Homeಅಂತರಾಷ್ಟ್ರೀಯಟೋಕಿಯೋ ಒಲಂಪಿಕ್ಸ್: ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

ಟೋಕಿಯೋ ಒಲಂಪಿಕ್ಸ್: ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

- Advertisement -
- Advertisement -

ವಿಶ್ವದ ಬೃಹತ್ ಕ್ರೀಡಾಕೂಟ ಒಲಂಪಿಕ್ಸ್ ಆರಂಭಕ್ಕೆ ಕೇವಲ ಆರು ದಿನಗಳಿರುವ ಸಂದರ್ಭದಲ್ಲಿ ಕ್ರೀಡಾಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಇದರಿಂದ ಜುಲೈ 23 ರಿಂದ ಆರಂಭವಾಗುವ ಒಲಂಪಿಕ್ಸ್ ಕ್ರೀಡಾಕೂಟದ ಮೇಲೆ ಆತಂಕದ ಛಾಯೆ ಉಂಟುಮಾಡಿದೆ.

2020ರಲ್ಲಿ ನಡೆಯಬೇಕಿದ್ದ ಒಲಂಪಿಕ್ಸ್ ಅನ್ನು ಜಾಗತಿಕ ಸಾಂಕ್ರಾಮಿಕದ ಕಾರಣದಿಂದ ಮುಂದೂಡಲಾಗಿತ್ತು. ಈಗಲೂ ಕಟ್ಟುನಿಟ್ಟಿನ ಕ್ವಾರಂಟೈನ್ ನಿಯಮಗಳನ್ನು ಅನುಸರಿಸುವ ಮೂಲಕ ನಡೆಸಲು ಯೋಜಿಸಲಾಗಿತ್ತು. ಆದರೆ ಕ್ರೀಡಾಗ್ರಾಮದಲ್ಲಿ ಮೊದಲ ಪ್ರಕರಣ ಪತ್ತೆಯಾಗಿರುವುದು ಸಂಘಟಕರಿಗೆ ಒತ್ತಡ ಹೆಚ್ಚಿಸಿದೆ.

ಕ್ರೀಡಾಕೂಟದ ಸಂಘಟನೆಯ ಭಾಗವಾಗಿ ಆಗಮಿಸಿದ್ದ ವ್ಯಕ್ತಿಯೊಬ್ಬರೂ ಕೊರೊನಾ ಪಾಸಿಟಿವ್ ಆಗಿದ್ದಾರೆ ಎಂದು ಟೋಕಿಯೋ ಒಲಂಪಿಕ್ಸ್ 2020ರ ಸಿಇಓ ತೊಶಿರೊ ಮುಟೋ ದೃಢಪಡಿಸಿದ್ದಾರೆ. ಖಾಸಗಿತನದ ಕಾರಣಗಳಿಂದಾಗಿ ಆ ವ್ಯಕ್ತಿ ಯಾವ ದೇಶದವರು ಎಂಬುದನ್ನು ಬಹಿರಂಗಪಡಿಸಿಲ್ಲ.

ಯಾವುದೇ ಕಾರಣಕ್ಕೂ ಕೋವಿಡ್ ಉಲ್ಬಣಿಸದಂತೆ ತಡೆಯಲು ಯತ್ನಿಸುತ್ತಿದ್ದೇವೆ. ಒಂದು ವೇಳೆ ಉಲ್ಬಣಿಸಿದರೂ ಕೂಡ ಅದನ್ನು ಹೇಗೆ ಎದುರಿಸಬೇಕು ಎಂಬ ಯೋಜನೆ ನಮ್ಮಲ್ಲಿದೆ ಎಂದು ಟೋಕಿಯೋ 2020 ಕ್ರೀಡಾಕೂಟದ ಮುಖ್ಯ ಸಂಘಟಕರಾದ ಸೈಕೊ ಹಶಿಮೊಟೊ ಹೇಳಿದ್ದಾರೆ.

ಜಪಾನ್‌ನಲ್ಲಿ ಒಲಂಪಿಕ್ಸ್ ನಡೆಸುತ್ತಿರುವುದಕ್ಕೆ ಅಲ್ಲಿನ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಜಪಾನ್‌ನಲ್ಲಿ ಮತ್ತೊಂದು ಅಲೆಗೆ ಕಾರಣವಾಗಬಹುದು ಎಂಬ ಆತಂಕ ಅವರದ್ದಾಗಿದೆ.

ಕ್ರೀಡಾಕೂಟವು ಜಪಾನಿನ ಜನರಿಗೆ ಯಾವುದೇ ಅಪಾಯವನ್ನು ತರುವುದಿಲ್ಲ ಎಂದು ಐಒಸಿ ಅಧ್ಯಕ್ಷ ಥಾಮಸ್ ಬಾಚ್ ಭರವಸೆ ನೀಡಿದ ಒಂದು ದಿನದ ನಂತರ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ.

“ನಾವು ನಮ್ಮ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು ಜಪಾನಿನ ಜನರು ಈ ವೈರಸ್ ವಿರುದ್ಧ ಹೋರಾಡಲು ಮತ್ತು ಜಪಾನಿನ ಜನರಿಗೆ ಯಾವುದೇ ಅಪಾಯವನ್ನುಂಟುಮಾಡದಂತೆ ಉತ್ತಮ ರೀತಿಯಲ್ಲಿ ಕೊಡುಗೆ ನೀಡಲು ನಾವು ಬದ್ಧತೆಯನ್ನು ಹೊಂದಿದ್ದೇವೆ. ಕ್ರೀಡಾಗ್ರಾಮದ ಬಹುತೇಕರು ಲಸಿಕೆ ಪಡೆದಿದ್ದಾರೆ. ಹಾಗಾಗಿ ಜಗತ್ತಿನ ಎಲ್ಲಾ ಅಥ್ಲಿಟ್‌ಗಳನ್ನು ಪ್ರೀತಿಯಿಂದ ಸ್ವಾಗತಿಸಿ” ಎಂದು ಪ್ರಧಾನಿ ಯೋಶಿಹೈಡ್ ಸುಗಾ ಅವರನ್ನು ಭೇಟಿಯಾದ ನಂತರ ಬಾಚ್ ಸುದ್ದಿಗಾರರಿಗೆ ತಿಳಿಸಿದ್ದರು.


ಇದನ್ನೂ ಓದಿ: ಒಲಂಪಿಕ್ ಅಂಗಳಕ್ಕೆ ಟಿಕೆಟ್‌ ಕಲೆಕ್ಟರ್‌ : ಬಡತನದ ಕುಲುಮೆಯಲ್ಲರಳಿದ ಕ್ರೀಡಾರತ್ನ ರೇವತಿ ವೀರಮಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...