Homeಕರ್ನಾಟಕಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

ಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

- Advertisement -
- Advertisement -

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಆದರೆ ಇದಕ್ಕೆ ‘ನಮ್ಮ ಚಾಲಕರ ಟ್ರೇಡ್ ಯುನಿಯನ್(NCTU)’ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರವು ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ಜಾರಿಗೆ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಬೈಕ್ ಟ್ಯಾಕ್ಸಿ ಚಾಲನೆಗೆ ಬಂದರೆ ಆಟೋ ಕ್ಯಾಬ್ ಹಾಗೂ ಬಿಎಂಟಿಸಿಗೆ ಹೊಡೆತ ಬೀಳುತ್ತದೆ ಎಂದು ಅದು ಹೇಳಿದೆ.

ಇ-ಬೈಕ್ ಟ್ಯಾಕ್ಸಿ ಪ್ರಾರಂಭವಾದರೆ ಚಾಲಕ ವೃತ್ತಿಯನ್ನೇ ನಂಬಿ ಸುಮಾರು ನಲವತ್ತು ವರ್ಷಗಳಿಂದ ದುಡಿಯುತ್ತಿರುವ ಹಿರಿಯ ಆಟೋ ಚಾಲಕರ ಪರಿಸ್ಥಿತಿ ಹೀನಾಯವಾಗುತ್ತದೆ. ಈಗಾಗಲೆ ಹಳ್ಳಿಗಳಲ್ಲಿ ಅಲ್ಪಸ್ವಲ್ಪ ಉಳಿದಂತಹ ಜಮಿನುಗಳನ್ನು, ಮನೆಗಳನ್ನು, ಮನೆಯ ಆಭರಣಗಳನ್ನು ಮಾರಿ ಅಥವಾ ಅಡ ಇಟ್ಟು ಸಾಲ ಮಾಡಿ ಕ್ಯಾಬ್‌ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿರುವವರ ಪರಿಸ್ಥಿತಿ ಏನಾಗಬಹುದು ಎಂದು ಯುನಿಯನ್ ಪ್ರಶ್ನಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ‘ಇ-ಬೈಕ್ ಟ್ಯಾಕ್ಸಿ’ ಸೇವೆ ಪ್ರಾರಂಭ!

“ಚಾಲಕರು ಸುಮಾರು ಒಂದೂವರೆ ವರ್ಷಗಳಿಂದ ದುಡಿಮೆಯಿಲ್ಲದೆ EMI, ಇನ್ಶೂರೆನ್ಸ್ ,ಟ್ಯಾಕ್ಸ್‌ ಅನ್ನು ಕಟ್ಟಿದ್ದಾರೆ. ಕೋವಿಡ್ 1ನೇ ಅಲೆಯ ಸಮಯದಲ್ಲಿ ಮಾತ್ರ ಕೇವಲ 3 ತಿಂಗಳ EMI ಅನ್ನು ಮುಂದೂಡಲಾಗಿತ್ತು. ಆದರೆ ಅದರ ಬಡ್ಡಿಯನ್ನು ಸಹ ಕಡಿಮೆ ಮಾಡಿರಲಿಲ್ಲ. ಚಾಲಕರು ಕೊರೊನಾದಿಂದಾಗಿ ಕಂಗೆಟ್ಟು ಸುಮಾರು 2 ವರ್ಷಗಳಿಂದ ಸರಿಯಾದ ದುಡಿಮೆಯಿಲ್ಲದೆ ಸಾಲ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇದೀಗ ಇ-ಬೈಕ್‌‌ ಟ್ಯಾಕ್ಸಿಯಿಂದ ಅವರ ಜೀವನ ಮತ್ತಷ್ಟು ಹದಗೆಡುತ್ತದೆ” ಎಂದು ಯುನಿಯನ್ ಆತಂಕ ವ್ಯಕ್ತಪಡಿಸಿದೆ.

“ಖಾಸಗಿ ಫೈನಾನ್ಸ್‌ನವರು ಚಾಲಕರಿಗೆ ಹಿಂಸೆ ನೀಡುತ್ತಾ ದಬ್ಬಾಳಿಕೆ ಮಾಡಿ EMI ವಸೂಲಿ ಮಾಡುತ್ತಿರುವುದನ್ನು ಅನೇಕ ಬಾರಿ ಸರಕಾರದ ಗಮನಕ್ಕೆ ತಂದಿದ್ದೆವು. ಆದರೂ ಸಹ ಅವರ ವಿರುದ್ಧ ಕ್ರಮ ಜರುಗಿಸದೇ ಇದ್ದುದರಿಂದ ಅನೇಕ ಚಾಲಕರು ಆತ್ಮಹತ್ಯೆಯ ದಾರಿ ಹಿಡಿದು ಅವರ ಕುಟುಂಬ ಸದಸ್ಯರು ಬೀದಿ ಪಾಲಾಗುವಂತಾಗಿದೆ. ಇದಕ್ಕೆಲ್ಲಾ ಈ ಸರ್ಕಾರವೇ ಹೊಣೆ. ಇದೀಗ ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುವಂತಾಗಿದೆ” ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಅಧಿಕಾರಿಗಳ ಪ್ರಕಾರ, ಇ-ಬೈಕನ್ನು ಟ್ಯಾಕ್ಸಿಯಾಗಿ ನೋಂದಾಯಿಸಲು ವ್ಯಕ್ತಿಗಳಿಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಇದರಂತೆ ವೈಯಕ್ತಿಕವಾಗಿ ಅಥವಾ ಒಂದು ಸಂಸ್ಥೆಯಾಗಿ ರಿಜಿಸ್ಟರ್‌ ಮಾಡಿ ಈ ಸೇವೆಯನ್ನು ನೀಡಬಹುದಾಗಿದೆ.

ಇ-ಬೈಕ್ ಟ್ಯಾಕ್ಸಿಗಳು ಆರಂಭದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತವೆ ಮತ್ತು ನಂತರ ರಾಜ್ಯದಾದ್ಯಂತ ಇತರ ನಗರ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು.

ಇದನ್ನೂ ಓದಿ: ಟಿಎಸ್‌ಆರ್‌ಟಿಸಿ: ಸಂಜೆ 7: 30 ರ ನಂತರ ಮಹಿಳೆಯರು ಎಲ್ಲಾದರೂ ಬಸ್ಸು ಏರಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...