Homeಕರ್ನಾಟಕPUC Result 2021 | ಪಿಯುಸಿ ರಿಸಲ್ಟ್‌ ಪ್ರಕಟ; ಫಲಿತಾಂಶ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

PUC Result 2021 | ಪಿಯುಸಿ ರಿಸಲ್ಟ್‌ ಪ್ರಕಟ; ಫಲಿತಾಂಶ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಫಲಿತಾಂಶಕ್ಕೆ ಮೊದಲು ರಿಜಿಸ್ಟರ್‌ ನಂಬರ್‌ ತಿಳಿದುಕೊಳ್ಳಬೇಕಾಗುತ್ತದೆ, ಅದನ್ನು ಪಡೆಯುವುದು ಹೇಗೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ

- Advertisement -
- Advertisement -

ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ (ಇಂದು) ಸಂಜೆ 4 ಗಂಟೆಗೆ ಪ್ರಕಟವಾಗಿದೆ. ಫಲಿತಾಂಶಗಳು karresults.nic.in ಮತ್ತು pue.kar.nic.in ನಲ್ಲಿ ಲಭ್ಯವಿರುತ್ತದೆ. ಆದರೆ ಫಲಿತಾಂಶಗಳನ್ನು ಪರಿಶೀಲಿಸಲು ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ಬಳಸಬೇಕಾಗುತ್ತದೆ.

ತಮ್ಮ ನೋಂದಾಯಿತ ಸಂಖ್ಯೆಗಳನ್ನು ತಿಳಿಯದ ವಿದ್ಯಾರ್ಥಿಗಳು ಪಿಯುಸಿ ವೆಬ್‌ಸೈಟ್‌ಗೆ ಭೇಟಿ ನೀಡಿ ‘ನನ್ನ ನೋಂದಣಿ ಸಂಖ್ಯೆ ತಿಳಿಯಿರಿ’ ಟ್ಯಾಬ್ ಕ್ಲಿಕ್ ಮಾಡಿ ಈಗಲೆ ತಿಳಿಯಬಹುದಾಗಿದೆ. ಸಂಜೆ ನಾಲ್ಕರ ನಂತರ ಈ ಸಂಖ್ಯೆಯನ್ನು ಬಳಸಿಕೊಂಡು ಫಲಿತಾಂಶವನ್ನು ಪಡೆಯಬಹುದಾಗಿದೆ.

ಪರ್ಯಾಯ ಮೌಲ್ಯಮಾಪನ ವಿಧಾನವನ್ನು ಬಳಸಿಕೊಂಡು ಫಲಿತಾಂಶಗಳನ್ನು ಸಿದ್ಧಪಡಿಸಲಾಗಿದೆ. ತಮಗೆ ಸಿಕ್ಕಂತಹ ಗ್ರೇಡಿಂಗ್‌ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಆಕ್ಷೇಪಗಳಿದ್ದರೆ ನಂತರ ಅವರು ಪರೀಕ್ಷೆಗೆ ದೈಹಿಕವಾಗಿ ಹಾಜರಾಗಿ ಬರೆಯಬಹುದಾಗಿದೆ.

ಇದನ್ನೂ ಓದಿ: ಆರ್‌ಟಿಇ ನಿಧಿ ₹ 1.87 ಕೋಟಿ ದುರುಪಯೋಗ ಆರೋಪ – 20 ಬ್ಲಾಕ್ ಶಿಕ್ಷಣ ಅಧಿಕಾರಿಗಳಿಗೆ ನೋಟಿಸ್‌

ದ್ವಿತೀಯ ಪಿಯಸಿಯ ಸಾಮಾನ್ಯ ವಿದ್ಯಾರ್ಥಿಗಳು ಮಾತ್ರವಲ್ಲದೆ, ರಿಪೀಟರ್‌‌‌ ವಿದ್ಯಾರ್ಥಿಗಳ ಫಲಿತಾಂಶವನ್ನೂ ಇಂದು ಘೋಷಿಸಲಾಗುವುದು.

ದ್ವಿತೀಯ ಪಿಯುಸಿ ಫಲಿತಾಂಶ-2021 ಅನ್ನು ಹೇಗೆ ಪರಿಶೀಲಿಸುವುದು?

  • ಫಲಿತಾಂಶ ತಿಳಿಯಲು ಮೊದಲಿಗೆ ರಿಜಿಸ್ಟರ್‌ ನಂಬರ್‌ ತಿಳಿದಿರಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
  • ಅಲ್ಲಿಂದ ನಿಮ್ಮ ಜಿಲ್ಲೆ ಮತ್ತು ನಿಮ್ಮ ಕಾಲೇಜ್‌ ಅನ್ನು ಆಯ್ಕೆ ಮಾಡಿಕೊಳ್ಳಬೇಕು.
  • ಕಾಲೇಜ್‌ ಮತ್ತು ಜಿಲ್ಲೆಯನ್ನು ಆಯ್ಕೆ ಮಾಡಿದಾಗ ನಿಮ್ಮ ರಿಜಿಸ್ಟರ್‌ ನಂಬರ್‌, ನಿಮ್ಮ ಹೆಸರು, ನಿಮ್ಮ ತಂದೆ ತಾಯಿಯ ಹೆಸರು, ಮತ್ತು ವಿದ್ಯಾರ್ಥಿ ನಂಬರ್‌ ಸಿಗುತ್ತದೆ.
  • ಅದರಲ್ಲಿ ನಿಮ್ಮ ರಿಜಿಸ್ಟರ್‌ ನಂಬರ್‌ ಅನ್ನು ಬರೆದಿಟ್ಟು ನಂತರ, ಫಲಿತಾಂಶದ ಟ್ಯಾಬ್‌ಗೆ ಪ್ರವೇಶಿಸಿ ಆ ಸಂಖ್ಯೆಯನ್ನು ಅಲ್ಲಿ ತುಂಬಬೇಕಾಗುತ್ತದೆ. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ (ಇದನ್ನು ಫಲಿತಾಂಶ ಬಂದಾಗ ಅಪ್‌ಡೇಟ್ ಮಾಡಿ ಸುಲಭವಾಗಿ ನೀವು ಅಲ್ಲಿ ತಲುಪುವಂತೆ ಮಾಡುತ್ತೇವೆ)

ಮೇ 24 ಮತ್ತು ಜೂನ್ 16 ರ ನಡುವೆ ನಡೆಯಬೇಕಿದ್ದ ಕರ್ನಾಟಕ ಪಿಯುಸಿ ಪರೀಕ್ಷೆಗಳನ್ನು ಮೊದಲು ಮುಂದೂಡಲಾಯಿತಾದರೂ, ನಂತರ ಪರೀಕ್ಷೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಯಿತು.

ಇದನ್ನೂ ಓದಿ: ಆನ್‌ಲೈನ್ ಶಿಕ್ಷಣಕ್ಕೆ ಮಾದರಿ ಸೃಷ್ಟಿಸದೆ, ಮೂಲಸೌಕರ್ಯಗಳಿಗೆ ಕ್ರಮ ತೆಗೆದುಕೊಳ್ಳದೆ ಪೋಷಕರನ್ನು ಆತಂಕಕ್ಕೆ ತಳ್ಳಿರುವ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

19 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...