Homeಮುಖಪುಟದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ದಾನಿಸ್ ಸಿದ್ದೀಕಿ ಬಡವರ, ತುಳಿತಕ್ಕೊಳಗಾದವರ ಪರವಿದ್ದ ಪತ್ರಕರ್ತ. ಸಹಜವಾಗಿಯೇ ಎಲ್ಲಾ ದೇಶದ ಪ್ರಭುತ್ವಗಳ ಕ್ರೌರ್ಯವನ್ನು ತನ್ನ ಕ್ಯಾಮರದಲ್ಲಿ ಸೆರೆಹಿಡಿದಿದ್ದ...

- Advertisement -
- Advertisement -

ಜುಲೈ ತಿಂಗಳ ಆರಂಭದಲ್ಲಿ ‘ಸುಧರ್ಮ’ ಎಂಬ ಸಂಸ್ಕೃತ ದಿನಪತ್ರಿಕೆಯ ಸಂಪಾದಕರಾದ ಕೆ.ವಿ ಸಂಪತ್ ಕುಮಾರ್‌ರವರು ನಿಧನರಾದರು. ಆಗ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ವ್ಯಕ್ತಪಡಿಸಿದ್ದಲ್ಲದೆ, ಸಂಪತ್‌ ಕುಮಾರ್‌ರವರ ಪತ್ನಿ ಕೆ.ಎಸ್ ಜಯಲಕ್ಷ್ಮಿಯವರಿಗೆ ಸಂಸ್ಕೃತದಲ್ಲಿ ಪತ್ರ ಬರೆದು ಸಂತಾಪ ಸೂಚಿಸಿದ್ದರು. ಆ ಪತ್ರವನ್ನು ಕರ್ನಾಟಕದ ಸಿಎಂ ಬಿ.ಎಸ್ ಯಡಿಯೂರಪ್ಪನವರು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು.

ಅಷ್ಟು ಮಾತ್ರವಲ್ಲ ಭಾರತದ ಕ್ರಿಕೆಟ್ ಆಟಗಾರ ಶಿಖರ್ ಧವನ್ ಕೈಬೆರಳಿಗೆ ಗಾಯ ಮಾಡಿಕೊಂಡಾಗಿನಿಂದ ಹಿಡಿದು ಮಾಜಿ ಸಿಎಂ ಕುಮಾರಸ್ವಾಮಿಯವರ ಹುಟ್ಟುಹಬ್ಬದವರೆಗೂ, ಅನುಷ್ಕಾ ಶರ್ಮಾ ಗರ್ಭಿಣಿಯಾದಾಗಿನಿಂದ ಹಿಡಿದು ಇನ್ಯಾರೋ ಲಾಕ್‌ಡೌನ್ ಸಮಯದಲ್ಲಿ ಹೋಮ್ ಗಾರ್ಡನಿಂಗ್‌ ಮಾಡಿದುದ್ದಕ್ಕೂ ನಮ್ಮ ನರೇಂದ್ರ ಮೋದಿಯವರು ಶುಭಕೋರಿದ್ದರು. ಟೋಕಿಯೋ ಒಲಂಪಿಕ್ಸ್‌ಗೆ ಹೊರಟ ಅಥ್ಲೀಟ್‌ಗಳಿಗೆ ಈಗ ನೀವು ಐಸ್‌ಕ್ರೀಂ ತಿನ್ನಬಹುದಾ ಎಂದು ಮೋದಿ ನೆನೆಪಿಸಿದ್ದರು!

ಖ್ಯಾತನಾಮರ ಹುಟ್ಟು ಮತ್ತು ಸಾವುಗಳಿಗೆ ಟ್ವಿಟರ್‌ನಲ್ಲಿ ಶುಭಾಶಯ ಕೋರುವ, ಸಂತಾಪ ವ್ಯಕ್ತಪಡಿಸುವ ನಮ್ಮ ಪಿಎಂ ಅವರಿಗೆ ನಿನ್ನೆ ಅಫ್ಘನ್‌ನಲ್ಲಿ ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಮೃತಪಟ್ಟಿರುವುದು ತಿಳಿದಿಲ್ಲವೇ? ತಿಳಿದರೂ ಒಂದು ಸಣ್ಣ ಸಂತಾಪ ಏಕೆ ವ್ಯಕ್ತಪಡಿಸಿಲ್ಲ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿವೆ.

