Homeಕರ್ನಾಟಕಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಭದ್ರತಾ ಸಿಬ್ಬಂದಿಯಾಗಿದ್ದ ಮಂಜುನಾಥ್ ಮುದ್ದೇಗೌಡ ಎಂಬ ಪೊಲೀಸ್ ಅಧಿಕಾರಿಯ ಪೋನ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ.

- Advertisement -
- Advertisement -

ಪೆಗಾಸಸ್ ಕಳೆದ ಎರಡು ದಿನಗಳಲ್ಲಿ ದೇಶದಲ್ಲಿ ಕೋಲಾಹಲ ಸೃಷ್ಟಿಸಿದೆ. ಆದರೆ, ಇಲ್ಲಿಯವರೆಗೆ ಕರ್ನಾಟಕದ ಯಾರ ಹೆಸರು ಕೇಳಿ ಬಂದಿರಲಿಲ್ಲ. ಆದರೆ, ಇಂದು ದಿ ವೈರ್ ಬಿಡುಗಡೆ ಮಾಡಿರುವ ವರದಿಯಲ್ಲಿ ಕರ್ನಾಟಕದ 2019 ರ ಸಮ್ಮಿಶ್ರ ಸರ್ಕಾರ ಉರುಳಲು ಈ ಪೆಗಾಸಸ್ ಗೂಢಚರ್ಯೆ ಕಾರಣವಾಗಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮೇಲೆ ಪೆಗಾಸಸ್ ಕಣ್ಗಾವಲು ಇದ್ದದ್ದು ಈಗ ಬಹಿರಂಗವಾಗಿದೆ. ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ವೈಯಕ್ತಿಕ ಕಾರ್ಯದರ್ಶಿಗಳ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಲಿದೆ. ಪೆಗಾಸಸ್ ಗೂಢಚರ್ಚೆಯಿಂದಾಗಿಯೇ 2019 ರ ಜುಲೈನಲ್ಲಿ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್-ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಲು ಕಾರಣವಾಯಿತೆ ಎಂಬ ಅನುಮಾನಗಳು ಶುರುವಾಗಿವೆ.

ಇದನ್ನೂ ಓದಿ: ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

2019 ರಲ್ಲಿ ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಸರ್ವ ಪ್ರಯತ್ನ ನಡೆಸುತ್ತಿತ್ತು. ಸರ್ಕಾರ ಮತ್ತು ಭಾರತೀಯ ಜನತಾ ಪಕ್ಷ  ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದ ಸಮಯದಲ್ಲಿ ಕರ್ನಾಟಕದ ಕೆಲವು ಪ್ರಮುಖ ರಾಜಕೀಯ ವ್ಯಕ್ತಿಗಳ ದೂರವಾಣಿ ಸಂಖ್ಯೆಗಳನ್ನು ಹ್ಯಾಕ್ ಮಾಡಲು ಆಯ್ಕೆ ಮಾಡಲಾಗಿದೆ ಎಂದು ವರದಿ ಹೇಳಿದೆ.

ಇದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದ 17 ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾಗಿದ್ದರು. ನಂತರ ಅವರೆಲ್ಲರೂ ಬಿಜೆಪಿ ಸೇರಿ ಬಹುತೇಕರು ಉಪ ಚುನಾವಣೆಯಲ್ಲಿ ಆಯ್ಕೆಯಾದಾಗ ಈ ಬೆಳವಣಿಗೆಗಳು ನಡೆದಿವೆ ಎಂದು ವರದಿ ಬಹಿರಂಗ ಪಡಿಸಿದೆ.

ಸೋರಿಕೆಯಾಗಿರುವ ದತ್ತಾಂಶದ ಪ್ರಕಾರ, ಆಗಿನ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಪ್ತ ಸಹಾಯಕರಾಗಿದ್ದ ಸತೀಶ್ ಅವರಿಗೆ ಸಂಬಂಧಿಸಿದ ಎರಡು ಫೋನ್ ಸಂಖ್ಯೆಗಳನ್ನು ಪೆಗಾಸಸ್‌ ಟಾರ್ಗೆಟ್ ಮಾಡಲಾಗಿದೆ. 2019 ರ ಮಧ್ಯದಲ್ಲಿ ಗೂಢಚರ್ಯೆಗೆ ಒಳಪಡಿಸಲಾಗಿದೆ. ಸತೀಶ್ ಅವರು 2019 ರಲ್ಲಿ ಇದೆ ಫೋನ್ ಸಂಖ್ಯೆಯನ್ನು ಬಳಸುತ್ತಿದ್ದರು ಎಂದು ದೃಢಪಡಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ. ಈ ಸಮಯದಲ್ಲಿ ಕಾಂಗ್ರೆಸ್-ಜೆಡಿ (ಎಸ್) ಸರ್ಕಾರವು ಬಂಡಾಯ ಶಾಸಕರನ್ನು ಮನವೊಲಿಸಲು ಹೆಣಗಾಡುತ್ತಿತ್ತು.

ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಹಾಯಕರಾಗಿದ್ದ ವೆಂಕಟೇಶ್ ಅವರ ದೂರವಾಣಿ ಸಂಖ್ಯೆಯನ್ನು ಸಹ ಇದೇ ಅವಧಿಯಲ್ಲಿ ಸೇರಿಸಲಾಗಿದೆ ಎಂದು ವರದಿ ಬಹಿರಂಗ ಪಡಿಸಿದೆ.

ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ವರ್ಷಗಳಿಂದ ವೈಯಕ್ತಿಕ ಫೋನ್ ಬಳಸುತ್ತಿಲ್ಲ ಮತ್ತು ಫೋನ್ ಸಂಭಾಷಣೆಗಾಗಿ ಅವರು ತಮ್ಮ ಆಪ್ತ ಸಹಾಯಕರನ್ನು ಅವಲಂಬಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ. ಆದ್ದರಿಂದ, ವೆಂಕಟೇಶ್ ಅವರ ಫೋನ್ ಸಂಖ್ಯೆಯನ್ನು ಪೆಗಾಸಸ್‌ ಗೂಢಚರ್ಯೆಗೆ ಆಯ್ಕೆ ಮಾಡಿರುವುದು ಅಪಾರ ಮಹತ್ವವನ್ನು ಪಡೆದುಕೊಂಡಿದೆ ಎಂದು ದಿ ವೈರ್‌ ವರದಿ ಮಾಡಿದೆ.

ಇವರ ಜೊತೆಗೆ  ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಭದ್ರತಾ ಸಿಬ್ಬಂದಿಯಲ್ಲಿ ಒಬ್ಬರಾಗಿದ್ದ ಮಂಜುನಾಥ್ ಮುದ್ದೇಗೌಡ ಎಂಬ ಪೊಲೀಸ್ ಅಧಿಕಾರಿಯ ಪೋನ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ. ನನ್ನ ಮೊಬೈಲ್ ಸಂಖ್ಯೆ ಎಂದು ಪೊಲೀಸ್ ಅಧಿಕಾರಿ ದೃಢಪಡಿಸಿದ್ದಾರೆ.  ಅವರ ಸಂಖ್ಯೆಯನ್ನು 2019 ರ ಮಧ್ಯದಲ್ಲಿ ಹ್ಯಾಕ್ ಮಾಡಲಾಗಿದೆ.

ಇದೇ ರೀತಿಯಾಗಿ, ಕಾಂಗ್ರೆಸ್ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ ಅವರ ಮೊಬೈಲ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ.  2019 ರಲ್ಲಿ ಅದೇ ಫೋನ್ ಸಂಖ್ಯೆಯನ್ನು ಬಳಸುತ್ತಿದ್ದು, ಕೆಲವು ತಿಂಗಳುಗಳ ಹಿಂದೆ ಅದರ ಬಳಕೆ ನಿಲ್ಲಿಸಿದ್ದೇನೆ. ಆ ಸಮಯದಲ್ಲಿ ನಾನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ದಿ ವೈರ್‌ಗೆ ತಿಳಿಸಿದ್ದಾರೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು  ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್, “ಇಸ್ರೇಲಿ ಗೂಡಾಚಾರಿಕೆ ಸಾಫ್ಟವೇರ್ ಪೆಗಾಸಸ್ ಮೂಲಕ ನಮ್ಮ ನಾಯಕರಾದ ಸಿದ್ದರಾಮಯ್ಯ ಹಾಗೂ ಡಾ.ಜಿ.ಪರಮೇಶ್ವರ್‌ ಅವರ ಫೋನ್‌ಗಳನ್ನು ಕದ್ದು ನೋಡಲಾಗುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಬಿಜೆಪಿ ಪಕ್ಷ ಇಂತಹ ನೀಚ ಕೃತ್ಯಕ್ಕೆ ಇಳಿಯುವ ಮೂಲಕ ಅದೊಂದು ರಾಜಕೀಯ ಪಕ್ಷವಾಗಿರದೆ, ವಿಧ್ವಂಸಕ ಕೃತ್ಯವೆಸಗುವ ಸಂಘಟನೆ ಎಂದು ಸಾಬೀತು ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಫೋನ್ ಹ್ಯಾಕ್ ಮಾಡಿಯೂ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಧ್ಯವಾಗಲಿಲ್ಲ: ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...