Homeಮುಖಪುಟನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ

- Advertisement -
- Advertisement -

ಈ ವಿಡಿಯೋ ನೋಡಿ….
ಸಂದರ್ಶಕರಲ್ಲೊಬ್ಬರು ಕೇಳಿದ ಪ್ರಶ್ನೆ ಮೋದಿ ರೆಫರ್ ಮಾಡುತ್ತಿದ್ದ ಫೋಲ್ಡರಿನ ಒಂದು ಕಾಗದದ ಮೇಲ್ಭಾಗದಲ್ಲಿ ಯಥಾವತ್ತಾಗಿ ಪ್ರಿಂಟಾಗಿತ್ತು! ಅಂದರೆ, ಸಂದರ್ಶನಕ್ಕೂ ಮೊದಲೇ ಪ್ರಶ್ನೆಗಳು ಮೋದಿ ಬಳಿ ಇರುತ್ತವೆ. ಅದಕ್ಕೆ ಅವರು ಉತ್ತರ ರೆಡಿ ಮಾಡಿಕೊಂಡು ಬಂದಿರುತ್ತಾರೆ… ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ…. ಥೂ ಅಸಹ್ಯ…

ಫ್ಯಾಕ್ಟ್ ಚೆಕಿಂಗ್ ಸಂಸ್ಥೆ ಅಲ್ಟ್‍ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾರವರು, ನ್ಯೂ ನೇಷನ್ ಚಾನೆಲ್ ಮೋದಿಯೊಂದಿಗೆ ನಡೆಸಿದ ಸಂದರ್ಶನದ ವಿಡಿಯೋವನ್ನು ಸ್ಲೋ ಡೌನ್ ಮಾಡಿ, ಈ ವಿವರಗಳನ್ನು ತೆರೆದು ಇಟ್ಟಿದ್ದಾರೆ…
ಮೊದಲಿಗೆ , ಪ್ರತೀಕ್ ಸಿನ್ಹಾ ಈ ಕುರಿತಂತೆ ಮಾಡಿರುವ ಈ ಟ್ವೀಟ್‍ಗಳನ್ನು ಓದಿ:

ಪ್ರತೀಕ್ ಟ್ವೀಟ್: ‘ನಿರೂಪಕ (ಸಂದರ್ಶಕ) ದೀಪಕ್ ಚೌರಾಸಿಯಾ ಕೇಳುವ ಒಂದು ಪ್ರಶ್ನೆಯು, ಮೋದಿ ಉತ್ತರಿಸಲು ರೆಫರ್ ಮಾಡುತ್ತಿದ್ದ ಕಾಗದದ ಮೇಲ್ಭಾಗದಲ್ಲಿ ಅಕ್ಷರಶ: ಯಥಾವತ್ತಾಗಿ ಮುದ್ರಣವಾಗಿದೆ….’

ಪ್ರತೀಕ್ ಟ್ವೀಟ್2: ಇಲ್ಲಿರುವ ಸಂದರ್ಶನದ ವಿಡಿಯೊ ( ಸ್ಲೋ ಡೌನ್ ಮಾಡಿದ್ದೇವೆ) ನೋಡಿ… ಮೋದಿ ಉತ್ತರಿಸುವ ಮೊದಲು ತಮ್ಮಲ್ಲಿರುವ ಫೈಲ್‍ನಲ್ಲಿನ ಕಾಗದವೊಂದನ್ನು ನೋಡುತ್ತಿರುವ ದೃಶ್ಯ…

ಈಗ ವಿಷಯಕ್ಕೆ ಬರೋಣ. ಪತ್ರಿಕಾಗೋಷ್ಠಿಯನ್ನೇ ನಡೆಸದ ಪ್ರಧಾನಿ ಎಂಬ ಕುಖ್ಯಾತಿಯ ಪ್ರಧಾನಿ ನರೇಂದ್ರ ಮೋದಿ, ಈ ಚುನಾವಣಾ ಸುಗ್ಗಿಯಲ್ಲಿ ಹಲವು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ಸಂದರ್ಶನ ಕೊಡುತ್ತಲೇ ಇದ್ದಾರೆ. ಈ ಸಂದರ್ಶನಗಳ ಬಗ್ಗೆ ಇರುವ ಒಂದು ಸಾಮಾನ್ಯ ವಿಮರ್ಶೆ ಎಂದರೆ, ಸಂದರ್ಶಕರು ಯಾವುದೇ ‘ಟಫ್’ ಪ್ರಶ್ನೆ ಕೇಳುತ್ತಿಲ್ಲ ಎಂಬುದು…

