Homeಮುಖಪುಟಅವಳ ಹಸಿವನ್ನು ಹಂಗಿಸಿದ ನಿಮಗೆ ನನ್ನ ಧಿಕ್ಕಾರ....!!

ಅವಳ ಹಸಿವನ್ನು ಹಂಗಿಸಿದ ನಿಮಗೆ ನನ್ನ ಧಿಕ್ಕಾರ….!!

ನೀವು ವ್ಯಂಗ್ಯ ಮಾಡಿದ್ದು ಅವಳನ್ನಲ್ಲ.. ಅವಳು ಪ್ರತಿನಿಧಿಸಿದ ಅಸಹಾಯಕ ದುಡಿವ ವರ್ಗವನ್ನು, ಅವಳ ಮಾತುಗಳು ಪ್ರತಿನಿಧಿಸಿದ ಹಸಿವಿನ ಬಲಿಪಶುಗಳನ್ನು...

- Advertisement -
- Advertisement -

ಏನಿಲ್ಲ ಸಾರ್…
ಬರೀ Dolo 650.. ಕೊರೋನಾದವರಿಗೆ ಅದೇ ಸಾರ್….. ಹೀಗೆಂದು ತಿಂಗಳಿಂದೆ ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿ ಮಾಧ್ಯಮದ ಮುಂದೆ ಬೋಲ್ಡ್ ಆಗಿ ಮಾತನಾಡಿದ ಆ ಹದಿ ಹರೆಯದ ಸಹೋದರಿಯ ಮಾತುಗಳು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಗೇಲಿಗೊಳಗಾಗುತ್ತಿವೆ.. ಆಕೆಯ ಮಾತುಗಳಿಗೆ ಮ್ಯೂಸಿಕ್ ಹಾಕಿ ರಿಮಿಕ್ಸ್ ಸಂಗೀತದಂತೆ ಮತ್ತೆ ವೈರಲ್ ಮಾಡಲಾಗುತ್ತಿದೆ..

ದುಡಿವ ಕೈಗಳಿಗೆ ಉದ್ಯೋಗವಿಲ್ಲದ್ದರ ಬಗ್ಗೆ, ಹಸಿದ ಹೊಟ್ಟೆಗಳಿಗೆ ಅನ್ನವಿಲ್ಲದ್ದರ ಬಗ್ಗೆ, ನಾಡ ಜನತೆಯ ಬೇನೆಗೆ ಸೂಕ್ತ ಔಷಧಿ ನೀಡಲಾಗದ ಷಂಡ ಪ್ರಭುತ್ವದ ವಿರುದ್ಧ ಆಕೆ ಮಾತನಾಡಿದ್ದಾಳೆ. ಆಕೆಗೆ ನಿಮ್ಮಂತಹ ಟಾಕು, ಟೀಕಿನ ಇಂಗ್ಲಿಷ್ ಮಿಶ್ರಿತ ಕನ್ನಡವನ್ನು ವಯ್ಯಾರದಿಂದ ಮಾತನಾಡಲು ಬಾರದಿರಬಹುದು. ಆಕೆ ತನ್ನ ಆಡುಭಾಷೆಯಲ್ಲೇ ಪ್ರಭುತ್ವದ ಕ್ರೌರ್ಯವನ್ನು ಪ್ರಶ್ನೆ ಮಾಡಿದ್ದಾಳೆ. ಆ ಮೂಲಕ ಆಕೆ ಸಮಸ್ತ ಅಸಹಾಯಕ ಕನ್ನಡಿಗರ ನೋವಿಗೆ ಧ್ವನಿಯಾಗಿದ್ದಾಳೆ.

ಆಕೆ ಆ ರೀತಿ ತನ್ನದೇ ದಾಟಿಯಲ್ಲಿ ತನ್ನ ಸಿಟ್ಟನ್ನು, ತನ್ನ ಅಸಹಾಯಕತೆಯನ್ನು ಮಾಧ್ಯಮಗಳ ಮುಂದೆ ಹೊರಗೆಡಹಿದ್ದಾಳೆ.. ನೀವು ಗೇಲಿ ಮಾಡಬೇಕಿದ್ದು ನನ್ನ ಆ ಸಹೋದರಿಯ ಗ್ರಾಮ್ಯ ಭಾಷೆಯನ್ನಲ್ಲ, ಅವಳ ಆಂಗಿಕ ಚಲನೆಯನ್ನಲ್ಲ… ಯಾವ ಪ್ರಭುತ್ವ, ಯಾವ ವ್ಯವಸ್ಥೆ ಆಕೆಯನ್ನು ಅಂತಹ ಮಾತುಗಳನ್ನಾಡಲು ಅಸಹಾಯಕಳಾಗಿಸಿತೋ ಆ ಪ್ರಭುತ್ವ , ಆ ವ್ಯವಸ್ಥೆಯನ್ನು ನೀವು ಗೇಲಿ ಮಾಡಬೇಕಿತ್ತು.

