Homeಮುಖಪುಟಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ..: ಆಡಿಯೋ ನನ್ನದಲ್ಲ ಎಂದ ನಳಿನ್ ಕುಮಾರ್ ಕಟೀಲ್

ಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ..: ಆಡಿಯೋ ನನ್ನದಲ್ಲ ಎಂದ ನಳಿನ್ ಕುಮಾರ್ ಕಟೀಲ್

- Advertisement -
- Advertisement -

“ಕರ್ನಾಟಕ ಸಿಎಂ ಬದಲಾವಣೆಯಾಗಲಿದ್ದಾರೆ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾತು” ಎಂಬ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು ಹೊಸ ಚರ್ಚೆಗಳಿಗೆ ದಾರಿಮಾಡಿಕೊಟ್ಟಿದೆ. ಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ ಎಂದು ಆಡಿಯೋದಲ್ಲಿ ಹೇಳಿರುವುದರಿಂದ ಅವರು ಯಾರು ಯಾರು ಎಂಬ ಪ್ರಶ್ನೆ ಹಲವೆಡೆ ಸುಳಿದಾಡುತ್ತಿದೆ. ಆದರೆ ತಡರಾತ್ರಿ ಸ್ಪಷ್ಟೀಕರಣ ನೀಡಿರುವ ನಳಿನ್ ಕುಮಾರ್ ಕಟೀಲ್, ‘ಆ ಆಡಿಯೋ ನನ್ನದಲ್ಲ, ನಕಲಿ’ ಎಂದಿದ್ದಾರೆ.

ವೈರಲ್ ಆಗಿರುವ ಆಡಿಯೋದಲ್ಲಿ ತುಳು ಭಾಷೆಯಲ್ಲಿ “ಯಾರಿಗೆ ಹೇಳೋಕೆ ಹೋಗಬೇಡಿ, ಈಶ್ವರಪ್ಪ ಜಗದೀಶ್ ಶೆಟ್ಟರ್ ಟೀಮ್ ಅನ್ನೆ ತೆಗೆಯುತ್ತೇವೆ. ಎಲ್ಲ ಹೊಸ ಟೀಮ್ ಮಾಡುತ್ತಿದ್ದೇವೆ. ಯಾರಲ್ಲೂ ಹೇಳಲು ಹೋಗಬೇಡಿ, ಈಗ ಸಧ್ಯಕ್ಕೆ ಯಾರಿಗೂ ಕೊಡಬೇಡಿ ಎಂದು ಹೇಳಿದ್ದಾರೆ. ಇಲ್ಲ, ಯಾರಿಗೂ ಹೇಳಬೇಡಿ, ಏನು ತೊಂದರೆ ಇಲ್ಲ, ಹೆದರಬೇಡಿ ನಾವಿದ್ದೇವೆ, ಇನ್ನು ಯಾರಾದರೂ ನಮ್ಮ ಕೈಯಲ್ಲೆ ಎಲ್ಲಾ. ಮೂರು ಹೆಸರು ಉಂಟು, ಅದರಲ್ಲಿ ಯಾವುದಾದರೂ ಆಗುವ ಚಾನ್ಸ್ ಉಂಟು. ಇಲ್ಲ, ಇಲ್ಲಿಯವರನ್ನು ಯಾರನ್ನು ಮಾಡೋದಿಲ್ಲ. ದೆಹಲಿಯಿಂದಲೇ ಮಾಡುತ್ತಾರೆ” ಎಂದು ಹೇಳಲಾಗಿದೆ. ಸಣ್ಣ ದನಿಯಲ್ಲಿ ಮಾತನಾಡಿದ್ದು ನಡು ನಡುವೆ ನಗುವುದು ಕೇಳಿಬಂದಿದೆ.

ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಇತ್ತೀಚೆಗೆ ತಾನೇ ಹಾಲಿ ಸಿಎಂ ಯಡಿಯೂರಪ್ಪನವರು ದೆಹಲಿಗೆ ತೆರಳಿದ್ದಾಗ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆ ಹಿನ್ನೆಲೆಯಲ್ಲಿ ಈ ಆಡಿಯೋಗೆ ಮನ್ನಣೆ ದೊರೆತ್ತಿದ್ದು ನಿಜವಿರಬಹುದು ಎಂದು ಹಲವರು ನಂಬಿದ್ದಾರೆ. ಅಲ್ಲದೆ ಆಡಿಯೋದಲ್ಲಿನ ದನಿ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರವರ ದನಿಯನ್ನೆ ಹೋಲುವುದರಿಂದ ಬಹಳಷ್ಟು ಜನ ಆಡಿಯೋವನ್ನು ಹಂಚಿಕೊಂಡಿದ್ದಾರೆ.

ಯಾರು ಹೊಸ ಮುಖ್ಯಮಂತ್ರಿ?