ಈಗ ಇಲ್ಲಿ ತೋರಿಸುತ್ತಿರುವ ಒಂದು ವಿಡಿಯೋ ಕ್ಲಿಪ್ ಪ್ರಕಾರ, ನ್ಯೂಸ್ ನೇಷನ್ ಟಿವಿಗೆ ಕೊಟ್ಟ ಸಂದರ್ಶನದಲ್ಲಿ, ಇಲ್ಲಿ ಉಲ್ಲೇಖಿಸಿದ ನಿರ್ದಿಷ್ಟ ಪ್ರಶ್ನೆಯನ್ನು ಮೋದಿಗೆ ಸಂದರ್ಶನಕ್ಕೂ ಮೊದಲೇ ಕೊಡಲಾಗಿತ್ತು! ಅಲ್ಟ್‍ನ್ಯೂಸ್‍ನ ಪ್ರತೀಕ್ ಸಿನ್ಹಾ ಈ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಮೋದಿಗೆ ಮೊದಲೇ ಪ್ರಶ್ನೆಗಳನ್ನು ಕಳಿಸಿ ಕೊಟ್ಟು ಸಂದರ್ಶನ ಮಾಡಲಾಗುತ್ತಿದೆ ಎಂಬುದರ ಎಳೆಯನ್ನು ನಮ್ಮ ಮುಂದೆ ಇಟ್ಟಿದ್ದಾರೆ.

ಸಂದರ್ಶನದಲ್ಲಿ ನಿರೂಪಕ ದೀಪಕ್ ಚೌರಾಸಿಯಾ, ‘ಇತ್ತೀಚಿನ ವರ್ಷಗಳಲ್ಲಿ ತಾವು ಯಾವುದಾದರೂ ಕವನ ಬರೆದಿದ್ದೀರಾ?’ ಎಂದು ಮೋದಿಗೆ ಪ್ರಶ್ನಿಸುತ್ತಾರೆ. ಮೋದಿ ತಮ್ಮ ಫೈಲ್‍ನಲ್ಲಿ ‘ತಮ್ಮ’ ಕವನದ ಪೇಜ್ ತೆಗೆದಾಗ, ಅದರ ಮೇಲ್ಭಾಗದಲ್ಲಿ ಚೌರಾಸಿಯಾ ಪ್ರಶ್ನೆ ಯಥಾವತ್ ಮುದ್ರಣವಾಗಿದ್ದನ್ನು ಈ ವಿಡಿಯೋ ತುಣುಕು ತೋರಿಸುತ್ತದೆ…

