Homeಮುಖಪುಟಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ಗೋಡ್ಸೆಯನ್ನು ಬೆಂಬಲಿಸಿತೆ ಬಿಜೆಪಿ? ತಮಿಳು ನಾಡಿನಲ್ಲಿ ಭುಗಿಲೆದ್ದ ವಿವಾದ

ದೇಶದ ಮೊಟ್ಟ ಮೊದಲ ಭಯೋತ್ಪಾದಕ ನಾಥುರಾಂ ಗೋಡ್ಸೆ ಒಬ್ಬ ಹಿಂದೂವಾಗಿದ್ದ ಎಂಬ ಕಮಲ್ ಹಾಸನ್ ಹೇಳಿಕೆಯ ವಿರುದ್ಧ ದೂರು ನೀಡಿದ ಬಿಜೆಪಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

‘ನಾಥುರಾಂ ಗೂಡ್ಸೆಯನ್ನು ಬಿಜೆಪಿ ಬಹಿರಂಗವಾಗಿ ಬೆಂಬಲಿಸಿದೆ’ ಎಂದು ತಮಿಳುನಾಡಿನಲ್ಲಿ ಹಲವು ಸಂಘಟನೆಗಳು ಮತ್ತು ಪಕ್ಷಗಳು ಆಪಾದಿಸಿವೆ. ಇದುವರೆಗೂ ನಾಥುರಾಂ ಗೋಡ್ಸೆ ನಮ್ಮವನಲ್ಲ ಎನ್ನುತ್ತಿದ್ದ ಬಿಜೆಪಿ ಇಂದು ಆತನ ಪರವಾಗಿ ವಕಾಲತ್ತು ವಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿಲಾಗಿದೆ

ನಡೆದಿದಿಷ್ಟು..
ಕಮಲ್ ಹಾಸನ್‍ರವರ ಎಂಎನ್‍ಎಂ – ಮಕ್ಕಳ್ ನೀದಿ ಮಯ್ಯಂ ಪಕ್ಷದ ಪರವಾಗಿ ಉಪಚುನವಾಣೆಯಲ್ಲಿ ಪ್ರಚಾರ ಮಾಡುತ್ತಿದ್ದಾಗ ಒಂದು ಹೇಳಿಕೆಯನ್ನು ನೀಡಿದ್ದರು. ಅದರಲ್ಲಿ ನಮ್ಮ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಒಬ್ಬ ಹಿಂದೂವಾಗಿದ್ದ ಆತ ನಾಥುರಾಂ ಗೋಡ್ಸೆ ಅಲ್ಲದೇ ಬೇರೆ ಯಾರು ಅಲ್ಲ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಎಲ್ಲಾ ಕಡೆ ಈ ಹೇಳಿಕೆ ಹರಿದಾಡಿತ್ತು.

ಈ ಕುರಿತು ತಮಿಳರಸಿ ಸುಂದರ್ ರಾಜನ್ ಎಂಬ ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಮಲ್ ಹಾಸನ್ ರವರು ಧರ್ಮಗಳ ನಡುವೆ ಭೇಧ ಮೂಡಿಸಿ ಪ್ರಚೋದನೆ ಮಾಡುತ್ತಿದ್ದಾರೆಂದು ಅವರು ಆಪಾದಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗವು ಯಾವ ಕ್ರಮ ತೆಗೆದುಕೊಂಡಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಾಥುರಾಂ ಗೋಡ್ಸೆಯನ್ನು ಈ ದೇಶದ ಮೊಟ್ಟಮೊದಲ ಭಯೋತ್ಪಾದಕ ಎಂದು ಉಲ್ಲೇಖಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇದನ್ನು ಹೇಳಿದಾಗ ಬಿಜೆಪಿ ಮತ್ತು ಸಂಘಪರಿವು ನಾಥುರಾಂ ಗೋಡ್ಸೆಯನ್ನು ಪರೋಕ್ಷವಾಗಿ ಸಮರ್ಥಿಸುವ ರೀತಿಯಲ್ಲಿ “ಒಂದೇ ಕೊಲೆಯನ್ನು ಮಾಡಿದವನನ್ನು ಭಯೋತ್ಪಾದಕ ಎಂದು ಕರೆಯಲು ಸಾಧ್ಯವಿಲ್ಲ ಎಂಬ ಸಮರ್ಥನೆ ನೀಡುತ್ತಿದ್ದರು.

