Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿಈ ನವಿಲುಗಳನ್ನು ಓಡಿಸುವುದೇ ರೈತರಿಗೆ ದೊಡ್ಡ ಕೆಲಸವಾಗಿದೆ!

ಈ ನವಿಲುಗಳನ್ನು ಓಡಿಸುವುದೇ ರೈತರಿಗೆ ದೊಡ್ಡ ಕೆಲಸವಾಗಿದೆ!

ನಮ್ಮ ತೋಟದಲ್ಲಿ ಕೇವಲ ಹತ್ತು ವರ್ಷಗಳ ಹಿಂದೆ ನವಿಲುಗಳನ್ನು ಕಲ್ಪಿಸಿಕೊಳ್ಳುವುದೂ ಸಾಧ್ಯವಿರಲಿಲ್ಲ. ಈಗ ಅದು ನವಿಲುಗಳ ವಾಸಸ್ಥಾನ, ಜನ್ಮಸ್ಥಾನ ಎಲ್ಲವೂ ಆಗಿದೆ.

- Advertisement -
- Advertisement -

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ… ಭಾಗ-8

  • ಕೃಷ್ಣಮೂರ್ತಿ ಬಿಳಿಗೆರೆ

ಬಯಲು ಸೀಮೆಯ ಭಾಗದಲ್ಲೀಗ ನವಿಲುಗಳ ಸುಗ್ಗಿ. ನಾವು ಸಣ್ಣ ಹುಡುಗರಾಗಿದ್ದಾಗ ಇವುಗಳನ್ನು ಝೂಗಳಲ್ಲಿ ಮಾತ್ರ ನೋಡುವುದು ಸಾಧ್ಯವಾಗುತ್ತಿತ್ತು. ಮಲೆನಾಡಿನ ಭಾಗಕ್ಕೆ ಶಾಲಾ ಟೂರ್‌ ಹೋದಾಗ ನವಿಲುಗಳ ದರ್ಶನವಾಗುತ್ತಿದ್ದ ನೆನಪು.

ಈಗ ನಮ್ಮ ತೋಟ – ಹೊಲಗಳಿಂದ ಈ ನವಿಲುಗಳನ್ನು ಓಡಿಸುವುದು ರೈತರಿಗೆ ಕಷ್ಟವಾಗಿದೆ ಎಂದರೆ ಇವುಗಳ ಸಂಖ್ಯೆ ಎಷ್ಟು ಅತಿಯಾಗಿದೆ ಎಂಬುದನ್ನು ಊಹಿಸಬಹುದು. ಹೊಲಗಳಲ್ಲಿ ಬಿತ್ತನೆಯಾದ ಬೀಜಗಳು ಮೊಳಕೆಯೊಡೆಯುವ ಮುನ್ನವೇ ನವಿಲುಗಳು ಸಾಲು ಹಿಡಿದು ನುಂಗಿಹಾಕುತ್ತಿವೆ. ಚಿಗುರೊಡೆದ ಅಲ್ಪಸ್ವಲ್ಪ ಬೆಳೆಗಳ ಪೈರುಗಳನ್ನು ತಿನ್ನದೆ ಬಿಡುತ್ತಿಲ್ಲ. ಹಾಗೆ ನೋಡಿದರೆ ತೋಟಗಳಲ್ಲಿ ಅವುಗಳ ಹಾವಳಿ ಕಡಿಮೆ ಎಂದೇ ಹೇಳಬೇಕು. ಅವು ಈಗ ತೆಂಗಿನ ಕಾಯಿಗಳನ್ನು ಕುಕ್ಕಿ ತಿನ್ನುವುದನ್ನು ರೂಢಿ ಮಾಡಿಕೊಂಡಿವೆ ಎಂಬ ಆಪಾದನೆಯಿದೆಯಾದರೂ ಅದಿನ್ನೂ ಸಾಬೀತಾಗಿಲ್ಲ.