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ಭಾರತದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ಕ್ರೂರ ತಾಲಿಬಾನಿಗಳಿಂದ ನಡೆದ ಘರ್ಷಣೆಯಲ್ಲಿ ನಿನ್ನೆ ಹತರಾಗಿದ್ದಾರೆ. ವಿಶ್ವ ಪ್ರಸಿದ್ದ ಫೋಟೊ ಜರ್ನಲಿಸ್ಟ್‌ ಆಗಿದ್ದ ಅವರು 2018 ರಲ್ಲಿ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿದ್ದ ಫೀಚರ್‌ ಫೋಟೊಗ್ರಾಫ್‌ಗಾಗಿ ಪ್ರತಿಷ್ಠಿತ ಪುಲಿಟ್ಜೆರ್ ಪ್ರಶಸ್ತಿ ಪಡೆದಿದ್ದರು. ದಾನಿಶ್ ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಭಾರತದ ಕೊರೊನಾ ಸಾಂಕ್ರಾಮಿಕ, ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರ ಸ್ಥಿತಿ ಗತಿ, ದೆಹಲಿ ಗಲಭೆ, ರೈತ ಹೋರಾಟ, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಕೇರಳ ಸಿಎಂ ಪಿಣರಾಯಿ ವಿಜಯನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ನೂರಾರು ಗಣ್ಯರು ಕಂಬನಿ ಮಿಡಿದಿದ್ದಾರೆ. ದಾನಿಶ್ ಸಿದ್ದೀಕಿ ಅವರ ಹತ್ಯೆಯನ್ನು ಖಂಡಿಸಿ ಅಫ್ಘಾನಿಸ್ತಾನದ ಭಾರತದ ರಾಯಭಾರಿ ಟ್ವೀಟ್ ಮಾಡಿದ್ದಾರೆ. ಆದರೆ ಮೋದಿ ಮಾತ್ರ ಒಂದು ಸಣ್ಣ ಮಾತನಾಡಿಲ್ಲ. ಬದಲಿಗೆ ಮೋದಿ ಅಭಿಮಾನಿಗಳೆನಿಸಿಕೊಂಡವರು, ಸಂಘಪರಿವಾರದ ಕಾರ್ಯಕರ್ತರು ಪತ್ರಕರ್ತನ ಸಾವನ್ನು ಸಂಭ್ರಮಿಸುತ್ತಿದ್ದಾರೆ! ಈ ಕುರಿತು ಕಳವಳ ವ್ಯಕ್ತಪಡಿಸಿರುವ ಆಲ್ಟ್‌ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ, “ನೀವು ಇಂದು ಟ್ವಿಟರ್‌‌ನಲ್ಲಿನ ದ್ವೇಷವನ್ನು ನೋಡಿದ್ದೀರಾ? ದಿಟ್ಟ ಪತ್ರಕರ್ತನ ಸಾವಿಗೆ ಜನರು ಸಂಭ್ರಮಿಸುತ್ತಿದ್ದಾರೆ… ಈ ದ್ವೇಷವನ್ನು ನಾವು ನಿರ್ಲಕ್ಷಿಸಲು ಸಾಧ್ಯವೇ? ಈ ದ್ವೇಷವು ತೀವ್ರವಾದಿ ಆಗುತ್ತಿರುವ ಅಥವಾ ಈಗಾಗಲೇ ತೀವ್ರವಾದಿಗಳಾಗಿರುವ ಜನರಿಂದ ಬರುತ್ತಿದೆ. ನಾವು ನಮ್ಮದೇ ತಾಲಿಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನಿನ್ನೆ ಅಫ್ಘನ್ ಸರಕಾರಿ ಪಡೆ ಮತ್ತು ತಾಲಿಬಾನ್ ನಡುವಣ ಸಂಘರ್ಷದಲ್ಲಿ ಕಂದಹಾರದಲ್ಲಿ ಹತರಾದ ಭಾರತೀಯ ಫೋಟೋ ಜರ್ನಲಿಸ್ಟ್ ದಾನಿಶ್ ಸಿದ್ಧಿಖಿ (ಮೊದಲ ಚಿತ್ರ) ದಿಲ್ಲಿ ಗಲಭೆಯ ದಾರುಣ ದೃಶ್ಯಗಳನ್ನು ಜಗತ್ತಿಗೆ ತೋರಿಸಿದವರು. ಅಂತಹ ಒಂದು ದೃಶ್ಯ ಇಲ್ಲಿದೆ. ಹಾಗೆಯೇ ಇನ್ನೊಂದು ಚಿತ್ರ ಸರಕಾರಿ ಸುಳ್ಳುಗಳ ನಡುವೆ ದಿಲ್ಲಿಯ ಸ್ಮಶಾನ ಹೇಳಿದ ಸತ್ಯದ ಡ್ರೋನ್ ಚಿತ್ರ. (ಆತನ ಸಾವನ್ನು ಜಗತ್ತೇ ಖಂಡಿಸಿದ್ದರೂ ನಮ್ಮ ಪ್ರಧಾನಿಗಳು ಈಗಲೂ ಯಾಕೆ ಅದರ ಬಗ್ಗೆ ವಿಷಾದ ವ್ಯಕ್ತಪಡಿಸಿಲ್ಲ ಎಂಬುದು ನಿಮಗೆ ಈಗ ಅರ್ಥವಾಗಿರಬಹುದು)” ಎಂದು ಚಿಂತಕರಾದ ಶ್ರೀನಿವಾಸ ಕಾರ್ಕಳರವರು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಅದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿಯವರು ದಾನಿಶ್ ಸಿದ್ದಿಕಿ ಭಾರತದಲ್ಲಿ ಏನೆಲ್ಲಾ ವರದಿ ಮಾಡಿದರೂ ಸುರಕ್ಷಿತವಾಗಿದ್ದರು. ಆದರೆ ಶಾಂತಿಯುತ ಅಫ್ಘಾನಿಸ್ಥಾನದಲ್ಲಿ ಎರಡೇ ದಿನ ಇದ್ದರೂ ಸಹ ಶಾಂತಿ ಕಾಪಾಡುವ ತಾಲಿಬಾನಿಗಳಿಂದ ಹತ್ಯೆಯಾದರೂ ಎಂದು ವ್ಯಂಗ್ಯವಾಡಿದ್ದಾರೆ. ಅವರ ಮರೆತ ವಿಷಯವೇಂದರೆ ಬಿಜೆಪಿ ಆಡಳಿತದ ಉತ್ತರ ಪ್ರದೇಶದಲ್ಲಿ ಪ್ರತಿನಿತ್ಯ ಪತ್ರಕರ್ತರನ್ನು ಬಂಧಿಸಲಾಗುತ್ತಿದೆ ಎಂಬುದು. ಹತ್ರಾಸ್‌ನಲ್ಲಿ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ ಘಟನೆ ವರದಿ ಮಾಡಲು ತೆರಳಿದ್ದ ಸಿದ್ದೀಕ್ ಕಪ್ಪನ್ ಎಂಬ ಪತ್ರಕರ್ತ ಇಂದಿಗೂ ಜೈಲಿನಲ್ಲಿದ್ದಾರೆ ಎಂಬುದಾಗಿದೆ.

