Homeಮುಖಪುಟಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ 'ಸ್ವಗತಗಳು'

ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ...

- Advertisement -
- Advertisement -

ಸೆಪ್ಟೆಂಬರ್‌ 15 ರ ವರೆಗೆ ಪದ್ಮಶ್ರಿ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಕಳೆದ ಭಾನುವಾರ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದ್ದವು. ಆದರೆ ಇದೀಗ ಕನ್ನಡ ಮತ್ತೊಬ್ಬ ಪ್ರತಿಭಾನ್ವಿತ ನಟ, ಕನ್ನಡ ಸಿನಿಮಾಗಳಲ್ಲಿ ಬಡವರ ಪ್ರತಿನಿಧಿ ವೈಜನಾಥ ಬಿರಾದಾರ ಅವರಿಗೆ ಪದ್ಮಶ್ರೀ ಸಿಗಬೇಕು ಎಂದು ಆನ್‌ಲೈನ್‌ ಅಭಿಯಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವೈಜನಾಥ ಬಿರಾದರ ಅವರ ಬಗ್ಗೆ ಶಶಿಧರ ಚಿತ್ರದುರ್ಗರವರು ಬರೆದ ಲೇಖನವನ್ನು ಮರು ಪ್ರಕಟಿಸುತ್ತಿದ್ದೇವೆ.

‘ವೈಜನಾಥ ಬಿರಾದಾರ’ ಎಂದಾಕ್ಷಣ ತೆರೆಯ ಮೇಲಿನ ಶೋಷಿತ ವ್ಯಕ್ತಿಯೊಬ್ಬನ ಚಿತ್ರ ಕಣ್ಮುಂದೆ ಬರುತ್ತದೆ. ಅವಮಾನ, ಬಡತನ, ಸಂಕಟಗಳನ್ನೆಲ್ಲಾ ಹೊಟ್ಟೆಯಲ್ಲಿಟ್ಟುಕೊಂಡು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪಾತ್ರಗಳಲ್ಲೇ ಅವರು ಹೆಚ್ಚಾಗಿ ಕಾಣಿಸಿಕೊಂಡದ್ದು. ಹಿರಿಯ ನಟನಿಗೆ ಪದ್ಮಶ್ರಿ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಲಾಗುತ್ತಿದೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ನಟ ‘ವೈಜನಾಥ ಬಿರಾದಾರ’. ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ. ನಟಿಸಿದ ಚಿತ್ರಗಳ ಸಂಖ್ಯೆ ಐನೂರರ ಆಸುಪಾಸಿನಲ್ಲಿದೆ. ತಮ್ಮ ‘ಬಿರಾದಾರ ಮಿತ್ರ ಮಂಡಳಿ’ ತಂಡದೊಂದಿಗೆ ಇಂದಿಗೂ ಅವರು ನಾಟಕಗಳನ್ನು ಪ್ರದರ್ಶಿಸುತ್ತಾರೆ. ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವ ಕೊಡಮಾಡುವ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿದೆ.

ಸದ್ಯ ಕೊರೋನಾ ಸಂಕಟದಿಂದಾಗಿ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದರಿಂದಾಗಿ ತೊಂದರೆಗೀಡಾಗಿರುವುದು ಅವರ ಮಾತುಗಳಲ್ಲಿ ವೇದ್ಯವಾಗುತ್ತದೆ. “ಕಲಾವಿದರಿಗೆ ಸಂಕಷ್ಟ ಯಾವಾಗ ತಪ್ಪಿದೆ? ಕೊರೋನಾ ಕಾಲ ಕಲಾವಿದರಿಗೆ ಸಂಕಷ್ಟ ತಂದಿದೆ. ನಮಗೆ ಕಲೆ ಇದೆ, ಖಾಯಂ ನೆಲೆ ಇಲ್ಲ. ಹೀಗೇ ಜೀವನ ನಡೆಸಿಕೊಂಡು ಹೋಗ್ತಾ ಇರೋದು ಅಷ್ಟೆ” ಎನ್ನುತ್ತಾರವರು.

ಕನ್ನಡಿಗರು ತಮ್ಮ ಮೇಲಿಟ್ಟಿರುವ ಅಭಿಮಾನ, ಪ್ರೀತಿಗೆ ಋಣಿ ಎನ್ನುತ್ತಾರವರು. ಮುಂದೆ ಮತ್ತಷ್ಟು ವೈವಿಧ್ಯಮಯ ಪಾತ್ರಗಳಲ್ಲಿ ತೊಡಗಿಸಿಕೊಳ್ಳುವ ಇರಾದೆ ಅವರದ್ದು. ಈ ಸಂದರ್ಭದಲ್ಲಿ ಅವರು ತಮ್ಮ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿನ ಎರಡು ಶೂಟಿಂಗ್ ಸೋಜಿಗಗಳನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ. (ಬಿರಾದಾರ್ ಅವರು ಹೇಳಿಕೊಂಡಂತೆ…)

ಅದೇ ಡಬ್ಬಿಂಗ್ ಕಣೋ!

