ್ಲ ಹಾಗೂ ಅವರಲ್ಲಿ ಸಾವಿನ ಸಂಖ್ಯೆಯೂ ಗಣನೀಯವಾಗಿ ಹೆಚ್ಚಿತ್ತು.

ಜೂನ್ ತಿಂಗಳಲ್ಲಿ ಕಾರ್ಪೊರೇಟ್ ಜಗತ್ತು ಕೂಡ ಎಲ್‌ಜಿಬಿಟಿಕ್ಯುಕ್ಯುಐಎ ಸಮುದಾಯದ ಬಗ್ಗೆ ಸಾಂಸ್ಥಿಕ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತದೆ. ಆಗ ಆ ಕಾರ್ಯಕ್ರಮಗಳಲ್ಲಿ ಮಾತನಾಡಲು ಸಮುದಾಯದ ಭಾಷಣಕಾರರನ್ನು ಸಂಪರ್ಕಿಸಲಾಗುತ್ತದೆ. ಈ ವರ್ಷ ಲಾಕ್‌ಡೌನ್ ಕಾರಣದಿಂದ ಪ್ರೈಡ್ ತಿಂಗಳನ್ನು ಆಚರಿಸುವುದು ಕಷ್ಟವಾಗಿತ್ತು, ಆದರೆ ಸಾಮಾನ್ಯವಾಗಿ ಪ್ರೈಡ್‌ನ ಪರಿಕಲ್ಪನೆ ಏನು ಎಂದು ಎಲ್ಲರಿಗೆ ತಿಳಿಸಲು ಮಾಧ್ಯಮಗಳು ಮತ್ತು ಕಾರ್ಪೊರೇಟ್ ಜಗತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಂದ ಉಚಿತ ದುಡಿಮೆಯನ್ನು ಬಳಸಿಕೊಳ್ಳುತ್ತಾರೆ, ಆದರೆ ಟ್ರಾನ್ಸ್ ವ್ಯಕ್ತಿಗಳ ಜೀವನದಲ್ಲಿ ಯಾವುದೇ ರಚನಾತ್ಮಕ ಬದಲಾವಣೆಗಳು ಆಗದೇ, ಅವರ ಜಗತ್ತು ಹಾಗೆಯೇ ಮುಂದುವರೆಯುತ್ತದೆ.

ತಾರತಮ್ಯ ವಿರೋಧಿ ಕಾನೂನುಗಳಿಲ್ಲದೆ, ಯಾವುದೇ ಸಾಮಾಜಿಕ ಸುರಕ್ಷತೆ ಮತ್ತು ಜೀವನೋಪಾಯದ ಖಾತ್ರಿ ಇಲ್ಲದೆ, ಆರೋಗ್ಯ ಸೇವೆ ಇಲ್ಲದೇ, ನಾಗರಿಕ ಹಕ್ಕುಗಳಿಲ್ಲದೆ ಹಾಗೂ ಎಲ್‌ಜಿಬಿಟಿಕ್ಯುಕ್ಯುಐಎ ವಿರೋಧಿ ಶಾಸನಾತ್ಮಕ ಕ್ರಮಗಳು ಹೆಚ್ಚುತ್ತಿರುವ ಸಮಯದಲ್ಲಿ ಎಲ್‌ಜಿಬಿಟಿಕ್ಯುಕ್ಯುಐಎ ಸಮುದಾಯಗಳಾದ ನಾವು ಆತ್ಮಗೌರವದಿಂದಲೇ ನಮ್ಮ ಮೇಲೆ ಎಸೆಯಲಾಗುತ್ತಿರುವ ಸಾಮಾಜಿಕ ಕಳಂಕವನ್ನು ಎದುರಿಸಬಲ್ಲೆವು ಎಂಬ ಆಸೆಯೊಂದಿಗೆ ಹೆಜ್ಜೆಗಳನ್ನು ಮುಂದಿಡುತ್ತಿದ್ದೇವೆ.

ಕಾರ್ತಿಕ್ ಬಿಟ್ಟು

ಕಾರ್ತಿಕ್ ಬಿಟ್ಟು
ಕರ್ನಾಟಕದ ಒಂದು ತಮಿಳು ಕುಟುಂಬದಲ್ಲಿ ಹುಟ್ಟಿ, ಬೆಂಗಳೂರು, ಹೈದರಾಬಾದ್ ಮತ್ತು ಹರಿಯಾಣದಲ್ಲಿ ಕೆಲಸ ಮಾಡಿದ್ದಾರೆ. ಅನೇಕ ಸಮುದಾಯಗಳ ಚಳವಳಿಗಳಲ್ಲಿ ತೊಡಗಿಸಿಕೊಂಡಿರುವ ಬಿಟ್ಟು ನಮ್ಮ ಸಮಯದ ಒಬ್ಬ ಇಂಟಲೆಕ್ಚುವಲ್ ಆಕ್ಟಿವಿಸ್ಟ್.

ಕನ್ನಡಕ್ಕೆ: ರಾಜಶೇಖರ್ ಅಕ್ಕಿ


ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ… 

ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...