Homeಮುಖಪುಟಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ 'ಸ್ವಗತಗಳು'

ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ...

- Advertisement -
- Advertisement -

ಸೆಪ್ಟೆಂಬರ್‌ 15 ರ ವರೆಗೆ ಪದ್ಮಶ್ರಿ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಕಳೆದ ಭಾನುವಾರ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದ್ದವು. ಆದರೆ ಇದೀಗ ಕನ್ನಡ ಮತ್ತೊಬ್ಬ ಪ್ರತಿಭಾನ್ವಿತ ನಟ, ಕನ್ನಡ ಸಿನಿಮಾಗಳಲ್ಲಿ ಬಡವರ ಪ್ರತಿನಿಧಿ ವೈಜನಾಥ ಬಿರಾದಾರ ಅವರಿಗೆ ಪದ್ಮಶ್ರೀ ಸಿಗಬೇಕು ಎಂದು ಆನ್‌ಲೈನ್‌ ಅಭಿಯಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವೈಜನಾಥ ಬಿರಾದರ ಅವರ ಬಗ್ಗೆ ಶಶಿಧರ ಚಿತ್ರದುರ್ಗರವರು ಬರೆದ ಲೇಖನವನ್ನು ಮರು ಪ್ರಕಟಿಸುತ್ತಿದ್ದೇವೆ.

‘ವೈಜನಾಥ ಬಿರಾದಾರ’ ಎಂದಾಕ್ಷಣ ತೆರೆಯ ಮೇಲಿನ ಶೋಷಿತ ವ್ಯಕ್ತಿಯೊಬ್ಬನ ಚಿತ್ರ ಕಣ್ಮುಂದೆ ಬರುತ್ತದೆ. ಅವಮಾನ, ಬಡತನ, ಸಂಕಟಗಳನ್ನೆಲ್ಲಾ ಹೊಟ್ಟೆಯಲ್ಲಿಟ್ಟುಕೊಂಡು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪಾತ್ರಗಳಲ್ಲೇ ಅವರು ಹೆಚ್ಚಾಗಿ ಕಾಣಿಸಿಕೊಂಡದ್ದು. ಹಿರಿಯ ನಟನಿಗೆ ಪದ್ಮಶ್ರಿ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಲಾಗುತ್ತಿದೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ನಟ ‘ವೈಜನಾಥ ಬಿರಾದಾರ’. ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ. ನಟಿಸಿದ ಚಿತ್ರಗಳ ಸಂಖ್ಯೆ ಐನೂರರ ಆಸುಪಾಸಿನಲ್ಲಿದೆ. ತಮ್ಮ ‘ಬಿರಾದಾರ ಮಿತ್ರ ಮಂಡಳಿ’ ತಂಡದೊಂದಿಗೆ ಇಂದಿಗೂ ಅವರು ನಾಟಕಗಳನ್ನು ಪ್ರದರ್ಶಿಸುತ್ತಾರೆ. ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವ ಕೊಡಮಾಡುವ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿದೆ.

ಸದ್ಯ ಕೊರೋನಾ ಸಂಕಟದಿಂದಾಗಿ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದರಿಂದಾಗಿ ತೊಂದರೆಗೀಡಾಗಿರುವುದು ಅವರ ಮಾತುಗಳಲ್ಲಿ ವೇದ್ಯವಾಗುತ್ತದೆ. “ಕಲಾವಿದರಿಗೆ ಸಂಕಷ್ಟ ಯಾವಾಗ ತಪ್ಪಿದೆ? ಕೊರೋನಾ ಕಾಲ ಕಲಾವಿದರಿಗೆ ಸಂಕಷ್ಟ ತಂದಿದೆ. ನಮಗೆ ಕಲೆ ಇದೆ, ಖಾಯಂ ನೆಲೆ ಇಲ್ಲ. ಹೀಗೇ ಜೀವನ ನಡೆಸಿಕೊಂಡು ಹೋಗ್ತಾ ಇರೋದು ಅಷ್ಟೆ” ಎನ್ನುತ್ತಾರವರು.

ಕನ್ನಡಿಗರು ತಮ್ಮ ಮೇಲಿಟ್ಟಿರುವ ಅಭಿಮಾನ, ಪ್ರೀತಿಗೆ ಋಣಿ ಎನ್ನುತ್ತಾರವರು. ಮುಂದೆ ಮತ್ತಷ್ಟು ವೈವಿಧ್ಯಮಯ ಪಾತ್ರಗಳಲ್ಲಿ ತೊಡಗಿಸಿಕೊಳ್ಳುವ ಇರಾದೆ ಅವರದ್ದು. ಈ ಸಂದರ್ಭದಲ್ಲಿ ಅವರು ತಮ್ಮ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿನ ಎರಡು ಶೂಟಿಂಗ್ ಸೋಜಿಗಗಳನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ. (ಬಿರಾದಾರ್ ಅವರು ಹೇಳಿಕೊಂಡಂತೆ…)

ಅದೇ ಡಬ್ಬಿಂಗ್ ಕಣೋ!

