Homeಮುಖಪುಟಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

ಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

- Advertisement -
- Advertisement -

‘ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಈಗಾಗಲೆ ಹ್ಯಾಕ್ ಮಾಡಲಾಗಿರುವ ಕೆಲವು ಪತ್ರಕರ್ತರ ಹೆಸರನ್ನು ವರದಿಯು ಬಿಡುಗಡೆ ಮಾಡಿದೆ. ಜೊತೆಗೆ ಪೆಗಾಸಸ್‌ ಹ್ಯಾಕ್‌ ಮಾಡಿರುವ ನ್ಯಾಯಾಧೀಶರ ಮತ್ತು ಇತರ ಹೆಸರುಗಳು ಶೀಘ್ರವೇ ಬಿಡುಗಡೆಯಾಗಲಿದೆ ಎಂದು ‘ದಿ ವೈರ್‌’ ಸುದ್ದಿ ಸಂಸ್ಥೆಯ ಸಂಪಾದಕ ಎಂಕೆ ವೇಣು ಸೋಮವಾರ ಹೇಳಿದ್ದಾರೆ.

ವಿಶ್ವದಾದ್ಯಂತ 50,000 ಫೋನ್‌ಗಳನ್ನು ಪೆಗಾಸಸ್‌‌ ತಂತ್ರಾಂಶವು ಟ್ಯಾಪ್‌ ಮಾಡಿದೆ ಎನ್ನಲಾಗಿದ್ದು, ತನಿಖಾ ವರದಿಗೆ ‘ಪೆಗಾಸಸ್‌ ಪ್ರಾಜೆಕ್ಟ್‌’ ಎಂದು ಕರೆಯಲಾಗಿದೆ. ತನಿಖಾ ವರದಿಯನ್ನು ಪ್ಯಾರಿಸ್‌ ಮೂಲದ ಲಾಭರಹಿತ ಮಾಧ್ಯಮ ಸಂಸ್ಥೆ ‘ಫಾರ್ಬಿಡೆನ್‌ ಸ್ಟೋರಿಸ್‌’, ಅಮ್ನೆಸ್ಟಿ ಇಂಟರ್‌ನ್ಯಾಷನಲ್‌, ಲೆ ಮಾಂಡೆ, ದಿ ಗಾರ್ಡಿಯನ್‌, ವಾಷಿಂಗ್ಟನ್‌ ಪೋಸ್ಟ್‌ ಸೇರಿದಂತೆ ಒಟ್ಟು 16 ಮೆಕ್ಸಿಕನ್‌, ಅರಬ್‌ ಮತ್ತು ಯುರೋಪಿನ ಸುದ್ದಿ ಸಂಸ್ಥೆಗಳು ಜಂಟಿಯಾಗಿ ನಡೆಸಿದೆ. ಈ ಜಂಟಿ ತನಿಖೆಯಲ್ಲಿ ಭಾರತದ ಆನ್‌ಲೈನ್‌ ಸುದ್ದಿ ಸಂಸ್ಥೆ ದಿ ವೈರ್‌ ಕೂಡಾ ಸೇರಿದೆ.

ಇದನ್ನೂ ಓದಿ: ಅವರು ಏನನ್ನು ಓದುತ್ತಿದ್ದಾರೆ ಎಂದು ನಮಗೆ ಗೊತ್ತು!: ‘ಪೆಗಾಸಸ್‌ ಪ್ರಾಜೆಕ್ಟ್‌’ಗೆ ರಾಹುಲ್ ಗಾಂಧಿ

‘ಪೆಗಾಸಸ್’ ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಗೂಢಚರ್ಯೆ ತಂತ್ರಾಂಶವಾಗಿದೆ. ಈ ತಂತ್ರಾಂಶವನ್ನು ಪರವಾನಗಿ ಪಡೆದಿರುವ ಅಧಿಕೃತ ಸರಕಾರಿ ಏಜೆನ್ಸಿಗಳಿಗೆ ಅಥವಾ ಗುಪ್ತಚರ ಸಂಸ್ಥೆಗಳಿಗೆ ಮಾತ್ರವೇ ಮಾರುತ್ತೇವೆ ಎಂದು ಎನ್‌ಎಸ್‌ಒ ಹೇಳಿತ್ತು. ಪೆಗಾಸಸ್ ತಂತ್ರಾಂಗಳನ್ನು ಬಳಸಿಕೊಂಡು ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು 2019 ರಲ್ಲಿ ಕೂಡಾ ವರದಿಯಾಗಿತ್ತು.

