Homeಮುಖಪುಟಅಶ್ಲೀಲ ಚಿತ್ರ ತಯಾರಿಸಿ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ

ಅಶ್ಲೀಲ ಚಿತ್ರ ತಯಾರಿಸಿ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ

- Advertisement -
- Advertisement -

ಅಶ್ಲೀಲ ಚಿತ್ರಗಳನ್ನು ತಯಾರಿಸಿ ಅವುಗಳನ್ನು ಆ್ಯಪ್‌ಗಳ ಮೂಲಕ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್‌‌‌‌ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, 45 ವರ್ಷದ ರಾಜ್‌ಕುಂದ್ರಾ ಈ ಪ್ರಕರಣದ ಪ್ರಮುಖ ಆರೋಪಿ ಎಂದು ಅವರು ಹೇಳಿದ್ದಾರೆ.

“ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಸಾರ ಮಾಡುವ ಬಗ್ಗೆ, ಫೆಬ್ರವರಿಯಲ್ಲಿ ಮುಂಬಯಿಯ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು 19/7/2021 ರಂದು ಬಂಧಿಸಿದ್ದೇವೆ. ಈ ಬಗ್ಗೆ ನಮಲ್ಲಿ ಸಾಕಷ್ಟು ಪುರಾವೆಗಳಿವೆ” ಎಂದು ಮುಂಬೈ ಪೊಲೀಸ್ ಆಯುಕ್ತರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸೇರುತ್ತಿರುವ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌; ಆಪ್ತರ ಹೇಳಿಕೆ

ಫೆಬ್ರವರಿ 4 ರಂದು ಮುಂಬೈನ ಉಪನಗರ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಮಹಿಳೆಯೊಬ್ಬರು ಪೊಲೀಸರನ್ನು ಸಂಪರ್ಕಿಸಿ ತನ್ನ ದೂರಿನಲ್ಲಿ ಕೆಲವು ಆರೋಪಗಳನ್ನು ಮಾಡಿದ ನಂತರ ರಾಜ್‌ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ.

“ಮಹಿಳೆಯ ದೂರಿನ ಆಧಾರದ ಮೇಲೆ ಎಫ್ಐಆರ್ ನೋಂದಾಯಿಸಲಾಗಿದೆ. ಪ್ರಕರಣವನ್ನು ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ. ಈ ಹಿಂದೆಯೆ ನಾವು ಅಶ್ಲೀಲ ಚಿತ್ರಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಿದ್ದೇವೆ. ಅದರಲ್ಲಿ ಒಬ್ಬ ನಟಿ ಮತ್ತು ಇತರ ಕೆಲವು ವ್ಯಕ್ತಿಗಳನ್ನು ಆರೋಪಿಗಳನ್ನಾಗಿ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ರಾಜ್ ಕುಂದ್ರಾ ಪ್ರಕರಣದ ತನಿಖೆ ನಡೆಸುತ್ತೇವೆ. ಈ ಹಿಂದೆ ನೋಂದಾಯಿಸಿದ್ದ ಅಶ್ಲೀಲ ಪ್ರಕರಣಗಳ ನಡುವೆ ಈ ಪ್ರಕರಣಕ್ಕೆ ಯಾವುದೇ ಸಂಬಂಧವಿದೆಯೇ ಎಂದು ಕಂಡುಹಿಡಿಯುತ್ತೇವೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಕರ್ನಾಟಕದೊಂದಿಗೆ ಯಾವುದೇ ಮಾತುಕತೆಯಿಲ್ಲ, ಕೇಂದ್ರದ ಭರವಸೆಯಿದೆ ಎಂದ ತಮಿಳುನಾಡು ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...