Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

- Advertisement -
- Advertisement -

ಹೊನ್ನಾವರದಲ್ಲಿ ನಡೆಯುತ್ತಿರುವ ಖಾಸಗಿ ಬಂದರು ಕಾಮಗಾರಿಯಿಂದ ತಮ್ಮ ಬದುಕು ಮೂರಾಬಟ್ಟೆ ಮಾಡುತ್ತದೆಂಬ ಆತಂಕದಲ್ಲಿ ಮೀನುಗಾರರು ಕಂಗಾಲಾಗಿದ್ದರೆ, ಮೀನುಗಾರರ ಅಸಾಯಕತೆಯನ್ನು ರಾಜಕಾರಣಿಗಳು ಪ್ರತಿಷ್ಠೆಯ ಮೇಲಾಟಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹಾಲಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಬಂದರು ಯೋಜನೆ ಪರವಾಗಿದ್ದಾರೆ, ಮಾಜಿ ಶಾಸಕ ಮಂಕಾಳ್ ವೈದ್ಯ ಮೀನುಗಾರರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ. ವಾಣಿಜ್ಯ ಬಂದರು ನಿರ್ಮಾಣ ಕೈಬಿಡಬೇಕು ಇಲ್ಲದಿದ್ದರೆ ಮೀನುಗಾರರಿಗೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲದು ಎಂದವರು ಹೇಳಿದ್ದಾರೆ.

PC : Bhatkallys.com (ಮಂಕಾಳ್ ವೈದ್ಯ)

ಪತ್ರಿಕಾಗೋಷ್ಠಿ ಮಾತನಾಡಿದ ಅವರು, “ಶಾಸಕ ಸುನೀಲ್ ನಾಯ್ಕ ಎರಡು ನಾಲಿಗೆ ಮನುಷ್ಯ. ಅವರು ಮೀನುಗಾರರ ಪರ ನಿಲ್ಲಬೇಕು, ಇಲ್ಲವೆ ಪೋರ್ಟ್ ಕಂಪನಿ ಜತೆಗಿರಲಿ ಎಂದು ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂದರು ಕಾಮಗಾರಿ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಮತ್ತು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳುತ್ತಿದ್ದಾರೆ. ಇದೇನೊ ನಿಜ. ಆದರೆ 2010ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಸದ್ರಿ ಯೋಜನೆಗೆ ಮಂಜೂರು ನೀಡಲಾಗಿತ್ತು. ಆ ಹೊತ್ತಲ್ಲಿ ಬಂದರು ಮತ್ತು ಮೀನುಗಾರಿಕಾ ಮಂತ್ರಿಯಾಗಿದ್ದ ಕೃಷ್ಣಪಾಲೆಮಾರ್ ಹೊನ್ನಾವರ ಪೋರ್ಟ್ ಕಂಪನಿಗೆ 5 ಎಕರೆ ಜಾಗ ನೀಡಿದ್ದರು. ಆ ನಂತರ ಮುಳುಗಡೆಯಾಗಿರುವ ಮಲ್ಲುಕುರ್ವಾದ 5 ಎಕರೆ ಸೇರಿಸಿ ಒಟ್ಟೂ 10 ಎಕರೆ ಪ್ರದೇಶ ಪೋರ್ಟ್ ಪ್ರೈ.ಲೀ ಬಿಜೆಪಿ ಸರ್ಕಾರವೇ ಕೊಟ್ಟಿತ್ತು. ಈಗ 50 ಎಕರೆ ಖಾಸಗಿ ಬಂದರಿಗಾಗಿ ಮೀಸಲಿಡಲಾಗಿದೆ” ಎಂದು ವೈದ್ಯ ತಿಳಿಸಿದ್ದಾರೆ.

ಹೊನ್ನಾವರ ಪೋರ್ಟ್ ಕಂಪನಿ ಮುಖ್ಯಸ್ಥರು 2007ರಲ್ಲಿ ಮೀನುಗಾರರ ಮುಂದೆ ಅವರ ಕಸುಬಿಗೆ ಯಾವ ತೊಂದರೆಯಾಗದಂತೆ ಬೇಕ್ ವಾಟರ್ ನಿರ್ಮಿಸಿ ಡ್ರಜಿಗ್ ಕಾಮಗಾರಿ ಜತೆ ಬಂದರು ಕಟ್ಟುವುದಾಗಿ ಹೇಳಿದ್ದರಿಂದ ಅಂದಿನ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರೆವೆರಿಸಿದ್ದರು. ಎಂದ ವೈದ್ಯ ಈಗಿನ ಕಾಮಗಾರಿ ಹಿಂದಿನ ನೀಲಿ ನಕ್ಷೆಯಂತಿಲ್ಲವೆಂದು ಆರೋಪಿಸಿದ್ದಾರೆ.