ಬೆಟ್ಟಗುಡ್ಡ, ಕಾಡುಮೇಡು, ಹಳ್ಳಕೊಳ್ಳಗಳಲ್ಲಿ ಹೇಗೋ ಹಾಗೆ ಬದುಕಿಕೊಂಡು ಸ್ವತಂತ್ರವಾಗಿ ಬದುಕುತ್ತಿದ್ದ ಈ ರಾಷ್ಟ್ರಪಕ್ಷಿ ಈಗ ಊರೊಳಕ್ಕೆ ನುಗ್ಗಿ ಮನೆಯಾಚೆಯಲ್ಲಿ ಇರಿಸುವ ಮುಸುರೆಯನ್ನು ಕದ್ದು ಕುಡಿಯುವ ಸ್ಥಿತಿಗೆ ಬಂದಿದೆ. ಅವೀಗ ಜನರೊಂದಿಗೆ ಬದುಕುವ ಪರಿಪಾಠ ರೂಢಿಸಿಕೊಳ್ಳುತ್ತಿವೆ. ತೋಟ, ಹೊಲಗಳನ್ನು ಬಿಟ್ಟು ಕದಲುತ್ತಿಲ್ಲ. ಹದ್ದು ಮೀರಿದ ಗಣಿಗಾರಿಕೆ, ಕಲ್ಲು ಕ್ವಾರಿ ಡೈನಮೈಟ್‌ ಆರ್ಭಟ, ಕಾಡುಮೇಡು, ಹುಲ್ಲುಗಾವಲು, ಹಳ್ಳಕೊಳ್ಳಗಳ ಒತ್ತುವರಿ ಮುಂತಾದ ಮನುಷ್ಯ ಕೇಡಿಗ ಕೆಲಸಗಳು ಆನೆ, ನವಿಲು, ಚಿರತೆ, ಕರಡಿ, ತೋಳ ಮತ್ತಿತರ ಕಾಡು ಜೀವಿಗಳನ್ನು ನಿರಾಶ್ರಿತರಾಗಿ ಅಲೆಯುವಂತೆ ಮಾಡಿದೆ. ವಿಚಿತ್ರವೆಂದರೆ ಈ ಎಲ್ಲ ಕಾಡು ಜೀವಿಗಳು ಏನೂ ತಪ್ಪು ಮಾಡದ ರೈತರ ಹೊಲ ತೋಟಗಳಿಗೆ ಲಗ್ಗೆ ಇಟ್ಟು ಕಾಡುತ್ತಿವೆ. ಅಲ್ಲದೆ ಮನೆ ಬಾಗಿಲಿಗೆ ಬಂದು ನೀವೇ ಸಾಕಿ ಎನ್ನುತ್ತಿವೆ. ಕೆಲವು ಪ್ರಾಣಿಗಳಂತೂ ರೈತರನ್ನು ಬಲಿತೆಗೆದುಕೊಳ್ಳುತ್ತಿವೆ. ಯಾರೋ ಮಾಡಿದ ತಪ್ಪಿಗೆ ರೈತರು ದಂಡ ತೆರಬೇಕಾಗಿದೆ. ಇದರಲ್ಲಿ ರೈತರ ಪಾಲು ಇಲ್ಲವೇ ಇಲ್ಲ ಎನ್ನುವುದು ಸಾಧ್ಯವಿಲ್ಲವಾದರೂ ಪ್ರಮಾಣ ಅಲ್ಪ ಪ್ರಮಾಣದ್ದು. ಇರಲಿ ನಾವೀಗ ನವಿಲಿನ ಕಡೆ ಬರೋಣ.

Photo Courtesy: Vijaya Karnataka

ನಮ್ಮ ತೋಟದಲ್ಲಿ ಕೇವಲ ಹತ್ತು ವರ್ಷಗಳ ಹಿಂದೆ ನವಿಲುಗಳನ್ನು ಕಲ್ಪಿಸಿಕೊಳ್ಳುವುದೂ ಸಾಧ್ಯವಿರಲಿಲ್ಲ. ಈಗ ಅದು ನವಿಲುಗಳ ವಾಸಸ್ಥಾನ, ಜನ್ಮಸ್ಥಾನ ಎಲ್ಲವೂ ಆಗಿದೆ.