ನಿರೂಪಕ ಇತ್ತೀಚೆಗೆ ಬರೆದ ಒಂದು ಕವಿತೆಯನ್ನು ವಾಚಿಸಿ ಎಂದಾಗ, ಮೋದಿ ತಮ್ಮ ಫೈಲ್ ಪಡೆದು ಕವಿತೆ (ಮುದ್ರಿತ) ಇರುವ ಪೇಜ್ ತೆಗೆಯುತ್ತಾರೆ… ಇಲ್ಲೇ ಇರುವುದು ರಹಸ್ಯ! ಆಪೇಜ್‍ನ ಮೇಲ್ಭಾಗದಲ್ಲಿ ನಿರೂಪಕ ಕೇಳಿದ ಪ್ರಶ್ನೆ ಡಿಟ್ಟೋ ಪ್ರಿಂಟ್ ಆಗಿದೆ!
ಈ ಸಂದರ್ಶನ ಈಗಾಗಲೇ ಸಾಕಷ್ಟು ತಮಾಷೆಗೆ ಒಳಗಾಗಿದೆ. ಬಾಲಾಕೋಟ್ ದಾಳಿಯ ದಿನದಂದು, ‘ಮೋಡಗಳಿರುವುದರಿಂದ ಪಾಕಿಸ್ತಾನದ ರೆಡಾರ್‍ಗಳಿಗೆ ನಮ್ಮ ವಿಮಾನಗಳನ್ನು ಗುರುತಿಸಲಾಗದು, ಇದೇ ಸುಸಂದರ್ಭ…ಬೇಗನೇ ದಾಳಿ ಆರಂಭಿಸಿ’ ಎಂದು ಸೇನೆಯ ಉನ್ನತ ಅಧಿಕಾರಿಗಳಿಗೆ ತಾನು ಹೇಳಿದ್ದೆ, ಅದರಿಂದ ಕಾರ್ಯಾಚರಣೆ ಶುರುವಾಗಿತು ಎಂದು ಮೋದಿ ಹೇಳಿದ್ದನ್ನು ಜಗತ್ತೇ ಜೋಕ್ ತರಹ ನೋಡುತ್ತಿದೆ.

ಡಿಜಿಟಲ್ ಕ್ಯಾಮೆರಾ, ಇಮೇಲ್ ಮತ್ತು ಪರ್ಸ್‍ಲೆಸ್ ಮೋದಿ

ಅದೇ ಸಂದರ್ಶನದಲ್ಲೇ ಮೋದಿಯವರು 1987-89 ರಲ್ಲೇ ಡಿಜಿಟಲ್ ಕ್ಯಾಮೆರದಲ್ಲಿ ಫೋಟೊ ತೆಗೆದು ದೆಹಲಿಗೆ ಮೇಲ್ ಮಾಡಿದ್ದೆ ಎಂದು ಬೂಸಿ ಬಿಟ್ಟಿದ್ದಾರೆ. ಆಗ ಡಿಜಿಟಲ್ ಕ್ಯಾಮೆರಾವಾಗಲಿ, ಇಮೇಲ್ ಆಗಲಿ ಇರಲಿಲ್ಲ, ಮೋದಿ ಇನ್ನೊಂದು ಸುಳ್ಳು ಹೇಳಿದ್ದಾರೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ವ್ಯಾಪಕ ಟ್ರೋಲ್ ಗೆ ಒಳಗಾಗಿದೆ.

1997-98 ಎನ್ನುವ ಬದಲು ಮೋದೀಜಿ 1987-88 ಎಂದು ಬಾಯ್ತಪ್ಪಿ ಹೇಳಿದ್ದಾರೇನೋ ಎಂದು ಅವರ ಭಕ್ತರು ಈಗ ಸಬೂಬು ಕೊಡ್ತಾ ಇದ್ದಾರೆ. ಅಲ್ರಿ, ರೆಡಿಮೇಡ್ ಪ್ರಶ್ನೆ, ರೆಡಿಮೇಡ್ ಉತ್ತರದಲ್ಲೂ ಈ ರೀತಿ ಬಾಯ್ತಪ್ಪಿ ಹೇಳ್ತಾರಾ? ಇದು ಇನ್ನಷ್ಟು ಮೂರ್ಖತನದ ಸ್ಯಾಂಪಲ್ಲು, ಅದಕ್ಕಿಂತ ಹೆಚ್ಚಾಗಿ ಸುಳ್ಳನ ಎಡವಟ್ಟು!

