Homeಕರ್ನಾಟಕಅಕ್ಟೋಬರ್‌ 1 ರಿಂದ ವಿವಿ ಮತ್ತು ಕಾಲೇಜ್‌‌ಗಳ ಹೊಸ ಶೈಕ್ಷಣಿಕ ವರ್ಷ ಪ್ರಾರಂಭ

ಅಕ್ಟೋಬರ್‌ 1 ರಿಂದ ವಿವಿ ಮತ್ತು ಕಾಲೇಜ್‌‌ಗಳ ಹೊಸ ಶೈಕ್ಷಣಿಕ ವರ್ಷ ಪ್ರಾರಂಭ

- Advertisement -
- Advertisement -

ಅಕ್ಟೋಬರ್ 1 ರಿಂದ ದೇಶದಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಪ್ರವೇಶ ಪ್ರಕ್ರಿಯೆಯನ್ನು ಸೆಪ್ಟೆಂಬರ್ 30 ರೊಳಗೆ ಪೂರ್ಣಗೊಳಿಸಬೇಕು ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

ಸಿಬಿಎಸ್‌ಇ, ಐಸಿಎಸ್‌ಇ ಮತ್ತು ಎಲ್ಲಾ ರಾಜ್ಯ ಮಂಡಳಿಗಳು ಫಲಿತಾಂಶ ಪ್ರಕಟಿಸಿದ ನಂತರವೇ ಪದವಿ ಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗುವಂತೆ ನೋಡಿಕೊಳ್ಳಬೇಕು ಎಂದು ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು (ಎಚ್‌ಇಐ) ಕೇಳಿಕೊಂಡಿವೆ.

ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

“ಎಲ್ಲಾ ಶಾಲಾ ಮಂಡಳಿಗಳು ಜುಲೈ 31 ರೊಳಗೆ 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ಒಂದು ವೇಳೆ ಅರ್ಹತಾ ಪರೀಕ್ಷೆಗಳ ಫಲಿತಾಂಶವನ್ನು ಘೋಷಿಸುವಲ್ಲಿ ವಿಳಂಬವಾದರೆ, ಅಕ್ಟೋಬರ್ 18 ರೊಳಗೆ ಹೊಸ ಶೈಕ್ಷಣಿಕ ವರ್ಷ ಪ್ರಾರಂಭಿಸಬಹುದು” ಎಂದು ಯುಜಿಸಿ ತಿಳಿಸಿದೆ.

ಬೋಧನೆ-ಕಲಿಕೆಯ ಪ್ರಕ್ರಿಯೆಯು ಆಫ್‌ಲೈನ್, ಆನ್‌ಲೈನ್ ಅಥವಾ ಸಂಯೋಜಿತ ಕ್ರಮದಲ್ಲಿ ಮುಂದುವರಿಸಬಹುದು ಎಂದು ಆಯೋಗ ಸ್ಪಷ್ಟಪಡಿಸಿದೆ.

“ಕೊರೊನಾ ದೃಷ್ಟಿಯಿಂದ ಕಾಲಕಾಲಕ್ಕೆ ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು ಹೊರಡಿಸುವ ಅಗತ್ಯ ಪ್ರೋಟೋಕಾಲ್‌ಗಳು ಮತ್ತು ಸಲಹೆಗಳನ್ನು ಅನುಸರಿಸಿ ಅಕ್ಟೋಬರ್ 1 ರಿಂದ 2022 ರ ಜುಲೈ 31 ರವರೆಗೆ ಮುಂದಿನ ಶೈಕ್ಷಣಿಕ ವರ್ಷ ಜಾರಿಯಲ್ಲಿರುತ್ತದೆ” ಎಂದು ಮಾರ್ಗಸೂಚಿ ತಿಳಿಸಿದೆ.

ಆಗಸ್ಟ್ 31 ರೊಳಗೆ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಅಂತಿಮ ವರ್ಷ ಅಥವಾ ಅಂತಿಮ ಅವಧಿಯ ಪರೀಕ್ಷೆಗಳನ್ನು ನಡೆಸುವುದು ಕಡ್ಡಾಯ. ಈ ಪರೀಕ್ಷೆಗಳನ್ನು ಆಫ್‌ಲೈನ್, ಆನ್‌ಲೈನ್ ಅಥವಾ ಸಂಯೋಜಿತ ಕ್ರಮಗಳಲ್ಲಿ ನಡೆಸಬಹುದು ಎಂದು ಅದು ಹೇಳಿದೆ.

ಇದನ್ನೂ ಓದಿ: ಸುದ್ದಿ ಮೇಲಿನ ನಂಬಿಕೆ – 46 ದೇಶಗಳಲ್ಲಿ ಭಾರತಕ್ಕೆ 31 ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...