Homeಚಳವಳಿಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಮರ್ಯಾದೆ ಹೀನ ಹತ್ಯೆ, ದಲಿತ- ದಮನಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಡಿದೆದ್ದ ಕೊಪ್ಪಳ ಚಲೋ ಹೋರಾಟ..

- Advertisement -
- Advertisement -

ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ನಡೆದ ಮಾರ್ಯಾದೆಗೇಡು ಹತ್ಯೆಗೆ ದಾನಪ್ಪ ಮಾತ್ರ ಸತ್ತಿಲ್ಲ, ನಾವೆಲ್ಲರೂ ಸತ್ತಿದ್ದೇವೆ, ಈ ದೇಶದ ಕಾನೂನು ಸತ್ತಿದೆ. ಈ ದೇಶದಲ್ಲಿ ಮನುವಾದಿಗಳಿಂದ ಪ್ರತಿದಿನವೂ ಅಂಬೇಡ್ಕರ್ ಬರೆದಿಟ್ಟ ಸಂವಿಧಾನ ಕೊಲೆಯಾಗುತ್ತಿದೆ ಎಂದು ಹೋರಾಟಗಾರ ಮತ್ತು ಚಿಂತಕ ಶಿವಸುಂದರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಜಾತಿ ಕಾರಣಕ್ಕೆ ಸಂಭವಿಸಿದ ದಾನಪ್ಪ ಹಾಗೂ ರಾಘವೇಂದ್ರ ಕೊಲೆ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ದಲಿತ ದಮನಿತರ ಒಕ್ಕೂಟದ ವತಿಯಿಂದ ನಡೆದ ಬೃಹತ್ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ‌ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ನಾವೆಲ್ಲರೂ ಪ್ರೀತಿ – ಮಮತೆಯಿಂದ ಬದುಕಬೇಕು, ಮನುಷ್ಯರ ಥರ ಬದುಕಬೇಕೆಂದು ಕನಸು ಕಂಡೆವು. ಆದರೆ ಜಾತಿ ಕಾರಣಕ್ಕೆ ಅದು ಪ್ರತಿದಿನ ಕೊಲೆಯಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹುಟ್ಟು ಯಾರ ಕೈಯಲ್ಲೂ ಇಲ್ಲ. ಹಾಗಾಗಿ ನಿಷ್ಕಲ್ಮಶವಾಗಿ ಒಂದು ಗಂಡು-ಹೆಣ್ಣು ಪ್ರೀತಿ ಮಾಡಿದರೆ ಅದನ್ನು ಗೌರವಿಸಬೇಕು. 18 ವರ್ಷ ತುಂಬಿದ ಎಲ್ಲರಿಗೂ ತಮಗಿಷ್ಟಬಂದವರನ್ನು ಪ್ರೀತಿಸುವ ಹಕ್ಕಿದೆ. 18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿರುವ ನಾವು ಪ್ರೀತಿಸುವ ಹಕ್ಕು ಕಿತ್ತುಕೊಳ್ಳುತ್ತಿರುವುದೇಕೆ ಎಂದು ಶಿವಸುಂದರ್ ಪ್ರಶ್ನಿಸಿದರು.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು


ಪ್ರೀತಿಯನ್ನು ಕೊಲ್ಲುವುದೇ ಮನುಸ್ಮೃತಿ. ಮನುಷ್ಯತ್ವ ಉಳಿಸುವುದು ಸಂವಿಧಾನ. ಸಂವಿಧಾನವನ್ನು ಉಳಿಸಲು ಸಾರ್ವಜನಿಕ ಸಂಸ್ಥೆಗಳನ್ನು ರಚಿಸಲಾಯ್ತು. ಆದರೆ ಪ್ರತಿ ನಿತ್ಯ ನ್ಯಾಯ ಉಳಿಸಬೇಕಾದ ಜನರು ಮನುಸ್ಮೃತಿ ರಕ್ಷಿಸುತ್ತ ಸಂವಿಧಾನ ದ್ರೋಹಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿಯೇ ದಲಿತ-ದಮನಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ದೂರಿದರು.