ಆಯ್ತು ಅದು ಸರಿ ಎಂದಿಟ್ಟುಕಳ್ಳೋಣ….ಅದೇ ಸಂದರ್ಶನದಲ್ಲಿ ಆ ಸಂದರ್ಭದಲ್ಲಿ ತಮಗೆ ಒಂದು ಪರ್ಸ್ ಖರೀದಿಸುವಷ್ಟೂ ಕಾಸು ಇರಲಿಲ್ಲ ಎಂದಿದ್ದಾರೆ. ಆದರೆ 1995ರ ಸುಮಾರಿಗೆ ಒಂದು ಡಿಜಿಟಲ್ ಕ್ಯಾಮೆರಾದ ದರ 5 ಸಾವಿರ ರೂ.ಗಿಂತ ಹೆಚ್ಚಿತ್ತು. 1995ರಲ್ಲಿ ವಿಎಸ್‍ಎನ್‍ಎಲ್‍ನಿಂದ ಒಂದು ಶೆಲ್ ಇಮೇಲ್ ಅಕೌಂಟ್ ಪಡೆಯಲು ವಾರ್ಷಿಕ 5 ಸಾವಿರ ರೂ ಮೇಲೆ ಹಣ ನೀಡಬೇಕಿತ್ತು…ಆಗ ಟಿಸಿಪಿ/ಐಪಿ ಅಥವಾ ಡಿಜಿಟಲ್ ಅಕೌಂಟಿಗೆ ವಾರ್ಷಿಕ 15 ಸಾವರಿದಷ್ಟು ಫೀಸ್ ತೆರಬೇಕಿತ್ತು… ವಿಎಸ್‍ಎನ್‍ಎಲ್‍ಗೂ ಮೊದಲು 1990ರ ದಶಕದ ಮಧ್ಯಭಾದಲ್ಲಿ ‘ಅಕ್ಸೆಸ್ ಮೇಲ್’ ಇಮೇಲ್ ಸೇವೆ ಕೊಡುತ್ತಿತ್ತಾದರೂ, ಅದು ಕೆಲವೇ ಬುಲೆಟಿನ್ ಬೋರ್ಡ್ ಸೇವೆಗಳನ್ನು ಒಳಗೊಂಡಿತ್ತು…
ಸಾರಾಂಶ: ಒಂದು ಸುಳ್ಳು, ಅದರ ಹಿಂದೊಂದು ಸುಳ್ಳು…. ಮೋದಿ ಸಮರ್ಥಿಸಿಕೊಳ್ಳಲು ಹೋದವರೇ ನಾಚಿಕೆ ಪಡಬೇಕಾದ ಸ್ಥಿತಿ!

ಅಂದರೆ, ತಮಗೆ ಬೇಕಾದ ಮಾಧ್ಯಮಗಳಿಗೆ ಸಂದರ್ಶನ ನೀಡುವ ಡೇರ್‍ಡೆವಿಲ್ ಮೋದಿ, ಮೊದಲೇ ಸಂದರ್ಶಕರಿಂದ ಪ್ರಶ್ನೆ ಪಡೆದಿರುತ್ತಾರೆ. ಅಲ್ಲಿ ಯಾವ ಕಠಿಣ ಪ್ರಶ್ನೆಗಳೂ ಇರುವುದಿಲ್ಲ. ಮೋದಿ ಬಯಸಿದ ಪ್ರಶ್ನೆಗಳೇ ಇರುತ್ತವೆ. ಅದಕ್ಕ ಮೋದಿ ಉತ್ತರಗಳನ್ನು ಸಿದ್ಧ ಮಾಡಿಕೊಡು ಬಂದಿರುತ್ತಾರೆ!

ಇದು ಪಕೋಡಾ ಪ್ರಧಾನಿ ಪೇಯ್ಡ್ ಮೀಡಿಯಾಕ್ಕೆ ಪೇಪ್ಪರಮೆಂಟು ತಿನ್ನಿಸುವ, ಪೇಯ್ಡ್ ಮೀಡಿಯಾ ವೀಕ್ಷಕರು/ಓದುಗರನ್ನು ವಂಚಿಸುವ ಪರಿ… ಕಳೆದ 5 ವರ್ಷಗಳಿಂದ ಇದೇ ನಡೆದಿದೆ ಅಲ್ಲವೇ?
ಪೂರ್ಣ ಸಂದರ್ಶನಕ್ಕಾಗಿ ಈ ಕೆಳಗಿನ ವಿಡಿಯೋ ನೋಡಿ:

(ಆಧಾರ: thescroll.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...