Homeಮುಖಪುಟಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

- Advertisement -
- Advertisement -

ಈ ವರ್ಷದ ಏಪ್ರಿಲ್ ಆರಂಭದಲ್ಲಿ ಅಪ್ಪಳಿಸಿದ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಸಿಗದೇ ಜನರು ಒದ್ದಾಡುತ್ತಿರುವ, ಪ್ರಾಣ ಬಿಟ್ಟ ಸಾವಿರಾರು ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದವು. ಆದರೆ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ವಾದಿಸಿದೆ.

ಆರೋಗ್ಯವು ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರಂತರವಾಗಿ ಕೋವಿಡ್ ಪ್ರಕರಣಗಳ ಮತ್ತು ಸಾವುಗಳ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತಿದೆ. ಆದರೆ ಆಕ್ಸಿಜನ್ ಕೊರತೆಯಿಂದ ಉಂಟಾದ ಕೋವಿಡ್ ಸಾವುಗಳ ಡೇಟವನ್ನು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಮಂತ್ರಿ ಭಾರತಿ ಪ್ರವೀಣ್ ಪವಾರ್ ರಾಜ್ಯಸಭೆಗೆ ಲಿಖಿತ ರೂಪದಲ್ಲಿ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

ಆಕ್ಸಿಜನ್ ಕೊರತೆಯಿಂದ ರಸ್ತೆಯಲ್ಲಿ – ಆಸ್ಪತ್ರೆಯಲ್ಲಿ ಉಂಟಾದ ಕೋವಿಡ್‌ ಸಾವುಗಳೆಷ್ಟು ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ರಸ್ತೆಯಲ್ಲಾಗಲಿ, ಆಸ್ಪತ್ರೆಯಲ್ಲಾಗಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ.

ಆದರೆ ಮೊದಲನೇ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚಿನ ಆಕ್ಸಿಜನ್ ಬೇಡಿಕೆಯುಂಟಾಗಿತ್ತು. ಮೊದಲ ಅಲೆಯ 3,095 ಮೆಟ್ರಿಕ್ ಟನ್‌ ಬೇಡಿಕೆಗಿಂತ ಎರಡನೇ ಅಲೆಯಲ್ಲಿ ಸುಮಾರು 9000 ಮೆಟ್ರಿಕ್ ಟನ್ ಆಕ್ಸಿಜನ್ ಬೇಡಿಕೆಯಿತ್ತು. ಕೇಂದ್ರ ಸರ್ಕಾರ ಅದನ್ನು ರಾಜ್ಯಗಳಿಗೆ ಸಮಾನವಾಗಿ ಪೂರೈಸಲು ಕ್ರಮ ಕೈಗೊಂಡಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಆಕ್ಸಿಜನ್ ಕೊರತೆಯಿಂದಾಗಿ ಗೋವಾದ ಆಸ್ಪತ್ರೆಯಲ್ಲಿ ಐದು ದಿನಗಳಲ್ಲಿ 80 ಸಾವು ಸಂಭವಿಸಿದ ವರದಿಯಾಗಿತ್ತು. ಕರ್ನಾಟಕದ ಚಾಮರಾಜನಗರದಲ್ಲಿ ಆಮ್ಲಜನಕ ಸಿಗದೇ 24 ಜನ, ಕೋಲಾರದಲ್ಲಿ ಹತ್ತಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಹೈದರಾಬಾದ್‌ನಲ್ಲಿ 11 ಜನ,  ದೆಹಲಿಯಲ್ಲಿ 21 ಜನ ಆಕ್ಸಿಜನ್ ಸಿಗದೇ ಪ್ರಾಣಬಿಟ್ಟರೆಂದು ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

“ಜನರು ಆಕ್ಸಿಜನ್ ಸಿಗದೇ ಕಾರಣ ತಮ್ಮ ಪ್ರೀತಿ ಪಾತ್ರರನ್ನು ಮತ್ತು ನೆರೆಹೊರೆಯವರನ್ನು ಕಳೆದುಕೊಂಡಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಆದರೆ ಇದು ಕಾಳಜಿಯಿಲ್ಲದ ಕುರುಡು ಸರ್ಕಾರ” ಎಂದು ಕಾಂಗ್ರೆಸ್ ವಕ್ತಾರ ಕೆ.ಸಿ ವೇಣುಗೋಪಾಲ್ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಆರೋಗ್ಯ ಸಚಿವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಹಾಗಾಗಿ ಇದರ ವಿರುದ್ದ ಹಕ್ಕು ಚ್ಯುತಿ ಮಂಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆಯಲ್ಲಿಯೂ ಸಹ ಕೇಂದ್ರ ಸಚಿವ ಮನ್ಸುಕ್ ಮಾಂಡವಿಯ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕೋವಿಡ್ ಎರಡನೇ ಅಲೆಯ ಕೋವಿಡ್ ಸಾವುಗಳು ಮಾಹಿತಿ ನೀಡಬೇಕಿರುವುದು ರಾಜ್ಯಗಳ ಜವಾಬ್ದಾರಿ ಎಂದು ಆರೋಪಿಸಿದ್ದಾರೆ.

ಗಂಗೆಯಲ್ಲಿ ಹೆಣಗಳು ತೇಲಿ ಬಂದಿದ್ದು, ಸಾಮೂಹಿಕ ಶವಸಂಸ್ಕಾರದ ಚಿತ್ರಗಳು ವೈರಲ್ ಆಗಿದ್ದರಿಂದ ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ಅದಕ್ಕಾಗಿ ಭಾರತ ಸರ್ಕಾರವನ್ನು, ಮೋದಿ ಸರ್ಕಾರವನ್ನು ದೂರವಂತಿಲ್ಲ. ನೋಂದಣಿ ಮಾಡುವವರು ಯಾರು? ಲೆಕ್ಕ ಹಾಕುವವರು ಯಾರು? ಇದೆಲ್ಲವನ್ನು ರಾಜ್ಯಗಳು ಮಾಡುತ್ತಿದ್ದರೂ ಅವರನ್ನು ಯಾರು ಕೇಳುವುದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...