Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

- Advertisement -
- Advertisement -

ಹೊನ್ನಾವರದಲ್ಲಿ ನಡೆಯುತ್ತಿರುವ ಖಾಸಗಿ ಬಂದರು ಕಾಮಗಾರಿಯಿಂದ ತಮ್ಮ ಬದುಕು ಮೂರಾಬಟ್ಟೆ ಮಾಡುತ್ತದೆಂಬ ಆತಂಕದಲ್ಲಿ ಮೀನುಗಾರರು ಕಂಗಾಲಾಗಿದ್ದರೆ, ಮೀನುಗಾರರ ಅಸಾಯಕತೆಯನ್ನು ರಾಜಕಾರಣಿಗಳು ಪ್ರತಿಷ್ಠೆಯ ಮೇಲಾಟಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹಾಲಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಬಂದರು ಯೋಜನೆ ಪರವಾಗಿದ್ದಾರೆ, ಮಾಜಿ ಶಾಸಕ ಮಂಕಾಳ್ ವೈದ್ಯ ಮೀನುಗಾರರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ. ವಾಣಿಜ್ಯ ಬಂದರು ನಿರ್ಮಾಣ ಕೈಬಿಡಬೇಕು ಇಲ್ಲದಿದ್ದರೆ ಮೀನುಗಾರರಿಗೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲದು ಎಂದವರು ಹೇಳಿದ್ದಾರೆ.

PC : Bhatkallys.com (ಮಂಕಾಳ್ ವೈದ್ಯ)

ಪತ್ರಿಕಾಗೋಷ್ಠಿ ಮಾತನಾಡಿದ ಅವರು, “ಶಾಸಕ ಸುನೀಲ್ ನಾಯ್ಕ ಎರಡು ನಾಲಿಗೆ ಮನುಷ್ಯ. ಅವರು ಮೀನುಗಾರರ ಪರ ನಿಲ್ಲಬೇಕು, ಇಲ್ಲವೆ ಪೋರ್ಟ್ ಕಂಪನಿ ಜತೆಗಿರಲಿ ಎಂದು ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂದರು ಕಾಮಗಾರಿ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಮತ್ತು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳುತ್ತಿದ್ದಾರೆ. ಇದೇನೊ ನಿಜ. ಆದರೆ 2010ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಸದ್ರಿ ಯೋಜನೆಗೆ ಮಂಜೂರು ನೀಡಲಾಗಿತ್ತು. ಆ ಹೊತ್ತಲ್ಲಿ ಬಂದರು ಮತ್ತು ಮೀನುಗಾರಿಕಾ ಮಂತ್ರಿಯಾಗಿದ್ದ ಕೃಷ್ಣಪಾಲೆಮಾರ್ ಹೊನ್ನಾವರ ಪೋರ್ಟ್ ಕಂಪನಿಗೆ 5 ಎಕರೆ ಜಾಗ ನೀಡಿದ್ದರು. ಆ ನಂತರ ಮುಳುಗಡೆಯಾಗಿರುವ ಮಲ್ಲುಕುರ್ವಾದ 5 ಎಕರೆ ಸೇರಿಸಿ ಒಟ್ಟೂ 10 ಎಕರೆ ಪ್ರದೇಶ ಪೋರ್ಟ್ ಪ್ರೈ.ಲೀ ಬಿಜೆಪಿ ಸರ್ಕಾರವೇ ಕೊಟ್ಟಿತ್ತು. ಈಗ 50 ಎಕರೆ ಖಾಸಗಿ ಬಂದರಿಗಾಗಿ ಮೀಸಲಿಡಲಾಗಿದೆ” ಎಂದು ವೈದ್ಯ ತಿಳಿಸಿದ್ದಾರೆ.

ಹೊನ್ನಾವರ ಪೋರ್ಟ್ ಕಂಪನಿ ಮುಖ್ಯಸ್ಥರು 2007ರಲ್ಲಿ ಮೀನುಗಾರರ ಮುಂದೆ ಅವರ ಕಸುಬಿಗೆ ಯಾವ ತೊಂದರೆಯಾಗದಂತೆ ಬೇಕ್ ವಾಟರ್ ನಿರ್ಮಿಸಿ ಡ್ರಜಿಗ್ ಕಾಮಗಾರಿ ಜತೆ ಬಂದರು ಕಟ್ಟುವುದಾಗಿ ಹೇಳಿದ್ದರಿಂದ ಅಂದಿನ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರೆವೆರಿಸಿದ್ದರು. ಎಂದ ವೈದ್ಯ ಈಗಿನ ಕಾಮಗಾರಿ ಹಿಂದಿನ ನೀಲಿ ನಕ್ಷೆಯಂತಿಲ್ಲವೆಂದು ಆರೋಪಿಸಿದ್ದಾರೆ.