ಅಂದು ಯೋಜನೆಯ ನೀಲ ನಕ್ಷೆಯಲ್ಲಿ 40 ಮೀಟರ್ ಅಗಲದ ರಸ್ತೆ, ರೈಲ್ವೆಹಳಿ, ನೀರು ಸರಬರಾಜು ಯೋಜನೆಗಳು ಇರಲಿಲ್ಲ. ಈಗ ಇದೆಲ್ಲ ಸೇರಿಸಲಾಗಿದೆ. ಮೀನುಗಾರರ ಮನೆ ಇರುವ ಜಾಗ ಸರಕಾರದ್ದು ಎನ್ನುತ್ತಾರೆ ಶಾಸಕರು. ಮರುಕ್ಷಣವೆ ಮೀನುಗಾರರ ಒಂದು ಮನೆಯೂ ತೆರವುಗೊಳಿಸುವುದಿಲ್ಲ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದ ವೈದ್ಯ, ಯೋಜನೆಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದರು.

ಶಾಸಕರಿಗೆ ಪೋರ್ಟ್ ಪ್ರೈ.ಲಿ ಮೇಲೇಕೆ ಪ್ರೀತಿಯಿದೆ ಎಂದು ತಿಳಿಯುತ್ತಿಲ್ಲ. ಯೋಜನೆಯ ಅವಾಂತರದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ; ಯಾವಾಗ ಬೇಕಿದ್ದರು ಮೀನುಗಾರರ ಉಪಸ್ಥಿತಿಯಲ್ಲಿ ಕರೆದರೆ ದಾಖಲೆ ಸಮೇತ ಬರುತ್ತೇನೆ. ಕಾಸರಗೋಡು ಗ್ರಾ.ಪಂ ಯೋಜನೆಗೆ ಎನ್‌.ಒ.ಸಿ ಕೊಟ್ಟಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎನ್ನುವುದಾದರೆ ಮೀನುಗಾರರು 52ದಿನಗಳ ಕಾಲ ಧರಣಿ ನಡೆಸಿದಾಗಲಾದರೂ ಶಾಸಕರು ರದ್ದು ಮಾಡಿಸಬಹುದಿತ್ತಲ್ಲ ಎಂದವರು ಪ್ರಶ್ನಿಸಿದರು.

PC : Oneindia Kannada, (ಶಾಸಕ ಸುನೀಲ್ ನಾಯ್ಕ)

ಯಾವ ಮೀನುಗಾರರ ಮತದಿಂದ ಗೆದ್ದಿದ್ದರೋ ಅದೇ ಮೀನುಗಾರರನ್ನು ಈಗ ಕೇವಲವಾಗಿ ಕಾಣಲಾಗುತ್ತಿದೆ. ಪಾವಿನಕುರ್ವಾ ನಡುಗಡ್ಡೆಯಿಂದ ಮಂಕಿಜಡ್ಡಿ ಗುಡ್ಡದವರೆಗೆ ಬಂದರು ಯೋಜನೆ ಸಾಗಲಿದೆ. ಮಂಕಿಜಡ್ಡಿ ಗುಡ್ಡದ 150 ಎಕರೆ ಅರಣ್ಯ ಪ್ರದೇಶ ಲೀಸಿಗೆ ಪಡೆದು ಲೂಟಿಗೆ ಪ್ಲಾನ್ ಹಾಕಲಾಗಿದೆ. ಟೂಲ್‌ಕಿಟ್ ಮಾಡಿ ರಾಜಕೀಯ ಲಾಭ ಬಿಜೆಪಿಗರು ಎತ್ತಲು ಹವಣಿಸುತ್ತಾರೆ. ಕಳೆದ ಚುನಾವಣೆ ಹೊತ್ತಲ್ಲಿ ಪರೇಶ್ ಮೇಸ್ತ ಮತ್ತು ಮಾಗೋಡಿನ ಕಾವ್ಯ ಪ್ರಕರಣದಲ್ಲಿ ಟೂಲ್‌ಕಿಟ್ ಮಾಡಿದ್ದರು. ಮಂಕಿದೋಣಿ ದುರಂತದಲ್ಲಿ ಮೀನುಗಾರರಿಗೆ ನ್ಯಾಯ ಕೊಡಿಸಲಾಗದವರಿಗೆ ಟೂಲ್‌ಕಿಟ್‌ಗಷ್ಟೆ ಮೀನುಗಾರರು ಬೇಕು ಎಂದು ಆಕ್ರೋಶ ವೈದ್ಯ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...