Homeಮುಖಪುಟಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ 'ಸ್ವಗತಗಳು'

ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ...

- Advertisement -
- Advertisement -

ಸೆಪ್ಟೆಂಬರ್‌ 15 ರ ವರೆಗೆ ಪದ್ಮಶ್ರಿ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಕಳೆದ ಭಾನುವಾರ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದ್ದವು. ಆದರೆ ಇದೀಗ ಕನ್ನಡ ಮತ್ತೊಬ್ಬ ಪ್ರತಿಭಾನ್ವಿತ ನಟ, ಕನ್ನಡ ಸಿನಿಮಾಗಳಲ್ಲಿ ಬಡವರ ಪ್ರತಿನಿಧಿ ವೈಜನಾಥ ಬಿರಾದಾರ ಅವರಿಗೆ ಪದ್ಮಶ್ರೀ ಸಿಗಬೇಕು ಎಂದು ಆನ್‌ಲೈನ್‌ ಅಭಿಯಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವೈಜನಾಥ ಬಿರಾದರ ಅವರ ಬಗ್ಗೆ ಶಶಿಧರ ಚಿತ್ರದುರ್ಗರವರು ಬರೆದ ಲೇಖನವನ್ನು ಮರು ಪ್ರಕಟಿಸುತ್ತಿದ್ದೇವೆ.

‘ವೈಜನಾಥ ಬಿರಾದಾರ’ ಎಂದಾಕ್ಷಣ ತೆರೆಯ ಮೇಲಿನ ಶೋಷಿತ ವ್ಯಕ್ತಿಯೊಬ್ಬನ ಚಿತ್ರ ಕಣ್ಮುಂದೆ ಬರುತ್ತದೆ. ಅವಮಾನ, ಬಡತನ, ಸಂಕಟಗಳನ್ನೆಲ್ಲಾ ಹೊಟ್ಟೆಯಲ್ಲಿಟ್ಟುಕೊಂಡು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪಾತ್ರಗಳಲ್ಲೇ ಅವರು ಹೆಚ್ಚಾಗಿ ಕಾಣಿಸಿಕೊಂಡದ್ದು. ಹಿರಿಯ ನಟನಿಗೆ ಪದ್ಮಶ್ರಿ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಲಾಗುತ್ತಿದೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ನಟ ‘ವೈಜನಾಥ ಬಿರಾದಾರ’. ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ. ನಟಿಸಿದ ಚಿತ್ರಗಳ ಸಂಖ್ಯೆ ಐನೂರರ ಆಸುಪಾಸಿನಲ್ಲಿದೆ. ತಮ್ಮ ‘ಬಿರಾದಾರ ಮಿತ್ರ ಮಂಡಳಿ’ ತಂಡದೊಂದಿಗೆ ಇಂದಿಗೂ ಅವರು ನಾಟಕಗಳನ್ನು ಪ್ರದರ್ಶಿಸುತ್ತಾರೆ. ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವ ಕೊಡಮಾಡುವ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿದೆ.

ಸದ್ಯ ಕೊರೋನಾ ಸಂಕಟದಿಂದಾಗಿ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದರಿಂದಾಗಿ ತೊಂದರೆಗೀಡಾಗಿರುವುದು ಅವರ ಮಾತುಗಳಲ್ಲಿ ವೇದ್ಯವಾಗುತ್ತದೆ. “ಕಲಾವಿದರಿಗೆ ಸಂಕಷ್ಟ ಯಾವಾಗ ತಪ್ಪಿದೆ? ಕೊರೋನಾ ಕಾಲ ಕಲಾವಿದರಿಗೆ ಸಂಕಷ್ಟ ತಂದಿದೆ. ನಮಗೆ ಕಲೆ ಇದೆ, ಖಾಯಂ ನೆಲೆ ಇಲ್ಲ. ಹೀಗೇ ಜೀವನ ನಡೆಸಿಕೊಂಡು ಹೋಗ್ತಾ ಇರೋದು ಅಷ್ಟೆ” ಎನ್ನುತ್ತಾರವರು.

ಕನ್ನಡಿಗರು ತಮ್ಮ ಮೇಲಿಟ್ಟಿರುವ ಅಭಿಮಾನ, ಪ್ರೀತಿಗೆ ಋಣಿ ಎನ್ನುತ್ತಾರವರು. ಮುಂದೆ ಮತ್ತಷ್ಟು ವೈವಿಧ್ಯಮಯ ಪಾತ್ರಗಳಲ್ಲಿ ತೊಡಗಿಸಿಕೊಳ್ಳುವ ಇರಾದೆ ಅವರದ್ದು. ಈ ಸಂದರ್ಭದಲ್ಲಿ ಅವರು ತಮ್ಮ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿನ ಎರಡು ಶೂಟಿಂಗ್ ಸೋಜಿಗಗಳನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ. (ಬಿರಾದಾರ್ ಅವರು ಹೇಳಿಕೊಂಡಂತೆ…)

ಅದೇ ಡಬ್ಬಿಂಗ್ ಕಣೋ!