ಅಂದು ಯೋಜನೆಯ ನೀಲ ನಕ್ಷೆಯಲ್ಲಿ 40 ಮೀಟರ್ ಅಗಲದ ರಸ್ತೆ, ರೈಲ್ವೆಹಳಿ, ನೀರು ಸರಬರಾಜು ಯೋಜನೆಗಳು ಇರಲಿಲ್ಲ. ಈಗ ಇದೆಲ್ಲ ಸೇರಿಸಲಾಗಿದೆ. ಮೀನುಗಾರರ ಮನೆ ಇರುವ ಜಾಗ ಸರಕಾರದ್ದು ಎನ್ನುತ್ತಾರೆ ಶಾಸಕರು. ಮರುಕ್ಷಣವೆ ಮೀನುಗಾರರ ಒಂದು ಮನೆಯೂ ತೆರವುಗೊಳಿಸುವುದಿಲ್ಲ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದ ವೈದ್ಯ, ಯೋಜನೆಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದರು.

ಶಾಸಕರಿಗೆ ಪೋರ್ಟ್ ಪ್ರೈ.ಲಿ ಮೇಲೇಕೆ ಪ್ರೀತಿಯಿದೆ ಎಂದು ತಿಳಿಯುತ್ತಿಲ್ಲ. ಯೋಜನೆಯ ಅವಾಂತರದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ; ಯಾವಾಗ ಬೇಕಿದ್ದರು ಮೀನುಗಾರರ ಉಪಸ್ಥಿತಿಯಲ್ಲಿ ಕರೆದರೆ ದಾಖಲೆ ಸಮೇತ ಬರುತ್ತೇನೆ. ಕಾಸರಗೋಡು ಗ್ರಾ.ಪಂ ಯೋಜನೆಗೆ ಎನ್‌.ಒ.ಸಿ ಕೊಟ್ಟಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎನ್ನುವುದಾದರೆ ಮೀನುಗಾರರು 52ದಿನಗಳ ಕಾಲ ಧರಣಿ ನಡೆಸಿದಾಗಲಾದರೂ ಶಾಸಕರು ರದ್ದು ಮಾಡಿಸಬಹುದಿತ್ತಲ್ಲ ಎಂದವರು ಪ್ರಶ್ನಿಸಿದರು.

PC : Oneindia Kannada, (ಶಾಸಕ ಸುನೀಲ್ ನಾಯ್ಕ)

ಯಾವ ಮೀನುಗಾರರ ಮತದಿಂದ ಗೆದ್ದಿದ್ದರೋ ಅದೇ ಮೀನುಗಾರರನ್ನು ಈಗ ಕೇವಲವಾಗಿ ಕಾಣಲಾಗುತ್ತಿದೆ. ಪಾವಿನಕುರ್ವಾ ನಡುಗಡ್ಡೆಯಿಂದ ಮಂಕಿಜಡ್ಡಿ ಗುಡ್ಡದವರೆಗೆ ಬಂದರು ಯೋಜನೆ ಸಾಗಲಿದೆ. ಮಂಕಿಜಡ್ಡಿ ಗುಡ್ಡದ 150 ಎಕರೆ ಅರಣ್ಯ ಪ್ರದೇಶ ಲೀಸಿಗೆ ಪಡೆದು ಲೂಟಿಗೆ ಪ್ಲಾನ್ ಹಾಕಲಾಗಿದೆ. ಟೂಲ್‌ಕಿಟ್ ಮಾಡಿ ರಾಜಕೀಯ ಲಾಭ ಬಿಜೆಪಿಗರು ಎತ್ತಲು ಹವಣಿಸುತ್ತಾರೆ. ಕಳೆದ ಚುನಾವಣೆ ಹೊತ್ತಲ್ಲಿ ಪರೇಶ್ ಮೇಸ್ತ ಮತ್ತು ಮಾಗೋಡಿನ ಕಾವ್ಯ ಪ್ರಕರಣದಲ್ಲಿ ಟೂಲ್‌ಕಿಟ್ ಮಾಡಿದ್ದರು. ಮಂಕಿದೋಣಿ ದುರಂತದಲ್ಲಿ ಮೀನುಗಾರರಿಗೆ ನ್ಯಾಯ ಕೊಡಿಸಲಾಗದವರಿಗೆ ಟೂಲ್‌ಕಿಟ್‌ಗಷ್ಟೆ ಮೀನುಗಾರರು ಬೇಕು ಎಂದು ಆಕ್ರೋಶ ವೈದ್ಯ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....