Homeಮುಖಪುಟನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್...

ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

- Advertisement -
- Advertisement -

‘ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಈಗಾಗಲೇ ಹ್ಯಾಕ್ ಮಾಡಲಾಗಿರುವ ಕೆಲವು ಪತ್ರಕರ್ತರ ಹೆಸರನ್ನು ವರದಿಯು ಬಿಡುಗಡೆ ಮಾಡಿದೆ. ಜೊತೆಗೆ ಪೆಗಾಸಸ್‌ ಹ್ಯಾಕ್‌ ಮಾಡಿರುವವರ ಪಟ್ಟಿಯಲ್ಲಿ ನ್ಯಾಯಾಧೀಶರ ಹೆಸರಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೆಸರು ಕೇಳಿಬಂದಿದೆ.

ಏಪ್ರಿಲ್ 2019 ರಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ  ಮಾಡಿದ್ದ ಸುಪ್ರೀಂಕೋರ್ಟ್ ಸಿಬ್ಬಂದಿಗೆ ಸಂಬಂಧಿಸಿದ ಮೂರು ಮೊಬೈಲ್ ನಂಬರ್‌ಗಳನ್ನು ಹ್ಯಾಕ್ ಮಾಡಲಾಗಿದೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ. ಈ ಕಂಪನಿಯು ಅಧಿಕೃತ ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುತ್ತದೆ. ಖಾಸಗಿ ಸಂಸ್ಥೆಗಳಿಗೆ ಅಲ್ಲ ಎಂದು ಮಾಹಿತಿ ನೀಡಲಾಗಿದೆ. ಆದರೂ ಕಂಪನಿಯು ತನ್ನ ಉತ್ಪನ್ನವನ್ನು ಯಾವ ಸರ್ಕಾರಗಳಿಗೆ ಮಾರುತ್ತದೆ ಎಂಬುದನ್ನು ಖಚಿತಪಡಿಸುವುದಿಲ್ಲ.

ಇದನ್ನೂ ಓದಿ: ಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

ನ್ಯಾಯಾಧೀಶರ ಮೇಲೆ ಆರೋಪ ಮಾಡಿದ್ದ ಮಹಿಳಾ ಸಿಬ್ಬಂದಿಯನ್ನು 2018 ರ ಡಿಸೆಂಬರ್‌ನಲ್ಲಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಇದಾದ ಬಳಿಕ ಅವರು ಏಪ್ರಿಲ್ 20, 2019 ರಂದು ಲೈಂಗಿಕ ಕಿರುಕುಳ ಆರೋಪಗಳನ್ನು ಮಾಡಿದ್ದರು. ಇದಾದ ಕೆಲವೇ ದಿನಗಳ ಅವರ ಪೋನ್ ಅನ್ನು ಹ್ಯಾಕ್ ಮಾಡಲಾಗಿದೆ  ಎಂದು ವರದಿ ತಿಳಿಸಿದೆ.

ಇದೇ ವರದಿಯಲ್ಲಿ ಆಕೆ ದೂರು ನೀಡಿದ ಒಂದು ವಾರದಲ್ಲಿ ಆಕೆಯ ಪತಿ ಮತ್ತು ಅವರ ಇಬ್ಬರು ಸಹೋದರರು ಸೇರಿದಂತೆ ಎಂಟು ಮಂದಿಯ ದೂರವಾಣಿ ಸಂಖ್ಯೆಗಳನ್ನು ಸಹ ಹ್ಯಾಕ್ ಮಾಡಿ ಕಣ್ಗಾವಲಿನಲ್ಲಿ ಇರಿಸಲಾಗಿದೆ ಎಂದು ತಿಳಿಸಿದೆ.  ದೂರುದಾರ ಮತ್ತು ಅವರ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಒಟ್ಟು 11 ದೂರವಾಣಿ ಸಂಖ್ಯೆಗಳನ್ನು ಆಯ್ಕೆ ಮಾಡಿ ಹ್ಯಾಕ್ ಮಾಡಲಾಗಿದೆ.

“ಲೈಂಗಿಕ ಕಿರುಕುಳ ಪ್ರಕರಣ ಆದ ಕೂಡಲೇ ರಂಜನ್ ಗೊಗೊಯ್ ಸರಣಿಯಾಗಿ ಬಿಜೆಪಿಗೆ ಅನುಕೂಲಕರವಾದ ತೀರ್ಪು ಯಾಕೆ ಕೊಟ್ಟರು ಅನ್ನೋದು ಈಗ ಸ್ಪಷ್ಟವಾಯಿತು. ದೂರುದಾರಲೊಂದಿಗೆ ನಡೆಸಿರುವ ಎಲ್ಲಾ ಮಾತುಕತೆಯನ್ನು ಆಧಾರವಾಗಿ ಇಟ್ಟುಕೊಂಡು ಗೊಗೋಯ್‌ ಅವರಿಗೆ ಬೆದರಿಕೆ ಒಡ್ಡಿದ್ದಾರೆ. ಶಿಕ್ಷೆ ಬೇಕೆ ಅಥವಾ ರಾಜ್ಯಸಭೆಗೆ ಸ್ಥಾನ ಬೇಕೇ ಎಂಬ ಆಯ್ಕೆ ಇಟ್ಟಿದ್ದಾರೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನ ಚರ್ಚೆ ನಡೆಸಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪದ ನಂತರ, ನ್ಯಾಯಮೂರ್ತಿ ಗೊಗೊಯ್ ಅವರು ನವೆಂಬರ್ 17, 2019 ರವರೆಗೆ 46 ನೇ ಸಿಜೆಐ ಆಗಿ ತಮ್ಮ ಅವಧಿಯನ್ನು ಪೂರೈಸಿದರು. ಅವರು ನಿವೃತ್ತಿಯಾದ ಆರು ತಿಂಗಳಲ್ಲಿ, ಅವರನ್ನು ರಾಜ್ಯಸಭೆಗೆ ಕೇಂದ್ರ ಸರ್ಕಾರವು “ಶ್ರೇಷ್ಠ ಸದಸ್ಯ” ಎಂದು ನಾಮಕರಣ ಮಾಡಿತ್ತು.


ಇದನ್ನೂ ಓದಿ: ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...