‘ಶಂಖನಾದ’ ಚಿತ್ರದಲ್ಲಿ ನಟಿಸಿದ ನಂತರ ನಿರ್ದೇಶಕ ಉಮೇಶ್ ಕುಲಕರ್ಣಿ, ‘ಏನ್ ಬ್ರದರ್ ಡಬ್ಬಿಂಗ್ ಮಾಡ್ತಿಯೇನಪ್ಪ?’ ಎಂದು ಕೇಳಿದರು. ಅದಿನ್ನೂ ನನಗೆ ಎರಡನೇ ಸಿನಿಮಾ ಆದ್ದರಿಂದ ಡಬ್ಬಿಂಗ್ ಏನೆಂದೇ ಗೊತ್ತಿರಲಿಲ್ಲ. ಹಾಗಾಗಿ, ‘ಇಲ್ಲ ಸಾರ್’ ಅಂದೆ. ‘ಆಯ್ತು, ಬೆಳಗ್ಗೆ ಚಾಮುಂಡೇಶ್ವರಿ ಸ್ಟುಡಿಯೋಗೆ ಬಾ. ಅಲ್ಲಿ ನೋಡ್ಕೋವಂತೆ’ ಎಂದರು ಕುಲಕರ್ಣಿ. ಬೆಳಕ್ಕೆ 8ಕ್ಕೆ ಹೋಗಿ ತಿಂಡಿ ತಿಂದು ಸ್ಟುಡಿಯೋದಲ್ಲಿ ಕುಳಿತುಕೊಂಡೆ. ಮಧ್ಯಾಹ್ನ ಒಂದೂವರೆಗೆ ಊಟವೂ ಆಯ್ತು. ‘ಏನಪ್ಪಾ, ಡಬ್ಬಿಂಗ್ ನೋಡಿಕೊಂಡ್ಯಾ?’ ಅಂತ ಕೇಳಿದರು ಕುಲಕರ್ಣಿ. ನಾನು ಇಲ್ಲವೆಂದೆ. ‘ಮತ್ತೆ, ಬೆಳಗ್ಗೆಯಿಂದ ಇಲ್ಲಿ ಏನು ಮಾಡಿದೆ?’ ಎಂದರು ನಿರ್ದೇಶಕರು. ‘ನೀವು ಏನೇನೋ ಮಾಡ್ತಿದ್ರಲ್ಲಾ, ನೋಡ್ತಾ ಕುಳಿತಿದ್ದೆ’ ಎಂದೆ. ‘ಏ ದಡ್ಡಾ ಅದೇ ಡಬ್ಬಿಂಗ್ ಕಣೋ!’ ಅಂದ್ರು ಉಮೇಶ್ ಕುಲಕರ್ಣಿ.

ಫೋಟೋ ಕೃಪೆ: ಮನು

ಮೆಜಸ್ಟಿಕ್‍ನಲ್ಲಿ ತಗ್ಲಾಕ್ಕೊಂಡ ಕುಡುಕರು!

ಉತ್ತರ ಕರ್ನಾಟಕದಲ್ಲೊಂದು ನಾಟಕ ಮುಗಿಸಿಕೊಂಡು ಬಸ್‍ನಲ್ಲಿ ಬೆಂಗಳೂರಿಗೆ ಬಂದಿಳಿದೆ. ಮೆಜಸ್ಟಿಕ್‍ನಲ್ಲಿ ಬಸ್ ಇಳಿದು ಬಿಎಂಟಿಸಿ ಬಸ್‍ಸ್ಟ್ಯಾಂಡ್ ಕಡೆಗೆ ಬರ್ತಾ ಇದ್ದೆ. ಫುಲ್ ಟೈಟಾಗಿದ್ದ ಇಬ್ಬರು ಕುಡುಕರು ತೂರಾಡುತ್ತಾ ಎದುರಾದರು. `ಸಾರ್, ನೀವು! ನಾವು ನಿಮ್ ಅಭಿಮಾನಿಗಳು. ಬನ್ನಿ ನಮ್ಗೆ ಕಂಪನಿ ಕೊಡಿ..’ ಎಂದು ಕೈಹಿಡಿದುಕೊಂಡರು. ಇದೇನು ಅಭಿಮಾನವೋ, ಕುಚೇಷ್ಟೆಯೋ ಒಂದೂ ಗೊತ್ತಾಗಲಿಲ್ಲ. `ಇಲ್ರಪ್ಪಾ, ನಾನು ಕುಡುಕನ ಪಾತ್ರ ಮಾಡ್ತೀನಷ್ಟೆ, ಕುಡಿಯೋಲ್ಲ’ ಅಂದೆ. `ಲೇಯ್, ಸುಳ್ಳು ಹೇಳ್ಬೇಡ! ಕುಡೀದೇ ಹೆಂಗಲೆ ನಿಶೆ ಏರ್ತದೆ? ಈಗ ಸುಮ್ನೆ ಬತ್ತಿಯೋ, ಇಲ್ವೋ!?’ ಎಂದು ಎಳೆದಾಡತೊಡಗಿದರು. ಅಷ್ಟರಲ್ಲಿ ನನ್ನನ್ನು ಗುರುತು ಹಿಡಿದ ಮೂರ್ನಾಲ್ಕು ಮಂದಿ ಸಂಕಷ್ಟದಿಂದ ಪಾರು ಮಾಡಿದರು!

  • ಶಶಿಧರ ಚಿತ್ರದುರ್ಗ

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...