Homeಮುಖಪುಟ5 ವರ್ಷಗಳಲ್ಲಿ 326 ದೇಶದ್ರೋಹ ಪ್ರಕರಣಗಳು ಕಾನೂನಿನ ದುರುಪಯೋಗವನ್ನು ತೋರಿಸುತ್ತವೆ: ಸುಪ್ರೀಂಕೋರ್ಟ್‌

5 ವರ್ಷಗಳಲ್ಲಿ 326 ದೇಶದ್ರೋಹ ಪ್ರಕರಣಗಳು ಕಾನೂನಿನ ದುರುಪಯೋಗವನ್ನು ತೋರಿಸುತ್ತವೆ: ಸುಪ್ರೀಂಕೋರ್ಟ್‌

- Advertisement -
- Advertisement -

ಭಾರತೀಯ ಸಂವಿಧಾನದಲ್ಲಿ ದೇಶದ್ರೋಹದ ಕಾನೂನನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಇದನ್ನು ಯಾಕೆ ರದ್ದುಗೊಳಿಸುತ್ತಿಲ್ಲ ಎಂದು ನ್ಯಾಯಾಲಯವು ಒಕ್ಕೂಟ ಸರ್ಕಾರವನ್ನು ಪ್ರಶ್ನಿಸಿದೆ. ಕಾನೂನಿನ ಬಗ್ಗೆ ಕಳವಳ ವ್ಯಕ್ತಪಡಿಸುತ್ತಾ, 2014 ಮತ್ತು 2019 ರ ನಡುವೆ ದೇಶದಲ್ಲಿ 326 ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದರಲ್ಲಿ 141 ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ದಾಖಲಿಸಲಾಗಿತ್ತಾದರೂ, ಕೇವಲ ಆರು ಮಂದಿ ಮಾತ್ರ ಶಿಕ್ಷೆಗೊಳಗಾಗಿದ್ದಾರೆ.

ಜುಲೈ 15 ರಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಐಪಿಸಿಯಲ್ಲಿ ಸೆಕ್ಷನ್ 124 ಎ (ದೇಶದ್ರೋಹ) ದ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಸಲ್ಲಿಸಿದ್ದ ಮನವಿಯನ್ನು ಪರಿಶೀಲಿಸಲು ಒಪ್ಪಿಕೊಂಡಿತ್ತು.

ಇದನ್ನೂ ಓದಿ: ವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದು; ದೇಶದ್ರೋಹ ಕಾನೂನಿನ ಮೂಲಭೂತ ನಿಯಮಗಳನ್ನು ನೆನಪಿಸಿದ ಕೋರ್ಟ್

ದೇಶದ್ರೋಹದ ಅಡಿಯಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಸಂಖ್ಯೆಯ  ಪ್ರಕರಣ ದಾಖಲಾಗಿದೆ. ಅಲ್ಲಿ 54 ದೇಶದ್ರೋಹ ಅಪರಾಧಗಳು ದಾಖಲಿಸ್ಪಟ್ಟಿವೆ. ಇವುಗಳಲ್ಲಿ, ಕೇವಲ 26 ಪ್ರಕರಣಗಳಲ್ಲಿ ಮಾತ್ರ ಚಾರ್ಜ್‌ಶೀಟ್‌ಗಳು ದಾಖಲಾಗಿದ್ದು, ಅದರಲ್ಲಿ 25 ಪ್ರಕರಣಗಳ ವಿಚಾರಣೆಗಳು ಪೂರ್ಣಗೊಂಡಿವೆ. ಆದರೆ ಇದುವರೆಗೂ ಒಂದೇ ಒಂದು ಪ್ರಕರಣದ ಅಪರಾಧ ಸಾಬೀತಾಗಿಲ್ಲ.

