Homeಮುಖಪುಟಅವಳ ಹಸಿವನ್ನು ಹಂಗಿಸಿದ ನಿಮಗೆ ನನ್ನ ಧಿಕ್ಕಾರ....!!

ಅವಳ ಹಸಿವನ್ನು ಹಂಗಿಸಿದ ನಿಮಗೆ ನನ್ನ ಧಿಕ್ಕಾರ….!!

ನೀವು ವ್ಯಂಗ್ಯ ಮಾಡಿದ್ದು ಅವಳನ್ನಲ್ಲ.. ಅವಳು ಪ್ರತಿನಿಧಿಸಿದ ಅಸಹಾಯಕ ದುಡಿವ ವರ್ಗವನ್ನು, ಅವಳ ಮಾತುಗಳು ಪ್ರತಿನಿಧಿಸಿದ ಹಸಿವಿನ ಬಲಿಪಶುಗಳನ್ನು...

- Advertisement -
- Advertisement -

ಏನಿಲ್ಲ ಸಾರ್…
ಬರೀ Dolo 650.. ಕೊರೋನಾದವರಿಗೆ ಅದೇ ಸಾರ್….. ಹೀಗೆಂದು ತಿಂಗಳಿಂದೆ ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿ ಮಾಧ್ಯಮದ ಮುಂದೆ ಬೋಲ್ಡ್ ಆಗಿ ಮಾತನಾಡಿದ ಆ ಹದಿ ಹರೆಯದ ಸಹೋದರಿಯ ಮಾತುಗಳು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಗೇಲಿಗೊಳಗಾಗುತ್ತಿವೆ.. ಆಕೆಯ ಮಾತುಗಳಿಗೆ ಮ್ಯೂಸಿಕ್ ಹಾಕಿ ರಿಮಿಕ್ಸ್ ಸಂಗೀತದಂತೆ ಮತ್ತೆ ವೈರಲ್ ಮಾಡಲಾಗುತ್ತಿದೆ..

ದುಡಿವ ಕೈಗಳಿಗೆ ಉದ್ಯೋಗವಿಲ್ಲದ್ದರ ಬಗ್ಗೆ, ಹಸಿದ ಹೊಟ್ಟೆಗಳಿಗೆ ಅನ್ನವಿಲ್ಲದ್ದರ ಬಗ್ಗೆ, ನಾಡ ಜನತೆಯ ಬೇನೆಗೆ ಸೂಕ್ತ ಔಷಧಿ ನೀಡಲಾಗದ ಷಂಡ ಪ್ರಭುತ್ವದ ವಿರುದ್ಧ ಆಕೆ ಮಾತನಾಡಿದ್ದಾಳೆ. ಆಕೆಗೆ ನಿಮ್ಮಂತಹ ಟಾಕು, ಟೀಕಿನ ಇಂಗ್ಲಿಷ್ ಮಿಶ್ರಿತ ಕನ್ನಡವನ್ನು ವಯ್ಯಾರದಿಂದ ಮಾತನಾಡಲು ಬಾರದಿರಬಹುದು. ಆಕೆ ತನ್ನ ಆಡುಭಾಷೆಯಲ್ಲೇ ಪ್ರಭುತ್ವದ ಕ್ರೌರ್ಯವನ್ನು ಪ್ರಶ್ನೆ ಮಾಡಿದ್ದಾಳೆ. ಆ ಮೂಲಕ ಆಕೆ ಸಮಸ್ತ ಅಸಹಾಯಕ ಕನ್ನಡಿಗರ ನೋವಿಗೆ ಧ್ವನಿಯಾಗಿದ್ದಾಳೆ.

ಆಕೆ ಆ ರೀತಿ ತನ್ನದೇ ದಾಟಿಯಲ್ಲಿ ತನ್ನ ಸಿಟ್ಟನ್ನು, ತನ್ನ ಅಸಹಾಯಕತೆಯನ್ನು ಮಾಧ್ಯಮಗಳ ಮುಂದೆ ಹೊರಗೆಡಹಿದ್ದಾಳೆ.. ನೀವು ಗೇಲಿ ಮಾಡಬೇಕಿದ್ದು ನನ್ನ ಆ ಸಹೋದರಿಯ ಗ್ರಾಮ್ಯ ಭಾಷೆಯನ್ನಲ್ಲ, ಅವಳ ಆಂಗಿಕ ಚಲನೆಯನ್ನಲ್ಲ… ಯಾವ ಪ್ರಭುತ್ವ, ಯಾವ ವ್ಯವಸ್ಥೆ ಆಕೆಯನ್ನು ಅಂತಹ ಮಾತುಗಳನ್ನಾಡಲು ಅಸಹಾಯಕಳಾಗಿಸಿತೋ ಆ ಪ್ರಭುತ್ವ , ಆ ವ್ಯವಸ್ಥೆಯನ್ನು ನೀವು ಗೇಲಿ ಮಾಡಬೇಕಿತ್ತು.

