Homeಮುಖಪುಟಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ..: ಆಡಿಯೋ ನನ್ನದಲ್ಲ ಎಂದ ನಳಿನ್ ಕುಮಾರ್ ಕಟೀಲ್

ಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ..: ಆಡಿಯೋ ನನ್ನದಲ್ಲ ಎಂದ ನಳಿನ್ ಕುಮಾರ್ ಕಟೀಲ್

- Advertisement -
- Advertisement -

“ಕರ್ನಾಟಕ ಸಿಎಂ ಬದಲಾವಣೆಯಾಗಲಿದ್ದಾರೆ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾತು” ಎಂಬ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು ಹೊಸ ಚರ್ಚೆಗಳಿಗೆ ದಾರಿಮಾಡಿಕೊಟ್ಟಿದೆ. ಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ ಎಂದು ಆಡಿಯೋದಲ್ಲಿ ಹೇಳಿರುವುದರಿಂದ ಅವರು ಯಾರು ಯಾರು ಎಂಬ ಪ್ರಶ್ನೆ ಹಲವೆಡೆ ಸುಳಿದಾಡುತ್ತಿದೆ. ಆದರೆ ತಡರಾತ್ರಿ ಸ್ಪಷ್ಟೀಕರಣ ನೀಡಿರುವ ನಳಿನ್ ಕುಮಾರ್ ಕಟೀಲ್, ‘ಆ ಆಡಿಯೋ ನನ್ನದಲ್ಲ, ನಕಲಿ’ ಎಂದಿದ್ದಾರೆ.

ವೈರಲ್ ಆಗಿರುವ ಆಡಿಯೋದಲ್ಲಿ ತುಳು ಭಾಷೆಯಲ್ಲಿ “ಯಾರಿಗೆ ಹೇಳೋಕೆ ಹೋಗಬೇಡಿ, ಈಶ್ವರಪ್ಪ ಜಗದೀಶ್ ಶೆಟ್ಟರ್ ಟೀಮ್ ಅನ್ನೆ ತೆಗೆಯುತ್ತೇವೆ. ಎಲ್ಲ ಹೊಸ ಟೀಮ್ ಮಾಡುತ್ತಿದ್ದೇವೆ. ಯಾರಲ್ಲೂ ಹೇಳಲು ಹೋಗಬೇಡಿ, ಈಗ ಸಧ್ಯಕ್ಕೆ ಯಾರಿಗೂ ಕೊಡಬೇಡಿ ಎಂದು ಹೇಳಿದ್ದಾರೆ. ಇಲ್ಲ, ಯಾರಿಗೂ ಹೇಳಬೇಡಿ, ಏನು ತೊಂದರೆ ಇಲ್ಲ, ಹೆದರಬೇಡಿ ನಾವಿದ್ದೇವೆ, ಇನ್ನು ಯಾರಾದರೂ ನಮ್ಮ ಕೈಯಲ್ಲೆ ಎಲ್ಲಾ. ಮೂರು ಹೆಸರು ಉಂಟು, ಅದರಲ್ಲಿ ಯಾವುದಾದರೂ ಆಗುವ ಚಾನ್ಸ್ ಉಂಟು. ಇಲ್ಲ, ಇಲ್ಲಿಯವರನ್ನು ಯಾರನ್ನು ಮಾಡೋದಿಲ್ಲ. ದೆಹಲಿಯಿಂದಲೇ ಮಾಡುತ್ತಾರೆ” ಎಂದು ಹೇಳಲಾಗಿದೆ. ಸಣ್ಣ ದನಿಯಲ್ಲಿ ಮಾತನಾಡಿದ್ದು ನಡು ನಡುವೆ ನಗುವುದು ಕೇಳಿಬಂದಿದೆ.

ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಇತ್ತೀಚೆಗೆ ತಾನೇ ಹಾಲಿ ಸಿಎಂ ಯಡಿಯೂರಪ್ಪನವರು ದೆಹಲಿಗೆ ತೆರಳಿದ್ದಾಗ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆ ಹಿನ್ನೆಲೆಯಲ್ಲಿ ಈ ಆಡಿಯೋಗೆ ಮನ್ನಣೆ ದೊರೆತ್ತಿದ್ದು ನಿಜವಿರಬಹುದು ಎಂದು ಹಲವರು ನಂಬಿದ್ದಾರೆ. ಅಲ್ಲದೆ ಆಡಿಯೋದಲ್ಲಿನ ದನಿ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರವರ ದನಿಯನ್ನೆ ಹೋಲುವುದರಿಂದ ಬಹಳಷ್ಟು ಜನ ಆಡಿಯೋವನ್ನು ಹಂಚಿಕೊಂಡಿದ್ದಾರೆ.

ಯಾರು ಹೊಸ ಮುಖ್ಯಮಂತ್ರಿ?