ಆದರೆ ಒಬ್ಬ ವ್ಯಕ್ತಿಯನ್ನಾಗಲಿ, ಅಥವಾ ಒಂದು ಗುಂಪಿನನ್ನಾಗಲಿ ಯೋಜಿತವಾದ ರೀತಿಯೊಳಗೆ ಕೊಲೆಯನ್ನು ಎಸಗುವುದು ಭಯೋತ್ಪಾದನೆಯೇ ಸರಿ ಎಂಬುದು ಇತರರ ವಾದವಾಗಿತ್ತು. ಇದೇ ವಾದವನ್ನು ಮುಂದಿಟ್ಟು ಇತರರು ‘ಹಾಗಾದರೆ ಇನ್ನಿತರ ಕೋಮು ಗಲಭೆಗಳಲ್ಲಿ ಆರ್‍ಎಸ್‍ಎಸ್‍ನವರು, ಮತ್ತದರ ಅಂಗಸಂಘಟನೆಗಳು ಭಾಗವಹಿಸಿದ್ದಾಗಲಿ, ಅಥವಾ ಗುಜರಾತ್‍ನಲ್ಲಿ ನಡೆದ ಸಂಘಟಿತ ಯೋಜಿತ ಮಾರಣಹೋಮವಾಗಲಿ ಇದು ಭಯೋತ್ಪಾದನೆಯಲ್ಲವೇ? ಮಾಲೆಂಗಾವ್, ಮೆಕ್ಕಾ, ಸಂಜೋತಾ ಎಕ್ಸ್‍ಪ್ರೆಸ್ ಬಾಂಬ್ ಸ್ಫೋಟ ಪ್ರಕರಣದಂತಹ ಯೋಜಿತ ಕೃತ್ಯಗಳು ಭಯೋತ್ಪಾದನೆಯಲ್ಲವೇ? ಎಂದು ಕೇಳುತ್ತಿವೆ.

ಅದರ ಮುಂದುವರೆದ ಭಾಗವಾಗಿ ಪ್ರಗ್ಯಾ ಠಾಕೂರ್ ಅನ್ನು ಭಯೋತ್ಪಾದನೆಯ ಆರೋಪ ಹೊತ್ತ ವ್ಯಕ್ತಿಯೆಂದು ಹೇಳಲಾಗುತ್ತಿದ್ದು ಮತ್ತು ಆ ಸಂದರ್ಭದಲ್ಲಿಯೂ ಬಿಜೆಪಿ ಮತ್ತು ಆರ್‍ಎಸ್‍ಎಸ್ ಆಕೆಯಿಂದ ಅಂತರವನ್ನು ಕಾಯ್ದುಕೊಂಡಿತ್ತು. ವಾಸ್ತವದಲ್ಲಿ ಪ್ರಗ್ಯಾ ಸಿಂಗ್ ಕುರಿತಂತೆ ಮನಮೋಹನ್ ಸಿಂಗ್ ಸರ್ಕಾರಕ್ಕೆ ಪತ್ರ ಬರೆದಿದ್ದ ಆರ್‍ಎಸ್‍ಎಸ್ ಪದಾಧಿಕಾರಿ ಆಕೆ ತಮ್ಮ ಸಂಘಟನೆಗೆ ಸೇರಿಲ್ಲವೆಂದು, ವಾಸ್ತವದಲ್ಲಿ ನಮ್ಮ ಸಂಘಟನೆಯವರನ್ನೇ ಕೊಲೆಗೈಯಲು ಯೋಜಿಸಿದ್ದಳೆಂದು ದೂರಿದ್ದರು. ಹಾಗಾಗಿ ಎಲ್ಲಾ ಕೋನದಿಂದಲೂ ಪ್ರಗ್ಯಾ ಠಾಕೂರ್ ಭಯೋತ್ಪಾದಕ ಆರೋಪಿ ಎಂದು ಒಪ್ಪಿಕೊಂಡಿದ್ದರು.

ಆದರೆ ಈಗ ಆಕೆಯನ್ನು ಸಮರ್ಥಿಸಿಕೊಳ್ಳುತ್ತಾ ಆಕೆಗೆ ಎಂಪಿ ಟಿಕೆಟ್ ನೀಡಿರುವ ಬಿಜೆಪಿ ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಾಥುರಾಂ ಗೋಡ್ಸೆಯನ್ನು ಸಹ ಸಮರ್ಥಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. “ಒಂದು ವೇಳೆ ನಾಥುರಾಂ ಗೋಡ್ಸೆ ವಿಚಾರದಲ್ಲಿ ಭಯೋತ್ಪಾದಕ, ಹಿಂದೂ ಭಯೋತ್ಪಾದಕ ಎನ್ನುವ ಕಮಲ್ ಹಾಸನ್‍ರವರ ನಿಲುವು ಒಪ್ಪಿಗೆ ಇಲ್ಲದಿದ್ದರೂ ನಾಥುರಾಂ ಗೋಡ್ಸೆಯ ಕೃತ್ಯವನ್ನು ತಾವು ಖಂಡಿಸುತ್ತೇವೆಂದು ಬಿಜೆಪಿ ಎಂದೂ, ಎಲ್ಲಿಯೂ ಹೇಳಿಲ್ಲವೇಕೆಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ಕೆ.ಎಲ್ ಅಶೋಕ್ ಪ್ರಶ್ನಿಸಿದ್ದಾರೆ.

ಗಾಂಧಿ ಹುತಾತ್ಮರಾದ ಜನವರಿ 30ರಂದು ಹಿಂದೂ ಮಹಾಸಭಾದ ನಾಯಕಿಯೊಬ್ಬಳು ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ ವಿಡಿಯೋ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಗೋಡ್ಸೆ ಪ್ರತಿಮೆ ಮತ್ತು ಮಂದಿರ ನಿರ್ಮಾಣ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದೇನೋ.

ತಮಿಳುನಾಡಿನಲ್ಲಿ ನಡೆದ ಈ ವಿವಾದವು ಮುಂದೆ ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...