ತೋಟಕ್ಕೆ ಪ್ರವೇಶಿಸಿದ ತಕ್ಷಣ ನವಿಲುಗಳ ನಾನಾ ಬಗೆಯ ದರ್ಶನವಾಗುತ್ತದೆ. ಅದು ದಶರೂಪ ದರ್ಶನ. ಕೀಟ ಆಯುವ, ಕಷ್ಟ ಪಟ್ಟು ಹಾರಿ ಮರದ ಮೇಲಕ್ಕೆ ಹೋಗಿ ಕೂರುವ, ಹೆಣ್ಣು ನವಿಲು ಒಲಿಸಲು ಕುಣಿಯುವ, ಹಾವಿನ ಮೇಲೆ ಆಕ್ರಮಣ ಮಾಡುವ, ತಮ್ಮ ಸಹಚರರಿಗೆ ಅಪಾಯದ ಸೂಚನೆ ಕೊಡಲು ಕೂಗುವ, ಮೊಟ್ಟೆಗಳಿಗೆ ಕಾವು ಕೊಡುವ ಹೀಗೆ…

ನಾವು ಸಣ್ಣವರಾಗಿದ್ದಾಗ ಒಂದೇ ಒಂದು ಎಸಳು ನವಿಲುಗರಿಗಾಗಿ ನಾವು ಪರಿತಪಿಸುತ್ತಿದ್ದೆವು. ಪುಸ್ತಕದೊಳಗೆ ಅದು ಮರಿಹಾಕುವ ಕನಸುಗಳನ್ನು ನಮ್ಮೊಳಗೆ ಅದ್ಯಾರು ಬಿತ್ತಿದ್ದರೋ ಗೊತ್ತಿಲ್ಲ, ಈಗ ನೋಡಿದರೆ ನವಿಲುಗರಿಗಳು ತೋಟದ ಅನೇಕ ಭಾಗಗಳಲ್ಲಿ ಅನಾಥವಾಗಿ ಬಿದ್ದು ಒದ್ದಾಡುತ್ತಿವೆ.

ನವಿಲಿನ ಮೊಟ್ಟೆಗಳ ಬಗೆಗೆ ಇನ್ನೂ ಕೆಲವು ವಿಚಾರಗಳನ್ನು ಪ್ರಸ್ತಾಪಿಸಬೇಕು. ಈ ಸಲ ಮುಂಗಾರು ಮಳೆಯ ಪುಣ್ಯ ಸ್ನಾನಕ್ಕೆ ಬಂಡೆದ್ದು ಹುಟ್ಟಿದ ಮಾಮೇರಿ ಹುಲ್ಲು ಎದೆಯುದ್ದ ಬೆಳೆದು ನಿಂತಾಗ ತೆಂಗಿನ ಕಾಯಿ ಕೆಡವುವ ಕಾಯಕದ ಆನಂದಯ್ಯ ಕಾಯಿ ಕೆಡವಲು ಈ ಹುಲ್ಲು ನೆಪಮಾಡಿ ನಿರಾಕರಿಸಿದಾಗ ಕತ್ತರಿಸುವುದು ಅನಿವಾರ್ಯವಾಯ್ತು. ಗ್ರಾಸ್‌ ಕಟರ್‌ ಮಿಷನಿನ್ನಿಂದ ಹುಲ್ಲು ಹೊಡೆಯುತ್ತಾ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಮುಷ್ಟಿ ಗಾತ್ರದ ತನ್ನ ಬರೋಬರಿ ಐದು ಮೊಟ್ಟೆಗಳಿಗೆ ಕಾವು ಕೂತಿದ್ದ ನವಿಲು ಪಕ್ಷಿ ಹಾರಿ ಕಣ್ಮರೆಯಾಯಿತು. ಅಷ್ಟೊಂದು ಸದ್ದಿನೊಂದಿಗೆ ನಾನು ತೀರಾ ಹತ್ತಿರ ಹೋಗುವವರೆಗೂ ಆ ನವಿಲು ತನ್ನ ಅಂಡ ರೂಪಿ ಜೀವಗಳನ್ನು ಅವುಚಿಕೊಂಡು ಕುಂತೇ ಇದ್ದದ್ದು ಅದರ ಬದ್ಧತೆಗೆ ಸಾಕ್ಷಿಯಾಗಿತ್ತು. ಆದರೆ ತಾನು ಈ ಮನುಷ್ಯನ ಕೈಗೇ ಸಿಕ್ಕಿಬಿಡುವ ಜೀವಭಯದಿಂದ ತನ್ನ ಕುಡಿಗಳನ್ನು ಕಡೆಗಣಿಸಿ ಹಾರಿಹೋಯಿತು.

