Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

- Advertisement -
- Advertisement -

ಹೊನ್ನಾವರದಲ್ಲಿ ನಡೆಯುತ್ತಿರುವ ಖಾಸಗಿ ಬಂದರು ಕಾಮಗಾರಿಯಿಂದ ತಮ್ಮ ಬದುಕು ಮೂರಾಬಟ್ಟೆ ಮಾಡುತ್ತದೆಂಬ ಆತಂಕದಲ್ಲಿ ಮೀನುಗಾರರು ಕಂಗಾಲಾಗಿದ್ದರೆ, ಮೀನುಗಾರರ ಅಸಾಯಕತೆಯನ್ನು ರಾಜಕಾರಣಿಗಳು ಪ್ರತಿಷ್ಠೆಯ ಮೇಲಾಟಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹಾಲಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಬಂದರು ಯೋಜನೆ ಪರವಾಗಿದ್ದಾರೆ, ಮಾಜಿ ಶಾಸಕ ಮಂಕಾಳ್ ವೈದ್ಯ ಮೀನುಗಾರರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ. ವಾಣಿಜ್ಯ ಬಂದರು ನಿರ್ಮಾಣ ಕೈಬಿಡಬೇಕು ಇಲ್ಲದಿದ್ದರೆ ಮೀನುಗಾರರಿಗೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲದು ಎಂದವರು ಹೇಳಿದ್ದಾರೆ.

PC : Bhatkallys.com (ಮಂಕಾಳ್ ವೈದ್ಯ)

ಪತ್ರಿಕಾಗೋಷ್ಠಿ ಮಾತನಾಡಿದ ಅವರು, “ಶಾಸಕ ಸುನೀಲ್ ನಾಯ್ಕ ಎರಡು ನಾಲಿಗೆ ಮನುಷ್ಯ. ಅವರು ಮೀನುಗಾರರ ಪರ ನಿಲ್ಲಬೇಕು, ಇಲ್ಲವೆ ಪೋರ್ಟ್ ಕಂಪನಿ ಜತೆಗಿರಲಿ ಎಂದು ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂದರು ಕಾಮಗಾರಿ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಮತ್ತು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳುತ್ತಿದ್ದಾರೆ. ಇದೇನೊ ನಿಜ. ಆದರೆ 2010ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಸದ್ರಿ ಯೋಜನೆಗೆ ಮಂಜೂರು ನೀಡಲಾಗಿತ್ತು. ಆ ಹೊತ್ತಲ್ಲಿ ಬಂದರು ಮತ್ತು ಮೀನುಗಾರಿಕಾ ಮಂತ್ರಿಯಾಗಿದ್ದ ಕೃಷ್ಣಪಾಲೆಮಾರ್ ಹೊನ್ನಾವರ ಪೋರ್ಟ್ ಕಂಪನಿಗೆ 5 ಎಕರೆ ಜಾಗ ನೀಡಿದ್ದರು. ಆ ನಂತರ ಮುಳುಗಡೆಯಾಗಿರುವ ಮಲ್ಲುಕುರ್ವಾದ 5 ಎಕರೆ ಸೇರಿಸಿ ಒಟ್ಟೂ 10 ಎಕರೆ ಪ್ರದೇಶ ಪೋರ್ಟ್ ಪ್ರೈ.ಲೀ ಬಿಜೆಪಿ ಸರ್ಕಾರವೇ ಕೊಟ್ಟಿತ್ತು. ಈಗ 50 ಎಕರೆ ಖಾಸಗಿ ಬಂದರಿಗಾಗಿ ಮೀಸಲಿಡಲಾಗಿದೆ” ಎಂದು ವೈದ್ಯ ತಿಳಿಸಿದ್ದಾರೆ.

ಹೊನ್ನಾವರ ಪೋರ್ಟ್ ಕಂಪನಿ ಮುಖ್ಯಸ್ಥರು 2007ರಲ್ಲಿ ಮೀನುಗಾರರ ಮುಂದೆ ಅವರ ಕಸುಬಿಗೆ ಯಾವ ತೊಂದರೆಯಾಗದಂತೆ ಬೇಕ್ ವಾಟರ್ ನಿರ್ಮಿಸಿ ಡ್ರಜಿಗ್ ಕಾಮಗಾರಿ ಜತೆ ಬಂದರು ಕಟ್ಟುವುದಾಗಿ ಹೇಳಿದ್ದರಿಂದ ಅಂದಿನ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರೆವೆರಿಸಿದ್ದರು. ಎಂದ ವೈದ್ಯ ಈಗಿನ ಕಾಮಗಾರಿ ಹಿಂದಿನ ನೀಲಿ ನಕ್ಷೆಯಂತಿಲ್ಲವೆಂದು ಆರೋಪಿಸಿದ್ದಾರೆ.

