Homeಕರೋನಾ ತಲ್ಲಣಬಕ್ರೀದ್ ಹಬ್ಬಕ್ಕೆ ಅಂಗಡಿ ತೆರೆಯಲು ಕೇರಳ ಸರ್ಕಾರದ ಅನುಮತಿ: ಸುಪ್ರೀಂಕೋರ್ಟ್ ತರಾಟೆ

ಬಕ್ರೀದ್ ಹಬ್ಬಕ್ಕೆ ಅಂಗಡಿ ತೆರೆಯಲು ಕೇರಳ ಸರ್ಕಾರದ ಅನುಮತಿ: ಸುಪ್ರೀಂಕೋರ್ಟ್ ತರಾಟೆ

- Advertisement -
- Advertisement -

ಕೊರೊನಾ ಪಾಸಿಟಿವಿಟಿ ದರ ಹೆಚ್ಚಿರುವ ಪ್ರದೇಶಗಳಲ್ಲಿಯೂ ಸಹ, ಬಕ್ರೀದ್ ಹಬ್ಬದ ಆಚರಣೆಗಾಗಿ ಕೊವೀಡ್ ನಿಯಮಗಳನ್ನು ಸಡಿಲಗೊಳಿಸಿರುವ ಕೇರಳ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಮಂಗಳವಾರ ಪ್ರಶ್ನಿಸಿದೆ.

ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ನೇತೃತ್ವದ ನ್ಯಾಯಪೀಠವು, “ಭಾರತದ ನಾಗರಿಕರ ಆರೋಗ್ಯ ಮತ್ತು ಜೀವಿಸುವ ಹಕ್ಕು ಅತ್ಯುನ್ನತವಾದದ್ದು. ಧಾರ್ಮಿಕ ಆಚರಣೆಗಳಾಗಿರಲಿ, ಬೇರೆ ಇತರ ಭಾವನಾತ್ಮಕ ವಿಚಾರಗಳೇ ಆಗಿರಲಿ ಅವು ಈ ಮೂಲಭೂತ ಮೂಲಭೂತ ಹಕ್ಕಿಗೆ ಅಧೀನವಾಗಿವೆ. ಯಾವುದೇ ರೀತಿಯ, ಧಾರ್ಮಿಕ ಅಥವಾ ಇತರ ಒತ್ತಡದ ಗುಂಪುಗಳು ಬೇರೆ ಯಾವುದೇ ರೀತಿಯಲ್ಲಿ ಜೀವಿಸುವ ಹಕ್ಕಿನಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದೆ.

ಉತ್ತರ ಪ್ರದೇಶ ಸರ್ಕಾರ ಅನುಮತಿ ನೀಡಿದ್ದ ಕನ್ವರ್ ಯಾತ್ರೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶಗಳನ್ನು ಪಾಲಿಸುವಂತೆ ನ್ಯಾಯಾಲಯ ‌ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಹಳ್ಳಿಗಳ ಕನ್ನಡ ಹೆಸರು ಮಲಯಾಳೀಕರಣ: ವಿವಾದದ ಬಗ್ಗೆ ಕೇರಳ ಸಿಎಂ ಪ್ರತಿಕ್ರಿಯೆ ಹೀಗಿದೆ!

ಕನ್ವರ್ ಯಾತ್ರೆಯನ್ನು ಅನುಮತಿಸುವ ಯುಪಿ ನಿರ್ಧಾರದ ಕುರಿತು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದ ಬಳಿಕ  ಕೊರೊನಾ ಮೂರನೇ ಅಲೆ ಆತಂಕದ ನಡುವೆ ಕನ್ವರ್ ಯಾತ್ರೆಗೆ ಅವಕಾಶ ನೀಡುವುದನ್ನು ಸಹ ಮರುಪರಿಶೀಲಿಸುವಂತೆ ನ್ಯಾಯಮೂರ್ತಿ ನಾರಿಮನ್ ಈ ಹಿಂದೆ ಉತ್ತರ ಪ್ರದೇಶ ರಾಜ್ಯಕ್ಕೆ ನಿರ್ದೇಶನ ನೀಡಿದ್ದರು.

ಬಕ್ರೀದ್ ಹಬ್ಬಕ್ಕಾಗಿ ಕೇರಳದಲ್ಲಿ ಭಾನುವಾರದಿಂದ ಮೂರು ದಿನಗಳವರೆಗೆ ಲಾಕ್ ಡೌನ್ ಸಡಿಲಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಸೋಮವಾರ, ರಾಜ್ಯ ಸರ್ಕಾರವು ನ್ಯಾಯಾಲಯದಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದ್ದು, ಕೋವಿಡ್ ನಿರ್ಬಂಧಗಳು ಜನರನ್ನು ಬಹಳಷ್ಟು ಸಂಕಷ್ಟಕ್ಕೆ ತಳ್ಳಿತ್ತು, ಬಕ್ರೀದ್ ಹಬ್ಬದ ಸಮಯದಲ್ಲಿ ಈ ವಸ್ತುಗಳು ಮಾರಾಟವಾಗಿ ಕೊಂಚ ಮಟ್ಟಿಗೆ ತಮ್ಮ ಸಂಕಷ್ಟ ನಿವಾರಣೆಯಾಗಬಹುದು ಎಂದು ಜನರು ಭಾವಿಸಿದ್ದಾರೆ ಎಂದು ತಿಳಿಸಿತ್ತು.

ನ್ಯಾಯಪೀಠವು ಕೇರಳ ಸರ್ಕಾರದ ಈ ನಿರ್ಧಾರವನ್ನು “ಆತಂಕಕಾರಿ” ಎಂದು ಹೇಳಿದೆ. ಅಗತ್ಯ ವಸ್ತುಗಳಲ್ಲದೇ, ಎಲ್ಲಾ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ, ಇದು ತೀವ್ರವಾಗಿ ಸೋಂಕು ಹರಡಲು ಕಾರಣವಾಗುತ್ತದೆ ಎಂದು ನ್ಯಾಯಮೂರ್ತಿ ನಾರಿಮನ್ ಹೇಳಿದ್ದಾರೆ.

ಸಾಧ್ಯವಾದಷ್ಟು, ಕನಿಷ್ಠ ಒಂದು ಡೋಸ್‌ ಲಸಿಕೆ ಪಡೆದವರು ಮಾತ್ರ ಅಂಗಡಿಗಳಿಗೆ ಭೇಟಿ ನೀಡಬೇಕು ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿತ್ತು. ಆದರೂ ಅದರ ಪಾಲನೆ ಬಗ್ಗೆ ಯಾವುದೇ ವಿಶ್ವಾಸವಿಲ್ಲ ಎಂದು ನ್ಯಾಯಪೀಠ ಹೇಳಿದೆ.


ಇದನ್ನೂ ಓದಿ: ಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...