ಓರ್ವ ದುಷ್ಟ ರಾಜಕಾರಣಿಯನ್ನು ಗೇಲಿ ಮಾಡುವಂತೆ ನೀವು ಆ ಅಸಹಾಯಕ ಹೆಣ್ಮಗಳನ್ನು ಗೇಲಿ ಮಾಡುತ್ತಿದ್ದೀರಿ.. ಅದನ್ನು ಪ್ರಶ್ನಿಸಿದರೆ ಆಕೆಗೆ ಒಳ್ಳೆಯ ಪ್ರಚಾರ ಸಿಕ್ಕಿತಲ್ಲಾ ಎಂದು ಮತ್ತೆ ವ್ಯಂಗ್ಯವಾಡುತ್ತಿದ್ದೀರಿ.. ಆಕೆಯ ಪರವಾಗಿ ಧ್ವನಿಯೆತ್ತಲು ನ್ಯಾಯಾಂಗದಲ್ಲೋ, ಕಾರ್ಯಾಂಗದಲ್ಲೋ, ಶಾಸಕಾಂಗದಲ್ಲೋ ಯಾರೂ ಇಲ್ಲ ಎಂಬುವುದು ನಿಮ್ಮ ಈ ಧೈರ್ಯಕ್ಕೆ ಕಾರಣವಾಗಿದ್ದರೆ ಅವಳ ಪರವಾಗಿ ಧ್ವನಿಯೆತ್ತಲು ಮಾನವೀಯ ಸಂವೇದನೆಯಿರುವ ನಾವಿದ್ದೇವೆ.

ನೀವು ವ್ಯಂಗ್ಯ ಮಾಡಿದ್ದು ಅವಳನ್ನಲ್ಲ.. ನೀವು ವ್ಯಂಗ್ಯ ಮಾಡಿದ್ದು ಅವಳು ಪ್ರತಿನಿಧಿಸಿದ ಅಸಹಾಯಕ ದುಡಿವ ವರ್ಗವನ್ನು, ಅವಳ ಮಾತುಗಳು ಪ್ರತಿನಿಧಿಸಿದ ಹಸಿವಿನ ಬಲಿಪಶುಗಳನ್ನು…

ಹೃದಯ ಸತ್ತ ನಿಮ್ಮಂತವರ ದಾರ್ಷ್ಟ್ಯಕ್ಕೆ ನನ್ನದೊಂದು ಧಿಕ್ಕಾರ…

ಇಸ್ಮತ್ ಪಜೀರ್


ಇದನ್ನೂ ಓದಿ; ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾರಪ್ಪ ಹಂಗಿಸಿದ್ದು. ಅದು ಮೈಸೂರು ಭಾಗದ ಭಾಷೆ, ಉತ್ತರ ಕರ್ನಾಟಕದ್ದಲ್ಲ. ವೈರಲ್ ಆಗಿರುವುದು ಆ ಹುಡುಗಿಯ ಮಾತಿನ ಲಾಲಿತ್ಯದಿಂದ, ವೈರಲ್ ಮಾಡಿದವರಾರೂ ಅವರನ್ನು ಆಡಿಕೊಂಡಿಲ್ಲ. ಮೆಚ್ಚುಗೆಯಿಂದ ವಿವಿಧ ರೀತಿಯಲ್ಲಿ ತೋರಿಸಿದ್ದಾರೆ. ಕೊಳಕು ಮನಸ್ಸಿನ, ನಕಾರಾತ್ಮಕ‌ ಧೋರಣೆಯ, ಜನರ ಕಷ್ಟವನ್ನೆ ಬಂಡವಾಳ ಮಾಡಿಕೊಂಡು ಹೊಟ್ಟೆ ಹೊರೆಯುವ ನಿಮ್ಮಂತವರಷ್ಟೆ ಅವರ ವಿಡಿಯೊಗಳನ್ನು ಸಹ ಹೊಟ್ಟೆಪಾಡಿಗೆ ಬಳಸಿಕೊಂಡು ಈ ರೀತಿ ಪೋಸ್ಟ್ ಮಾಡಿರುವುದು

  2. ಆಹಾ… ಇವನ ಪ್ರೀತಿ ನೋಡ…
    ಹಸಿವಿನ ಕಾಠಿಣ್ಯವರಿಯದ ನಿನ್ನಂತವರಿಗೆ ಭಾಷೆಯ ಲಾಲಿತ್ಯವನ್ನು ಕೊಂಡಾಡಿದಂತೆ ಕಾಣುತ್ತೆ ಬಿಡು..

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...