PC : Pinterest

ತಾನಿದ್ದರೆ ಇಂಥ ಮೊಟ್ಟೆಗಳನ್ನು ಇನ್ನೊಮ್ಮೆ ಇಟ್ಟು ಸೃಷ್ಟಿಸಿಕೊಳ್ಳಬಹುದೆಂಬ ‍ಪ್ರಕೃತಿ ಸಹಜ ಪ್ರವೃತ್ತಿಯಿಂದ ಅದು ತನ್ನ ಮೊಟ್ಟೆಗಳ ಆಸೆಯನ್ನು ತ್ಯಜಿಸಿ ಹಾರಿಹೋಗಿರಬೇಕು. ಇಂಥ ಅದೆಷ್ಟೋ ಮೊಟ್ಟೆಗಳನ್ನು ಅದು ಕಳೆದುಕೊಂಡಿರಬೇಕು… ಆದರೆ ನಾನು ಮೊಟ್ಟೆಗಳನ್ನು ಹತ್ತಿರದಿಂದ ನೋಡಿ ದಿಗ್ಬ್ರಮೆಗೊಂಡೆ. ಅವು ಮೌನವಾಗಿಯೂ ದಿಟ್ಟವಾಗಿಯು ಇರುವಂತೆ ನನಗೆ ಅನಿಸಿತು. ಆ ಮೊಟ್ಟೆಗಳು ರುಚಿಕರ ಆಹಾರವಾಗಿ ಗೋಚರಿಸದೇ ಕರುಣಾಜನಕ ಜೀವಗಳಾಗಿ ಕಂಡವು. ಮಾಂಸಾಹಾರ ಸಸ್ಯಾಹಾರಗಳಲ್ಲಿ ವ್ಯತ್ಯಾಸವರಿಯದ ನನಗೆ ಆ ಮೊಟ್ಟೆಗಳನ್ನು ಮಾತ್ರ ಬೇಯಿಸಿ ತಿನ್ನುವ ಮನಸ್ಸಾಗಲಿಲ್ಲ. ಆ ಮೊಟ್ಟೆಗಳು ಓಡಿಹೋಗುವ ಶಕ್ತಿ ಪಡೆದಿದ್ದರೆ ನಾನೂ ಅಟ್ಟಿಸಿಕೊಂಡು ಹೋಗಿ ಬೇಟೆಯಾಡುತ್ತಿದ್ದೆನೋ ಏನೋ…

ಅಂತೂ ಆ ಮೊಟ್ಟೆಗಳ ಸಹವಾಸಕ್ಕೆ ಹೋಗಲಿಲ್ಲ. ನಾನು ತೋಟ ಬಿಟ್ಟು ತೊಲಗುವುದನ್ನೇ ನಿರೀಕ್ಷಿಸಿ ಆ ತಾಯಿ ನವಿಲು ತನ್ನ ಮೊಟ್ಟೆಗಳಿಗೆ ಒದಗಿರಬಹುದಾದ ದುರ್ಗತಿಯನ್ನು ಊಹಿಸಿ ಅಲ್ಲಿಗೆ ಧಾವಿಸಿರಬಹುದು. ಮೊಟ್ಟೆಗಳು ಅಪಹರಿಸಲ್ಪಡದೆ ಸ್ವಸ್ಥಾನದಲ್ಲೇ ಇರುವುದನ್ನು ಕಂಡು ಆಶ್ಚರ್ಯಗೊಂಡು ಕಾವು ಕೂರುವ ಧ್ಯಾನಕ್ಕೆ ಇಳಿದಿರಬಹುದು. ಈ ಮಧ್ಯೆ ಅಣಬೆಗಳನ್ನು ನವಿಲಿನ ಮೊಟ್ಟೆಗಳನ್ನೂ, ಜೊತೆಗೆ ಮೊಲ ಮತ್ತು ಕಾಡು ಹಂದಿಗಳ ಹೆಜ್ಜೆ ಗುರುತುಗಳನ್ನು ಹುಡುಕಿಕೊಂಡು ಓಡಾಡುವವರು ಯಾಕೋ ಅಪರೂಪವಾಗಿದ್ದಾರೆ ಎನಿಸುತ್ತಿದೆ… ಸುಲಭ ದರದಲ್ಲಿ ಸಿಕ್ಕುತ್ತಿರುವ ಬಾಯಲರ್‌ ಕೋಳಿಗಳ ಮೆತ್ತನೆ ಮಾಂಸವೇನಾದರೂ ಇದಕ್ಕೆ ಕಾರಣವಾಗಿರಬಹುದೇ?

***

(ಕೃಷ್ಣಮೂರ್ತಿ ಬಿಳಿಗೆರೆಯವರು ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...