ದಾನಿಸ್ ಸಿದ್ದಿಕಿ ಬಡವರ, ತುಳಿತಕ್ಕೊಳಗಾದವರ ಪರ ಇರುವ ಪತ್ರಕರ್ತ. ಹಾಗಾಗಿ ಸಹಜವಾಗಿಯೇ ಎಲ್ಲಾ ದೇಶಗಳ ಪ್ರಭುತ್ವಗಳ ತಪ್ಪುಗಳನ್ನು ತಮ್ಮ ಫೋಟೊಗಳಿಂದ ಬಹಿರಂಗಪಡಿಸುತ್ತಿದ್ದ. ಹಾಗೆಯೇ ಭಾರತದಲ್ಲಿಯೂ ಸಹ ಇಲ್ಲಿನ ಮೋದಿ ಸರ್ಕಾರದ ವೈಫಲ್ಯಗಳಿಗೆ ಆತನ ಫೋಟೊಗಳು ಕನ್ನಡಿಯಾಗಿದ್ದವು. ಪ್ರಪಂಚದ ಬಹಳಷ್ಟು ಮಂದಿ ಆತನ ಫೋಟೊಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಿಎಎ ವಿರೋಧಿ ಹೋರಾಟಗಾರರ ಮೇಲೆ ಗುಂಡು ಹಾರಿಸುವಾತನ ಎದುರಿಗೆ ನಿಂತು ಫೋಟೊ ಕ್ಲಿಕ್ಕಿಸಿದ ಎದೆಗಾರಿಕೆ ದಾನಿಶ್‌ದು. ಅಷ್ಟು ಮಾತ್ರಕ್ಕೆ ಅವರ ಸಾವಿಗೆ ಸಂತಾಪ ಸೂಚಿಸದಷ್ಟು ನಮ್ಮ ಪ್ರಧಾನಿಗಳು ದ್ವೇಷ ಸಾಧಿಸುತ್ತಾರೆಯೇ?

