Homeಕರ್ನಾಟಕಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

ಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

- Advertisement -
- Advertisement -

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಆದರೆ ಇದಕ್ಕೆ ‘ನಮ್ಮ ಚಾಲಕರ ಟ್ರೇಡ್ ಯುನಿಯನ್(NCTU)’ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರವು ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ಜಾರಿಗೆ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಬೈಕ್ ಟ್ಯಾಕ್ಸಿ ಚಾಲನೆಗೆ ಬಂದರೆ ಆಟೋ ಕ್ಯಾಬ್ ಹಾಗೂ ಬಿಎಂಟಿಸಿಗೆ ಹೊಡೆತ ಬೀಳುತ್ತದೆ ಎಂದು ಅದು ಹೇಳಿದೆ.

ಇ-ಬೈಕ್ ಟ್ಯಾಕ್ಸಿ ಪ್ರಾರಂಭವಾದರೆ ಚಾಲಕ ವೃತ್ತಿಯನ್ನೇ ನಂಬಿ ಸುಮಾರು ನಲವತ್ತು ವರ್ಷಗಳಿಂದ ದುಡಿಯುತ್ತಿರುವ ಹಿರಿಯ ಆಟೋ ಚಾಲಕರ ಪರಿಸ್ಥಿತಿ ಹೀನಾಯವಾಗುತ್ತದೆ. ಈಗಾಗಲೆ ಹಳ್ಳಿಗಳಲ್ಲಿ ಅಲ್ಪಸ್ವಲ್ಪ ಉಳಿದಂತಹ ಜಮಿನುಗಳನ್ನು, ಮನೆಗಳನ್ನು, ಮನೆಯ ಆಭರಣಗಳನ್ನು ಮಾರಿ ಅಥವಾ ಅಡ ಇಟ್ಟು ಸಾಲ ಮಾಡಿ ಕ್ಯಾಬ್‌ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿರುವವರ ಪರಿಸ್ಥಿತಿ ಏನಾಗಬಹುದು ಎಂದು ಯುನಿಯನ್ ಪ್ರಶ್ನಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ‘ಇ-ಬೈಕ್ ಟ್ಯಾಕ್ಸಿ’ ಸೇವೆ ಪ್ರಾರಂಭ!

“ಚಾಲಕರು ಸುಮಾರು ಒಂದೂವರೆ ವರ್ಷಗಳಿಂದ ದುಡಿಮೆಯಿಲ್ಲದೆ EMI, ಇನ್ಶೂರೆನ್ಸ್ ,ಟ್ಯಾಕ್ಸ್‌ ಅನ್ನು ಕಟ್ಟಿದ್ದಾರೆ. ಕೋವಿಡ್ 1ನೇ ಅಲೆಯ ಸಮಯದಲ್ಲಿ ಮಾತ್ರ ಕೇವಲ 3 ತಿಂಗಳ EMI ಅನ್ನು ಮುಂದೂಡಲಾಗಿತ್ತು. ಆದರೆ ಅದರ ಬಡ್ಡಿಯನ್ನು ಸಹ ಕಡಿಮೆ ಮಾಡಿರಲಿಲ್ಲ. ಚಾಲಕರು ಕೊರೊನಾದಿಂದಾಗಿ ಕಂಗೆಟ್ಟು ಸುಮಾರು 2 ವರ್ಷಗಳಿಂದ ಸರಿಯಾದ ದುಡಿಮೆಯಿಲ್ಲದೆ ಸಾಲ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇದೀಗ ಇ-ಬೈಕ್‌‌ ಟ್ಯಾಕ್ಸಿಯಿಂದ ಅವರ ಜೀವನ ಮತ್ತಷ್ಟು ಹದಗೆಡುತ್ತದೆ” ಎಂದು ಯುನಿಯನ್ ಆತಂಕ ವ್ಯಕ್ತಪಡಿಸಿದೆ.

“ಖಾಸಗಿ ಫೈನಾನ್ಸ್‌ನವರು ಚಾಲಕರಿಗೆ ಹಿಂಸೆ ನೀಡುತ್ತಾ ದಬ್ಬಾಳಿಕೆ ಮಾಡಿ EMI ವಸೂಲಿ ಮಾಡುತ್ತಿರುವುದನ್ನು ಅನೇಕ ಬಾರಿ ಸರಕಾರದ ಗಮನಕ್ಕೆ ತಂದಿದ್ದೆವು. ಆದರೂ ಸಹ ಅವರ ವಿರುದ್ಧ ಕ್ರಮ ಜರುಗಿಸದೇ ಇದ್ದುದರಿಂದ ಅನೇಕ ಚಾಲಕರು ಆತ್ಮಹತ್ಯೆಯ ದಾರಿ ಹಿಡಿದು ಅವರ ಕುಟುಂಬ ಸದಸ್ಯರು ಬೀದಿ ಪಾಲಾಗುವಂತಾಗಿದೆ. ಇದಕ್ಕೆಲ್ಲಾ ಈ ಸರ್ಕಾರವೇ ಹೊಣೆ. ಇದೀಗ ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುವಂತಾಗಿದೆ” ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಅಧಿಕಾರಿಗಳ ಪ್ರಕಾರ, ಇ-ಬೈಕನ್ನು ಟ್ಯಾಕ್ಸಿಯಾಗಿ ನೋಂದಾಯಿಸಲು ವ್ಯಕ್ತಿಗಳಿಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಇದರಂತೆ ವೈಯಕ್ತಿಕವಾಗಿ ಅಥವಾ ಒಂದು ಸಂಸ್ಥೆಯಾಗಿ ರಿಜಿಸ್ಟರ್‌ ಮಾಡಿ ಈ ಸೇವೆಯನ್ನು ನೀಡಬಹುದಾಗಿದೆ.

ಇ-ಬೈಕ್ ಟ್ಯಾಕ್ಸಿಗಳು ಆರಂಭದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತವೆ ಮತ್ತು ನಂತರ ರಾಜ್ಯದಾದ್ಯಂತ ಇತರ ನಗರ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು.

ಇದನ್ನೂ ಓದಿ: ಟಿಎಸ್‌ಆರ್‌ಟಿಸಿ: ಸಂಜೆ 7: 30 ರ ನಂತರ ಮಹಿಳೆಯರು ಎಲ್ಲಾದರೂ ಬಸ್ಸು ಏರಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...