ಜಾರ್ಖಂಡ್‌ನಲ್ಲಿ 40 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 29 ಪ್ರಕರಣಗಳಲ್ಲಿ ಚಾರ್ಜ್‌ಶೀಟ್ ದಾಖಲಾಗಿದೆ. 16 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದ್ದು, ಅಲ್ಲಿ ಒಬ್ಬ ವ್ಯಕ್ತಿಯನ್ನು ಮಾತ್ರ ಶಿಕ್ಷಿಸಲಾಗಿದೆ. 31 ಪ್ರಕರಣಗಳು ದಾಖಲಾದ ಹರಿಯಾಣದಲ್ಲಿ ಕೂಡಾ ಇದೇ ರೀತಿಯಾಗಿ ಮುಂದುವರೆದಿದೆ. ಅಲ್ಲಿ 19 ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದ್ದು, ಆರು ಪ್ರಕರಣಗಳ ವಿಚಾರಣೆಯನ್ನು ಪೂರ್ಣಗೊಂಡಿದ್ದು, ಒಬ್ಬ ವ್ಯಕ್ತಿಯನ್ನು ಮಾತ್ರ ಶಿಕ್ಷೆಗೊಳಪಡಿಸಲಾಗಿದೆ.

ಬಿಹಾರ, ಜಮ್ಮು ಕಾಶ್ಮೀರ ಮತ್ತು ಕೇರಳದಲ್ಲಿ ತಲಾ 25 ಪ್ರಕರಣಗಳು ದಾಖಲಾಗಿವೆ. ಆದರೆ ಬಿಹಾರ ಮತ್ತು ಕೇರಳದಲ್ಲಿ ಇದುವರೆಗೂ ಯಾವುದೇ ಚಾರ್ಜ್‌ಶೀಟ್‌ಗಳು ದಾಖಲಾಗಲಿಲ್ಲ. ಜಮ್ಮು ಕಾಶ್ಮೀರದಲ್ಲಿ ಮೂರು ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು, ಇದುವರೆಗೂ ಯಾರೂ ಶಿಕ್ಷೆಗೊಳಗಾಗಿಲ್ಲ.

ಇದನ್ನೂ ಓದಿ: ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ 22 ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಕರ್ನಾಟಕ ಪೊಲೀಸರು 17 ಪ್ರಕರಣಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದು, ಒಂದು ಪ್ರಕರಣದ ವಿಚಾರಣೆಯನ್ನಷ್ಟೆ ಪೂರ್ಣಗೊಳಿಸಲಾಗಿದೆ. ಆದರೆ ಇದುವರೆಗೂ ಯಾರೂ ಶಿಕ್ಷೆಗೊಳಗಾಗಿಲ್ಲ. ಯುಪಿ ಪೊಲೀಸರು ಎಂಟು ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದು, ಅಲ್ಲಿಯು ಯಾರೂ ಶಿಕ್ಷೆಗೊಳಗಾಗಲಿಲ್ಲ.

ಮೇಘಾಲಯ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಪುದುಚೇರಿ, ಚಂಡೀಗಡ, ದಮನ್ ಮತ್ತು ಡಿಯು, ದಾದ್ರಾ ಮತ್ತು ನಗರ ಹವೇಲಿಯಲ್ಲಿ 2014-2019ರವರೆಗೆ ಯಾವುದೇ ದೇಶದ್ರೋಹ ಪ್ರಕರಣ ದಾಖಲಾಗಿರಲಿಲ್ಲ.

ದೇಶದ್ರೋಹದ ಅಪರಾಧವನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು “ಬಾಯಿ ಮುಚ್ಚಿಸಲು” ಬ್ರಿಟಿಷ್ ವಸಾಹತುಶಾಹಿಗಳು ತಂದಂತಹ ಕಾನೂನಾಗಿದೆ ಎಂದು ಸುಪ್ರೀಂ ಕೋರ್ಟ್‌ ಸೂಚಿಸಿದೆ. 2019 ರಲ್ಲಿ ಅತಿ ಹೆಚ್ಚು 93 ರಷ್ಟು ದೇಶದ್ರೋಹ ಪ್ರಕರಣಗಳು ದಾಖಲಾಗಿದ್ದವು. ಈ ಕಾನೂನಿನ ದುರುಪಯೋಗ ಮತ್ತು ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಆತಂಕವಿದೆ ಎಂದು ನ್ಯಾಯಪೀಠ ಹೇಳಿದೆ.

ದೇಶದ್ರೋಹದ ಅಪರಾಧವು ವಸಾಹತುಶಾಹಿ ಯುಗದ ಕಾನೂನು ಎಂದು ನ್ಯಾಯಾಲಯ ಹೇಳಿದ್ದು, “ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಈ ಕಾನೂನು ಅಗತ್ಯವಿದೆಯೆ?” ಎಂದು ಅದು ಕೇಳಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...