Homeಅಂತರಾಷ್ಟ್ರೀಯಟೋಕಿಯೋ ಒಲಂಪಿಕ್ಸ್: ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

ಟೋಕಿಯೋ ಒಲಂಪಿಕ್ಸ್: ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

- Advertisement -
- Advertisement -

ವಿಶ್ವದ ಬೃಹತ್ ಕ್ರೀಡಾಕೂಟ ಒಲಂಪಿಕ್ಸ್ ಆರಂಭಕ್ಕೆ ಕೇವಲ ಆರು ದಿನಗಳಿರುವ ಸಂದರ್ಭದಲ್ಲಿ ಕ್ರೀಡಾಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಇದರಿಂದ ಜುಲೈ 23 ರಿಂದ ಆರಂಭವಾಗುವ ಒಲಂಪಿಕ್ಸ್ ಕ್ರೀಡಾಕೂಟದ ಮೇಲೆ ಆತಂಕದ ಛಾಯೆ ಉಂಟುಮಾಡಿದೆ.

2020ರಲ್ಲಿ ನಡೆಯಬೇಕಿದ್ದ ಒಲಂಪಿಕ್ಸ್ ಅನ್ನು ಜಾಗತಿಕ ಸಾಂಕ್ರಾಮಿಕದ ಕಾರಣದಿಂದ ಮುಂದೂಡಲಾಗಿತ್ತು. ಈಗಲೂ ಕಟ್ಟುನಿಟ್ಟಿನ ಕ್ವಾರಂಟೈನ್ ನಿಯಮಗಳನ್ನು ಅನುಸರಿಸುವ ಮೂಲಕ ನಡೆಸಲು ಯೋಜಿಸಲಾಗಿತ್ತು. ಆದರೆ ಕ್ರೀಡಾಗ್ರಾಮದಲ್ಲಿ ಮೊದಲ ಪ್ರಕರಣ ಪತ್ತೆಯಾಗಿರುವುದು ಸಂಘಟಕರಿಗೆ ಒತ್ತಡ ಹೆಚ್ಚಿಸಿದೆ.

ಕ್ರೀಡಾಕೂಟದ ಸಂಘಟನೆಯ ಭಾಗವಾಗಿ ಆಗಮಿಸಿದ್ದ ವ್ಯಕ್ತಿಯೊಬ್ಬರೂ ಕೊರೊನಾ ಪಾಸಿಟಿವ್ ಆಗಿದ್ದಾರೆ ಎಂದು ಟೋಕಿಯೋ ಒಲಂಪಿಕ್ಸ್ 2020ರ ಸಿಇಓ ತೊಶಿರೊ ಮುಟೋ ದೃಢಪಡಿಸಿದ್ದಾರೆ. ಖಾಸಗಿತನದ ಕಾರಣಗಳಿಂದಾಗಿ ಆ ವ್ಯಕ್ತಿ ಯಾವ ದೇಶದವರು ಎಂಬುದನ್ನು ಬಹಿರಂಗಪಡಿಸಿಲ್ಲ.

ಯಾವುದೇ ಕಾರಣಕ್ಕೂ ಕೋವಿಡ್ ಉಲ್ಬಣಿಸದಂತೆ ತಡೆಯಲು ಯತ್ನಿಸುತ್ತಿದ್ದೇವೆ. ಒಂದು ವೇಳೆ ಉಲ್ಬಣಿಸಿದರೂ ಕೂಡ ಅದನ್ನು ಹೇಗೆ ಎದುರಿಸಬೇಕು ಎಂಬ ಯೋಜನೆ ನಮ್ಮಲ್ಲಿದೆ ಎಂದು ಟೋಕಿಯೋ 2020 ಕ್ರೀಡಾಕೂಟದ ಮುಖ್ಯ ಸಂಘಟಕರಾದ ಸೈಕೊ ಹಶಿಮೊಟೊ ಹೇಳಿದ್ದಾರೆ.

ಜಪಾನ್‌ನಲ್ಲಿ ಒಲಂಪಿಕ್ಸ್ ನಡೆಸುತ್ತಿರುವುದಕ್ಕೆ ಅಲ್ಲಿನ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಜಪಾನ್‌ನಲ್ಲಿ ಮತ್ತೊಂದು ಅಲೆಗೆ ಕಾರಣವಾಗಬಹುದು ಎಂಬ ಆತಂಕ ಅವರದ್ದಾಗಿದೆ.

ಕ್ರೀಡಾಕೂಟವು ಜಪಾನಿನ ಜನರಿಗೆ ಯಾವುದೇ ಅಪಾಯವನ್ನು ತರುವುದಿಲ್ಲ ಎಂದು ಐಒಸಿ ಅಧ್ಯಕ್ಷ ಥಾಮಸ್ ಬಾಚ್ ಭರವಸೆ ನೀಡಿದ ಒಂದು ದಿನದ ನಂತರ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ.

“ನಾವು ನಮ್ಮ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು ಜಪಾನಿನ ಜನರು ಈ ವೈರಸ್ ವಿರುದ್ಧ ಹೋರಾಡಲು ಮತ್ತು ಜಪಾನಿನ ಜನರಿಗೆ ಯಾವುದೇ ಅಪಾಯವನ್ನುಂಟುಮಾಡದಂತೆ ಉತ್ತಮ ರೀತಿಯಲ್ಲಿ ಕೊಡುಗೆ ನೀಡಲು ನಾವು ಬದ್ಧತೆಯನ್ನು ಹೊಂದಿದ್ದೇವೆ. ಕ್ರೀಡಾಗ್ರಾಮದ ಬಹುತೇಕರು ಲಸಿಕೆ ಪಡೆದಿದ್ದಾರೆ. ಹಾಗಾಗಿ ಜಗತ್ತಿನ ಎಲ್ಲಾ ಅಥ್ಲಿಟ್‌ಗಳನ್ನು ಪ್ರೀತಿಯಿಂದ ಸ್ವಾಗತಿಸಿ” ಎಂದು ಪ್ರಧಾನಿ ಯೋಶಿಹೈಡ್ ಸುಗಾ ಅವರನ್ನು ಭೇಟಿಯಾದ ನಂತರ ಬಾಚ್ ಸುದ್ದಿಗಾರರಿಗೆ ತಿಳಿಸಿದ್ದರು.


ಇದನ್ನೂ ಓದಿ: ಒಲಂಪಿಕ್ ಅಂಗಳಕ್ಕೆ ಟಿಕೆಟ್‌ ಕಲೆಕ್ಟರ್‌ : ಬಡತನದ ಕುಲುಮೆಯಲ್ಲರಳಿದ ಕ್ರೀಡಾರತ್ನ ರೇವತಿ ವೀರಮಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...