ಇನ್ನು ಹೊಸ ಮುಖ್ಯಮಂತ್ರಿ ದೆಹಲಿಯಿಂದ ಬರುತ್ತಾರೆ ಎಂಬ ವಿಷಯ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಆಡಿಯೋದಲ್ಲಿರುವಂತೆ ಮೂರು ಜನರ ಹೆಸರಿದೆ, ಯಾರಾದರೂ ಆಗಬಹುದು ಎಂಬುದನ್ನು ಜನ ತಮಗೆ ಬೇಕಾದಂತೆ ಅರ್ಥೈಸಿಕೊಳ್ಳುತ್ತಿದ್ದರೂ ಅವರ ಊಹೆಯ ಮೊದಲ ಹೆಸರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ರವರದ್ದು ಆಗಿದೆ. ಕರ್ನಾಟಕ ಮೂಲದ ಸಂತೋಷ್‌ರವರು ಆರ್‌ಎಸ್‌ಎಸ್‌ನ ಪ್ರಭಾವಿ ಮುಖಂಡರಾಗಿದ್ದು ಕೆಲಸ ಮಾಡಿದವರು. ಬಹಳ ಹಿಂದಿನಿಂದಲೂ ರಾಜಕೀಯ ಮಹತ್ವಾಕಾಂಕ್ಷೆ ಹೊಂದಿರುವ ಅವರು 2019 ರಲ್ಲಿ ನೇರವಾಗಿ ಬಿಜೆಪಿ ಪಕ್ಷ ಸಂಘಟನೆಗಿಳಿದಿದ್ದು ಸದ್ಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ಹಲವು ಬಾರಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಬಂದಾಗಲೆಲ್ಲಾ ಆರ್‌ಎಸ್‌ಎಸ್‌ ಹಿನ್ನೆಲೆಯ ಸಂತೋಷ್ ಹೆಸರು ಮುನ್ನೆಲೆಗೆ ಬಂದಿದೆ. ಸದ್ಯ ಅವರು ದೆಹಲಿಯಲ್ಲಿರುವುದರಿಂದ ಆಡಿಯೋದಲ್ಲಿನ ಮೂರು ಹೆಸರುಗಳಲ್ಲಿ ಅವರ ಹೆಸರು ಮುಂಚೂಣಿಯಲ್ಲಿದೆ.

ಕಳೆದ ಕೆಲ ತಿಂಗಳುಗಳಿಂದ ಸಂತೋಷ್ ಬಿಜೆಪಿಯ ಟ್ರಬಲ್ ಶೂಟರ್ ಪಾತ್ರ ನಿರ್ವಹಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ನೇತೃತ್ವದ ಆಡಳಿತದಲ್ಲಿ ಉಂಟಾದ ಬಿಕ್ಕಟ್ಟು ನಿಭಾಯಿಸುವಲ್ಲಿ ಅವರು ಪಾತ್ರ ವಹಿಸಿದ್ದರು. ಹಾಗಾಗಿ ಅವರಿಗೆ ಕರ್ನಾಟಕದ ಸಿಎಂ ಸ್ಥಾನ ಕೊಡುವ ಮೂಲಕ ಆರ್‌ಎಸ್‌ಎಸ್‌ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವ ಸಂಘಪರಿವಾರದ ಬೇಡಿಕೆ ಈಡೇರಿಸಲು ಬಿಜೆಪಿ ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಎರಡನೇ ಆಯ್ಕೆಯಾಗಿ ಪ್ರಹ್ಲಾದ್ ಜೋಶಿ ಇದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಸದ್ಯಕ್ಕೆ ಕೇಂದ್ರ ಮಂತ್ರಿಯಾಗಿರುವ ಅವರು ಕರ್ನಾಟಕ ಸಿಎಂ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಆಡಿಯೋ ನಕಲಿ, ತನಿಖೆಯಾಗಬೇಕು – ಕಟೀಲ್

ಆಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟೀಕರಣ ನೀಡಿರುವ ನಳಿನ್ ಕುಮಾರ್ ಕಟೀಲ್, ಆ ಆಡಿಯೋ ನನ್ನದಲ್ಲ. ನನಗೆ ಕಳಂಕ ತರಲು ನಕಲಿ ಆಡಿಯೋ ಸೃಷ್ಟಿಸಲಾಗಿದೆ. ನನ್ನ ದನಿಯನ್ನು ಅನುಕರಿಸಿ ಯಾರೋ ಆಡಿಯೋ ತಯಾರು ಮಾಡಿದ್ದಾರೆ. ಅದನ್ನು ಕಿಡಿಗೇಡಿಗಳು ವಾಟ್ಸಾಪ್‌ನಲ್ಲಿ ಷೇರ್ ಮಾಡಿ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. ಈ ಕುರಿತು ಸಮಗ್ರ ತನಿಖೆಯಾಗಬೇಕೆಂದು ಅವರು ಆಗ್ರಹಿಸಿದ್ದಾರೆ.

ಇದೇ ಜುಲೈ 26ಕ್ಕೆ ಯಡಿಯೂರಪ್ಪನವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿ 2 ವರ್ಷ ತುಂಬುತ್ತಿದೆ. ಆ ಸಂದರ್ಭದಲ್ಲಿಯೇ ಅವರು ಪದತ್ಯಾಗ ಮಾಡಲಿದ್ದಾರೆ ಎಂಬ ಚರ್ಚೆಗಳ ನಡುವೆ ಈ ಆಡಿಯೋ ವೈರಲ್ ಆಗಿರುವುದು ಕಾಕತಾಳಿಯವೇ? ಅಥವಾ ಉದ್ದೇಶ ಪೂರ್ವಕವೇ? ಈ ಎಲ್ಲಾ ಪ್ರಶ್ನೆಗಳಿಗೆ ಇನ್ನೊಂದು ವಾರದಲ್ಲಿ ಉತ್ತರ ದೊರೆಯಲಿದೆ.


ಇದನ್ನೂ ಓದಿ: ಬಿಜೆಪಿ ಸೇರುತ್ತಿರುವ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌; ಆಪ್ತರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...