Homeಕರ್ನಾಟಕಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಭದ್ರತಾ ಸಿಬ್ಬಂದಿಯಾಗಿದ್ದ ಮಂಜುನಾಥ್ ಮುದ್ದೇಗೌಡ ಎಂಬ ಪೊಲೀಸ್ ಅಧಿಕಾರಿಯ ಪೋನ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ.

- Advertisement -
- Advertisement -

ಪೆಗಾಸಸ್ ಕಳೆದ ಎರಡು ದಿನಗಳಲ್ಲಿ ದೇಶದಲ್ಲಿ ಕೋಲಾಹಲ ಸೃಷ್ಟಿಸಿದೆ. ಆದರೆ, ಇಲ್ಲಿಯವರೆಗೆ ಕರ್ನಾಟಕದ ಯಾರ ಹೆಸರು ಕೇಳಿ ಬಂದಿರಲಿಲ್ಲ. ಆದರೆ, ಇಂದು ದಿ ವೈರ್ ಬಿಡುಗಡೆ ಮಾಡಿರುವ ವರದಿಯಲ್ಲಿ ಕರ್ನಾಟಕದ 2019 ರ ಸಮ್ಮಿಶ್ರ ಸರ್ಕಾರ ಉರುಳಲು ಈ ಪೆಗಾಸಸ್ ಗೂಢಚರ್ಯೆ ಕಾರಣವಾಗಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮೇಲೆ ಪೆಗಾಸಸ್ ಕಣ್ಗಾವಲು ಇದ್ದದ್ದು ಈಗ ಬಹಿರಂಗವಾಗಿದೆ. ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ವೈಯಕ್ತಿಕ ಕಾರ್ಯದರ್ಶಿಗಳ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಲಿದೆ. ಪೆಗಾಸಸ್ ಗೂಢಚರ್ಚೆಯಿಂದಾಗಿಯೇ 2019 ರ ಜುಲೈನಲ್ಲಿ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್-ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಲು ಕಾರಣವಾಯಿತೆ ಎಂಬ ಅನುಮಾನಗಳು ಶುರುವಾಗಿವೆ.

ಇದನ್ನೂ ಓದಿ: ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

2019 ರಲ್ಲಿ ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಸರ್ವ ಪ್ರಯತ್ನ ನಡೆಸುತ್ತಿತ್ತು. ಸರ್ಕಾರ ಮತ್ತು ಭಾರತೀಯ ಜನತಾ ಪಕ್ಷ  ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದ ಸಮಯದಲ್ಲಿ ಕರ್ನಾಟಕದ ಕೆಲವು ಪ್ರಮುಖ ರಾಜಕೀಯ ವ್ಯಕ್ತಿಗಳ ದೂರವಾಣಿ ಸಂಖ್ಯೆಗಳನ್ನು ಹ್ಯಾಕ್ ಮಾಡಲು ಆಯ್ಕೆ ಮಾಡಲಾಗಿದೆ ಎಂದು ವರದಿ ಹೇಳಿದೆ.

ಇದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದ 17 ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾಗಿದ್ದರು. ನಂತರ ಅವರೆಲ್ಲರೂ ಬಿಜೆಪಿ ಸೇರಿ ಬಹುತೇಕರು ಉಪ ಚುನಾವಣೆಯಲ್ಲಿ ಆಯ್ಕೆಯಾದಾಗ ಈ ಬೆಳವಣಿಗೆಗಳು ನಡೆದಿವೆ ಎಂದು ವರದಿ ಬಹಿರಂಗ ಪಡಿಸಿದೆ.

ಸೋರಿಕೆಯಾಗಿರುವ ದತ್ತಾಂಶದ ಪ್ರಕಾರ, ಆಗಿನ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಪ್ತ ಸಹಾಯಕರಾಗಿದ್ದ ಸತೀಶ್ ಅವರಿಗೆ ಸಂಬಂಧಿಸಿದ ಎರಡು ಫೋನ್ ಸಂಖ್ಯೆಗಳನ್ನು ಪೆಗಾಸಸ್‌ ಟಾರ್ಗೆಟ್ ಮಾಡಲಾಗಿದೆ. 2019 ರ ಮಧ್ಯದಲ್ಲಿ ಗೂಢಚರ್ಯೆಗೆ ಒಳಪಡಿಸಲಾಗಿದೆ. ಸತೀಶ್ ಅವರು 2019 ರಲ್ಲಿ ಇದೆ ಫೋನ್ ಸಂಖ್ಯೆಯನ್ನು ಬಳಸುತ್ತಿದ್ದರು ಎಂದು ದೃಢಪಡಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ. ಈ ಸಮಯದಲ್ಲಿ ಕಾಂಗ್ರೆಸ್-ಜೆಡಿ (ಎಸ್) ಸರ್ಕಾರವು ಬಂಡಾಯ ಶಾಸಕರನ್ನು ಮನವೊಲಿಸಲು ಹೆಣಗಾಡುತ್ತಿತ್ತು.

ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಹಾಯಕರಾಗಿದ್ದ ವೆಂಕಟೇಶ್ ಅವರ ದೂರವಾಣಿ ಸಂಖ್ಯೆಯನ್ನು ಸಹ ಇದೇ ಅವಧಿಯಲ್ಲಿ ಸೇರಿಸಲಾಗಿದೆ ಎಂದು ವರದಿ ಬಹಿರಂಗ ಪಡಿಸಿದೆ.

ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ವರ್ಷಗಳಿಂದ ವೈಯಕ್ತಿಕ ಫೋನ್ ಬಳಸುತ್ತಿಲ್ಲ ಮತ್ತು ಫೋನ್ ಸಂಭಾಷಣೆಗಾಗಿ ಅವರು ತಮ್ಮ ಆಪ್ತ ಸಹಾಯಕರನ್ನು ಅವಲಂಬಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ. ಆದ್ದರಿಂದ, ವೆಂಕಟೇಶ್ ಅವರ ಫೋನ್ ಸಂಖ್ಯೆಯನ್ನು ಪೆಗಾಸಸ್‌ ಗೂಢಚರ್ಯೆಗೆ ಆಯ್ಕೆ ಮಾಡಿರುವುದು ಅಪಾರ ಮಹತ್ವವನ್ನು ಪಡೆದುಕೊಂಡಿದೆ ಎಂದು ದಿ ವೈರ್‌ ವರದಿ ಮಾಡಿದೆ.

ಇವರ ಜೊತೆಗೆ  ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಭದ್ರತಾ ಸಿಬ್ಬಂದಿಯಲ್ಲಿ ಒಬ್ಬರಾಗಿದ್ದ ಮಂಜುನಾಥ್ ಮುದ್ದೇಗೌಡ ಎಂಬ ಪೊಲೀಸ್ ಅಧಿಕಾರಿಯ ಪೋನ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ. ನನ್ನ ಮೊಬೈಲ್ ಸಂಖ್ಯೆ ಎಂದು ಪೊಲೀಸ್ ಅಧಿಕಾರಿ ದೃಢಪಡಿಸಿದ್ದಾರೆ.  ಅವರ ಸಂಖ್ಯೆಯನ್ನು 2019 ರ ಮಧ್ಯದಲ್ಲಿ ಹ್ಯಾಕ್ ಮಾಡಲಾಗಿದೆ.

ಇದೇ ರೀತಿಯಾಗಿ, ಕಾಂಗ್ರೆಸ್ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ ಅವರ ಮೊಬೈಲ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ.  2019 ರಲ್ಲಿ ಅದೇ ಫೋನ್ ಸಂಖ್ಯೆಯನ್ನು ಬಳಸುತ್ತಿದ್ದು, ಕೆಲವು ತಿಂಗಳುಗಳ ಹಿಂದೆ ಅದರ ಬಳಕೆ ನಿಲ್ಲಿಸಿದ್ದೇನೆ. ಆ ಸಮಯದಲ್ಲಿ ನಾನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ದಿ ವೈರ್‌ಗೆ ತಿಳಿಸಿದ್ದಾರೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು  ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್, “ಇಸ್ರೇಲಿ ಗೂಡಾಚಾರಿಕೆ ಸಾಫ್ಟವೇರ್ ಪೆಗಾಸಸ್ ಮೂಲಕ ನಮ್ಮ ನಾಯಕರಾದ ಸಿದ್ದರಾಮಯ್ಯ ಹಾಗೂ ಡಾ.ಜಿ.ಪರಮೇಶ್ವರ್‌ ಅವರ ಫೋನ್‌ಗಳನ್ನು ಕದ್ದು ನೋಡಲಾಗುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಬಿಜೆಪಿ ಪಕ್ಷ ಇಂತಹ ನೀಚ ಕೃತ್ಯಕ್ಕೆ ಇಳಿಯುವ ಮೂಲಕ ಅದೊಂದು ರಾಜಕೀಯ ಪಕ್ಷವಾಗಿರದೆ, ವಿಧ್ವಂಸಕ ಕೃತ್ಯವೆಸಗುವ ಸಂಘಟನೆ ಎಂದು ಸಾಬೀತು ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಫೋನ್ ಹ್ಯಾಕ್ ಮಾಡಿಯೂ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಧ್ಯವಾಗಲಿಲ್ಲ: ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...