ಪ್ರೀತಿಯನ್ನು ಕೊಲೆ ಮಾಡುವ ಕೊಲೆಗಾರರ ಜೊತೆ ನ್ಯಾಯ ನೀಡುವವರು ಶಾಮೀಲಾಗಿದ್ದಾರೆ. ಎಸ್‌ಸಿ ಎಸ್ಟಿ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಲಗೊಳಿಸಲು ಸರ್ಕಾರ, ನ್ಯಾಯಾಂಗ ಪ್ರಯತ್ನಿಸಿತು. ಇವತ್ತು ದಲಿತರು ದಾಖಲಿಸುವ ದೂರುಗಳಲ್ಲಿ ಕೇವಲ ಶೇ.2 ರಷ್ಟು ಜನರಿಗೆ ಮಾತ್ರ ಶಿಕ್ಷೆಯಾಗುತ್ತಿದೆ. ಎಫ್‌ಐಆರ್ ದಾಖಲಾಗುವಾಗಲೇ ಪ್ರಕರಣವನ್ನು ದುರ್ಬಲಗೊಳಿಸುತ್ತದೆ. ಈ ರೀತಿಯಾಗಿ ವ್ಯವಸ್ಥಿತಿವಾಗಿ ನ್ಯಾಯ ನಿರಾಕರಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಣ್ಣ ಪುಟ್ಟ ಕೇಸುಗಳಿಗೆ ದೇಶದೋಹದ ಹೆಸರಿನಲ್ಲಿ 10-15 ವರ್ಷ ಜೈಲು ಶಿಕ್ಷೆ ವಿಧಿಸುವ ಸರ್ಕಾರಗಳು ಜಾತಿ ದೌರ್ಜನ್ಯ, ಕೊಲೆಗಳಿಗೆ ಕೇವಲ 3 ತಿಂಗಳಲ್ಲಿ ಜಾಮೀನು ಸಿಗುವಂತೆ ವರ್ತಿಸುತ್ತವೆ. ನಾನು ಎಲ್ಲರಲ್ಲಿಯೂ ಇದ್ದೀನಿ ಅಂದುಕೊಳ್ಳುವ ಧರ್ಮ ಇದ್ದರೆ ಸಂವಿಧಾನ ಉಳಿಯುತ್ತೆ. ಮೇಲು – ಕೀಳು ಪ್ರತಿಪಾದಿಸುವ ಧರ್ಮ ಬಂದರೆ ಸಂವಿಧಾನ ಸಾಯುತ್ತೆ. ಈ ದೇಶದಲ್ಲಿ ಮನುಸ್ಮೃತಿಯನ್ನು ನಾಶಗೊಳಿಸಿ, ಸಂವಿಧಾನ ಉಳಿಸುವ ಪಣ ತೊಡೋಣ ಎಂದು ಶಿವಸುಂದರ್ ಕರೆ ನೀಡಿದರು.

ಹೈಕೋರ್ಟ್ ವಕೀಲೆ ಮೈತ್ರೇಯಿ ಮಾತನಾಡಿ, “ಈ ಜಾತಿ ವ್ಯವಸ್ಥೆ ಎಂಬುದು ಒಂದು ರೋಗವಾಗಿದೆ. ಅದು ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ದೇಶ ಮುಂದುವರೆಯುವುದಿಲ್ಲ. ಪ್ರೀತಿಸಿದವರನ್ನು ಮರ್ಯಾದೆ ಹೆಸರಲ್ಲಿ ಕೊಂದರೆ ಅದರಲ್ಲಿ ಮರ್ಯಾದೆ ಇರುವುದಿಲ್ಲ. ಅದು ಹೀನ ಕೊಲೆ ಎಂದು ಸವೋರ್ಚ ನ್ಯಾಯಾಲಯ ಹೇಳಿದೆ” ಎಂದರು.