‘ಶಂಖನಾದ’ ಚಿತ್ರದಲ್ಲಿ ನಟಿಸಿದ ನಂತರ ನಿರ್ದೇಶಕ ಉಮೇಶ್ ಕುಲಕರ್ಣಿ, ‘ಏನ್ ಬ್ರದರ್ ಡಬ್ಬಿಂಗ್ ಮಾಡ್ತಿಯೇನಪ್ಪ?’ ಎಂದು ಕೇಳಿದರು. ಅದಿನ್ನೂ ನನಗೆ ಎರಡನೇ ಸಿನಿಮಾ ಆದ್ದರಿಂದ ಡಬ್ಬಿಂಗ್ ಏನೆಂದೇ ಗೊತ್ತಿರಲಿಲ್ಲ. ಹಾಗಾಗಿ, ‘ಇಲ್ಲ ಸಾರ್’ ಅಂದೆ. ‘ಆಯ್ತು, ಬೆಳಗ್ಗೆ ಚಾಮುಂಡೇಶ್ವರಿ ಸ್ಟುಡಿಯೋಗೆ ಬಾ. ಅಲ್ಲಿ ನೋಡ್ಕೋವಂತೆ’ ಎಂದರು ಕುಲಕರ್ಣಿ. ಬೆಳಕ್ಕೆ 8ಕ್ಕೆ ಹೋಗಿ ತಿಂಡಿ ತಿಂದು ಸ್ಟುಡಿಯೋದಲ್ಲಿ ಕುಳಿತುಕೊಂಡೆ. ಮಧ್ಯಾಹ್ನ ಒಂದೂವರೆಗೆ ಊಟವೂ ಆಯ್ತು. ‘ಏನಪ್ಪಾ, ಡಬ್ಬಿಂಗ್ ನೋಡಿಕೊಂಡ್ಯಾ?’ ಅಂತ ಕೇಳಿದರು ಕುಲಕರ್ಣಿ. ನಾನು ಇಲ್ಲವೆಂದೆ. ‘ಮತ್ತೆ, ಬೆಳಗ್ಗೆಯಿಂದ ಇಲ್ಲಿ ಏನು ಮಾಡಿದೆ?’ ಎಂದರು ನಿರ್ದೇಶಕರು. ‘ನೀವು ಏನೇನೋ ಮಾಡ್ತಿದ್ರಲ್ಲಾ, ನೋಡ್ತಾ ಕುಳಿತಿದ್ದೆ’ ಎಂದೆ. ‘ಏ ದಡ್ಡಾ ಅದೇ ಡಬ್ಬಿಂಗ್ ಕಣೋ!’ ಅಂದ್ರು ಉಮೇಶ್ ಕುಲಕರ್ಣಿ.

ಫೋಟೋ ಕೃಪೆ: ಮನು

ಮೆಜಸ್ಟಿಕ್‍ನಲ್ಲಿ ತಗ್ಲಾಕ್ಕೊಂಡ ಕುಡುಕರು!

ಉತ್ತರ ಕರ್ನಾಟಕದಲ್ಲೊಂದು ನಾಟಕ ಮುಗಿಸಿಕೊಂಡು ಬಸ್‍ನಲ್ಲಿ ಬೆಂಗಳೂರಿಗೆ ಬಂದಿಳಿದೆ. ಮೆಜಸ್ಟಿಕ್‍ನಲ್ಲಿ ಬಸ್ ಇಳಿದು ಬಿಎಂಟಿಸಿ ಬಸ್‍ಸ್ಟ್ಯಾಂಡ್ ಕಡೆಗೆ ಬರ್ತಾ ಇದ್ದೆ. ಫುಲ್ ಟೈಟಾಗಿದ್ದ ಇಬ್ಬರು ಕುಡುಕರು ತೂರಾಡುತ್ತಾ ಎದುರಾದರು. `ಸಾರ್, ನೀವು! ನಾವು ನಿಮ್ ಅಭಿಮಾನಿಗಳು. ಬನ್ನಿ ನಮ್ಗೆ ಕಂಪನಿ ಕೊಡಿ..’ ಎಂದು ಕೈಹಿಡಿದುಕೊಂಡರು. ಇದೇನು ಅಭಿಮಾನವೋ, ಕುಚೇಷ್ಟೆಯೋ ಒಂದೂ ಗೊತ್ತಾಗಲಿಲ್ಲ. `ಇಲ್ರಪ್ಪಾ, ನಾನು ಕುಡುಕನ ಪಾತ್ರ ಮಾಡ್ತೀನಷ್ಟೆ, ಕುಡಿಯೋಲ್ಲ’ ಅಂದೆ. `ಲೇಯ್, ಸುಳ್ಳು ಹೇಳ್ಬೇಡ! ಕುಡೀದೇ ಹೆಂಗಲೆ ನಿಶೆ ಏರ್ತದೆ? ಈಗ ಸುಮ್ನೆ ಬತ್ತಿಯೋ, ಇಲ್ವೋ!?’ ಎಂದು ಎಳೆದಾಡತೊಡಗಿದರು. ಅಷ್ಟರಲ್ಲಿ ನನ್ನನ್ನು ಗುರುತು ಹಿಡಿದ ಮೂರ್ನಾಲ್ಕು ಮಂದಿ ಸಂಕಷ್ಟದಿಂದ ಪಾರು ಮಾಡಿದರು!

  • ಶಶಿಧರ ಚಿತ್ರದುರ್ಗ

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...