ದಾನಿಶ್ ಸಿದ್ದಿಕಿಯವರು ತಮ್ಮ ಪ್ರಖರ ಫೋಟೊಗಳ ಮೂಲಕ ಮೋದಿಯವರ ಕೊರೊನಾ ಎರಡನೇ ಅಲೆಯ ಅಸಮರ್ಪಕ ನಿರ್ವಹಣೆಯನ್ನು ಎತ್ತಿ ತೋರಿಸಿದ್ದರು. ಮೋದಿಯವರ ವೈಫಲ್ಯಗಳನ್ನು ಬಹಿರಂಗಗೊಳಿಸಿದ್ದಕ್ಕೆ ಪಿಎಂ ಮೋದಿ ಅವರ ಸಾವಿಗೆ ಸಂತಾಪ ಸೂಚಿಸಿಲ್ಲ ಎಂದು ಅಂಕಣಕಾರ್ತಿ ಸ್ವಾತಿ ಚತುರ್ವೇದಿಯವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಅವರ ಹತ್ಯೆಗೆ ಭಾರತದ ಕೋಮುವಾದಿಗಳು ಸಂಭ್ರಮಿಸುತ್ತಿದ್ದಾರೆ ಎಂದರೆ ಏನರ್ಥ? ತಾಲಿಬಾನಿಗಳಿಂದ ಹತನಾದುದ್ದಕ್ಕೆ ಸಂಭ್ರಮಿಸುವುದು ತಾಲಿಬಾನಿಗಳನ್ನು ಸಮರ್ಥಿಸಿದಂತೆ ಅಲ್ಲವೇ? ತದನಂತರ ಕ್ರೂರ ತಾಲಿಬಾನ್ ಕೂಡ ದಾನಿಶ್ ಸಾವಿಗೆ ಸಂತಾಪ ಸೂಚಿಸಿ ಕ್ಷಮೆ ಕೇಳಿದೆ. ಅವರು ಅಲ್ಲಿರುವುದು ನಮಗೆ ಗೊತ್ತಿರಲಿಲ್ಲ, ವಾರ್ ಜೋನ್‌ಗೆ ಪ್ರವೇಶಿಸಿದ ಪತ್ರಕರ್ತರ ಮಾಹಿತಿ ನಮಗೆ ನೀಡಿದರೆ ಅವರ ಬಗ್ಗೆ ಕಾಳಜಿ ವಹಿಸಲಾಗುವುದು ಎಂದಿದೆ. ಆದರೆ ಭಾರತದ ಕೋಮುವಾದಿಗಳು ಮಾತ್ರ ಸಂಭ್ರಮದಲ್ಲಿದ್ದಾರೆ.

 


ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...