Homeಮುಖಪುಟಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಪುಸ್ತಕಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.

- Advertisement -
- Advertisement -

ಜರ್ಮನ್ ತತ್ವಶಾಸ್ತ್ರಜ್ಞ, ಇತಿಹಾಸಕಾರ, ರಾಜಕೀಯ ಶಾಸ್ತ್ರಜ್ಞ, ಪತ್ರಕರ್ತ ಮತ್ತು ಕ್ರಾಂತಿಕಾರಿ ಸಮಾಜವಾದಿ ಫ್ರೆಡೆರಿಕ್ ಏಂಗೆಲ್ಸ್‌ರವರ ಜನ್ಮ ದ್ವಿಶತಮಾನೋತ್ಸವದ ಅಂಗವಾಗಿ ಅವರ ಫ್ರೆಡೆರಿಕ್ ಏಂಗೆಲ್ಸ್ ಮತ್ತು ಜರ್ಮನ್ ಸಿದ್ಧಾಂತ ಕನ್ನಡ ಪುಸ್ತಕಗಳು ಜುಲೈ 20, 21 ರಂದು ಲೋಕಾರ್ಪಣೆಗೊಳ್ಳಲಿವೆ.

ಮಾರ್ಕ್ಸ್‌ವಾದ ಎಂದು ಕರೆಯಲಾಗುತ್ತಿರುವ ವಿಶಿಷ್ಟ ಲೋಕದೃಷ್ಟಿಯನ್ನು ಬೆಳೆಸುವಲ್ಲಿ ಮಾರ್ಕ್ಸ್‌ರ ಜತೆ ಏಂಗೆಲ್ಸ್ ಅವರ ಪಾತ್ರ ಹೆಚ್ಚು ಕಡಿಮೆ ಸಮಾನವಾಗಿತ್ತು. ಹಾಗಾಗಿ ಏಂಗೆಲ್ಸ್ ಅವರ ಜನ್ಮ ದ್ವಿಶತಮಾನೋತ್ಸವವನ್ನು ಮಾರ್ಕ್ಸ್ ವಾದದ ಲೋಕದೃಷ್ಟಿಯ ಆಧಾರಸ್ತಂಭಗಳು ಎನಿಸಿಕೊಂಡಿರುವ ಅವರ ಪ್ರಮುಖ ಕೃತಿಗಳನ್ನು ಕನ್ನಡದಲ್ಲಿ ಪ್ರಕಟಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಾಡಿನ ಪ್ರಗತಿಪರ ಪುಸ್ತಕಗಳ ಪ್ರಕಾಶನ ಸಂಸ್ಥೆಗಳಾದ (ಈ ಹಿಂದೆ ಮಾರ್ಕ್ಸ್200–ಕ್ಯಾಪಿಟಲ್ 150 ಯೋಜನೆಯನ್ನು ಸಫಲವಾಗಿ ಪೂರ್ಣಗೊಳಿಸಿದ) ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಜಂಟಿಯಾಗಿ ಯೋಜಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹಿರಿಯ ಹೋರಾಟಗಾರರಾದ ಡಾ.ಜಿ.ರಾಮಕೃಷ್ಣರವರು ರಚಿಸಿರುವ ಫ್ರೆಡೆರಿಕ್ ಎಂಗೆಲ್ಸ್ ಪುಸ್ತಕವನ್ನು ಜುಲೈ 20 ರಂದು ಝೂಮ್ ಆನ್‌ಲೈನ್ ಕಾರ್ಯಕ್ರದಲ್ಲಿ ಹಿರಿಯ ಮಾರ್ಕ್ಸ್ ವಾದಿ ವಿದ್ವಾಂಸರಾದ ಪ್ರೊ. ಕೆ.ಕೆ.ತೆಕ್ಕೆಡೆತ್ ರವರು ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ  “ವೈಜ್ಞಾನಿಕ ಸಮಾಜವಾದಕ್ಕೆ ಏಂಗೆಲ್ಸ್ ಕೊಡುಗೆ”  ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅದೇ ರೀತಿಯಲ್ಲಿ ಜುಲೈ 21ರಂದು ಪ್ರೊ.ವಿ.ಎನ್.ಲಕ್ಷ್ಮಿನಾರಾಯಣರವರು ರಚಿಸಿರುವ “ಜರ್ಮನ್ ಸಿದ್ಧಾಂತ’ದ ಪುಸ್ತಕವನ್ನು ಪ್ರೊ.ರಾಜೇಂದ್ರ ಚೆನ್ನಿಯವರು ಬಿಡುಗಡೆಗೊಳಿಸಿ  ‘ಕರ್ನಾಟಕದ ಬೌದ್ಧಿಕ ಪರಂಪರೆ ಮತ್ತು ಸಂಕಥನಗಳಲ್ಲಿ ಭಾವನಾವಾದದ ಪ್ರಭಾವ’ ದ ಕುರಿತು ಸಂವಾದದ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇದರೊಂದಿಗೆ ಏಂಗೆಲ್ಸ್ 200 ಮಾಲಿಕೆಯಲ್ಲಿ ಮುಂದೆ ಕುಟುಂಬ, ಖಾಸಗಿ ಆಸ್ತಿ ಮತ್ತು ಪ್ರಭುತ್ವದ ಉಗಮ (ಡಾ.ಎಚ್.ಜಿ.ಜಯಲಕ್ಷ್ಮಿ), ಪ್ರಕೃತಿಯ ಗತಿತಾರ್ಕಿಕತೆ (ಸುಬ್ರಮಣ್ಯ ಗುಡ್ಗೆ), ಜರ್ಮನಿಯ ರೈತ ಯುದ್ಧಗಳು (ನಾ. ದಿವಾಕರ್), ಬಂಡವಾಳ ಸಂಪುಟ- 2 (ಪ್ರೊ.ವಿ.ಎನ್.ಲಕ್ಷ್ಮಿನಾರಾಯಣ, ಪಿ.ಎ.ಕುಮಾರ್) ಪುಸ್ತಕಗಳನ್ನು ಕನ್ನಡದಲ್ಲಿ ತರುವುದಾಗಿ ನವಕರ್ನಾಟಕ ಮತ್ತು ಕ್ರಿಯಾ ಮಾಧ್ಯಮಗಳು ಘೋಷಿಸಿವೆ. ರೂ. 1800 ಬೆಲೆಯ 6 ಪುಸ್ತಕಗಳ ಸೆಟ್  ಖರೀದಿಗೆ  ರೂ. 1200 ವಿಶೇಷ ಪ್ರಕಟಣಾ-ಪೂರ್ವ ರಿಯಾಯಿತಿ ಕೂಪನು ಖರೀದಿಸುವ ಮೂಲಕ ಪಡೆಯಬಹುದು.

ಈ ಎರಡು ಕಾರ್ಯಕ್ರಮಗಳು ಜನಶಕ್ತಿ ಮೀಡಿಯಾ (Janashakthi Media) ಫೇಸ್ ಬುಕ್ ಮತ್ತು ಯೂಟ್ಯೂಬ್ ತಾಣಗಳಲ್ಲಿ ಲೈವ್ ಆಗಿ ಪ್ರಸಾರವಾಗಲಿವೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...