‘ಶಂಖನಾದ’ ಚಿತ್ರದಲ್ಲಿ ನಟಿಸಿದ ನಂತರ ನಿರ್ದೇಶಕ ಉಮೇಶ್ ಕುಲಕರ್ಣಿ, ‘ಏನ್ ಬ್ರದರ್ ಡಬ್ಬಿಂಗ್ ಮಾಡ್ತಿಯೇನಪ್ಪ?’ ಎಂದು ಕೇಳಿದರು. ಅದಿನ್ನೂ ನನಗೆ ಎರಡನೇ ಸಿನಿಮಾ ಆದ್ದರಿಂದ ಡಬ್ಬಿಂಗ್ ಏನೆಂದೇ ಗೊತ್ತಿರಲಿಲ್ಲ. ಹಾಗಾಗಿ, ‘ಇಲ್ಲ ಸಾರ್’ ಅಂದೆ. ‘ಆಯ್ತು, ಬೆಳಗ್ಗೆ ಚಾಮುಂಡೇಶ್ವರಿ ಸ್ಟುಡಿಯೋಗೆ ಬಾ. ಅಲ್ಲಿ ನೋಡ್ಕೋವಂತೆ’ ಎಂದರು ಕುಲಕರ್ಣಿ. ಬೆಳಕ್ಕೆ 8ಕ್ಕೆ ಹೋಗಿ ತಿಂಡಿ ತಿಂದು ಸ್ಟುಡಿಯೋದಲ್ಲಿ ಕುಳಿತುಕೊಂಡೆ. ಮಧ್ಯಾಹ್ನ ಒಂದೂವರೆಗೆ ಊಟವೂ ಆಯ್ತು. ‘ಏನಪ್ಪಾ, ಡಬ್ಬಿಂಗ್ ನೋಡಿಕೊಂಡ್ಯಾ?’ ಅಂತ ಕೇಳಿದರು ಕುಲಕರ್ಣಿ. ನಾನು ಇಲ್ಲವೆಂದೆ. ‘ಮತ್ತೆ, ಬೆಳಗ್ಗೆಯಿಂದ ಇಲ್ಲಿ ಏನು ಮಾಡಿದೆ?’ ಎಂದರು ನಿರ್ದೇಶಕರು. ‘ನೀವು ಏನೇನೋ ಮಾಡ್ತಿದ್ರಲ್ಲಾ, ನೋಡ್ತಾ ಕುಳಿತಿದ್ದೆ’ ಎಂದೆ. ‘ಏ ದಡ್ಡಾ ಅದೇ ಡಬ್ಬಿಂಗ್ ಕಣೋ!’ ಅಂದ್ರು ಉಮೇಶ್ ಕುಲಕರ್ಣಿ.

ಫೋಟೋ ಕೃಪೆ: ಮನು

ಮೆಜಸ್ಟಿಕ್‍ನಲ್ಲಿ ತಗ್ಲಾಕ್ಕೊಂಡ ಕುಡುಕರು!

ಉತ್ತರ ಕರ್ನಾಟಕದಲ್ಲೊಂದು ನಾಟಕ ಮುಗಿಸಿಕೊಂಡು ಬಸ್‍ನಲ್ಲಿ ಬೆಂಗಳೂರಿಗೆ ಬಂದಿಳಿದೆ. ಮೆಜಸ್ಟಿಕ್‍ನಲ್ಲಿ ಬಸ್ ಇಳಿದು ಬಿಎಂಟಿಸಿ ಬಸ್‍ಸ್ಟ್ಯಾಂಡ್ ಕಡೆಗೆ ಬರ್ತಾ ಇದ್ದೆ. ಫುಲ್ ಟೈಟಾಗಿದ್ದ ಇಬ್ಬರು ಕುಡುಕರು ತೂರಾಡುತ್ತಾ ಎದುರಾದರು. `ಸಾರ್, ನೀವು! ನಾವು ನಿಮ್ ಅಭಿಮಾನಿಗಳು. ಬನ್ನಿ ನಮ್ಗೆ ಕಂಪನಿ ಕೊಡಿ..’ ಎಂದು ಕೈಹಿಡಿದುಕೊಂಡರು. ಇದೇನು ಅಭಿಮಾನವೋ, ಕುಚೇಷ್ಟೆಯೋ ಒಂದೂ ಗೊತ್ತಾಗಲಿಲ್ಲ. `ಇಲ್ರಪ್ಪಾ, ನಾನು ಕುಡುಕನ ಪಾತ್ರ ಮಾಡ್ತೀನಷ್ಟೆ, ಕುಡಿಯೋಲ್ಲ’ ಅಂದೆ. `ಲೇಯ್, ಸುಳ್ಳು ಹೇಳ್ಬೇಡ! ಕುಡೀದೇ ಹೆಂಗಲೆ ನಿಶೆ ಏರ್ತದೆ? ಈಗ ಸುಮ್ನೆ ಬತ್ತಿಯೋ, ಇಲ್ವೋ!?’ ಎಂದು ಎಳೆದಾಡತೊಡಗಿದರು. ಅಷ್ಟರಲ್ಲಿ ನನ್ನನ್ನು ಗುರುತು ಹಿಡಿದ ಮೂರ್ನಾಲ್ಕು ಮಂದಿ ಸಂಕಷ್ಟದಿಂದ ಪಾರು ಮಾಡಿದರು!

  • ಶಶಿಧರ ಚಿತ್ರದುರ್ಗ

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...