ಇನ್ನು ಹೊಸ ಮುಖ್ಯಮಂತ್ರಿ ದೆಹಲಿಯಿಂದ ಬರುತ್ತಾರೆ ಎಂಬ ವಿಷಯ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಆಡಿಯೋದಲ್ಲಿರುವಂತೆ ಮೂರು ಜನರ ಹೆಸರಿದೆ, ಯಾರಾದರೂ ಆಗಬಹುದು ಎಂಬುದನ್ನು ಜನ ತಮಗೆ ಬೇಕಾದಂತೆ ಅರ್ಥೈಸಿಕೊಳ್ಳುತ್ತಿದ್ದರೂ ಅವರ ಊಹೆಯ ಮೊದಲ ಹೆಸರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ರವರದ್ದು ಆಗಿದೆ. ಕರ್ನಾಟಕ ಮೂಲದ ಸಂತೋಷ್‌ರವರು ಆರ್‌ಎಸ್‌ಎಸ್‌ನ ಪ್ರಭಾವಿ ಮುಖಂಡರಾಗಿದ್ದು ಕೆಲಸ ಮಾಡಿದವರು. ಬಹಳ ಹಿಂದಿನಿಂದಲೂ ರಾಜಕೀಯ ಮಹತ್ವಾಕಾಂಕ್ಷೆ ಹೊಂದಿರುವ ಅವರು 2019 ರಲ್ಲಿ ನೇರವಾಗಿ ಬಿಜೆಪಿ ಪಕ್ಷ ಸಂಘಟನೆಗಿಳಿದಿದ್ದು ಸದ್ಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ಹಲವು ಬಾರಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಬಂದಾಗಲೆಲ್ಲಾ ಆರ್‌ಎಸ್‌ಎಸ್‌ ಹಿನ್ನೆಲೆಯ ಸಂತೋಷ್ ಹೆಸರು ಮುನ್ನೆಲೆಗೆ ಬಂದಿದೆ. ಸದ್ಯ ಅವರು ದೆಹಲಿಯಲ್ಲಿರುವುದರಿಂದ ಆಡಿಯೋದಲ್ಲಿನ ಮೂರು ಹೆಸರುಗಳಲ್ಲಿ ಅವರ ಹೆಸರು ಮುಂಚೂಣಿಯಲ್ಲಿದೆ.

ಕಳೆದ ಕೆಲ ತಿಂಗಳುಗಳಿಂದ ಸಂತೋಷ್ ಬಿಜೆಪಿಯ ಟ್ರಬಲ್ ಶೂಟರ್ ಪಾತ್ರ ನಿರ್ವಹಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ನೇತೃತ್ವದ ಆಡಳಿತದಲ್ಲಿ ಉಂಟಾದ ಬಿಕ್ಕಟ್ಟು ನಿಭಾಯಿಸುವಲ್ಲಿ ಅವರು ಪಾತ್ರ ವಹಿಸಿದ್ದರು. ಹಾಗಾಗಿ ಅವರಿಗೆ ಕರ್ನಾಟಕದ ಸಿಎಂ ಸ್ಥಾನ ಕೊಡುವ ಮೂಲಕ ಆರ್‌ಎಸ್‌ಎಸ್‌ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವ ಸಂಘಪರಿವಾರದ ಬೇಡಿಕೆ ಈಡೇರಿಸಲು ಬಿಜೆಪಿ ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಎರಡನೇ ಆಯ್ಕೆಯಾಗಿ ಪ್ರಹ್ಲಾದ್ ಜೋಶಿ ಇದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಸದ್ಯಕ್ಕೆ ಕೇಂದ್ರ ಮಂತ್ರಿಯಾಗಿರುವ ಅವರು ಕರ್ನಾಟಕ ಸಿಎಂ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಆಡಿಯೋ ನಕಲಿ, ತನಿಖೆಯಾಗಬೇಕು – ಕಟೀಲ್

ಆಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟೀಕರಣ ನೀಡಿರುವ ನಳಿನ್ ಕುಮಾರ್ ಕಟೀಲ್, ಆ ಆಡಿಯೋ ನನ್ನದಲ್ಲ. ನನಗೆ ಕಳಂಕ ತರಲು ನಕಲಿ ಆಡಿಯೋ ಸೃಷ್ಟಿಸಲಾಗಿದೆ. ನನ್ನ ದನಿಯನ್ನು ಅನುಕರಿಸಿ ಯಾರೋ ಆಡಿಯೋ ತಯಾರು ಮಾಡಿದ್ದಾರೆ. ಅದನ್ನು ಕಿಡಿಗೇಡಿಗಳು ವಾಟ್ಸಾಪ್‌ನಲ್ಲಿ ಷೇರ್ ಮಾಡಿ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. ಈ ಕುರಿತು ಸಮಗ್ರ ತನಿಖೆಯಾಗಬೇಕೆಂದು ಅವರು ಆಗ್ರಹಿಸಿದ್ದಾರೆ.

ಇದೇ ಜುಲೈ 26ಕ್ಕೆ ಯಡಿಯೂರಪ್ಪನವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿ 2 ವರ್ಷ ತುಂಬುತ್ತಿದೆ. ಆ ಸಂದರ್ಭದಲ್ಲಿಯೇ ಅವರು ಪದತ್ಯಾಗ ಮಾಡಲಿದ್ದಾರೆ ಎಂಬ ಚರ್ಚೆಗಳ ನಡುವೆ ಈ ಆಡಿಯೋ ವೈರಲ್ ಆಗಿರುವುದು ಕಾಕತಾಳಿಯವೇ? ಅಥವಾ ಉದ್ದೇಶ ಪೂರ್ವಕವೇ? ಈ ಎಲ್ಲಾ ಪ್ರಶ್ನೆಗಳಿಗೆ ಇನ್ನೊಂದು ವಾರದಲ್ಲಿ ಉತ್ತರ ದೊರೆಯಲಿದೆ.


ಇದನ್ನೂ ಓದಿ: ಬಿಜೆಪಿ ಸೇರುತ್ತಿರುವ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌; ಆಪ್ತರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...