ಅಂದು ಯೋಜನೆಯ ನೀಲ ನಕ್ಷೆಯಲ್ಲಿ 40 ಮೀಟರ್ ಅಗಲದ ರಸ್ತೆ, ರೈಲ್ವೆಹಳಿ, ನೀರು ಸರಬರಾಜು ಯೋಜನೆಗಳು ಇರಲಿಲ್ಲ. ಈಗ ಇದೆಲ್ಲ ಸೇರಿಸಲಾಗಿದೆ. ಮೀನುಗಾರರ ಮನೆ ಇರುವ ಜಾಗ ಸರಕಾರದ್ದು ಎನ್ನುತ್ತಾರೆ ಶಾಸಕರು. ಮರುಕ್ಷಣವೆ ಮೀನುಗಾರರ ಒಂದು ಮನೆಯೂ ತೆರವುಗೊಳಿಸುವುದಿಲ್ಲ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದ ವೈದ್ಯ, ಯೋಜನೆಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದರು.

ಶಾಸಕರಿಗೆ ಪೋರ್ಟ್ ಪ್ರೈ.ಲಿ ಮೇಲೇಕೆ ಪ್ರೀತಿಯಿದೆ ಎಂದು ತಿಳಿಯುತ್ತಿಲ್ಲ. ಯೋಜನೆಯ ಅವಾಂತರದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ; ಯಾವಾಗ ಬೇಕಿದ್ದರು ಮೀನುಗಾರರ ಉಪಸ್ಥಿತಿಯಲ್ಲಿ ಕರೆದರೆ ದಾಖಲೆ ಸಮೇತ ಬರುತ್ತೇನೆ. ಕಾಸರಗೋಡು ಗ್ರಾ.ಪಂ ಯೋಜನೆಗೆ ಎನ್‌.ಒ.ಸಿ ಕೊಟ್ಟಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎನ್ನುವುದಾದರೆ ಮೀನುಗಾರರು 52ದಿನಗಳ ಕಾಲ ಧರಣಿ ನಡೆಸಿದಾಗಲಾದರೂ ಶಾಸಕರು ರದ್ದು ಮಾಡಿಸಬಹುದಿತ್ತಲ್ಲ ಎಂದವರು ಪ್ರಶ್ನಿಸಿದರು.

PC : Oneindia Kannada, (ಶಾಸಕ ಸುನೀಲ್ ನಾಯ್ಕ)

ಯಾವ ಮೀನುಗಾರರ ಮತದಿಂದ ಗೆದ್ದಿದ್ದರೋ ಅದೇ ಮೀನುಗಾರರನ್ನು ಈಗ ಕೇವಲವಾಗಿ ಕಾಣಲಾಗುತ್ತಿದೆ. ಪಾವಿನಕುರ್ವಾ ನಡುಗಡ್ಡೆಯಿಂದ ಮಂಕಿಜಡ್ಡಿ ಗುಡ್ಡದವರೆಗೆ ಬಂದರು ಯೋಜನೆ ಸಾಗಲಿದೆ. ಮಂಕಿಜಡ್ಡಿ ಗುಡ್ಡದ 150 ಎಕರೆ ಅರಣ್ಯ ಪ್ರದೇಶ ಲೀಸಿಗೆ ಪಡೆದು ಲೂಟಿಗೆ ಪ್ಲಾನ್ ಹಾಕಲಾಗಿದೆ. ಟೂಲ್‌ಕಿಟ್ ಮಾಡಿ ರಾಜಕೀಯ ಲಾಭ ಬಿಜೆಪಿಗರು ಎತ್ತಲು ಹವಣಿಸುತ್ತಾರೆ. ಕಳೆದ ಚುನಾವಣೆ ಹೊತ್ತಲ್ಲಿ ಪರೇಶ್ ಮೇಸ್ತ ಮತ್ತು ಮಾಗೋಡಿನ ಕಾವ್ಯ ಪ್ರಕರಣದಲ್ಲಿ ಟೂಲ್‌ಕಿಟ್ ಮಾಡಿದ್ದರು. ಮಂಕಿದೋಣಿ ದುರಂತದಲ್ಲಿ ಮೀನುಗಾರರಿಗೆ ನ್ಯಾಯ ಕೊಡಿಸಲಾಗದವರಿಗೆ ಟೂಲ್‌ಕಿಟ್‌ಗಷ್ಟೆ ಮೀನುಗಾರರು ಬೇಕು ಎಂದು ಆಕ್ರೋಶ ವೈದ್ಯ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...