ತಮ್ಮ ತನಿಖಾ ವರದಿಯ ಬಗ್ಗೆ ಎನ್‌ಡಿಟಿವಿ ಜೊತೆ ಮಾತನಾಡಿದ ದಿವೈರ್‌ ಸಂಸ್ಥಾಪಕ ಸಂಪಾದಕ ಎಂಕೆ ವೇಣು, “ಪೆಗಾಸಸ್ ಹ್ಯಾಕ್ ಮಾಡಿರುವ ನ್ಯಾಯಾಧೀಶರ ಮತ್ತು ಇತರರ ಹೆಸರನ್ನು ಶೀಘ್ರವೇ ಬಹಿರಂಗಪಡಿಸಲಾಗುವುದು. ಇದು 2019 ರಲ್ಲಿ ಬಿಡುಗಡೆಯಾದ ಪಟ್ಟಿಗಿಂತ ಉದ್ದವಾಗಿದೆ. ಈ ಜನರನ್ನು ಕಣ್ಗಾವಲು ಯಾಕೆ ಮಾಡುತ್ತಿದ್ದೇವೆ ಎಂದು ಸರ್ಕಾರ ವಿವರಿಸಬೇಕು” ಎಂದು ಹೇಳಿದ್ದಾರೆ.

ಆದರೆ ಒಕ್ಕೂಟ ಸರ್ಕಾವು, ತನಿಖಾ ವರದಿಯನ್ನು ನಿರಾಕರಿಸಿದ್ದು, ನಿರ್ದಿಷ್ಟ ಜನರ ಮೇಲೆ ಸರ್ಕಾರ ಕಣ್ಗಾವಲು ಇಟ್ಟಿದೆ ಎಂಬುವುದಕ್ಕೆ ಯಾವುದೇ ದೃಡವಾದ ಆಧಾರವಿಲ್ಲ ಎಂದು ಹೇಳಿದೆ.

ತನಿಖಾ ವರದಿಯಲ್ಲಿ, ನರೇಂದ್ರ ಮೋದಿ ಸರ್ಕಾರದ ಇಬ್ಬರು ಸಚಿವರು, ಮೂವರು ವಿರೋಧ ಪಕ್ಷದ ನಾಯಕರು, ಒಬ್ಬ ನ್ಯಾಯಾಂಗದ ವ್ಯಕ್ತಿ, 40 ಪತ್ರಕರ್ತರು, ವಿಜ್ಞಾನಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವು ಉದ್ಯಮಿಗಳ ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

2019 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ನರೇಂದ್ರ ಮೋದಿ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂತ್ರಿಗಳು ಸೇರಿದಂತೆ 2018 ಮತ್ತು 2019 ರ ನಡುವೆ ಹೆಚ್ಚಿನ ಜನರನ್ನು ಗುರಿಯಾಗಿಸಲಾಗಿತ್ತು ಎಂದು ದಿ ವೈರ್‌ ವರದಿ ಹೇಳಿದೆ.

ಇಷ್ಟೇ ಅಲ್ಲದೆ, ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿಗಳಾದ 12 ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದ್ದು ಅವರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ತನಿಖಾ ವರದಿಯು ಹೇಳಿದೆ. ವರದಿಯು ‘ಜಾಗತಿಕ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿದೆ.

ಫೋನ್‌ ಹ್ಯಾಕ್ ಮಾಡಲಾಗಿರುವ ಭಾರತೀಯ ಪತ್ರಕರ್ತರಲ್ಲಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್‌, ಶಿಶಿರ್‌ ಗುಪ್ತಾ, ರಿತಿಕಾ ಚೋಪ್ರಾ, ಪ್ರಶಾಂತ್‌ ಝಾ, ಪ್ರೇಮ್‌ ಶಂಕರ್‌ ಝಾ, ಸ್ವಾತಿ ಚತುರ್ವೇದಿ, ರಾಹುಲ್‌ ಸಿಂಗ್‌, ಮುಜಮ್ಮಿಲ್‌ ಜಲೀಲ್‌, ಇಫ್ತಿಕಾರ್‌ ಗೀಲಾನಿ, ಸಂದೀಪ್‌ ಉನ್ನಿತಾನ್‌, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ.ವೇಣು ಮುಂತಾದವರು ಸೇರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಗಿಸಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...