ಓರ್ವ ದುಷ್ಟ ರಾಜಕಾರಣಿಯನ್ನು ಗೇಲಿ ಮಾಡುವಂತೆ ನೀವು ಆ ಅಸಹಾಯಕ ಹೆಣ್ಮಗಳನ್ನು ಗೇಲಿ ಮಾಡುತ್ತಿದ್ದೀರಿ.. ಅದನ್ನು ಪ್ರಶ್ನಿಸಿದರೆ ಆಕೆಗೆ ಒಳ್ಳೆಯ ಪ್ರಚಾರ ಸಿಕ್ಕಿತಲ್ಲಾ ಎಂದು ಮತ್ತೆ ವ್ಯಂಗ್ಯವಾಡುತ್ತಿದ್ದೀರಿ.. ಆಕೆಯ ಪರವಾಗಿ ಧ್ವನಿಯೆತ್ತಲು ನ್ಯಾಯಾಂಗದಲ್ಲೋ, ಕಾರ್ಯಾಂಗದಲ್ಲೋ, ಶಾಸಕಾಂಗದಲ್ಲೋ ಯಾರೂ ಇಲ್ಲ ಎಂಬುವುದು ನಿಮ್ಮ ಈ ಧೈರ್ಯಕ್ಕೆ ಕಾರಣವಾಗಿದ್ದರೆ ಅವಳ ಪರವಾಗಿ ಧ್ವನಿಯೆತ್ತಲು ಮಾನವೀಯ ಸಂವೇದನೆಯಿರುವ ನಾವಿದ್ದೇವೆ.

ನೀವು ವ್ಯಂಗ್ಯ ಮಾಡಿದ್ದು ಅವಳನ್ನಲ್ಲ.. ನೀವು ವ್ಯಂಗ್ಯ ಮಾಡಿದ್ದು ಅವಳು ಪ್ರತಿನಿಧಿಸಿದ ಅಸಹಾಯಕ ದುಡಿವ ವರ್ಗವನ್ನು, ಅವಳ ಮಾತುಗಳು ಪ್ರತಿನಿಧಿಸಿದ ಹಸಿವಿನ ಬಲಿಪಶುಗಳನ್ನು…

ಹೃದಯ ಸತ್ತ ನಿಮ್ಮಂತವರ ದಾರ್ಷ್ಟ್ಯಕ್ಕೆ ನನ್ನದೊಂದು ಧಿಕ್ಕಾರ…

ಇಸ್ಮತ್ ಪಜೀರ್


ಇದನ್ನೂ ಓದಿ; ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾರಪ್ಪ ಹಂಗಿಸಿದ್ದು. ಅದು ಮೈಸೂರು ಭಾಗದ ಭಾಷೆ, ಉತ್ತರ ಕರ್ನಾಟಕದ್ದಲ್ಲ. ವೈರಲ್ ಆಗಿರುವುದು ಆ ಹುಡುಗಿಯ ಮಾತಿನ ಲಾಲಿತ್ಯದಿಂದ, ವೈರಲ್ ಮಾಡಿದವರಾರೂ ಅವರನ್ನು ಆಡಿಕೊಂಡಿಲ್ಲ. ಮೆಚ್ಚುಗೆಯಿಂದ ವಿವಿಧ ರೀತಿಯಲ್ಲಿ ತೋರಿಸಿದ್ದಾರೆ. ಕೊಳಕು ಮನಸ್ಸಿನ, ನಕಾರಾತ್ಮಕ‌ ಧೋರಣೆಯ, ಜನರ ಕಷ್ಟವನ್ನೆ ಬಂಡವಾಳ ಮಾಡಿಕೊಂಡು ಹೊಟ್ಟೆ ಹೊರೆಯುವ ನಿಮ್ಮಂತವರಷ್ಟೆ ಅವರ ವಿಡಿಯೊಗಳನ್ನು ಸಹ ಹೊಟ್ಟೆಪಾಡಿಗೆ ಬಳಸಿಕೊಂಡು ಈ ರೀತಿ ಪೋಸ್ಟ್ ಮಾಡಿರುವುದು

  2. ಆಹಾ… ಇವನ ಪ್ರೀತಿ ನೋಡ…
    ಹಸಿವಿನ ಕಾಠಿಣ್ಯವರಿಯದ ನಿನ್ನಂತವರಿಗೆ ಭಾಷೆಯ ಲಾಲಿತ್ಯವನ್ನು ಕೊಂಡಾಡಿದಂತೆ ಕಾಣುತ್ತೆ ಬಿಡು..

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...