ನಮ್ಮ ದೇಶದಲ್ಲಿ ಪ್ರತಿದಿನ ಸರಾಸರಿ 10 ದಲಿತ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಷ್ಟು ವರ್ಷವಾದರೂ ಸಮಾನತೆಯ ಸಮಾಜ ಕಟ್ಟಲು ಸಾಧ್ಯವಾಗಿಲ್ಲ. ಸಮಾನತೆಗಾಗಿ, ಭಾತೃತ್ವಕ್ಕಾಗಿ, ಜಾತಿವಿನಾಶದ ಸಮಾಜದ ವಿರುದ್ಧ ಸರ್ಕಾರ ಕೆಲಸ ಮಾಡುತ್ತಿದೆ. ಜಾತಿ ವಿನಾಶ ಆಗದೇ ನಿಜವಾದ ಪ್ರಜಾಪ್ರಭುತ್ವ ಜಾರಿಗೆ ಬರಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಸಾಹಿತಿ, ಹೋರಾಟಗಾರ ಬಸವರಾಜ್ ಸೂಲಿಬಾವಿ ಮಾತನಾಡಿ, “ಮೀಸಲು ಕ್ಷೇತ್ರಗಳಲ್ಲಿಯೇ ಇಂದು ದಲಿತ-ದಮನಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿರುವುದು ದೊಡ್ಡ ದುರಂತವಾಗಿದೆ. ಈ ಕ್ಷೇತ್ರಗಳಲ್ಲಿ ದಲಿತರು-ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರು ರಕ್ಷಣೆಗಾಗಿ ಆ ಕ್ಷೇತ್ರಗಳನ್ನು ಮೀಸಲು ಎಂದು ಘೋಷಿಸಲಾಯ್ತು. ಆದರೆ ಅಲ್ಲಿನ ಜನಪ್ರತಿನಿಧಿಗಳು ಈ ಸಮುದಾಯದ ಜನರ ಹಿತ ಕಾಯಲು ವಿಫಲರಾಗಿ ಮೇಲ್ಜಾತಿ ಜನರ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿರುವುದೇ ಇಂತಹ ದೌರ್ಜನ್ಯಗಳಿಗೆ ಕಾರಣ” ಎಂದು ವಿಷಾಧ ವ್ಯಕ್ತಪಡಿಸಿದರು.

ದಾನಪ್ಪ, ರಾಘವೇಂದ್ರ ಕೊಲೆ ಕುರಿತು ಹಾಲಿ ಶಾಸಕ ಬಸವರಾಜ್ ದಡೆಸಗೂರು, ಮಾಜಿ ಶಾಸಕ ಶಿವರಾಜ್ ತಂಗಡಗಿ ಏಕೆ ಮಾತನಾಡಿಲ್ಲ? ಅವರು ಯಾರನ್ನು ಪ್ರತಿನಿಧಿಸುತ್ತಿದ್ದಾರೆ, ಕೊಂದವರು ಮಾತ್ರವಲ್ಲದೆ ಜಾತಿ ವ್ಯವಸ್ಥೆಯನ್ನು ಸಮರ್ಥನೆ ಮಾಡುವ ಎಲ್ಲರೂ ಕೊಲೆಗಾರರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ಈ ಲಾಕ್‌ಡೌನ್‌ ಅವಧಿಯಲ್ಲಿ ಹತ್ತಾರು ಮರ್ಯಾದೆಹೀನ ಹತ್ಯೆಗಳು ಸಂಭವಿಸಿವೆ. ಬಿಜಾಪುರದ ದೇವರ ಹಿಪ್ಪರಗಿಯಲ್ಲಿ ಅಂತರ್ಜಾತಿ ಮದುವೆಯಾದ ದಂಪತಿಯನ್ನು ಇಂದು ಕೊಲ್ಲಲಾಗಿದೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಕೊಲೆಯಾಗಿದೆ. ಬರಗೂರಿನಲ್ಲಿ ಹತ್ಯೆಯಾಗಿದೆ. ನಾಳೆ ಬೆಳಿಗ್ಗೆ ನಾವು ಯಾವ ಆಸ್ಪತ್ರೆಯಲ್ಲಿ ಕೋವಿಡ್ ಬಂದು ಸಾಯುತ್ತೇವೆ ಎಂಬುದು ಗೊತ್ತಿರಲಿಲ್ಲದಿದ್ದರೂ ಜನ ಜಾತಿಗಾಗಿ ಕೊಲೆ ಮಾಡುತ್ತಿದ್ದರೆ ಎಂದರೆ ಎಷ್ಟರ ಮಟ್ಟಿಗೆ ಜಾತಿ ವಿಷ ಜನರಲ್ಲಿ ಬೇರೂರಿದೆ” ಎಂದು ವಿ‍ಷಾಧ ವ್ಯಕ್ತಪಡಿಸಿದರು.

ಕೋವಿಡ್‌ಗಿಂತಲೂ ದೊಡ್ಡ ಕೊಲೆಗಡುಕ ವೈರಸ್ ಎಂದರೆ ಅದು ಜಾತಿ ವೈರಸ್ ಆಗಿದೆ. ಈ ಹಿಂದೆಯೂ ಮರ್ಯಾದೆಗೇಡು ಹತ್ಯೆಗಳು, ಜಾತಿ ದೌರ್ಜನ್ಯಗಳು ನಡೆಯುತ್ತಿದ್ದವು. ಆದರೆ ಇಂದು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಈ ಕೊಲೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಕೆಲಸ ಮಾಡುತ್ತಿವೆ. ಗೋಹತ್ಯೆ ನಿಷೇಧ ಕಾಯ್ದೆಯ ಹೆಸರಿನಲ್ಲಿ ದಲಿತ ದಮನಿತರ ಶೋಷಣೆಗೆ ರಹದಾರಿ ನೀಡಿವೆ. ಈ ಮತೀಯವಾದಿ ಸರ್ಕಾರ, ಮನುವಾದ ಸರ್ಕಾರ ಕೊಲೆಗಡುಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದೆ. ಇದರ ವಿರುದ್ಧ ನಿರಂತರವಾಗಿ ದನಿಯೆತ್ತಬೇಕಾಗಿದೆ ಎಂದರು.

ಹೋರಾಟದಲ್ಲಿ “ದಲಿತ-ದಮನಿತರ ಮೇಲಿನ ಕೊಲೆ ದೌರ್ಜನ್ಯಗಳು ನಿಲ್ಲಲೇಬೇಕು. ದಾನಪ್ಪ – ರಾಘವೇಂದ್ರರ ಕೊಲೆಯ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಲೇಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜಿಲ್ಲೆಯಲ್ಲಿ ದೌರ್ಜನ್ಯಗಳನ್ನು ತಡೆಗಟ್ಟದ ಜಿಲ್ಲಾಡಳಿತದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂಬ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಹೋರಾಟಗಾರರಾದ ಡಿ.ಎಚ್ ಪೂಜಾರ್, ಕರಿಯಪ್ಪ ಗುಡಿಮನಿ, ಭಾರದ್ವಾಜ್ ಸೇರಿದಂತೆ ಇತರರು ಮಾತನಾಡಿದರು.


ಇದನ್ನೂ ಓದಿ: ಕೊಪ್ಪಳದಲ್ಲಿ ಕ್ರೌರ್ಯ: ಕ್ಷೌರಕ್ಕೆ ಬಂದ ದಲಿತ ಯುವಕರ ಮೇಲೆ ಹಲ್ಲೆ – ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಯುವಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...